Homeಅಂತರಾಷ್ಟ್ರೀಯತೇಜಸ್ವಿ ಸೂರ್ಯನ ಕೋಮುವಾದಿ ಭಾಷಣ ಬೇಡ: ಜರ್ಮನ್ ಭಾರತೀಯರ ಒತ್ತಾಯ

ತೇಜಸ್ವಿ ಸೂರ್ಯನ ಕೋಮುವಾದಿ ಭಾಷಣ ಬೇಡ: ಜರ್ಮನ್ ಭಾರತೀಯರ ಒತ್ತಾಯ

ಇವರಿಗೆ ಅವಕಾಶ ನಿಡುವುದರಿಂದ ಜರ್ಮನ್ ನೆಲೆದಲ್ಲಿ ಮತ್ತಷ್ಟು ವಿಭಜನೆಯಾಗಿ ಬಲಪಂಥೀಯವಾದ ಹೆಚ್ಚಾಗುತ್ತದೆ...

- Advertisement -
- Advertisement -

ಅಕ್ಟೋಬರ್ 7 ರಂದು ನಡೆಯುವ ಜರ್ಮನ್-ಭಾರತೀಯ ಸ್ಟಾರ್ಟಪ್ ಸಮಾವೇಶದಲ್ಲಿ ಸಂಸದ ತೇಜಸ್ವಿ ಸೂರ್ಯ ಅತಿಥಿ ಭಾಷಣಕಾರರಾಗಿದ್ದು, ಇದನ್ನು ವಿರೋಧಿಸಿ ಜರ್ಮನಿಯಲ್ಲಿರುವ ಭಾರತೀಯರು ಹ್ಯಾಂಬರ್ಗ್‌ನಲ್ಲಿರುವ ಭಾರತದ ರಾಯಭಾರಿಗೆ ಪತ್ರಬರೆದಿದ್ದಾರೆ.

ಸ್ಟಾರ್ಟಪ್‌ಗಳನ್ನು ಉತ್ತೇಜಿಸಲು ಮತ್ತು ಹ್ಯಾಂಬರ್ಗ್-ಭಾರತದ ನಡುವೆ ಆರ್ಥಿಕ ಸಂಬಂಧಗಳನ್ನು ಬೆಂಬಲಿಸುವ ಸಲುವಾಗಿ, ಅಕ್ಟೋಬರ್ 7 ರಂದು ಗ್ಲೋಮನ್ ಕನ್ಸಲ್ಟಿಂಗ್ GmbH ಸಹಭಾಗಿತ್ವದಲ್ಲಿ ಭಾರತದ ರಾಯಭಾರ ಕಛೇರಿ, “ಇಂಡಿಯಾ ಸ್ಟಾರ್ಟಪ್ ಕಾನ್ಫರೆನ್ಸ್- 2020” ಕಾರ್ಯಕ್ರಮವನ್ನು ನಡೆಸುತ್ತಿದೆ. ಈ ಕಾರ್ಯಕ್ರಮದ ಸಂಘಟಕರಿಗೆ ಪತ್ರ ಬರೆದಿರುವ ಜರ್ಮನ್ ಭಾರತೀಯರು, ಭಾಷಣಕಾರರ ಪಟ್ಟಿಯಲ್ಲಿರುವ ಹೆಸರಿನ ಪೈಕಿ, ಆರ್‌ಎಸ್ಎಸ್‌ನಿಂದ ಪ್ರೇರೇಪಿತವಾಗಿ ಪ್ರಚೋದನಕಾರಿ ಮತ್ತು ಕೋಮುವಾದಿ ಭಾಷಣಗಳನ್ನು ಮಾಡುವ ಬೆಂಗಳೂರಿನ ಸಂಸದ ತೇಜಸ್ವಿ ಸೂರ್ಯ ಅವರನ್ನು ಉಲ್ಲೇಖಿಸಿ ಆಕ್ಷೇಪಿಸಿದ್ದಾರೆ ಎಂದು “ಟು ಸರ್ಕಲ್ಸ್‌.ನೆಟ್” ವರದಿ ಮಾಡಿದೆ.

ಇದನ್ನೂ ಓದಿ: ಬಹುಜನ ಭಾರತ: ಕೋಮುವಾದದ ಇರುಳ ಸೀಳುವ ಬೆಳಕು ಭಗತ್

ಪತ್ರದಲ್ಲಿ ತಮ್ಮ ಜಾತ್ಯಾತೀತತೆಯ ಅಭಿಪ್ರಾಯಗಳನ್ನು ಉಲ್ಲೇಖಿಸಿ, “ಇದು ನಾವು ರಚಿಸುತ್ತಿರುವ ಭಾರತ. ಇಲ್ಲಿಯವರೆಗೆ ನೀವು ಬಿಂಬಿಸಿರುವ ಟೊಳ್ಳು ಜಾತ್ಯಾತೀತತೆ ಇನ್ನುಮುಂದೆ ಕೆಲಸ ಮಾಡುವುದಿಲ್ಲ” ಎಂದು ತೇಜಸ್ವಿ ಸೂರ್ಯ ಅವರನ್ನು ಉಲ್ಲೇಖಿಸಿ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ತಿರುಪತಿ ವರ್ಸಸ್‌ ತಬ್ಲಿಘಿ: ಸಾಂಕ್ರಾಮಿಕದ ಕೋಮುವಾದೀಕರಣಕ್ಕೆ ಸ್ಪಷ್ಟ ಉದಾಹರಣೆ

ವಾಸ್ತವಿಕವಾಗಿ ಉಭಯ ದೇಶಗಳ ವ್ಯಾಪಾರ ಮತ್ತು ಹೂಡಿಕೆಗಳಲ್ಲಿ ಅಂತರಾಷ್ಟ್ರೀಯ ಸಹಕಾರವನ್ನು ಹೆಚ್ಚಿಸಲು ಸೃಷ್ಟಿಸಿರುವ ಈ ವೇದಿಕೆಯು ಪ್ಯಾನಲಿಸ್ಟ್‌ಗಳ ಅಧಿಕೃತ ರಿಜಿಸ್ಟರ್‌ ಸಂಸದರ ಹೆಸರನ್ನು ಹೊಂದಿದೆ. ಹಾಗಾಗಿ ಈ ಪತ್ರದಲ್ಲಿ ಭಾರತದ ರಾಯಭಾರಿಯ ನಿರ್ಧಾರವನ್ನು ಪ್ರಶ್ನಿಸಿರುವ ಜರ್ಮನ್ ಭಾರತೀಯರು, “ಭಾರತಿಯ ರಾಜಕಾರಣದ ಅತ್ಯಂತ ದೃವೀಕರಣ ಮನಸ್ಥತಿಯ ವ್ಯಕ್ತಿ, ಸರ್ವಧರ್ಮ ಸಮನ್ವಯ ಅಂತರ್ಗತವಾಗಿರುವ ಭಾರತದಿಂದ ಅತಿಥಿಯಾಗಲು ಸಾಧ್ಯವಿಲ್ಲ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಕೋಮುವಾದಿ ಪುಂಡರ ರಕ್ಷಿಸಲು ದ.ಕ.ಜಿಲ್ಲಾಧಿಕಾರಿಗಳ ವರ್ಗಾವಣೆ: ಸಿದ್ದರಾಮಯ್ಯ

ಮುಂದುವರಿದು, ” ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅಲ್ಪಸಂಖ್ಯಾತರನ್ನು ಅನಕ್ಷರಸ್ಥರು, ಪಂಕ್ಚರ್ ಹಾಕುವವರು ಎಂದು ಹೀಯಾಳಿಸಿ ಮಾತನಾಡಿದ್ದರು. ಈ ಬಿಜೆಪಿ ನಾಯಕ ಅಸಹ್ಯಕರ ಮತ್ತು ಅಮಾನವೀಯ ದೃಷ್ಟಿಕೋನಗಳನ್ನು ಹೊಂದಿದ್ದು, ಇಂತಹ ವಿವಾದಾತ್ಮಕ ವ್ಯಕ್ತಿಗೆ ಅಧಿಕೃತವಾಗಿ ವೇದಿಕೆಯೊಂದನ್ನು ನೀಡುತ್ತಿರುವುದು ಸರಿಯಲ್ಲ. ಇವರಿಗೆ ಅವಕಾಶ ನಿಡುವುದರಿಂದ ಜರ್ಮನ್ ನೆಲೆದಲ್ಲಿ ಮತ್ತಷ್ಟು ವಿಭಜನೆಯಾಗಿ ಬಲಪಂಥೀಯವಾದ ಹೆಚ್ಚಾಗುತ್ತದೆ” ಎಂದು ಉಲ್ಲೇಖಿಸಿದ್ದಾರೆ.

ಹಾಗಾಗಿ ಇದನ್ನು ವಿರೋಧಿಸಿ ಆನ್‌ಲೈನ್ ಅಭಿಯಾನವನ್ನು ಕೈಗೊಂಡಿರುವ ಇವರು ಸಮಾನಮನಸ್ಕರ ಬೆಂಬಲವನ್ನು ಕೊರಿದ್ದಾರೆ. ತೇಜಸ್ವಿ ಸೂರ್ಯ ಅವರ ಉಪಸ್ಥತಿಯನ್ನು ವಿರೋಧಿಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೋಂದಾತಯಿಸಿಕೊಳ್ಳಬಹುದು.

ಇದನ್ನೂ ಓದಿ: ಸಂಘರ್ಷವಿರುವುದು 99% ಭಾರತೀಯರು v/s 1% ಕೋಮುವಾದಿ ಗ್ಯಾಂಗ್ ನಡುವೆ – ದೇವನೂರ ಮಹಾದೇವ

ತೇಜಸ್ವಿ ಸೂರ್ಯ ಅವರನ್ನು ಪ್ಯಾನಲ್ ಸ್ಪೀಕರ್ ಆಗಿ ಬಹಿಷ್ಕರಿಸುವ ಈ ಅಭಿಯಾನಕ್ಕೆ ನೋಂದಾಯಿಸಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.

https://bit.ly/36v6nFz

“ಯುರೋಪಿನಲ್ಲಿ ಸುರಕ್ಷಿತ ವಾತಾವರಣವನ್ನು ಕಾಪಾಡುವ ಸಲುವಾಗಿ ಇಂತಹ ಧೃವೀಕರಣದ ಘಟನೆಗಳನ್ನು ಅನುಮತಿಸಲು ಸಾಧ್ಯವಿಲ್ಲ. ಈ ಸಂದರ್ಭದಲ್ಲಿ ಸಂಸದರನ್ನು ಅತಿಥಿ ಭಾಷಣಕಾರರಾಗಿ ಆಯ್ಕೆ ಮಾಡಿದ್ದಕ್ಕಾಗಿ ಭಾರತೀಯ ಸಂಜಾತ ಯುರೋಪಿಯನ್ ವಲಸೆಗಾರರು ಭಾರತದ ರಾಯಭಾರ ಕಛೇರಿಯೊಂದಿಗೆ ಅಕ್ಷೇಪಣೆ ವ್ಯಕ್ತಪಡಿಸುವ ಮೂಲಕ ಪ್ರತಿಕ್ರಿಯಿಸಬೇಕೆಂದು ನಾವು ಕೋರುತ್ತೇವೆ. ನಾವು ಈ ಪತ್ರವನ್ನು ಹ್ಯಾಂಬರ್ಗ್‌ನ ಭಾರತೀಯ ರಾಯಭಾರ ಕಛೇರಿ ಮತ್ತು ಮಾನವ ಹಕ್ಕುಗಳ ಗುಂಪುಗಳಿಗೆ ಕಳುಹಿಸುತ್ತೇವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೇಸೇ ಹಾಕಲು ಬರದ ವಕೀಲ ತೇಜಸ್ವಿ ಸೂರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...