Homeಮುಖಪುಟಅತ್ಯಾಚಾರದ ದೂರು ದಾಖಲಿಸಲು 900 ಕಿ.ಮೀ ಪ್ರಯಾಣಿಸಿದ ಸಂತ್ರಸ್ತೆ!

ಅತ್ಯಾಚಾರದ ದೂರು ದಾಖಲಿಸಲು 900 ಕಿ.ಮೀ ಪ್ರಯಾಣಿಸಿದ ಸಂತ್ರಸ್ತೆ!

ಸಂತ್ರಸ್ತೆಯು ಲಖೌನದ ಠಾಣೆಯೊಂದರಲ್ಲಿ ದೂರು ನೀಡಲು ಮುಂದಾಗಿದ್ದಾಳೆ. ಆದರೆ ಪೊಲೀಸರು ದೂರು ದಾಖಲಿಸುವ ಬದಲು ರಾಜಿ ಮಾಡಿಕೊಳ್ಳಲು ಸೂಚಿಸಿದ್ದರು.

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ದೇಶಾದ್ಯಂತ ಹೋರಾಟ ನಡೆಯುತ್ತಿರುವುದರ ನಡುವೆಯೆ ಮತ್ತೊಂದು ಅಮಾನುಷ ಅತ್ಯಾಚಾರದ ಪ್ರಕರಣ ಲಖನೌದಲ್ಲಿ ವರದಿಯಾಗಿದೆ. 22 ವರ್ಷದ ನೇಪಾಳಿ ಯುವತಿ ತನ್ನ ಪರಿಚಯಸ್ಥರಿಂದಲೇ ಪದೇ ಪದೇ ಲೈಂಗಿಕ ಕಿರುಕುಳ ಅನುಭವಿಸಿದ್ದಾಳೆ. ಕೊನೆಗೆ  ತನಗಾದ ಅನ್ಯಾಯದ ಬಗ್ಗೆ ದೂರು ದಾಖಲಿಸಲು ಆಕೆ ಬರೋಬ್ಬರಿ 900 ಕಿ.ಮೀ ದೂರದಲ್ಲಿರುವ ನಾಗ್ಪುರಕ್ಕೆ ಪ್ರಯಾಣಿಸಬೇಕಾದ ಅನಿವಾರ್ಯತೆ ಎದುರಿಸಿದ್ದಾಳೆ..

ಎರಡು ವರ್ಷಗಳ ಹಿಂದೆ ಕೆಲಸ ಅರಸಿ ಭಾರತಕ್ಕೆ ಬಂದಿದ್ದ ಯುವತಿಯ ಮೇಲೆ ಪ್ರವೀಣ್‌ ರಾಜ್‌ಪಾಲ್ ಯಾದವ್‌ ಎಂಬ ವ್ಯಕ್ತಿ ಅತ್ಯಾಚಾರ ನಡೆಸಿದ್ದ. ತನ್ನ ಮೊಬೈಲ್‌ನಲ್ಲಿ ಯುವತಿಯ ಆಕ್ಷೇಪಾರ್ಹ ಚಿತ್ರಗಳನ್ನು ಸೆರೆಹಿಡಿದುಕೊಂಡಿದ್ದಲ್ಲದೆ ವಿಡಿಯೊ ಕೂಡ ಚಿತ್ರಿಸಿಕೊಂಡಿದ್ದು, ಪೊಲೀಸರಿಗೆ ದೂರ ನೀಡದಂತೆ ಬ್ಲಾಕ್ ಮೇಲ್ ಮಾಡುತ್ತಿದ್ದ ಎಂದು ಯುವತಿ ಆರೋಪಿಸಿದ್ದಾಳೆ.

ಕಿರುಕುಳ ತಾಳಲಾರದೇ ಸಂತ್ರಸ್ತೆಯು ಲಖೌನದ ಠಾಣೆಯೊಂದರಲ್ಲಿ ದೂರು ನೀಡಲು ಮುಂದಾಗಿದ್ದಾಳೆ. ಆದರೆ ಆರೋಪಿ ಪ್ರವೀಣ್ ಯಾದವ್ ಸ್ಥಳೀಯ ಪೊಲೀಸರೊಂದಿಗೆ ಸಂಪರ್ಕ ಹೊಂದಿದ್ದರಿಂದ, ಪೊಲೀಸರು ದೂರು ದಾಖಲಿಸುವ ಬದಲು ರಾಜಿ ಮಾಡಿಕೊಳ್ಳಲು ಸೂಚಿಸಿದ್ದಾರೆ. ಕೊನೆಗೆ ನಾಗ್ಪುರದಲ್ಲಿ ವಾಸಿಸುತ್ತಿರುವ ತನ್ನ ನೇಪಾಳಿ ಸ್ನೇಹಿತೆ ಬಳಿಗೆ ಹೋಗುವುದು ಸೂಕ್ತವೆಂದು ತಿಳಿದು ಆರೋಪಿಯ ಕಣ್ತಪ್ಪಿಸಿ ಉತ್ತರ ಪ್ರದೇಶದ ಲಖನೌದಿಂದ ಮಹಾರಾಷ್ಟ್ರದ ನಾಗಪುರಕ್ಕೆ ಬಂದು ಅಲ್ಲಿನ ಕೊರಾಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಗುರುಗ್ರಾಮ: 25 ವರ್ಷದ ಹುಡುಗಿ ಮೇಲೆ ಸಾಮೂಹಿಕ ಅತ್ಯಾಚಾರ, ತೀವ್ರ ಹಲ್ಲೆ

ಸ್ನೇಹಿತೆಯೊಬ್ಬರ ಮೂಲಕ ಆರೋಪಿ ಯಾದವ್ ಸಂತ್ರಸ್ತೆಗೆ ಈ ಹಿಂದೆ ಪರಿಚಿತರಾಗಿದ್ದಾರೆ.  ಯಾದವ್ ಆಕೆಯ ಆಕ್ಷೇಪಾರ್ಯ ಚಿತ್ರಗಳನ್ನು ಸೆರೆಹಿಡಿದು, ಆಕೆ ತನ್ನೊಂದಿಗೆ ಸಹಕರಿಸದಿದ್ದರೆ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಸಿ ಸಂತ್ರಸ್ತೆಯನ್ನು ಲೈಂಗಿಕವಾಗಿ ಕಿರುಕುಳ ನೀಡಿದ್ದಾನೆ. ಅದೆಲ್ಲವನ್ನು ವಿಡಿಯೋ ಮಾಡಿಕೊಂಡು ನೇಪಾಳದ ಕಠ್ಮಂಡುವಿನಲ್ಲಿರುವ ಆಕೆಯ ಕುಟುಂಬಕ್ಕೆ ತಿಳಿಯಲು ಎಂದು ಆಕೆಯ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಪೋಸ್ಟ್ ಮಾಡಿದ್ದ ಎಂದು ತಿಳಿದುಬಂದಿದೆ.

ಕೊರಾಡಿ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ವಜೀರ್ ಶೇಖ್ ಮಾತನಾಡಿ, ಯುವತಿ ದೂರು ನೀಡಲು ಕೊರಾಡಿಯ ಮಹಾದುಲಕ್ಕೆ ಬಂದಿದ್ದಾಳೆ. “ಮಹಿಳೆ ಆರಂಭದಲ್ಲಿ ಲಖನೌದಲ್ಲಿ ದೂರು ದಾಖಲಿಸಲು ಬಯಸಿದ್ದಳು ಆದರೆ ಪೊಲೀಸರು ರಾಜಿ ಮಾಡಿಕೊಳ್ಳಲು ಸೂಚಿಸಿದ್ದರಿಂದ ಯುವತಿ ಯುಪಿ ಪೊಲೀಸರ ಮೇಲಿನ ನಂಬಿಕೆಯನ್ನು ಕಳೆದುಕೊಂಡಿದ್ದಾಳೆ” ಎಂದಿದ್ದಾರೆ.

ಕೊರಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ವಾಸವಾಗಿರುವ ಲಖನೌದಲ್ಲಿ ಈ ಘಟನೆ ನಡೆದಿದ್ದರಿಂದ ಅದನ್ನು ಈಗ ಉತ್ತರ ಪ್ರದೇಶ ಪೊಲೀಸರಿಗೆ ರವಾನಿಸಲಾಗಿದೆ ಎಂದು ನಗರ ಪೊಲೀಸ್ ಮುಖ್ಯಸ್ಥ ಅಮಿತೇಶ್ ಕುಮಾರ್ ತಿಳಿಸಿದ್ದಾರೆ.


ಇದನ್ನೂ ಓದಿ: ಹತ್ರಾಸ್‌‌ ಅತ್ಯಾಚಾರ: ಸಂತ್ರಸ್ಥೆಯ ತಂದೆಗೆ ಧಮಕಿ ಹಾಕುತ್ತಿರುವ ಜಿಲ್ಲಾಧಿಕಾರಿ ವಿಡಿಯೋ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...