Homeಮುಖಪುಟಬಹುಸಂಖ್ಯಾತ ಜಾತಿಗಳನ್ನು ಅಸ್ಪೃಶ್ಯ ಜಾತಿಗಳೊಂದಿಗೆ ಸೇರಿಸಿರುವುದು ರಾಜಕೀಯ ಷಡ್ಯಂತ್ರ!

ಬಹುಸಂಖ್ಯಾತ ಜಾತಿಗಳನ್ನು ಅಸ್ಪೃಶ್ಯ ಜಾತಿಗಳೊಂದಿಗೆ ಸೇರಿಸಿರುವುದು ರಾಜಕೀಯ ಷಡ್ಯಂತ್ರ!

ಒಳಮೀಸಲಾತಿ ಚರ್ಚೆಯ ಹಿನ್ನಲೆಯಲ್ಲಿ ಕನ್ನಡದ ಖ್ಯಾತ ಕವಿ ಮೂಡ್ನಾಕೂಡು ಚಿನ್ನಸ್ವಾಮಿಯವರ ಸಂದರ್ಶನ.

- Advertisement -
- Advertisement -

ಒಳಮೀಸಲಾತಿ ಪರ-ವಿರೋಧದ ಚರ್ಚೆಯ ಹಿನ್ನಲೆಯಲ್ಲಿ ಕನ್ನಡದ ಖ್ಯಾತ ಕವಿ ಮೂಡ್ನಾಕೂಡು ಚಿನ್ನಸ್ವಾಮಿಯವರ ಸಂದರ್ಶನ.

1. ಒಳಮೀಸಲಾತಿಯ ಬಗ್ಗೆ ನಿಮ್ಮ ನಿಲುವೇನು?

ಮೀಸಲಾತಿಯ ಮೂಲ ಉದ್ದೇಶವೇ ಶತಮಾನಗಳಿಂದ ತುಳಿತಕ್ಕೊಳಗಾದ ವಂಚಿತರ ಸಬಲೀಕರಣ. ಸಹಸ್ರಾರು ಜಾತಿಗಳಿರುವ ಹಿಂದೂ ಧರ್ಮದಲ್ಲಿ ಪ್ರಬಲ ಮತ್ತು ದುರ್ಬಲ ಜಾತಿಗಳೆಂದು ಎರಡು ಭಾಗ ಮಾಡಿದರೆ ದುರ್ಬಲರೇ ಶೇ. 85 ಕ್ಕೂ ಮಿಗಿಲಾಗಿದ್ದಾರೆ. ಈಗ ನೀಡಲಾಗಿರುವ ಶೇ. 50 ರಷ್ಟು ಮೀಸಲಾತಿಯನ್ನು ಶೇ. 85 ಜನರ ನಡುವೆ ಗುಂಪುಗಳಾಗಿ ವಿಂಗಡನೆಮಾಡಿ ಹಂಚಲಾಗಿದೆ. ಈ ದುರ್ಬಲ ಜಾತಿಗಳ ಒಂದೊಂದು ಗುಂಪಿನಲ್ಲಿಯೂ ಬಹುಸಂಖ್ಯಾತ ಮತ್ತು ಅಲ್ಪಸಂಖ್ಯಾತ ಜಾತಿಗಳಿವೆ. ಸಹಜವಾಗಿಯೆ ಅಲ್ಲಿಯೂ ಅಲ್ಪಸಂಖ್ಯಾತ ಜಾತಿಗಳು ವಂಚನೆಗೊಳಗಾಗುವ ಸಾಧ್ಯತೆಯೆ ಹೆಚ್ಚು. ಕೆಳಜಾತಿಗಳೆಂದ ಮಾತ್ರಕ್ಕೆ ಅವುಗಳೇನೂ ಒಳಗೊಳ್ಳುವ ಏಕರೂಪಿ ಜಾತಿಗಳಲ್ಲ. ಒಬ್ಬರ ಮನೆಯಲ್ಲಿ ಇನ್ನೊಬ್ಬರು ನೀರು ಕುಡಿಯುವುದಿಲ್ಲ ಮತ್ತು ಮುಟ್ಟಿಸಿಕೊಳ್ಳುವುದೂ ಇಲ್ಲ. ಒಡೆದು ಛಿದ್ರಗೊಳಿಸುವುದು ಮತ್ತು ದೂರಮಾಡುವುದು ಜಾತಿಪದ್ಧತಿಯ ಲಕ್ಷಣ. ಇದು ಮಾನವೀಯತೆಗೆ ಎಸಗಿದ ಪೈಶಾಚಿಕ ದೌರ್ಜನ್ಯ. ಆದ್ದರಿಂದ ಎಲ್ಲೆಲ್ಲಿ ಒಳಮೀಸಲಾತಿ ಅಗತ್ಯವೋ ಅಲ್ಲಿ ಕೊಡಬೇಕೆಂಬುದು ನನ್ನ ನಿಲುವು.

2. ಒಳಮೀಸಲಾತಿ ಮತ್ತು ಮೀಸಲಾತಿ ಎರಡರ ತಾತ್ವಿಕತೆಯೂ ಭಿನ್ನವೇ ಅಥವಾ ಒಂದೆಯೇ?

ಮೇಲಿನ ವಿವರಣೆಯಿಂದ ತಾತ್ವಿಕವಾಗಿ ಮೀಸಲಾತಿ, ಒಳಮೀಸಲಾತಿ ಎರಡೂ ಒಂದೇ ಆಶಯವುಳ್ಳವು.

3. ಮೀಸಲಾತಿಗೆ ಶೇ.50 ರ ಮಿತಿ ಹೇರಿಕೆ, ಶೇ.3 ರಷ್ಟಿರುವ ಸಮುದಾಯಗಳಿಗೆ ಶೇ. 10 ಮೀಸಲಾತಿ ಕಲ್ಪಿಸಿರುವುದರ ವಿರುದ್ಧ ಹೋರಾಟಗಳಾಗಲಿಲ್ಲವೇಕೆ?

ಇಲ್ಲಿ ಹೋರಾಟ ಮಾಡಬೇಕಾಗಿರುವವರು ಯಾರು? ಇದು ಶ್ರೀಮಂತನು ತನ್ನ ಮನೆಯಲ್ಲಿ ತಾನೆ ಕಳ್ಳತನ ಮಾಡಿದಂತೆ. ರಾಜಕೀಯ ಅಧಿಕಾರ ಮತ್ತು ಆರ್ಥಿಕ ಪ್ರಾಬಲ್ಯ ಮೇಲ್ಜಾತಿಯ ಬಳಿ ಇದೆ. ಸಾಲದ್ದಕ್ಕೆ ಪ್ರಜಾಪ್ರಭುತ್ವದ ಬಾಯಿ ಎನಿಸಿಕೊಂಡಿರುವ ಮಾಧ್ಯಮವೂ ಅವರ ಹಿಡಿತದಲ್ಲಿಯೇ ಇದೆ. ಹೀಗಿರುವಾಗ ಸಂವಿಧಾನಾತ್ಮಕವಾಗಿ ನಿಮ್ಮ ಪಾಲನ್ನು ನಿಮಗೆ ಕೊಟ್ಟಿದ್ದೇವೆ ಎಂದು ಹೇಳಿ ಬಹುಸಂಖ್ಯಾತ ಕೆಳಜಾತಿ ಜನರನ್ನು ಸುಮ್ಮನಿರಿಸುವುದು ಸುಲಭ.

4. ಸ್ಪೃಶ್ಯರನ್ನು ಪರಿಶಿಷ್ಠ ಜಾತಿ ಪಟ್ಟಿಯಿಂದ ಹೊರಗಿಡಬೇಕೆಂಬುದರ ಬಗ್ಗೆ ನಿಮ್ಮ ಅಭಿಪ್ರಾಯವೇನು?

ಸ್ಪೃಶ್ಯ ದಲಿತರ ಬಗ್ಗೆ ನನಗೆ ಅನುಕಂಪವಿದೆ. ಅವರಲ್ಲೂ ಕಡುಬಡವರಿದ್ದಾರೆ. ಆದರೆ ಅವರಲ್ಲಿ ಬಹುಸಂಖ್ಯಾತ ಜಾತಿಗಳನ್ನು ಅಸ್ಪೃಶ್ಯ ಜಾತಿಗಳೊಂದಿಗೆ ಸೇರಿಸಿರುವುದು ರಾಜಕೀಯ ಷಡ್ಯಂತ್ರ ಎಂದು ಈಗ ಅನಿಸುತ್ತಿದೆ. ಭಾರತದ ಯಾವ ರಾಜ್ಯದಲ್ಲೂ ಸ್ಪೃಶ್ಯರು ಅನುಸೂಚಿತ ಜಾತಿ ಪಟ್ಟಿಯಲ್ಲಿಲ್ಲ. ಯಾಕೆಂದರೆ ಅಸ್ಪೃಶ್ಯನ ಪಾರಂಪರಿಕ ಯಾತನೆ ಇತರ ಶೋಷಿತರಿಗಿಂತ ಭಿನ್ನ. ಮನುಷ್ಯಮಾತ್ರನಾದವನು ಅನುಭವಿಸಲಾರದ ಕ್ರೌರ್ಯ, ಹಿಂಸೆ ಮತ್ತು ಅವಮಾನಗಳಿಗೆ ಒಳಗಾದವನು ಅವನು. ಬಹುಪಕ್ಷೀಯ ಪ್ರಜಾಪ್ರಭುತ್ವದಲ್ಲಿ ಒಬ್ಬ ವ್ಯಕ್ತಿ, ಒಂದು ಮತ, ಒಂದು ಮೌಲ್ಯ ಎಂಬ ಅಂಬೇಡ್ಕರರ ನಿರ್ವಚನವೇನೋ ಸರಿ. ಆದರೆ ಜಾತಿವ್ಯವಸ್ಥೆಯಲ್ಲಿ ಬಲಾಢ್ಯ ಜಾತಿಗಳೇ ಚುನಾವಣೆಯಲ್ಲಿ ಮೇಲುಗೈ ಪಡೆಯುವುದರಿಂದ ಮತ್ತೆ ಶೋಷಿತರು ಅವಕಾಶವಂಚಿತರಾಗುವುದನ್ನು ತಪ್ಪಿಸಲು ಅಸ್ಪೃಶ್ಯರಿಗೆ ಪ್ರತ್ಯೇಕ ಮತಕ್ಷೇತ್ರಗಳನ್ನು ಕಲ್ಪಿಸಿದ್ದರು. ಅದನ್ನು ಗಾಂಧಿ ಇಲ್ಲವಾಗಿಸಿದರು. ಆದ್ದರಿಂದ ಇಂದು ದಲಿತನ ಓಟಿಗೆ ಒಂದು ಮೌಲ್ಯ ಇದೆ ಮತ್ತು ಇಲ್ಲ. ದಲಿತನ ಮತಕ್ಕಿರುವುದು ಅವಲಂಬಿತ ಮೌಲ್ಯ [Dependent value]. ಇದಕ್ಕೆ ಬಹಳ ದೊಡ್ಡ ಉದಾಹರಣೆ ಎಂದರೆ ಕಳೆದ ಚುನಾವಣೆಯಲ್ಲಿ ಶ್ರೀ ಮಲ್ಲಿಕಾರ್ಜುನ ಖರ್ಗೆಯವರ ಸೋಲು. ಮೇಲ್ಜಾತಿಯವರು ಜಿದ್ದಿನಿಂದ ಅವರೆದುರು ಒಬ್ಬ ಅನಾಮಿಕ ಸ್ಪೃಶ್ಯ ವ್ಯಕ್ತಿಯನ್ನು ಕಣಕ್ಕಿಳಿಸಿ ಸೋಲಿಸಿದರು. ಹಿಂದೂ ಮನಸ್ಥಿತಿ ಹೇಗಿದೆಯೆಂದರೆ ಸ್ಪೃಶ್ಯ ಮತ್ತು ಅಸ್ಪೃಶ್ಯರ ನಡುವೆ ಆಯ್ಕೆಯ ವಿಷಯ ಬಂದಾಗ ಅವನು ಸ್ಪೃಶ್ಯನನ್ನೆ ಆಯ್ಕೆ ಮಾಡುತ್ತಾನೆ. ಆದ್ದರಿಂದ ಮೇಲ್ಜಾತಿ ಜನರ ಕರುಣೆಯಿಲ್ಲದೆ ಯಾವ ಘಟಾನುಘಟಿ ಅಸ್ಪೃಶ್ಯ ರಾಜಕಾರಣಿಯೂ ಗೆಲ್ಲಲು ಸಾಧ್ಯವಿಲ್ಲ ಎಂಬುದು ಸಾಬೀತಾಯಿತು.

5. ಕೆಲವು ಬಲಗೈ ರಾಜಕಾರಣಿಗಳು ಒಳಮೀಸಲಾತಿ ವಿರುದ್ಧವಾಗಿ ದನಿ ಎತ್ತಿದ ಕಾರಣಕ್ಕೆ ಹೊಲೆಮಾದಿಗರ ನಡುವೆ ಭಿನ್ನತೆ ಉಂಟಾಯಿತು ಎನ್ನಲಾಗುತ್ತದೆ. ನಿಜಕ್ಕೂ ಆಯಾ ದಲಿತ ಜಾತಿಗಳನ್ನು ಪ್ರತಿನಿಧಿಸುವ ಪ್ರಾಮಾಣಿಕ ರಾಜಕಾರಣಿಗಳು ಇಂದಿಗೂ ಇದ್ದಾರೆಯೇ?

ಪ್ರಾಮಾಣಿಕ ರಾಜಕಾರಣಿಗಳು ಎರಡೂ ಬಣಗಳಲ್ಲೂ ಇದ್ದಾರೆ. ಈಗ ಇಬ್ಬರೂ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡಿದ್ದಾರೆ ಎನಿಸುತ್ತದೆ.

6. ಒಳಮೀಸಲಾತಿ ದಲಿತರನ್ನು ಒಡೆದು ಆಳುತ್ತದೆ ಎಂದು ಆರಂಭದಲ್ಲಿ ಭಯ ಬೀಳಿಸಿದ್ದಿದೆ. ಆದರೆ ಈಗ ಒಳಮೀಸಲಾತಿ ಜಾರಿಯಾಗದಿದ್ದರೆ ದಲಿತರ ಒಗ್ಗಟ್ಟು ಸಂಪೂರ್ಣ ಮುರಿದು ಬೀಳುತ್ತದೆ ಎಂಬ ಪರಿಸ್ಥಿತಿ ಉಂಟಾಗಿದೆ. ಇದಕ್ಕೆ ನಿಮ್ಮ ಅಭಿಪ್ರಾಯವೇನು?

ಇದಕ್ಕೆ ನನ್ನ ಸಹಮತವಿದೆ.

7. ಸದಾಶಿವ ಆಯೋಗದ ವರದಿ ಜಾರಿ ಮಾಡುವುದರ ಕುರಿತು ನಿಮ್ಮ ಅನಿಸಿಕೆ ಏನು?

ಸದಾಶಿವ ಆಯೋಗದ ವರದಿಯನ್ನು ಸಂಪೂರ್ಣವಾಗಿ ಬಹಿರಂಗಪಡಿಸಿಲ್ಲ. ಮೇಲೆ ಹೇಳಿದ ಕಾರಣಗಳಿಂದ ಒಳಮೀಸಲಾತಿ ಜಾರಿಯಾಗುವುದು ಒಳಿತು.

  • ಡಾ. ಮೂಡ್ನಾಕೂಡು ಚಿನ್ನಸ್ವಾಮಿ

(ಕನ್ನಡದ ಖ್ಯಾತ ಕವಿ. ದಲಿತ, ಬಂಡಾಯ ಮತ್ತು ಬೌದ್ಧ ಚಿಂತನೆಗಳನ್ನು ಸಾಹಿತ್ಯದ ಮೂಲಕ ಪ್ರಚುರಪಡಿಸಿದ ಪ್ರಮುಖರಲ್ಲಿ ಒಬ್ಬರು. ‘ಕೊಂಡಿಗಳು ಮತ್ತು ಮುಳ್ಳುಬೇಲಿಗಳು’, ‘ಚಪ್ಪಲಿ ಮತ್ತು ನಾನು’ ಮೂಡ್ನಾಕೂಡು ಅವರ ಕೆಲವು ಕವನಸಂಕಲನಗಳು. ‘ನೆನಪಿನ ಹಕ್ಕಿಯ ಹಾರಲು ಬಿಟ್ಟು’ ಅವರ ಆತ್ಮಕತೆ.)


ಇದನ್ನೂ ಓದಿ: ಅಡೆತಡೆ ದಾಟಿ ಹತ್ರಾಸ್ ತಲುಪಿದ ಭೀಮ್‌ ಆರ್ಮಿ ಆಜಾದ್‌ಗೆ ಠಾಕೂರ್ ಯುವಕರಿಂದ ಬಹಿರಂಗ ಬೆದರಿಕೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...