Homeಅಂತರಾಷ್ಟ್ರೀಯತೇಜಸ್ವಿ ಸೂರ್ಯನ ಕೋಮುವಾದಿ ಭಾಷಣ ಬೇಡ: ಜರ್ಮನ್ ಭಾರತೀಯರ ಒತ್ತಾಯ

ತೇಜಸ್ವಿ ಸೂರ್ಯನ ಕೋಮುವಾದಿ ಭಾಷಣ ಬೇಡ: ಜರ್ಮನ್ ಭಾರತೀಯರ ಒತ್ತಾಯ

ಇವರಿಗೆ ಅವಕಾಶ ನಿಡುವುದರಿಂದ ಜರ್ಮನ್ ನೆಲೆದಲ್ಲಿ ಮತ್ತಷ್ಟು ವಿಭಜನೆಯಾಗಿ ಬಲಪಂಥೀಯವಾದ ಹೆಚ್ಚಾಗುತ್ತದೆ...

- Advertisement -
- Advertisement -

ಅಕ್ಟೋಬರ್ 7 ರಂದು ನಡೆಯುವ ಜರ್ಮನ್-ಭಾರತೀಯ ಸ್ಟಾರ್ಟಪ್ ಸಮಾವೇಶದಲ್ಲಿ ಸಂಸದ ತೇಜಸ್ವಿ ಸೂರ್ಯ ಅತಿಥಿ ಭಾಷಣಕಾರರಾಗಿದ್ದು, ಇದನ್ನು ವಿರೋಧಿಸಿ ಜರ್ಮನಿಯಲ್ಲಿರುವ ಭಾರತೀಯರು ಹ್ಯಾಂಬರ್ಗ್‌ನಲ್ಲಿರುವ ಭಾರತದ ರಾಯಭಾರಿಗೆ ಪತ್ರಬರೆದಿದ್ದಾರೆ.

ಸ್ಟಾರ್ಟಪ್‌ಗಳನ್ನು ಉತ್ತೇಜಿಸಲು ಮತ್ತು ಹ್ಯಾಂಬರ್ಗ್-ಭಾರತದ ನಡುವೆ ಆರ್ಥಿಕ ಸಂಬಂಧಗಳನ್ನು ಬೆಂಬಲಿಸುವ ಸಲುವಾಗಿ, ಅಕ್ಟೋಬರ್ 7 ರಂದು ಗ್ಲೋಮನ್ ಕನ್ಸಲ್ಟಿಂಗ್ GmbH ಸಹಭಾಗಿತ್ವದಲ್ಲಿ ಭಾರತದ ರಾಯಭಾರ ಕಛೇರಿ, “ಇಂಡಿಯಾ ಸ್ಟಾರ್ಟಪ್ ಕಾನ್ಫರೆನ್ಸ್- 2020” ಕಾರ್ಯಕ್ರಮವನ್ನು ನಡೆಸುತ್ತಿದೆ. ಈ ಕಾರ್ಯಕ್ರಮದ ಸಂಘಟಕರಿಗೆ ಪತ್ರ ಬರೆದಿರುವ ಜರ್ಮನ್ ಭಾರತೀಯರು, ಭಾಷಣಕಾರರ ಪಟ್ಟಿಯಲ್ಲಿರುವ ಹೆಸರಿನ ಪೈಕಿ, ಆರ್‌ಎಸ್ಎಸ್‌ನಿಂದ ಪ್ರೇರೇಪಿತವಾಗಿ ಪ್ರಚೋದನಕಾರಿ ಮತ್ತು ಕೋಮುವಾದಿ ಭಾಷಣಗಳನ್ನು ಮಾಡುವ ಬೆಂಗಳೂರಿನ ಸಂಸದ ತೇಜಸ್ವಿ ಸೂರ್ಯ ಅವರನ್ನು ಉಲ್ಲೇಖಿಸಿ ಆಕ್ಷೇಪಿಸಿದ್ದಾರೆ ಎಂದು “ಟು ಸರ್ಕಲ್ಸ್‌.ನೆಟ್” ವರದಿ ಮಾಡಿದೆ.

ಇದನ್ನೂ ಓದಿ: ಬಹುಜನ ಭಾರತ: ಕೋಮುವಾದದ ಇರುಳ ಸೀಳುವ ಬೆಳಕು ಭಗತ್

ಪತ್ರದಲ್ಲಿ ತಮ್ಮ ಜಾತ್ಯಾತೀತತೆಯ ಅಭಿಪ್ರಾಯಗಳನ್ನು ಉಲ್ಲೇಖಿಸಿ, “ಇದು ನಾವು ರಚಿಸುತ್ತಿರುವ ಭಾರತ. ಇಲ್ಲಿಯವರೆಗೆ ನೀವು ಬಿಂಬಿಸಿರುವ ಟೊಳ್ಳು ಜಾತ್ಯಾತೀತತೆ ಇನ್ನುಮುಂದೆ ಕೆಲಸ ಮಾಡುವುದಿಲ್ಲ” ಎಂದು ತೇಜಸ್ವಿ ಸೂರ್ಯ ಅವರನ್ನು ಉಲ್ಲೇಖಿಸಿ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ತಿರುಪತಿ ವರ್ಸಸ್‌ ತಬ್ಲಿಘಿ: ಸಾಂಕ್ರಾಮಿಕದ ಕೋಮುವಾದೀಕರಣಕ್ಕೆ ಸ್ಪಷ್ಟ ಉದಾಹರಣೆ

ವಾಸ್ತವಿಕವಾಗಿ ಉಭಯ ದೇಶಗಳ ವ್ಯಾಪಾರ ಮತ್ತು ಹೂಡಿಕೆಗಳಲ್ಲಿ ಅಂತರಾಷ್ಟ್ರೀಯ ಸಹಕಾರವನ್ನು ಹೆಚ್ಚಿಸಲು ಸೃಷ್ಟಿಸಿರುವ ಈ ವೇದಿಕೆಯು ಪ್ಯಾನಲಿಸ್ಟ್‌ಗಳ ಅಧಿಕೃತ ರಿಜಿಸ್ಟರ್‌ ಸಂಸದರ ಹೆಸರನ್ನು ಹೊಂದಿದೆ. ಹಾಗಾಗಿ ಈ ಪತ್ರದಲ್ಲಿ ಭಾರತದ ರಾಯಭಾರಿಯ ನಿರ್ಧಾರವನ್ನು ಪ್ರಶ್ನಿಸಿರುವ ಜರ್ಮನ್ ಭಾರತೀಯರು, “ಭಾರತಿಯ ರಾಜಕಾರಣದ ಅತ್ಯಂತ ದೃವೀಕರಣ ಮನಸ್ಥತಿಯ ವ್ಯಕ್ತಿ, ಸರ್ವಧರ್ಮ ಸಮನ್ವಯ ಅಂತರ್ಗತವಾಗಿರುವ ಭಾರತದಿಂದ ಅತಿಥಿಯಾಗಲು ಸಾಧ್ಯವಿಲ್ಲ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಕೋಮುವಾದಿ ಪುಂಡರ ರಕ್ಷಿಸಲು ದ.ಕ.ಜಿಲ್ಲಾಧಿಕಾರಿಗಳ ವರ್ಗಾವಣೆ: ಸಿದ್ದರಾಮಯ್ಯ

ಮುಂದುವರಿದು, ” ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅಲ್ಪಸಂಖ್ಯಾತರನ್ನು ಅನಕ್ಷರಸ್ಥರು, ಪಂಕ್ಚರ್ ಹಾಕುವವರು ಎಂದು ಹೀಯಾಳಿಸಿ ಮಾತನಾಡಿದ್ದರು. ಈ ಬಿಜೆಪಿ ನಾಯಕ ಅಸಹ್ಯಕರ ಮತ್ತು ಅಮಾನವೀಯ ದೃಷ್ಟಿಕೋನಗಳನ್ನು ಹೊಂದಿದ್ದು, ಇಂತಹ ವಿವಾದಾತ್ಮಕ ವ್ಯಕ್ತಿಗೆ ಅಧಿಕೃತವಾಗಿ ವೇದಿಕೆಯೊಂದನ್ನು ನೀಡುತ್ತಿರುವುದು ಸರಿಯಲ್ಲ. ಇವರಿಗೆ ಅವಕಾಶ ನಿಡುವುದರಿಂದ ಜರ್ಮನ್ ನೆಲೆದಲ್ಲಿ ಮತ್ತಷ್ಟು ವಿಭಜನೆಯಾಗಿ ಬಲಪಂಥೀಯವಾದ ಹೆಚ್ಚಾಗುತ್ತದೆ” ಎಂದು ಉಲ್ಲೇಖಿಸಿದ್ದಾರೆ.

ಹಾಗಾಗಿ ಇದನ್ನು ವಿರೋಧಿಸಿ ಆನ್‌ಲೈನ್ ಅಭಿಯಾನವನ್ನು ಕೈಗೊಂಡಿರುವ ಇವರು ಸಮಾನಮನಸ್ಕರ ಬೆಂಬಲವನ್ನು ಕೊರಿದ್ದಾರೆ. ತೇಜಸ್ವಿ ಸೂರ್ಯ ಅವರ ಉಪಸ್ಥತಿಯನ್ನು ವಿರೋಧಿಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೋಂದಾತಯಿಸಿಕೊಳ್ಳಬಹುದು.

ಇದನ್ನೂ ಓದಿ: ಸಂಘರ್ಷವಿರುವುದು 99% ಭಾರತೀಯರು v/s 1% ಕೋಮುವಾದಿ ಗ್ಯಾಂಗ್ ನಡುವೆ – ದೇವನೂರ ಮಹಾದೇವ

ತೇಜಸ್ವಿ ಸೂರ್ಯ ಅವರನ್ನು ಪ್ಯಾನಲ್ ಸ್ಪೀಕರ್ ಆಗಿ ಬಹಿಷ್ಕರಿಸುವ ಈ ಅಭಿಯಾನಕ್ಕೆ ನೋಂದಾಯಿಸಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.

https://bit.ly/36v6nFz

“ಯುರೋಪಿನಲ್ಲಿ ಸುರಕ್ಷಿತ ವಾತಾವರಣವನ್ನು ಕಾಪಾಡುವ ಸಲುವಾಗಿ ಇಂತಹ ಧೃವೀಕರಣದ ಘಟನೆಗಳನ್ನು ಅನುಮತಿಸಲು ಸಾಧ್ಯವಿಲ್ಲ. ಈ ಸಂದರ್ಭದಲ್ಲಿ ಸಂಸದರನ್ನು ಅತಿಥಿ ಭಾಷಣಕಾರರಾಗಿ ಆಯ್ಕೆ ಮಾಡಿದ್ದಕ್ಕಾಗಿ ಭಾರತೀಯ ಸಂಜಾತ ಯುರೋಪಿಯನ್ ವಲಸೆಗಾರರು ಭಾರತದ ರಾಯಭಾರ ಕಛೇರಿಯೊಂದಿಗೆ ಅಕ್ಷೇಪಣೆ ವ್ಯಕ್ತಪಡಿಸುವ ಮೂಲಕ ಪ್ರತಿಕ್ರಿಯಿಸಬೇಕೆಂದು ನಾವು ಕೋರುತ್ತೇವೆ. ನಾವು ಈ ಪತ್ರವನ್ನು ಹ್ಯಾಂಬರ್ಗ್‌ನ ಭಾರತೀಯ ರಾಯಭಾರ ಕಛೇರಿ ಮತ್ತು ಮಾನವ ಹಕ್ಕುಗಳ ಗುಂಪುಗಳಿಗೆ ಕಳುಹಿಸುತ್ತೇವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೇಸೇ ಹಾಕಲು ಬರದ ವಕೀಲ ತೇಜಸ್ವಿ ಸೂರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...