Homeಮುಖಪುಟತಮಿಳುನಾಡು ಸಿಎಂ ಅಭ್ಯರ್ಥಿ ಪಟ್ಟಕ್ಕಾಗಿ ಪಳನಿಸ್ವಾಮಿ ಮತ್ತು ಪನ್ನೀರ್ ಸೆಲ್ವಂ ನಡುವೆ ಪೈಪೋಟಿ

ತಮಿಳುನಾಡು ಸಿಎಂ ಅಭ್ಯರ್ಥಿ ಪಟ್ಟಕ್ಕಾಗಿ ಪಳನಿಸ್ವಾಮಿ ಮತ್ತು ಪನ್ನೀರ್ ಸೆಲ್ವಂ ನಡುವೆ ಪೈಪೋಟಿ

ಚುನಾವಣೆಗೆ ಮುನ್ನವೇ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡುವುದನ್ನು ಪನ್ನೀರ್‌ಸೆಲ್ವಂ ಪ್ರಶ್ನಿಸಿದ್ದಾರೆ.

- Advertisement -
- Advertisement -

ಮುಂದಿನ ವರ್ಷ ಆರಂಭದಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ರಾಜಕೀಯ ಗರಿಗೆದರಿದೆ. ಆಡಳಿತ ಪಕ್ಷ AIADMK ನಲ್ಲಿ ಮುಸುಕಿನ ಗುದ್ದಾಟಕ್ಕೆ ಉಪಮುಖ್ಯಮಂತ್ರಿ ಓ ಪನ್ನೀರ್ ಸೆಲ್ವಂ ಪ್ರತಿಕ್ರಿಯೆ ನೀಡಿದ್ದಾರೆ.

ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಎಐಎಡಿಎಂಕೆ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆ ಉದ್ಭವಿಸಿದೆ. ಆಯ್ಕೆ ಹಿನ್ನೆಲೆ ಉದ್ಭವಿಸಿರುವ ಬಿಕ್ಕಟ್ಟಿನ ಕುರಿತು ತಮಿಳುನಾಡಿನ ಉಪಮುಖ್ಯಮಂತ್ರಿ ಓ ಪನ್ನೀರ್‌ಸೆಲ್ವಂ ಮೌನ ಮುರಿದಿದ್ದಾರೆ.

2021ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆಯಾಗಲು ಎಡಪ್ಪಾಡಿ ಪಳನಿಸ್ವಾಮಿ ಮತ್ತು ಪನ್ನೀರ್‌ಸೆಲ್ವಂ ಅವರ ನಡುವೆ ಬಿರುಸಿನ ಪೈಪೋಟಿ ನಡೆದಿದೆ.

ಮುಖ್ಯಮಂತ್ರಿ ಪಳನಿಸ್ವಾಮಿ ಮತ್ತು ಪನ್ನೀರ್ ಸೆಲ್ವಂ ಅವರ ಬೆಂಬಲಿಗರು ತಮ್ಮ ನಾಯಕ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೇಳಿಕೊಂಡು ಪೋಸ್ಟರ್‌ಗಳನ್ನು ಹಾಕಿದಾಗ ಈ ವಿವಾದ ಉಲ್ಬಣಗೊಂಡಿತು. ಅಕ್ಟೋಬರ್‌ 7 ರಂದು ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಘೋಷಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: ವಿನಾಯಕ ಚತುರ್ಥಿ: ತಮಿಳುನಾಡಿನಲ್ಲಿ ಮಿತ್ರಪಕ್ಷಗಳಾದ AIADMK ಮತ್ತು BJP ಟ್ವೀಟ್ ಸಮರ

ಇಂದು ಟ್ವೀಟ್ ಮಾಡಿರುವ ಪನ್ನೀರ್‌ ಸೆಲ್ವಂ, ’ಇದುವರೆಗಿನ ನನ್ನ ನಿರ್ಧಾರಗಳು ತಮಿಳುನಾಡಿನ ಜನರು ಮತ್ತು ಎಐಎಡಿಎಂಕೆ ಸ್ವಯಂಸೇವಕರ ಹಿತದೃಷ್ಟಿಯಿಂದ ಕೈಗೊಂಡಿರುತ್ತೇನೆ. ಭವಿಷ್ಯದಲ್ಲಿಯೂ ಇದೇ ರೀತಿ ನಿರ್ಧಾರ ಕೈಗೊಳ್ಳುತ್ತೇನೆ” ಎಂದಿದ್ದಾರೆ.

ಜೊತೆಗೆ ’ಇದುವರೆಗೆ ಏನು ನಡೆದಿದೆಯೋ ಒಳ್ಳೆಯದಕ್ಕಾಗಿಯೇ ನಡೆದಿದೆ. ಈಗ ನಡೆಯುತ್ತಿರುವುದು ಸಹ ಒಳ್ಳೆಯದಕ್ಕೆ. ಮುಂದೆ ನಡೆಯುವುದು ಸಹ ಒಳ್ಳೆಯದಕ್ಕೆ’ ಎಂದು ಒಪಿಎಸ್ ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಕುರಿತು ಚರ್ಚಿಸಲು ಎಐಎಡಿಎಂಕೆ ಕಾರ್ಯಕಾರಿ ಸಮಿತಿ ಸೆಪ್ಟೆಂಬರ್ 28 ರಂದು ಚೆನ್ನೈನ ಎಐಎಡಿಎಂಕೆ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಿತ್ತು. ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪನ್ನೀರ್ ಸೆಲ್ವಂ ಮತ್ತು ಎಡಪ್ಪಾಡಿ ಪಳನಿಸ್ವಾಮಿ ಇಬ್ಬರೂ ತಮ್ಮನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಸುವಂತೆ ಒತ್ತಾಯಿಸಿದರು.

ಇದನ್ನೂ ಓದಿ: NEP ಯ ತ್ರಿಭಾಷಾ ಸೂತ್ರ ಅಳವಡಿಸುವುದಿಲ್ಲ: ತಮಿಳುನಾಡು ಮುಖ್ಯಮಂತ್ರಿ

ಉಪಮುಖ್ಯಮಂತ್ರಿ ಪನ್ನೀರ್‌ಸೆಲ್ವಂಗೆ ಬೆಂಬಲದ ಕೊರತೆ ಇದ್ದು, ಪಳನಿಸ್ವಾಮಿ ಅವರಿಗೆ ಬಹುತೇಕ ಶಾಸಕರು, ಮುಖಂಡರ ಬೆಂಬಲವಿದೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಕಾರ್ಯಕಾರಿ ಸಮಿತಿ ಎಐಎಡಿಎಂಕೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಅಕ್ಟೋಬರ್ 7 ರಂದು ಘೋಷಿಸಲಾಗುವುದು ಎಂದು ಘೋಷಿಸಿತ್ತು.

ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆಗೆ ಇನ್ನೇರಡು ದಿನಗಳಿರುವಾಗ ಪನ್ನೀರ್‌ ಸೆಲ್ವಂ ಟ್ವೀಟ್ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಚುನಾವಣೆಗೆ ಮುನ್ನವೇ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡುವುದನ್ನು ಪನ್ನೀರ್‌ಸೆಲ್ವಂ ಪ್ರಶ್ನಿಸಿದ್ದಾರೆ.

’ಪಕ್ಷದಲ್ಲಿ ಯಾವುದೇ ಬದಲಾವಣೆಗಳಾಗುವುದಿಲ್ಲ. ಯಥಾಸ್ಥಿತಿ ಮುಂದುವರಿಯುತ್ತದೆ. ಪಳನಿಸ್ವಾಮಿ ಉಸ್ತುವಾರಿಯಲ್ಲಿ ಪಕ್ಷವು ಚುನಾವಣೆಯನ್ನು ಎದುರಿಸಲಿದೆ, ಆದರೆ ಪನ್ನೀರ್‌ ಸೆಲ್ವಂ ಪಕ್ಷದ ಸಂಯೋಜಕರಾಗಿರುತ್ತಾರೆ’ ಎಂದು ಹೆಸರು ಹೇಳಲು ಬಯಸದ ಹಿರಿಯ ಅಧಿಕಾರಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.


ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬ ಕೇಳುತ್ತಿರುವುದೇನು?: 5 ಪ್ರಶ್ನೆಗಳನ್ನು ಮುಂದಿಟ್ಟ ಪ್ರಿಯಾಂಕ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...