Homeಮುಖಪುಟಯೋಗಿ ಆದಿತ್ಯನಾಥ್ ಠಾಕೂರ್ ಅಲ್ಲ, ಅವರೊಬ್ಬ ಹೇಡಿ: ಮಸಿ ಎರಚಿದ ಘಟನೆ ನಂತರ ಆಪ್ ಸಂಸದ...

ಯೋಗಿ ಆದಿತ್ಯನಾಥ್ ಠಾಕೂರ್ ಅಲ್ಲ, ಅವರೊಬ್ಬ ಹೇಡಿ: ಮಸಿ ಎರಚಿದ ಘಟನೆ ನಂತರ ಆಪ್ ಸಂಸದ ಸಂಜಯ್ ಸಿಂಗ್ ಕಿಡಿ

ನನ್ನ ವಿರುದ್ಧ ಯಾವುದೇ ಮೊಕದ್ದಮೆ ಹಾಕಿರಿ, ಲಾಠಿಚಾರ್ಜ್ ಮಾಡಿ ಅಥವಾ ನನ್ನನ್ನು ಕೊಲ್ಲಿ, ಆದರೆ ಸಂತ್ರಸ್ತ ಯುವತಿಯ ನ್ಯಾಯಕ್ಕಾಗಿ ನನ್ನ ಹೋರಾಟ ಮುಂದುವರಿಯುತ್ತದೆ.

- Advertisement -
- Advertisement -

ಇಂದು ಹತ್ರಾಸ್‌ಗೆ ಭೇಟಿ ನೀಡಿದ ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಮೇಲೆ ಮಸಿ ಎರಚಲಾಗಿದೆ. ತಮ್ಮ ನಿಯೋಗದೊಂದಿಗೆ ಸಂತ್ರಸ್ತರ ಭೇಟಿಗೆ ಬಂದಿದ್ದ ಸಂಸದರು ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ವ್ಯಕ್ತಿಯೊಬ್ಬ ದಿಢೀರನೆ ಮಸಿ ಎರಚಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋ ನೋಡಿ.

ಇದನ್ನೂ ಓದಿ: ಮಹಿಳಾ ನಾಯಕಿ ಬಟ್ಟೆಗೆ ಕೈಹಾಕಲು ಆತನಿಗೆಷ್ಟು ಧೈರ್ಯ..?- ಬಿಜೆಪಿಯ ಚಿತ್ರಾ ವಾಘ್ ಆಕ್ರೋಶ

ಸಂಸದ ಸಂಜಯ್ ಸಿಂಗ್ ಮೇಲೆ ಮಸಿ ಎರಚಿದವನನ್ನು ದೀಪಕ್ ಶರ್ಮಾ ಎಂದು ಗುರುತಿಸಲಾಗಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ

ಈ ಕುರಿತು ಸಂಸದ ಸಂಜಯ್ ಸಿಂಗ್ ಟ್ವೀಟ್ ಮಾಡಿರುವ ಅವರು “ಯೋಗಿ ಆದಿತ್ಯನಾಥ್ ಠಾಕೂರ್ ಅಲ್ಲ, ಅವರೊಬ್ಬ ಹೇಡಿ” ಎಂದಿದ್ದಾರೆ.

’ಹತ್ರಾಸ್‌ನಲ್ಲಿ ಶಾಸಕ ರಾಖಿ ಬಿಡ್ಲಾನ್ ಅಜಯ್ ದತ್, ಫೈಸಲ್ ಲಾಲಾ ಜೊತೆಗೆ ಮೃತ ಸಂತ್ರಸ್ತ ಯುವತಿಯ ಮನೆಯಿಂದ ಹಿಂದಿರುಗುವಾಗ ಹೇಡಿಗಳು ದಾಳಿ ಮಾಡಿದ್ದಾರೆ. ಯೋಗಿ ಜಿ, ನೀವು ಠಾಕೂರ್ ಅಲ್ಲ ಹೇಡಿ”. ನನ್ನ ವಿರುದ್ಧ ಯಾವುದೇ ಮೊಕದ್ದಮೆ ಹಾಕಿರಿ, ಲಾಠಿಚಾರ್ಜ್ ಮಾಡಿ ಅಥವಾ ನನ್ನನ್ನು ಕೊಲ್ಲಿ, ಆದರೆ ಸಂತ್ರಸ್ತ ಯುವತಿಯ ನ್ಯಾಯಕ್ಕಾಗಿ ನನ್ನ ಹೋರಾಟ ಮುಂದುವರಿಯುತ್ತದೆ’ ಎಂದಿದ್ದಾರೆ.

ಘಟನೆ ಕುರಿತು ದೆಹಲಿ ಮುಖ್ಯಮಂತ್ರಿ, ಆಪ್ ಮುಖಂಡ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿ’ ನೀವು ಸರಿಯಾದ ದಾರಿಯಲ್ಲಿದ್ದಿರಿ’ ಎಂದು ಸಂಸದ ಸಂಜಯ್ ಸಿಂಗ್ ಅವರನ್ನು ಪ್ರಶಂಸಿಸಿದ್ದಾರೆ.

ಟ್ವೀಟ್‌ನಲ್ಲಿ ’ಸಂಜಯ್ ಜಿ, ಯುಪಿ ಸರ್ಕಾರದ ಅನ್ಯಾಯ ಮತ್ತು ದೌರ್ಜನ್ಯದ ವಿರುದ್ಧ ನೀವು ನಿರ್ಭಯವಾಗಿ ಮಾತನಾಡುತ್ತಿದ್ದೀರಿ. ಅವರು ನಿಮ್ಮ ಮೇಲೆ 14 ಎಫ್‌ಐಆರ್‌ಗಳನ್ನು ಹಾಕಿದ್ದಾರೆ, ಕಚೇರಿಗೆ ಮೊಹರು ಹಾಕಿದರು ಆದರೆ ನಿಮ್ಮನ್ನು ಬಂಧಿಸುವ ಧೈರ್ಯ ಮಾಡಲಿಲ್ಲ. ಇಂದು ಕೂಡ ನಿಮ್ಮ ಮೇಲೆ ಹಲ್ಲೆ ನಡೆಸಿದರು. ಇದು ಯುಪಿ ಸರ್ಕಾರದ ಸೋಲು ಮತ್ತು ಅವಮಾನವನ್ನು ತೋರಿಸುತ್ತದೆ. ಇದರರ್ಥ ನೀವು ಸರಿಯಾದ ಹಾದಿಯಲ್ಲಿದ್ದೀರಿ’ ಎಂದು ಹೇಳಿದ್ದಾರೆ.

ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಲು ಬಂದಿದ್ದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್, ತೃಣಮೂಲ ಕಾಂಗ್ರೆಸ್ ನಿಯೋಗ, ಸಮಾಜವಾದಿ ಪಕ್ಷದ ನಿಯೋಗಗಳ ಮೇಲೂ ಪೊಲೀಸರು ಹಲ್ಲೆ ಮಾಡಿದ್ದರು.


ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬದ ಭೇಟಿ: ಭೀಮ್ ಆರ್ಮಿ ಮುಖ್ಯಸ್ಥ ಆಜಾದ್‌ ಮೇಲೆ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...