Homeಕರ್ನಾಟಕಸಿಬಿಐ ದಾಳಿ: ಮಾಧ್ಯಮಗಳಿಗೆ ಸಂಪೂರ್ಣ ವಿವರ ನೀಡಿದ ಡಿ.ಕೆ.ಶಿವಕುಮಾರ್

ಸಿಬಿಐ ದಾಳಿ: ಮಾಧ್ಯಮಗಳಿಗೆ ಸಂಪೂರ್ಣ ವಿವರ ನೀಡಿದ ಡಿ.ಕೆ.ಶಿವಕುಮಾರ್

ಕುತಂತ್ರಕ್ಕೆ ಹೆದರುವ ಮಗ ನಾನಲ್ಲ, ನನ್ನ ವಿರುದ್ಧ ಒತ್ತಡ ಹಾಕುತ್ತಿರುವವರಿಗೆ ಒಳ್ಳೆಯದಾಗಲಿ

- Advertisement -
- Advertisement -

ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಮನೆ ಮೇಲೆ ಇಂದು ಸಿಬಿಐ ದಾಳಿ ನಡೆಸಿದ್ದು, ಇದರ ಕುರಿತಂತೆ ಸ್ಪಷ್ಟನೆ ಮತ್ತು ಸಂಪೂರ್ಣ ವಿವರಗಳನ್ನು ಕೆಪಿಸಿಸಿ ಅಧ್ಯಕ್ಷರಾದ ಶಿವಕುಮಾರ್ ಮಾಧ್ಯಮಗಳೊಟ್ಟಿಗೆ ಹಂಚಿಕೊಂಡಿದ್ದಾರೆ. ಅದರ ಸಾರಾಂಶ ಇಲ್ಲಿದೆ.

“ಮಾಧ್ಯಮ ಸ್ನೇಹಿತರು ಬೆಳಗ್ಗೆಯಿಂದ ಅನೇಕ ವಿಚಾರ ತಿಳಿಸಿದ್ದೀರಿ. ಕೆಲವು ಸತ್ಯವನ್ನೂ ಹೇಳಿದ್ದೀರಿ, ಸುಳ್ಳನ್ನು ಹೇಳಿದ್ದೀರಿ. ಅದು ಏನೆಂಬುದನ್ನು ನೀವೇ ಯೋಚಿಸಿ. ನಿಮ್ಮ ಪರಿಶ್ರಮಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. 2017ರಲ್ಲಿ ಐಟಿ ದಾಳಿ ಆದಾಗ ಅವತ್ತೇ ಬಂಧನ ಆಗುತ್ತೆ ಅಂತಾ ಹೇಳಿದ್ದರು. 2018ರಲ್ಲಿ ಆರ್ಥಿಕ ಅಪರಾಧ ಪ್ರಕರಣ, 2019ರಲ್ಲಿ ಇಡಿ ಪ್ರಕರಣ ನ್ಯಾಯಾಲಯ ನನಗೆ ಜಾಮೀನು ನೀಡಿತು. ಆಗಲೂ ದೇಶದ ಉದ್ದಗಲಕ್ಕೂ, ಸೋನಿಯಾ ಗಾಂಧಿ ಅವರಿಂದ ಹಿಡಿದು ಎಲ್ಲ ಪಕ್ಷದ ಮುಖಂಡರು, ಅನೇಕ ಸಂಘಟನೆಗಳು ಪ್ರತಿಭಟನೆ ಮಾಡಿ ಬೆಂಬಲ ನೀಡಿದರು. ನನಗೆ ಅನ್ಯಾಯ ಆಗಿದೆ ಎಂದು ಜನ ಅಭಿಮಾನದಿಂದ ಬಂದು ಪ್ರತಿಭಟನೆ ಮಾಡಿದರು” ಎಂದು ಹೇಳಿದರು.

“ಎಲ್ಲ ಧರ್ಮದ ಹಿರಿಯರು ನನಗೆ, ನನ್ನ ಕುಟುಂಬಕ್ಕೆ ಶಕ್ತಿ ನೀಡಿದ್ದಾರೆ. ನಾನು ಮರಳಿ ಬಂದಾಗ ಪಕ್ಷ, ಜಾತಿ ಎಲ್ಲ ಮರೆತು ಸ್ವಾಗತ ಕೊಟ್ಟರು. ಜೈಲಿನಿಂದ ಬಂದವನಿಗೆ ಈ ಮೆರವಣಿಗೆ ಬೇಕಾ ಅಂತಾ ಕೇಳಿದ್ದರು. ಅವರು ಒಮ್ಮೆ ಯೋಚಿಸಬೇಕು ಪರಪ್ಪನ ಅಗ್ರಹಾರ ಜೈಲಿನಿಂದ ಬಂದವರು ಹೇಗೆ ಬಂದರು? ನಾನು ಅವರಂತೆ ವಿಕ್ಟರಿ ತೋರಿಸಿ ಬರಲಿಲ್ಲ. ಕೈಮುಗಿದು ಬಂದೆ” ಎಂದರು.

ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ನಿವಾಸಗಳ ಮೇಲೆ ಸಿಬಿಐ ದಾಳಿ

ನಮ್ಮ ರಾಷ್ಟ್ರೀಯ ನಾಯಕರು ನನ್ನ ಮೇಲೆ ನಂಬಿಕೆ ಇಟ್ಟು ಅಧ್ಯಕ್ಷ ಜವಾಬ್ದಾರಿ ಕೊಟ್ಟಿದ್ದಾರೆ. ಕಳೆದ ಏಳು ತಿಂಗಳಲ್ಲಿ ಕೊರೋನಾ ಸಮಸ್ಯೆಯಲ್ಲಿ ಜನ ಸಂಕಷ್ಟಕ್ಕೆ ಸಿಲುಕಿದಾಗ ನಾವು ಅವರಿಗೆ ನೆರವಾಗಿದ್ದೇವೆ. ಬಡವರು, ಕಾರ್ಮಿಕರು, ರೈತರು, ಜನ ಸಾಮಾನ್ಯರ ಜತೆ ಸರ್ಕಾರ ನಿಲ್ಲಲಿಲ್ಲ. ವಿರೋಧ ಪಕ್ಷವಾಗಿ ನಾವು ಅವರ ಪರ ನಿಂತೆವು. ಅವರ ಪರವಾಗಿ ನಾವು ಧ್ವನಿ ಎತ್ತಿದ್ದೇವೆ.

ನಾನು ಒಂದು ಪಕ್ಷದ ಅಧ್ಯಕ್ಷನಾಗಿ ನನ್ನ ಕರ್ತವ್ಯ ಮಾಡಿದೆ. ರೈತರ ಸಮಸ್ಯೆಗೆ ಸ್ಪಂದಿಸಿ ರೈತರ ಬೆಳೆಯನ್ನು ಅವರ ಹೊಲಕ್ಕೆ ಹೋಗಿ ಖರೀದಿಸಿದೆವು. ಕೊರೋನಾ ವಿಚಾರದಲ್ಲಿ 300, 400 ಪಟ್ಟು ಭ್ರಷ್ಟಾಚಾರ ಮಾಡಲಾಗಿದೆ. ಈ ಬಗ್ಗೆ ಹೋರಾಟ ಮಾಡಿದೆವು. ವಿಧಾನಸೌಧದಲ್ಲಿ ನಮಗೆ ಮಾತನಾಡಲು ಅವಕಾಶ ನೀಡಲಿಲ್ಲ. ನಾವು ಜನರ ನೋವಿಗೆ ಸ್ಪಂದಿಸದಿದ್ದರೆ, ಅವರ ಭಾವನೆಗೆ ಬೆಲೆ ಕೊಡದಿದ್ದರೆ ನಮ್ಮ ಕರ್ತವ್ಯ ನಿರ್ವಹಿಸಲು ವಿಫಲವಾದಂತೆ ಆಗುತ್ತದೆ.

ಇದನ್ನೂ ಓದಿ: ರಮೇಶ್‍ಕುಮಾರ್ ಮತ್ತು ಡಿ.ಕೆ.ಶಿವಕುಮಾರ್: ಇಲ್ಲಿಯವರೆಗೆ ವಿಶ್ವಾಸಮತ ಗೆದ್ದುಕೊಂಡ ಇಬ್ಬರು

ಇಂದು ದೇಶದಲ್ಲಿ ಅನೇಕ ಬೆಳವಣಿಗೆ ಆಗುತ್ತಿದೆ. ಹತ್ರಾಸ್ ನಲ್ಲಿ ದಲಿತ ಹೆಣ್ಣು ಮಗಳ ಮೇಲೆ ಅತ್ಯಾಚಾರ ನಡೆಯಿತು. ಆಕೆಗೆ ಸರ್ಕಾರ ನ್ಯಾಯ ಒದಗಿಸಿಕೊಡಲು ಮುಂದಾಗಿದೆಯೇ? ಚುನಾವಣೆ ಘೋಷಣೆಯಾದ ಮೇಲೆ, ನಾವು ಅನೇಕ ವಿಚಾರವಾಗಿ ಪ್ರತಿಭಟನೆಗೆ ಕರೆ ಕೊಟ್ಟ ಸಮಯದಲ್ಲಿ ನನ್ನ ಮನೆ ಮೇಲೆ ದಾಳಿ ಮಾಡಲಾಗಿದೆ. ಇಷ್ಟು ಆತುರ ಯಾಕೆ? ಈ ಎಫ್ಐಆರ್, ಪ್ರಕರಣಗಳಿಗೆ ನಾವು ಹೆದರುವುದಿಲ್ಲ. ಮುಖ್ಯಮಂತ್ರಿಗಳೇ 35 ವರ್ಷಗಳಲ್ಲಿ ನನ್ನ ಮೇಲೆ ಯಾವುದಾದರೂ ತನಿಖೆ ಆಗಿದೆಯಾ? ಕ್ರಿಮಿನಲ್ ಕೇಸ್? ಎಫ್ಐಆರ್ ಆಗಿದೆಯಾ? ನಾನು ಮಂತ್ರಿಯಾದ ಎಲ್ಲ ಇಲಾಖೆಗಳ ಫೈಲ್ ಜಾಲಾಡಿದ್ದೀರಾ. ಏನಾದರೂ ತಪ್ಪು ಕಾಣಿಸಿದೆಯಾ?

ಬೇರೆಯವರ ಬಂಡವಾಳವೂ ನನ್ನ ಬಳಿ ಇದೆ. ಆರ್‌ಟಿಐ ಮೂಲಕ ಎಲ್ಲವನ್ನು ಸಂಗ್ರಹಿಸಿದ್ದೇನೆ. ಯಾವಾಗ ಅದನ್ನು ಬಹಿರಂಗ ಮಾಡಬೇಕೋ ಆಗ ಮಾಡುತ್ತೇನೆ. ಬರೀ ಡಿ.ಕೆ ಶಿವಕುಮಾರ್ ಮಾತ್ರನಾ ನಿಮ್ಮ ಕಣ್ಣಿಗೆ ಕಾಣುತ್ತಿರುವುದು? ನಾನು ನಂಬಿರುವ ಶಕ್ತಿ ದೇವರು ಅಜ್ಜಯ್ಯನವರು, ಈ ಜನ ನನ್ನ ಜತೆ ಇದ್ದಾರೆ.

“ನನ್ನ ಮನೆಯಲ್ಲಿ 1.87 ಲಕ್ಷ ಸಿಕ್ಕಿದೆ ಅಂತಾ ಪಂಚನಾಮ ಇದೆ. ಪಕ್ಕದ ಕಚೇರಿಯಲ್ಲಿ 2-3 ಲಕ್ಷ, ದೆಹಲಿಯಲ್ಲಿ 2-3 ಲಕ್ಷ ಸಿಕ್ಕಿದೆ. ಮಾಧ್ಯಮಗಳಲ್ಲಿ ಬಂದಂತೆ ಕೋಟಿಗಟ್ಟಲೆ ಹಣ ಸಿಕ್ಕಿಲ್ಲ. ನಮ್ಮ ಮನೆಯಲ್ಲಿ ಏನು ಸಿಕ್ಕಿದೆಯೋ ಅದನ್ನು ಹೇಳಿದ್ದೇನೆ. ಬೇರೆಯವರ ಮನೆಯಲ್ಲಿ ಏನು ಸಿಕ್ಕಿದೆ ಗೊತ್ತಿಲ್ಲ. ನಾನು ಉದ್ಯಮಿ, ಶಿಕ್ಷಣದಾರ, ರಾಜಕಾರಣಿ. ನಾನು ತಪ್ಪು ಮಾಡಿದ್ದರೆ, ನನ್ನನ್ನು ನೇಣಿಗೆ ಹಾಕಲಿ. ಅವರು ಯಾವಾಗ ವಿಚಾರಣೆಗೆ ಕರೆಯುತ್ತಾರೋ ಹೋಗುತ್ತೇನೆ” ಎಂದು ಹೇಳಿದರು.


ಇದನ್ನೂ ಓದಿ: ಸಿಬಿಐ ದಾಳಿ: ರಾಜಕೀಯ ಷಡ್ಯಂತ್ರ ಎಂದ ಸಂಸದ ಡಿ.ಕೆ.ಸುರೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...

ಹನೂರ್ ‘ಶೂಟೌಟ್’: ದಾಖಲೆಗಳನ್ನು ಬಿಡುಗಡೆ ಮಾಡಿದ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ಸಿಬಿಐ ತನಿಖೆಗೆ ಆಗ್ರಹ 

ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ನಡೆದ ಮೂವರ ಸಾವು ಮತ್ತು ಗುಂಡಿನ ಚಕಮಕಿ ಪ್ರಕರಣ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಆಗಸ್ಟ್ 15ರಂದು ಹನೂರಿನ ಮರಿಯಮಂಗಲ ಬಿಟ್ ಅರಣ್ಯ...

ಬಿಜೆಪಿ MLC ರವಿಕುಮಾರ್‌ ವಿರುದ್ಧ ಜಾಮೀನು ರಹಿತ ವಾರಂಟ್‌

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ವಿರುದ್ಧ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ವಿಚಾರಣೆಗೆ ಹಾಜರಾಗದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಬೆಂಗಳೂರಿನ...

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, 'ಲಾಜಿಕಲ್ ಡಿಸ್ಕ್ರಿಪೆನ್ಸಿ' ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...