Homeಮುಖಪುಟಮೀಸಲಾತಿ ಮತ್ತು ಒಳಮೀಸಲಾತಿ ಎರಡೂ ಒಂದೆ..: ಬೆಟ್ಟಯ್ಯ ಕೋಟೆ ಸಂದರ್ಶನ

ಮೀಸಲಾತಿ ಮತ್ತು ಒಳಮೀಸಲಾತಿ ಎರಡೂ ಒಂದೆ..: ಬೆಟ್ಟಯ್ಯ ಕೋಟೆ ಸಂದರ್ಶನ

ಸದಾಶಿವ ಆಯೋಗ ಏನು ಹೇಳಿದೆ ಎಂಬುದು ಅಧಿಕೃತವಾಗಿ ಯಾರಿಗೂ ಗೊತ್ತಿಲ್ಲ. ಆದ್ದರಿಂದ ವರದಿಯನ್ನು ಒಂದು ಕಾಲಮಿತಿಯೊಳಿಗೆ ಸಾರ್ವಜನಿಕ ಚರ್ಚೆಗೆ ಒಳಪಡಿಸಿ ಅನುಮಾನಗಳನ್ನು ಪರಿಹರಿಸಿಕೊಳ್ಳುವುದು ಒಳ್ಳೆಯದು.

- Advertisement -
- Advertisement -

ಒಳಮೀಸಲಾತಿ ಚರ್ಚೆಯ ಹಿನ್ನಲೆಯಲ್ಲಿ ಹಿರಿಯ ಹೋರಾಟಗಾರರು ಮತ್ತು ಸಾಹಿತಿಗಳ ಸಂದರ್ಶನದ ಭಾಗವಾಗಿ ಮೈಸೂರಿನ ದಲಿತ ಸಂಘರ್ಷ ಸಮಿತಿಯ ಮುಂದಾಳುಗಳಲ್ಲಿ ಒಬ್ಬರಾದ ಬೆಟ್ಟಯ್ಯ ಕೋಟೆಯವರ ಸಂದರ್ಶನ ಇಲ್ಲಿದೆ.

ಒಳಮೀಸಲಾತಿಯ ಬಗ್ಗೆ ನಿಮ್ಮ ನಿಲುವೇನು? ಒಳಮೀಸಲಾತಿ ಮತ್ತು ಮೀಸಲಾತಿ ಎರಡರ ತಾತ್ವಿಕತೆಯೂ ಭಿನ್ನವೇ ಅಥವಾ ಒಂದೆಯೇ? ಮೀಸಲಾತಿಗೆ ಶೇ.50 ರ ಮಿತಿ ಹೇರಿಕೆ, ಶೇ.3 ರಷ್ಟಿರುವ ಸಮುದಾಯಗಳಿಗೆ ಶೇ. 10 ಮೀಸಲಾತಿ ಕಲ್ಪಿಸಿರುವುದರ ವಿರುದ್ಧ ಹೋರಾಟಗಳಾಗಲಿಲ್ಲವೇಕೆ?

ಮೀಸಲಾತಿ ಎಂದರೇನು ಎಂಬುದರ ಅರ್ಥ ಈಗ ಮತ್ತೆ ಹುಡುಕಬೇಕಿದೆ – ಕಾರಣ ಸಂವಿಧಾನಕರ್ತರು ಸಾವಿರಾರು ವರ್ಷಗಳಿಂದ ಜಾತಿ ಕಾರಣದಿಂದ ಬದುಕುವ ಹಕ್ಕನ್ನೇ ಕಳೆದುಕೊಂಡಿದ್ದಂತಹ ಅಸ್ಪೃಶ್ಯ ತಳ ಸಮುದಾಯಗಳಿಗೆ ಒಂದಿಷ್ಟು ಅವಕಾಶಗಳನ್ನು ಕಲ್ಪಿಸಿ ಸಮಾಜದ ಮುಖ್ಯವಾಹಿನಿಗೆ ಅವರನ್ನು ಸೇರ್ಪಡೆಗೊಳಿಸುವ ಉದ್ದೇಶವನ್ನು ಮೀಸಲಾತಿ ಹೊಂದಿತ್ತು. ಆದರೆ ಶೇ.3ರಷ್ಟಿರುವ ಮೇಲ್ಜಾತಿಗೆ ಶೇ.10 ಮೀಸಲಾತಿ ಎಂದಾಗ ಆದರ ಅರ್ಥ ಏನು ಎಂಬುದು ಗೊಂದಲಮಯವಾಗಿ ಸಮುದಾಯವನ್ನು ಚಿಂತೆಗೀಡುಮಾಡಿತು. ಇದರ ವಿರುದ್ಧ ಹೋರಾಟ ರೂಪಿಸಬೇಕಾದ ಶೇ.60 ಮಿಕ್ಕಿರುವ ಹಿಂದುಳಿದ ಜಾತಿಗಳ ಮೌನವೂ ಪ್ರಶ್ನಾರ್ಥವಾಯಿತು.

ಜಾತಿ ಕಾರಣಕ್ಕಾಗಿ ಕಡೆಗಣಿಸಲ್ಪಟ್ಟ ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಘನತೆಯಿಂದ ಬದುಕು ಕಟ್ಟಿಕೊಳ್ಳುವ ಅವಕಾಶವೇ ಮೀಸಲಾತಿ. ಇಂತಹ ಮೀಸಲಾತಿಗೆ ಒಳಪಡುವ ಜಾತಿ ಉಪಜಾತಿಗಳು ಅಸ್ತಿತ್ವ ಇನ್ನೂ ಅಳಿಸಿಲ್ಲವಾದ್ದರಿಂದ ಒಳಮೀಸಲಾತಿ ಒಪ್ಪಬೇಕಿದೆ. ಮೀಸಲಾತಿ ಮತ್ತು ಒಳಮೀಸಲಾತಿ ಈ ಎರಡರ ತಾಂತ್ರಿಕತೆಯೂ ಒಂದೇ ಆಗಿದೆ.

ಸ್ಪೃಶ್ಯರನ್ನು ಪರಿಶಿಷ್ಠ ಜಾತಿ ಪಟ್ಟಿಯಿಂದ ಹೊರಗಿಡಬೇಕೆಂಬುದರ ಬಗ್ಗೆ ನಿಮ್ಮ ಅಭಿಪ್ರಾಯವೇನು?

ದಲಿತ ಚಳುವಳಿಯು ಎಲ್ಲಾ ಶೋಷಿತ ಸಮುದಾಯಗಳ ಬಿಡುಗಡೆಗಾಗಿ ಧ್ವನಿ ಎತ್ತಿದ ಸಂಘಟನೆ. ಹುಟ್ಟಿನಿಂದಲೂ ಎಲ್ಲಾ ತಳ ಸಮುದಾಯಗಳನ್ನು ತೆಕ್ಕೆಗೆ ತೆಗೆದುಕೊಂಡಿರುವ ಸಂಘಟನೆಯೇ ಇದು. ಆದರೂ ಅಸ್ಪಶ್ಯ ಮತ್ತು ಸ್ಪೃಶ್ಯರಲ್ಲಿ ಸಾಮಾಜಿಕ ಭಿನ್ನತೆಗಳು ಇರುವಿಕೆಯನ್ನು ಗುರುತಿಸಿಕೊಂಡಿದೆ. ಅಸ್ಪೃಶ್ಯತೆಯ ಅವಮಾನಗಳು ಇನ್ನೂ ಜೀವಂತವಾಗಿರುವುದರಿಂದ ಈ ಎರಡೂ ಸಮುದಾಯಗಳಿಗೂ ಜನಸಂಖ್ಯೆಗನುಗುಣವಾಗಿ ಮೀಸಲಾತಿಯನ್ನು ವರ್ಗೀಕರಿಸಬಹುದು ಎಂಬುದು ಒಪ್ಪಿಕೊಳ್ಳಬೇಕಾಗುತ್ತದೆ.

ಕೆಲವು ಬಲಗೈ ರಾಜಕಾರಣಿಗಳು ಒಳಮೀಸಲಾತಿ ವಿರುದ್ಧವಾಗಿ ದನಿ ಎತ್ತಿದ ಕಾರಣಕ್ಕೆ ಹೊಲೆಮಾದಿಗರ ನಡುವೆ ಭಿನ್ನತೆ ಉಂಟಾಯಿತು ಎನ್ನಲಾಗುತ್ತದೆ. ನಿಜಕ್ಕೂ ಆಯಾ ದಲಿತ ಜಾತಿಗಳನ್ನು ಪ್ರತಿನಿಧಿಸುವ ಪ್ರಾಮಾಣಿಕ ರಾಜಕಾರಣಿಗಳು ಇಂದಿಗೂ ಇದ್ದಾರೆಯೇ?

ಇಂದಿನ ರಾಜಕೀಯವೇ ಓಲೈಕೆ ರಾಜಕಾರಣ. ಇತರರನ್ನು ಅವಲಂಬಿಸಿ ರಾಜಕೀಯ ಮಾಡಬೇಕಾದ ಅನಿವಾರ್ಯತೆ ಸಮುದಾಯಗಳದು. ಬಾಬಾಸಾಹೇಬ್ ಅಂಬೇಡ್ಕರ್ ಅವರು ಒತ್ತಾಯಿಸಿದಂತೆ ಅಸ್ಪೃಶ್ಯರಿಗೆ ಪ್ರತ್ಯೇಕ ಮತದಾನ ಪದ್ಧತಿ ಇದ್ದು ಆ ಮೂಲಕ ತಮ್ಮ ಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ಈಗ ಇಲ್ಲವಾದ್ದರಿಂದ ತಳಸಮುದಾಯಗಳು ರಾಜಕಾರಣಿಗಳಿಂದ ಏನನ್ನೂ ನೀರಿಕ್ಷಿಸಲು ಸಾಧ್ಯವಿಲ್ಲ.

ಒಳಮೀಸಲಾತಿ ದಲಿತರನ್ನು ಒಡೆದು ಆಳುತ್ತದೆ ಎಂದು ಆರಂಭದಲ್ಲಿ ಭಯ ಬೀಳಿಸಿದ್ದಿದೆ. ಆದರೆ ಈಗ ಒಳಮೀಸಲಾತಿ ಜಾರಿಯಾಗದಿದ್ದರೆ ದಲಿತರ ಒಗ್ಗಟ್ಟು ಸಂಪೂರ್ಣ ಮುರಿದು ಬೀಳುತ್ತದೆ ಎಂಬ ಪರಿಸ್ಥಿತಿ ಉಂಟಾಗಿದೆ. ಇದಕ್ಕೆ ನಿಮ್ಮ ಅಭಿಪ್ರಾಯವೇನು?

ಅಸ್ಪೃಶ್ಯ ಜಾತಿಗಳ ಪಟ್ಟಿಯಿಂದ ಸ್ಪೃಶ್ಯ ಜಾತಿಗಳನ್ನು ಹೊರಗಿಡಬೇಕು ಎಂಬ ಕೂಗು ಕೇಳತೊಡಗಿದಾಗ ಒಳಮೀಸಲಾತಿ ಧ್ವನಿ ತಣ್ಣಗಾಗಿ ಅಸ್ಪೃಶ್ಯ ಸಮುದಾಯಗಳು ಒಟ್ಟಾಗತೊಡಗಿದವು. ಈಗ ಇದ್ದಕ್ಕಿದ್ದಂತೆ ಒಳಮೀಸಲಾತಿ ಧ್ವನಿ ಗಟ್ಟಿಯಾಗತೊಡಗಿದ್ದು ಪರಸ್ಪರ ಅನುಮಾನಗಳು ಸೃಷ್ಟಿಯಾಗಿವೆ. ಒಟ್ಟಾರೆ ಸಾರ್ವಜನಿಕ ವಲಯಗಳನ್ನೇ ಖಾಸಗೀಕರಣಗೊಳಿಸುತ್ತಿರುವ ಈ ಸಂದರ್ಭದಲ್ಲಿ ಖಾಸಗಿವಲಯದಲ್ಲಿ ಮೀಸಲಾತಿ ಕಲ್ಪಿಸುವ ಯಾವ ಪ್ರಯತ್ನವೂ ಸರ್ಕಾರಗಳಿಂದ ನಡೆಯುತ್ತಿಲ್ಲ ಬದಲಿಗೆ ಆರ್ಥಿಕ ಸವಲತ್ತು ಒದಗಿಸುವ ಕಾರ್ಯಕ್ರಮವಾಗಿ ಮೀಸಲಾತಿಯನ್ನು ಮೇಲ್ವರ್ಗಗಳಿಗೆ ಕಲ್ಪಿಸಲಾಯಿತು. ಈ ಹೊತ್ತಿನಲ್ಲಿ ಒಳಮೀಸಲಾತಿ ಬಗ್ಗೆ ಇಷ್ಟೊಂದು ದೊಡ್ಡ ಕೂಗು ಮೀಸಲಾತಿಯನ್ನು ವಿರೋಧಿಸುತ್ತಿದ್ದವರಿಂದಲೇ ಬರುತ್ತಿರುವುದು ಅನುಮಾನಕ್ಕೆಡೆಮಾಡಿದೆ.

ಸದಾಶಿವ ಆಯೋಗದ ವರದಿ ಜಾರಿ ಮಾಡುವುದರ ಕುರಿತು ನಿಮ್ಮ ಅನಿಸಿಕೆ ಏನು?

ಸದಾಶಿವ ಆಯೋಗ ಏನು ಹೇಳಿದೆ ಎಂಬುದು ಅಧಿಕೃತವಾಗಿ ಯಾರಿಗೂ ಗೊತ್ತಿಲ್ಲ. ಇಂತಹ ಸಂದರ್ಭದಲ್ಲಿ ಆಯೋಗದ ವರದಿ ಬಗ್ಗೆ ಅನೇಕ ಅನುಮಾನಗಳು ಹುಟ್ಟುವುದು ಸಹಜ. ಆದ್ದರಿಂದ ವರದಿಯನ್ನು ಒಂದು ಕಾಲಮಿತಿಯೊಳಿಗೆ ಸಾರ್ವಜನಿಕ ಚರ್ಚೆಗೆ ಒಳಪಡಿಸಿ ಅನುಮಾನಗಳನ್ನು ಪರಿಹರಿಸಿಕೊಳ್ಳುವುದು ಒಳ್ಳೆಯದು.

ಜಾತಿ ಅಸಮಾನತೆ ಮತ್ತು ಸಾಮಾಜಿಕ ತಾರತಮ್ಯವನ್ನು ನಿವಾರಿಸುವ ಮೀಸಲಾತಿಯನ್ನು ಬಡತನ ನಿರ್ಮೂಲನ ಕಾರ್ಯಕ್ರಮದಂತೆ ಪ್ರತಿಯೊಂದು ಜಾತಿಗಳ ಜನಸಂಖ್ಯೆ ಆಧರಿಸಿ ಮೇಲ್ಜಾತಿಗಳಿಗೂ ಹಂಚುವುದಾದರೆ ಸಾಮಾಜಿಕ ನ್ಯಾಯ, ಸಮಾನತೆ ಎಂಬುದು ಮರೀಚಿಕೆಯಾಗಿ ಶ್ರೇಣಿಕೃತ ಜಾತಿವ್ಯವಸ್ಥೆಯನ್ನು ಗಟ್ಟಿಗೊಳಿಸುವ ಸಾಧನವಾಗುವುದರಲ್ಲಿ ಸಂಶಯವಿಲ್ಲ.

  • ಬೆಟ್ಟಯ್ಯ ಕೋಟೆ

(ಬೆಟ್ಟಯ್ಯನವರು ಮೈಸೂರಿನ ದಲಿತ ಸಂಘರ್ಷ ಸಮಿತಿಯ ಮುಂದಾಳುಗಳಲ್ಲಿ ಒಬ್ಬರು. ಎಚ್.ಡಿ.ಕೋಟೆಯ ಬೆಟ್ಟಯ್ಯ, ದಲಿತ ಚಳವಳಿಯಲ್ಲಿ ಸುದೀರ್ಘ ಕಾಲದಿಂದ ಇದ್ದು, ಮೈಸೂರಿನ ದುಡಿಯುವ ಸಮುದಾಯಗಳ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ.)


ಇದನ್ನೂ ಓದಿ: ಬಿಜೆಪಿಯೆಂದರೆ ಬ್ರಾಹ್ಮಣ-ಬನಿಯಾ ಕ್ಲಬ್: ಅವರಿಂದ `ಒಳ’ಮೀಸಲಾತಿ ಸಾಧ್ಯವೇ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....

SIR ಅಕ್ರಮದ ವಿರುದ್ಧ ಅನಿರ್ದಿಷ್ಟಾವಧಿ ಹೋರಾಟದ ಎಚ್ಚರಿಕೆ: ಆ.15ಕ್ಕೆ ‘ಮತದಾರರ ಹಕ್ಕು ಪ್ರತಿಪಾದನಾ ದಿನ’

ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಲ್ಲಿ ಲಕ್ಷಾಂತರ ಅರ್ಹ ನಾಗರಿಕರು ಮತದಾನದ ಹಕ್ಕಿನಿಂದ ವಂಚಿತರಾಗುವ ಭೀತಿ ಎದುರಾಗಿದೆ ಎಂದು ‘SIR ವಿರೋಧಿ ಜಾತ್ಯತೀತ ಪಕ್ಷಗಳು ಹಾಗೂ ಜನಪರ ಸಂಘಟನೆಗಳ ಒಕ್ಕೂಟ’...

ಶಾಖಾಪುರ ದಲಿತರ ಮೇಲಿನ ಹಲ್ಲೆ ಪ್ರಕರಣ: ಸಿಎಂ, ಗೃಹ ಸಚಿವರಿಗೆ ಪತ್ರ, ಅಗ್ನಿವೀರನ ಬೆನ್ನಿಗೆ ನಿಂತ ಭಾರತೀಯ ಸೇನೆ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಖಾಪುರ ಗ್ರಾಮದಲ್ಲಿ ದಲಿತ ಸಮುದಾಯದವರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಭಾರತೀಯ ಸೇನೆ ತೀವ್ರವಾಗಿ ಪರಿಗಣಿಸಿದೆ. ದೇಶದ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಗ್ನಿವೀರ ಯೋಧ ಶಿವಕುಮಾರ್ ತಳವಾರ...

RSS ಇತಿಹಾಸ ಜಾಲಾಡ್ತಿದೆ ಸರ್ಕಾರ: ಸಚಿವ ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ವಿರುದ್ಧ ಯಾವುದೇ ಕಾನೂನಾತ್ಮಕ ಕ್ರಮ ಕೈಗೊಳ್ಳುವ ಮುನ್ನ ರಾಜ್ಯ ಸರ್ಕಾರವು ಸಂಘಟನೆಯ ಸಂಪೂರ್ಣ ಇತಿಹಾಸ ಹಾಗೂ ಹಿನ್ನೆಲೆಯನ್ನು ಕೂಲಂಕಷವಾಗಿ ಅಧ್ಯಯನ ನಡೆಸುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್...

ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಬಾಲಕನ ಮೇಲೆ ಕತ್ತಿಯಿಂದ ಹಲ್ಲೆಗೆ ಯತ್ನ: ಚಿಕ್ಕಮಗಳೂರಿನಲ್ಲಿ ಅಟ್ರಾಸಿಟಿ ಕೇಸ್ ದಾಖಲು

ದೇವಸ್ಥಾನ ಪ್ರವೇಶಿಸಿದ ಕಾರಣಕ್ಕಾಗಿ ಪರಿಶಿಷ್ಟ ಜಾತಿಗೆ ಸೇರಿದ 16 ವರ್ಷದ ಬಾಲಕನಿಗೆ ಜಾತಿ ನಿಂದನೆ ಮಾಡಿ, ಕತ್ತಿಯಿಂದ ಹಲ್ಲೆ ನಡೆಸಲು ಯತ್ನಿಸಿದ ಗಂಭೀರ ಘಟನೆ ಚಿಕ್ಕಮಗಳೂರು ತಾಲೂಕಿನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು...

ಪಾಕಿಸ್ತಾನದ ಹನಿಟ್ರ್ಯಾಪ್‌ಗೆ ಸೇನಾ ಮಾಹಿತಿ ಸೋರಿಕೆ: ಭಾರತೀಯ ವಾಯುಪಡೆ ಅಧಿಕಾರಿ ಬಂಧನ

ಸಾಮಾಜಿಕ ಜಾಲತಾಣಗಳ ಮೂಲಕ ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ಹನಿಟ್ರ್ಯಾಪ್‌ಗೆ ಬಿದ್ದು, ಸೇನೆಗೆ ಸಂಬಂಧಿಸಿದ ರಹಸ್ಯ ಮಾಹಿತಿಗಳನ್ನು ಹಂಚಿಕೊಂಡ ಆರೋಪದ ಮೇಲೆ ಭಾರತೀಯ ವಾಯುಪಡೆಯ (IAF) ಸೇವಾನಿರತ ಅಧಿಕಾರಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ...

ಅಮೆರಿಕದೊಂದಿಗೆ ಮಾತುಕತೆಗೆ ಇರಾನ್ ಸಹಮತ: ಶರಣಾಗತಿಗೆ ನಿರಾಕರಿಸಿದ ಅಧ್ಯಕ್ಷ ಪೆಝೇಷ್ಕಿಯಾನ್

ತನ್ನ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಮಾತುಕತೆಯ ಮಾರ್ಗವನ್ನು ಮುಂದುವರಿಸಲು ಇರಾನ್ ಬದ್ಧವಾಗಿದೆ ಎಂದು ದೇಶದ ಅಧ್ಯಕ್ಷ ಮಸೂದ್ ಪೆಝೇಷ್ಕಿಯಾನ್ ಪುನರುಚ್ಚರಿಸಿದ್ದು, ಯಾವುದೇ ಕಾರಣಕ್ಕೂ ಟೆಹ್ರಾನ್ ಶರಣಾಗತಿಗೆ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ (ಆಗಸ್ಟ್ 7) ತಮ್ಮ...

ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದ ಪ್ರಕರಣ : ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಹೈಕೋರ್ಟ್‌ ತರಾಟೆ

ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಭಾರತೀಯರೋ ಅಥವಾ ಪಾಕಿಸ್ತಾನಿಯೋ ಎಂದಿದ್ದ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌. ರವಿಕುಮಾರ್‌ ವಿರುದ್ಧ ಶುಕ್ರವಾರ (ಆ.7) ಕರ್ನಾಟಕ ಹೈಕೋರ್ಟ್‌...

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು...