Homeಮುಖಪುಟಸುಶಾಂತ್ ಸಿಂಗ್ ಕೊಲೆಯಾಗಿಲ್ಲ; ಇದು ಆತ್ಮಹತ್ಯೆ: ಮುಂಬೈ ಪೊಲೀಸ್

ಸುಶಾಂತ್ ಸಿಂಗ್ ಕೊಲೆಯಾಗಿಲ್ಲ; ಇದು ಆತ್ಮಹತ್ಯೆ: ಮುಂಬೈ ಪೊಲೀಸ್

ಏಮ್ಸ್ ವೈದ್ಯಕೀಯ ಮಂಡಳಿಯು ಸಿಬಿಐಗೆ ನೀಡಿದ ವರದಿಯಲ್ಲಿ ಇದು ಕೊಲೆ ಅಲ್ಲ ಆತ್ಮಹತ್ಯೆ ಎಂದು ಹೇಳಿದೆ. ಈ ವಿಷಯ ನಮಗೆ ಯಾವಾಗಲೋ ತಿಳಿದಿತ್ತು. ಅದರೆ ಈಗ ಅದನ್ನು ಪುನರ್‌ಸಾಬೀತುಪಡಿಸಲಾಗಿದೆ ಅಷ್ಟೆ

- Advertisement -
- Advertisement -

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಕುರಿತಂತೆ ಏಮ್ಸ್ ವೈದ್ಯಕೀಯ ಮಂಡಳಿಯು ಸಿಬಿಐಗೆ ನೀಡಿದ ವರದಿಯಲ್ಲಿ ಇದು ಕೊಲೆ ಅಲ್ಲ ಆತ್ಮಹತ್ಯೆ ಎಂದು ಹೇಳಿದೆ. “ಈ ವಿಷಯ ನಮಗೆ ಯಾವಾಗಲೋ ತಿಳಿದಿತ್ತು. ಅದರೆ ಈಗ ಅದನ್ನು ಪುನರ್‌ಸಾಬೀತುಪಡಿಸಲಾಗಿದೆ ಅಷ್ಟೆ” ಎಂದು ಮುಂಬೈ ಪೊಲೀಸ್ ಮುಖ್ಯಸ್ಥ ಪರಮ್‌ಬೀರ್ ಸಿಂಗ್ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

“34 ವರ್ಷದ ಬಾಲಿವುಡ್ ತಾರೆ ಸುಶಾಂತ್ ಸಿಂಗ್ ಅನ್ನು ಹತ್ಯೆ ಮಾಡಲಾಗಿದೆ ಎನ್ನುವ ಕುಟುಂಬದ ಹೇಳಿಕೆಗೆ ಯಾವುದೇ ಪುರಾವೆಗಳಿಲ್ಲ” ಎಂದು ಏಮ್ಸ್ ತಿಳಿಸಿದೆ. ಇದು ಸುಶಾಂತ್ ಕುಟುಂಬ ಮತ್ತು ಅವರ ವಕೀಲರಿಂದ ಬರುತ್ತಿರುವ ಆರೋಪಗಳಷ್ಟೆ ಎಂದು ತಳ್ಳಿಹಾಕಿದೆ.

ಇದನ್ನೂ ಓದಿ: ನಟ ಸುಶಾಂತ್ ಸಿಂಗ್ ರಜಪೂತ್ ನೆನಪಿಗಾಗಿ 1 ಲಕ್ಷ ಗಿಡ ನೆಟ್ಟಅಭಿಮಾನಿಗಳು!

ಜೂನ್ 14 ರಂದು ಸುಶಾಂತ್ ಸಿಂಗ್ ರಜಪೂತ್ ಮುಂಬೈನ ತನ್ನ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಶವಪರೀಕ್ಷೆಯ ಆಧಾರದ ಮೇಲೆ ಮುಂಬೈ ಪೊಲೀಸರು ಅದನ್ನು ಆತ್ಮಹತ್ಯೆ ಎಂದು ಕರೆದಿದ್ದರು. ಆದರೆ ಸುಶಾಂತ್ ಕುಟುಂಬ ಸೇರಿದಂತೆ ಹಲವರು ಇದನ್ನು ಕೊಲೆ ಎಂದು ಕರೆದು ನ್ಯಾಯಕ್ಕಾಗಿ ಪ್ರಚಾರಾಂದೋಲನ ಕೈಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು.

ಇದನ್ನೂ ಓದಿ: ಬಿಹಾರ ಚುನಾವಣೆವರೆಗೂ ಮುಂದುವರೆಯಲಿದೆ ಸುಶಾಂತ್ ಸಿಂಗ್- ಕಂಗನಾ ವಿವಾದಗಳು

ಸುಶಾಂತ್ ಸಿಂಗ್ ರಜಪೂತ್ ಅವರ ಕುಟುಂಬ ವಕೀಲ ವಿಕಾಸ್ ಸಿಂಗ್ ಅವರು ಮುಂಬೈ ಪೊಲೀಸರನ್ನು ಗುರಿಯಾಗಿಸಿಕೊಂಡು, “ಇವರು ಪ್ರಮುಖ ಸಾಕ್ಷ್ಯಗಳನ್ನು ನಿರ್ಲಕ್ಷಿಸುವುದರ ಮೂಲಕ ಮೋಸ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ನಮ್ಮದು ವೃತ್ತಿಪರ ತನಿಖೆ ಎಂದು ನಾವು ಈ ಹಿಂದೆಯೇ ಸಮರ್ಥಿಸಿಕೊಂಡಿದ್ದೇವೆ. ಮರಣೋತ್ತರ ಪರೀಕ್ಷೆಯನ್ನು ವೃತ್ತಿಪರವಾಗಿ ನಡೆಸಲಾಗಿದೆ. ನಮ್ಮ ವರದಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದಾಗ, ಅದರಲ್ಲಿ, ನ್ಯಾಯಾಲಯವು ಯಾವುದೇ ದೋಷವನ್ನು ಕಂಡುಕೊಂಡಿಲ್ಲ” ಎಂದು ಪರಂಬೀರ್ ಸಿಂಗ್ ಹೇಳಿದರು.

ಸಿಬಿಐ 57 ದಿನಗಳಲ್ಲಿ 20 ಜನರನ್ನು ಪ್ರಶ್ನಿಸಿದ್ದಾರೆ. ತಾನು ವಶಪಡಿಸಿಕೊಂಡ ಲ್ಯಾಪ್‌ಟಾಪ್‌ಗಳು, ಹಾರ್ಡ್‌ಡ್ರೈವ್‌ಗಳು, ಕ್ಯಾಮರಗಳು ಮತ್ತು ಮೊಬೈಲ್‌ಗಳನ್ನು ವಿಧಿವಿಜ್ಞಾನವಾಗಿ ಪರಿಶೀಲಿಸಲಾಗಿದೆ. ಈ ತನಿಖೆಯಲ್ಲಿ ಕೊಲೆ ಎನ್ನಲು ಆಧಾರವಾದ ಯಾವ ಸಾಕ್ಷ್ಯಗಳು ಸಿಕ್ಕಿಲ್ಲ. ಈಗಲೂ ಮುಕ್ತವಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ಸಿಬಿಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...