Homeಮುಖಪುಟಹತ್ರಾಸ್ ಸಂತ್ರಸ್ತ ಕುಟುಂಬದ ಭೇಟಿ: ಭೀಮ್ ಆರ್ಮಿ ಮುಖ್ಯಸ್ಥ ಆಜಾದ್‌ ಮೇಲೆ FIR

ಹತ್ರಾಸ್ ಸಂತ್ರಸ್ತ ಕುಟುಂಬದ ಭೇಟಿ: ಭೀಮ್ ಆರ್ಮಿ ಮುಖ್ಯಸ್ಥ ಆಜಾದ್‌ ಮೇಲೆ FIR

ವಿಪರ್ಯಾಸವೆಂದರೆ ಆಜಾದ್‌ಗೆ ಪೊಲೀಸರ ಸಮ್ಮುಖದಲ್ಲೇ ಬೆದರಿಕೆ ಹಾಕಿದ್ದ ಠಾಕೂರ್ ಯುವಕರ ವಿರುದ್ಧವಾಗಲಿ, ಸಂತ್ರಸ್ತ ಕುಟುಂಬದ ವಿರುದ್ಧ ಪ್ರತಿಭಟನೆ ನಡೆಸಿದ ಠಾಕೂರರ ವಿರುದ್ಧವಾಗಲಿ ಪೊಲೀಸರು ಯಾವುದೇ ಪ್ರಕರಣ ದಾಖಲಿಸಿಲ್ಲ.

- Advertisement -
- Advertisement -

ನಿನ್ನೆ ಹತ್ರಾಸ್‌ನಲ್ಲಿ ಸಂತ್ರಸ್ತೆ ಕುಟುಂಬವನ್ನು ಭೇಟಿ ಮಾಡಿದ್ದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ವಿರುದ್ಧ ಸೆಕ್ಷನ್ 144 ಅನ್ನು ಉಲ್ಲಂಘಿಸಿದ್ದಕ್ಕಾಗಿ FIR ದಾಖಲಿಸಲಾಗಿದೆ. ಸಂತ್ರಸ್ತ ಕುಟುಂಬವನ್ನು ಭೇಟಿಯಾಗಲು ಪೊಲೀಸರು ಅನುಮತಿ ನಿರಾಕರಿಸಿದ್ದ ಕಾರಣ ಚಂದ್ರಶೇಖರ್ ಆಜಾದ್ ಭಾನುವಾರ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಬೂಲ್‌ಗರಿ ಗ್ರಾಮಕ್ಕೆ ರ್‍ಯಾಲಿ ನಡೆಸಿದ್ದರು.

ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಜೊತೆಗೆ ಇನ್ನೂ 400 ಮಂದಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ. ವಿಪರ್ಯಾಸವೆಂದರೆ ಆಜಾದ್‌ಗೆ ಪೊಲೀಸರ ಸಮ್ಮುಖದಲ್ಲೇ ಬೆದರಿಕೆ ಹಾಕಿದ್ದ ಠಾಕೂರ್ ಯುವಕರ ವಿರುದ್ಧವಾಗಲಿ, ಸಂತ್ರಸ್ತ ಕುಟುಂಬದ ವಿರುದ್ಧ ಪ್ರತಿಭಟನೆ ನಡೆಸಿದ ಠಾಕೂರರ ವಿರುದ್ಧವಾಗಲಿ ಪೊಲೀಸರು ಯಾವುದೇ ಪ್ರಕರಣ ದಾಖಲಿಸಿಲ್ಲ.

ಸಂತ್ರಸ್ತ ಕುಟುಂಬದ ವಿರುದ್ಧ ಠಾಕೂರರ ಪ್ರತಿಭಟನೆ.

Some people from Thakur Caste rallying in favor of rape accused in Hathras Yogi Adityanath himself is from Thakur Caste. Is that the reason the police is doing everything possible to bury all evidence of rape?

Posted by Dhruv Rathee on Sunday, October 4, 2020

ಅಲಿಗಡ್-ಹತ್ರಾಸ್ ಮಾರ್ಗದಲ್ಲಿ ಚಂದ್ರಶೇಖರ್ ಆಜಾದ್ ಮತ್ತು ಅವರ ಬೆಂಗಾವಲು ಪಡೆಯನ್ನು ಬೂಲ್‌ಗರಿಯಿಂದ 20 ಕಿ.ಮೀ ದೂರದಲ್ಲಿ ಪೊಲೀಸರು ನಿಲ್ಲಿಸಲಾಯಿತು. ಹೀಗಾಗಿ ಆಜಾದ್ ತಮ್ಮ ಅನುಯಾಯಿಗಳೊಂದಿಗೆ ಗ್ರಾಮಕ್ಕೆ ಕಾಲ್ನಡಿಗೆಯಲ್ಲಿ ಹೊರಟಿದ್ದರು.

ಇದನ್ನೂ ಓದಿ: ಹತ್ರಾಸ್‌ಗೆ ಹೊರಟ SP, RLD ಮುಖಂಡರ ಮೇಲೆ ಯುಪಿ ಪೊಲೀಸರ ಅಮಾನುಷ ದಾಳಿ!

ಚಂದ್ರಶೇಖರ್ ಅಜಾದ್‌ರನ್ನು ಪೊಲೀಸರು ಹತ್ರಾಸ್‌ಗೆ ಹೋಗದಂತೆ ಆರಂಭದಲ್ಲಿ ತಡೆದರು. ನಂತರ ಪಟ್ಟು ಬಿಡದ ಆಜಾದ್‌ರವರಿಗೆ ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಲು ಅನುಮತಿ ನೀಡಿದರು.

ಬರ್ಬರ ಅತ್ಯಾಚಾರಕ್ಕೊಳಗಾಗಿ ಕೊಲೆಗೀಡಾದ 19 ವರ್ಷದ ದಲಿತ ಯುವತಿಯ ಕುಟುಂಬವನ್ನು ಕೊನೆಗೂ ಭೇಟಿಯಾದ ಆಜಾದ್ “ಮೇಲ್ಜಾತಿ ಠಾಕೂರರು ಸಭೆ ನಡೆಸಿ ಸಂತ್ರಸ್ತ ಕುಟುಂಬದ ವಿರುದ್ಧ ಹರಿಹಾಯ್ದಿದ್ದಾರೆ. ಇಂತಹ ಸಮಯದಲ್ಲಿ ಕುಟುಂಬಕ್ಕೆ ರಕ್ಷಣೆ ಬೇಕು. ಹಾಗಾಗಿ ಕೂಡಲೇ ಕೇಂದ್ರ ಸರ್ಕಾರ ವೈ ಪ್ಲಸ್ ಭದ್ರತೆ ಒದಗಿಸಬೇಕೆಂದು” ಆಗ್ರಹಿಸಿದ್ದರು. ಸರ್ಕಾರ ಭದ್ರತೆ ನೀಡದಿದ್ದರೆ ಸಂತ್ರಸ್ತರನ್ನು ತನ್ನ ಮನೆಗೆ ಕೊರೆದೊಯ್ದು ರಕ್ಷಣೆ ನೀಡುವುದಾಗಿ ಅವರು ಹೇಳಿದ್ದರು.

ಈ ನಡುವೆ ಸಂತ್ರಸ್ತೆಯ ಗ್ರಾಮಕ್ಕೆ ಭೇಟಿ ನೀಡಿದ್ದ ಚಂದ್ರಶೇಖರ್ ಆಜಾದ್‌ಗೆ ‘ಸವರ್ಣ ಜಾಗೋ’ ಹೆಸರಿನಲ್ಲಿ ಆರೋಪಿಗಳ ಪರ ಪ್ರತಿಭಟನೆ ನಡೆಸುತ್ತಿರುವ ಠಾಕೂರ್ ಯುವಕರಿಬ್ಬರು ಪೊಲೀಸರ ಸಮ್ಮುಖದಲ್ಲಿ ಬಹಿರಂಗ ಬೆದರಿಕೆ ಹಾಕಿದ್ದರು.


ಇದನ್ನೂ ಓದಿ: ಅಡೆತಡೆ ದಾಟಿ ಹತ್ರಾಸ್ ತಲುಪಿದ ಭೀಮ್‌ ಆರ್ಮಿ ಆಜಾದ್‌ಗೆ ಠಾಕೂರ್ ಯುವಕರಿಂದ ಬಹಿರಂಗ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...