Homeಮುಖಪುಟಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿ ತೊರೆದ ಚಿರಾಗ್ ಪಾಸ್ವಾನ್!

ಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿ ತೊರೆದ ಚಿರಾಗ್ ಪಾಸ್ವಾನ್!

ನಮಗೆ ಬಿಜೆಪಿಯೊಂದಿಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಆದರೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಸಮಸ್ಯೆ ಇದೆ.

- Advertisement -
- Advertisement -

ಅಕ್ಟೋಬರ್-ನವಂಬರ್‌ನಲ್ಲಿ ನಡೆಯುವ ಬಿಹಾರ ಚುನಾವಣೆಯಲ್ಲಿ ಚಿರಾಗ್ ಪಾಸ್ವಾನ್ ಅವರು ಏಕಾಂಗಿಯಾಗಿ ಸ್ಪರ್ಧಿಸುವ ಆಶಯವನ್ನು ವ್ಯಕ್ತಪಡಿಸಿದ್ದು, ಬಿಜೆಪಿಯು ತನ್ನ ಅಭ್ಯರ್ಥಿಗಳ ಬಗ್ಗೆ ಮರುಚಿಂತನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಈ ಹಿನ್ನೆಲೆಯಲ್ಲಿ, ಬಿಹಾರದ ಉಸ್ತುವಾರಿ ದೇವೇಂದ್ರ ಫಡ್ನವಿಸ್ ಮತ್ತು ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಸೇರಿದಂತೆ ಬಿಜೆಪಿ ಉನ್ನತ ನಾಯಕರು ದೆಹಲಿಯಲ್ಲಿ ಪಕ್ಷದ ಮುಖ್ಯಸ್ಥ ಜೆ.ಪಿ.ನಡ್ಡಾ ಅವರ ಮನೆಯಲ್ಲಿ ಸಭೆ ನಡೆಸುತ್ತಿದ್ದಾರೆ. ನಿನ್ನೆ, ಪ್ರಧಾನಿ ನರೇಂದ್ರ ಮೋದಿ, ಜೆ.ಪಿ.ನಡ್ಡಾ ಮತ್ತು ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಇತರ ಉನ್ನತ ನಾಯಕರು ಬಿಹಾರ ಸ್ಥಾನಗಳು ಮತ್ತು ಅಭ್ಯರ್ಥಿಗಳ ಕುರಿತು ಚರ್ಚೆ ನಡೆಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಬಿಹಾರ ವಿಧಾನಸಭಾ ಚುನಾವಣೆ: ಶುರುವಾಗಿದೆ NDA ವಿರುದ್ಧ ’ಬ್ಯಾನರ್’ ಯುದ್ಧ!

ಲೋಕ್ ಜನಶಕ್ತಿ ಪಕ್ಷದ (ಎಲ್‌ಜೆಪಿ) ಮುಖಂಡ ಚಿರಾಗ್ ಪಾಸ್ವಾನ್ ರಾಷ್ಟ್ರೀಯ ಪ್ರಜಾಪ್ರಭುತ್ವ ಒಕ್ಕೂಟದ ಭಾಗವಾಗಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ನಿನ್ನೆ ಘೋಷಿಸಿದರು. “ನಮಗೆ ಬಿಜೆಪಿಯೊಂದಿಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಆದರೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಸಮಸ್ಯೆ ಇದೆ. ಹಾಗಾಗಿ ಬಿಹಾರ ಚುನಾವಣೆಯ ನಂತರ ತಮ್ಮ ಪಕ್ಷ ಮತ್ತು ಬಿಜೆಪಿ ಸೇರಿ ಸರ್ಕಾರ ರಚಿಸಲಿವೆ” ಎಂದು ಹೇಳಿದರು. ಚಿರಾಗ್ ಪಾಸ್ವಾನ್ ಅವರ ತಂದೆ ರಾಮ್ ವಿಲಾಸ್ ಪಾಸ್ವಾನ್, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಸಚಿವರಾಗಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆಯಲ್ಲಿ ಆಜಾದ್ ಸಮಾಜ ಪಕ್ಷ ಸ್ಪರ್ಧೆ: ಚಂದ್ರಶೇಖರ್ ಆಜಾದ್

ಆದರೆ, ಬಿಜೆಪಿ ಸ್ಪರ್ಧಿಸುವ ಸ್ಥಾನಗಳನ್ನು ಬಿಟ್ಟು ನಿತೀಶ್ ಕುಮಾರ್ ಅವರ ಜನತಾದಳ ಯುನೈಟೆಡ್ (ಜೆಡಿಯು) ಪಕ್ಷದ ಎದುರು ಅಭ್ಯರ್ಥಿಗಳನ್ನು ನೇಮಿಸುವುದಾಗಿ ಪಾಸ್ವಾನ್ ಘೋಷಿಸಿದ್ದಾರೆ.

ದೆಹಲಿಯಲ್ಲಿ ಬಿಜೆಪಿ ನಾಯಕರೊಡನೆ ಎರಡು ಸಭೆಗಳನ್ನು ನಡೆಸಿದ ಚಿರಾಗ್ ಪಾಸ್ವಾನ್‌ರವರ ಈ ನಡೆ ಮತ್ತು ಬಿಜೆಪಿಯ ಮೌನವು ತನ್ನ ‘ಪ್ಲ್ಯಾನ್ ಬಿ’ಯಲ್ಲಿ ನಿತೀಶ್ ಕುಮಾರ್‌ ಅವರನ್ನು ನಿಗ್ರಹಿಸಲು ಮೌನ ಸಮ್ಮತಿಯನ್ನು ಸೂಚಿಸಿದೆಯೇ ಎಂದು ಹಲವರಲ್ಲಿ ಅನುಮಾನ ಮೂಡಿಸಿದೆ. ಚಿರಾಗ್ ಪಾಸ್ವಾನ್‌ರವರ ಈ ಘೋಷಣೆಯ ನಂತರವೂ ಯಾವುದೇ ಬಿಜೆಪಿ ಮುಖಂಡರು ಪ್ರತಿಕ್ರಿಯಿಸದಿರುವುದು ಈ ಊಹಾಪೋಹಗಳಿಗೆ ಇಂಬು ನೀಡಿವೆ. ಅದಾಗ್ಯೂ ಮೇಲ್ನೋಟಕ್ಕೆ ನಿತೀಶ್ ಕುಮಾರ್‌ ಅವರನ್ನು ಎನ್‌ಡಿಎ ಮೈತ್ರಿ ಕೂಟದ ನಾಯಕ ಎಂದು ಬಿಜೆಪಿ ದೃಢವಾಗಿ ಅನುಮೋದಿಸಿದೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಜಿತಾನ್ ರಾಮ್ ಮಾಂಜಿ ಮಹಾಮೈತ್ರಿ ತೊರೆಯುವುದಾಗಿ ಘೋಷಣೆ

ಬಿಜೆಪಿ-ನಿತೀಶ್ ಕುಮಾರ್ ಸ್ಥಾನಗಳ ಒಪ್ಪಂದದಲ್ಲಿ, ಬಿಹಾರದ 243 ಸ್ಥಾನಗಳಲ್ಲಿ, ಜೆಡಿಯು- 122, ಬಿಜೆಪಿ- 121 ಸ್ಥಾನಗಳಿಗೆ ಸ್ಪರ್ಧಿಸಬಹುದು ಎಂದು ಮೂಲಗಳು ತಿಳಿಸಿವೆ. ಬಿಜೆಪಿ ತನ್ನ ಪಾಲಿನಿಂದ ಎಲ್‌ಜೆಪಿಗೆ ಸ್ಥಾನಗಳನ್ನು ನೀಡಬೇಕಾಗಿತ್ತು. ಆದರೆ ಇದು ಈಗ ವಿವಾದಾಸ್ಪದವಾಗಿದೆ.

ದಲಿತರ ಮತಗಳ ಭದ್ರ ನೆಲೆ ಎಂದು ಹೇಳಿಕೊಳ್ಳುವ ಎಲ್‌ಜಿಪಿ ಹಿಂದಿನ ಚುನಾವಣೆಗಳಲ್ಲಿಯೂ ಇದೇ ರೀತಿಯ ತಂತ್ರವನ್ನು ಅನುಸರಿಸಿತ್ತು.

ಚಿರಾಗ್ ಪಾಸ್ವಾನ್ ಅವರು ಇತ್ತೀಚಿನ ದಿನಗಳಲ್ಲಿ ನಿತೀಶ್ ಕುಮಾರ್ ಅವರ ಬಗ್ಗೆ ತೀವ್ರವಾದ ಟೀಕೆಗಳನ್ನು ಮಾಡುತ್ತಿದ್ದರು. ರಾಜ್ಯದ ಮುಖ್ಯಮಂತ್ರಿಗಳು ಕೊರೊನಾ ಸಾಂಕ್ರಾಮಿಕವನ್ನು ನಿಭಾಯಿಸುವಲ್ಲಿ ಮತ್ತು ವಲಸೆಗಾರರ ಬಿಕ್ಕಟ್ಟನ್ನು ಎದುರಿಸುವುದರಲ್ಲಿ ಎಡವಿದ್ದಾರೆ ಎಂದು ಬಹಿರಂಗವಾಗಿ ಟೀಕಿಸಿದ್ದರು.

ಇದನ್ನೂ ಓದಿ: ಬಿಹಾರ ಚುನಾವಣೆ: ಬಿಜೆಪಿ – ಜೆಡಿಯು ನಡುವೆ ಸ್ಥಾನ ಹಂಚಿಕೆ ಮಾತುಕತೆ

ರಾಜ್ಯದ 243 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಆಡಳಿತರೂಢ ಎನ್‌ಡಿಎ ಮತ್ತು ಮಹಾಮೈತ್ರಿ ನಡುವೆ ನೇರ ಹಣಾಹಣಿ ನಡೆಯಲಿದೆ. ಈ ಹಿಂದೆ, ಎನ್‌ಡಿಯ ಮೈತ್ರಿಕೂಟದಲ್ಲಿ ನಿತೀಶ್‌ ಕುಮಾರ್‌ರವರ ಜೆಡಿಯು, ಬಿಜೆಪಿ, ಚಿರಾಗ್ ಪಾಸ್ವಾನ್‌ರವರ ಎಲ್‌ಜೆಪಿ ಮತ್ತು ಜತಿನ್ ರಾಮ್‌ ಮಾಂಝಿಯವರ ಹಿಂದೂಸ್ತಾನ್ ಅವಮ್ ಮೋರ್ಚಾ ಸೇರಿತ್ತು. ಇದರ ಪ್ರತಿಸ್ಪರ್ಧಿ ಮಹಾಮೈತ್ರಿಯಲ್ಲಿ ಲಾಲು ಪ್ರಸಾದ್ ಯಾದವ್‌ರವರ ಆರ್‌ಜೆಡಿ, ಕಾಂಗ್ರೆಸ್ ಪ್ರಮುಖ ಪಕ್ಷಗಳಾಗಿತ್ತು. ಆದರೆ ಈಗ ಚಿರಾಗ್ ಪಾಸ್ವಾನ್ ಅವರ ಈ ನಿರ್ಧಾರವು ಈ ಯೋಜನೆಯನ್ನು ತಿರುಗುಮುರುಗು ಮಾಡಿದೆ.

ಸದ್ಯಕ್ಕೆ ಲಾಲು ಪ್ರಸಾದ್ ಯಾದವ್‌ರವರು ಜೈಲಿನಲ್ಲಿರುವ ಕಾರಣ ಅವರ ಮಗ ತೇಜಸ್ವಿ ಯಾದವ್ ಆರ್‌ಜೆಡಿ ಮತ್ತು ಮಹಾಮೈತ್ರಿಯನ್ನು ಮುನ್ನಡೆಸುತ್ತಿದ್ದಾರೆ.

ಭಾರೀ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆ ಅಕ್ಟೋಬರ್ 28 ರಿಂದ ಆರಂಭವಾಗಲಿದ್ದು, 3 ಹಂತಗಳಲ್ಲಿ ನಡೆಯಲಿದೆ. ನವೆಂಬರ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ಹಲವರು ವೈರಸ್ ವಿರುದ್ಧ ಹೋರಾಡುತ್ತಿದ್ದರೆ ಬಿಹಾರ ಸಿಎಂ ಚುನಾವಣೆ ಪ್ರಚಾರದಲ್ಲಿದ್ದಾರೆ; ಪ್ರಶಾಂತ್ ಕಿಶೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...