Homeಮುಖಪುಟಸುಶಾಂತ್ ಪ್ರಕರಣದಲ್ಲಿ ಮುಂಬೈ ಪೊಲೀಸರನ್ನು ಹಣಿಯಲು 80 ಸಾವಿರ ಫೇಕ್ ಅಕೌಂಟ್‌ಗಳ ಸೃಷ್ಠಿ : BJP...

ಸುಶಾಂತ್ ಪ್ರಕರಣದಲ್ಲಿ ಮುಂಬೈ ಪೊಲೀಸರನ್ನು ಹಣಿಯಲು 80 ಸಾವಿರ ಫೇಕ್ ಅಕೌಂಟ್‌ಗಳ ಸೃಷ್ಠಿ : BJP ಕೈವಾಡದ ಆರೋಪ

ಬಿಜೆಪಿ ಮತ್ತು ಬಿಜೆಪಿ ಪರವಿರುವ ಕಾರ್ಯಕರ್ತರು ಕೊಲೆ ಸಿದ್ಧಾಂತವನ್ನು, ಊಹಾಪೋಹಗಳನ್ನು ಹರಿಯಬಿಟ್ಟಿದ್ದಾರೆ. ಹಲವು ಟ್ರೋಲ್ ಪೇಜ್‌ಗಳು ಮುಂಬೈ ಪೊಲೀಸರನ್ನು ಗುರಿಯಾಗಿಸಿಕೊಂಡಿವೆ ಎಂದು ಸಂಶೋಧನೆ ತಿಳಿಸಿದೆ.

- Advertisement -
- Advertisement -

ಜೂನ್ 14 ರಂದು ನಟ ಸುಶಾಂತ್ ಸಿಂಗ್ ರಜಪೂತ್ ತನ್ನ ಮುಂಬೈ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದರು. ಸಾಂದರ್ಭಿಕ ಸಾಕ್ಷ್ಯಗಳು ಮತ್ತು ಪ್ರಾಥಮಿಕ ತನಿಖೆಯನ್ನಾಧರಿಸಿ ಮುಂಬೈ ಪೊಲೀಸರು ಅದನ್ನು ಆತ್ಮಹತ್ಯೆಯೆಂದು ಕರೆದಿದ್ದರು. ಆದರೆ ಅದು ಕೊಲೆಯೆಂದು, ಮುಂಬೈ ಪೊಲೀಸರು ಪ್ರಕರಣ ಮುಚ್ಚಿಹಾಕುತ್ತಿದ್ದಾರೆ ಎಂದು ಆರೋಪಿಸಿ, ಸುಶಾಂತ್ ಸಿಂಗ್‌ಗೆ ನ್ಯಾಯ ಬೇಕೆಂದು ಆಗ್ರಹಿಸಿ ದೊಡ್ಡ ಪ್ರಚಾರಾಂದೋಲನ ನಡೆದಿತ್ತು. ಇದಕ್ಕಾಗಿ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಸುಮಾರು 80,000ಕ್ಕೂ ಹೆಚ್ಚು ಫೇಕ್ ಅಕೌಂಟ್‌ಗಳನ್ನು ರಚಿಸಲಾಗಿತ್ತು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ವಿದೇಶಗಳಿಂದಲೂ ಖಾತೆ ತೆರೆದು ವಿದೇಶಿ ಭಾಷೆಗಳಿಂದಲೂ ಸೇರಿ #justiceforsushant, #sushantsinghrajput #SSR ಹ್ಯಾಷ್‌ಟ್ಯಾಗ್‌ಗಳನ್ನು ಟ್ರೆಂಡ್‌ ಮಾಡಲಾಗಿತ್ತು. ಹಲವಾರು ಟ್ವೀಟ್‌ಗಳು ಇಟಲಿ, ಜಪಾನ್, ಪೋಲಾಂಡ್, ಸ್ಲೋವೇನಿಯ, ಇಂಡೋನೇಷ್ಯ, ತುರ್ಕಿ, ಫ್ರಾನ್ಸ್, ಥೈಲ್ಯಾಂಡ್, ರೋಮೇನಿಯ ದೇಶಗಳಿಂದ ದಾಖಲಾಗಿವೆ ಎಂದು ಮುಂಬೈ ಪೊಲೀಸರ ಸೈಬರ್ ವಿಭಾಗ ಸಲ್ಲಿಸಿರುವ ವರದಿಯಲ್ಲಿ ತಿಳಿಸಲಾಗಿದೆ.

ಸುಶಾಂತ್ ಸಿಂಗ್ ಕೊಲೆಯಾಗಿಲ್ಲ; ಇದು ಆತ್ಮಹತ್ಯೆ: ಮುಂಬೈ ಪೊಲೀಸ್
Courtesy: www.jagran.com

ಮುಂಬೈ ಪೊಲೀಸರನ್ನು ಕೆಳಮಟ್ಟದ ಭಾಷೆಯಲ್ಲಿ ಹಣಿಯಲು ಮತ್ತು ಅದು ಕೊಲೆ ಎಂದು ಬಿಂಬಿಸಲು ವ್ಯವಸ್ಥಿತವಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ನಡೆಸಲಾಗಿತ್ತು. ಬಾಲಿವುಡ್ ನಟಿ ಕಂಗನಾ ರಾಣಾವತ್ ಮತ್ತು ಸುಶಾಂತ್ ಕುಟುಂಬ ಕೊಲೆ ಎಂದು ಆರೋಪಿಸಿದ ನಂತರ ಬಿಹಾರ ಪೊಲೀಸರ ಒತ್ತಾಯದ ಮೇರೆಗೆ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ. ಎರಡು ತಿಂಗಳು ಕಳೆದರೂ ಕೊಲೆ ಎಂದು ಸಾಬೀತುಪಡಿಸಲು ಸಿಬಿಐಗೆ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ ಎಂದು ಮೂಲಗಳು ತಿಳಿಸಿವೆ.

ಅಲ್ಲದೇ ಮೊನ್ನೆ ಏಮ್ಸ್‌ನ 7 ವೈದ್ಯರ ತಂಡವು ಸುಶಾಂತ್ ಸಿಂಗ್ ಸಾವಿನ ಕುರಿತು ವೈದ್ಯಕೀಯ ತನಿಖೆ ಪೂರ್ಣಗೊಳಿಸಿದ್ದು, ಇದು ಸ್ಪಷ್ಟವಾದ ಆತ್ಮಹತ್ಯೆ, ಕೊಲೆಯಲ್ಲ ಎಂದು ಘೋಷಿಸಿದ್ದಾರೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ‘ಕೊಲೆ ಸಿದ್ದಾಂತ’ ಸಂಪೂರ್ಣ ಸುಳ್ಳು: ಏಮ್ಸ್ ಮೂಲಗಳು

ಈ ಅಕೌಂಟ್‌ಗಳ ಕುರಿತು ತನಿಖೆ ನಡೆಸಲು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಸೈಬರ್ ವಿಭಾಗಕ್ಕೆ ಮುಂಬೈ ಪೊಲೀಸ್ ಕಮಿಷನರ್ ಪರಮ್ ಬಿರ್ ಸಿಂಗ್ ನಿರ್ದೇಶಿಸಿದ್ದಾರೆ.

ಕೊಲೆ ಎಂಬ ಪ್ರಚಾರದ ಹಿಂದಿದೆ ಬಿಜೆಪಿ ಪಾತ್ರ

ಸುಶಾಂತ್ ಕೊಲೆ ಸಿದ್ಧಾಂತದ ಹಿಂದೆ ಬಿಜೆಪಿ ಪಕ್ಷದ ಕಾರ್ಯಕರ್ತರು ವ್ಯವಸ್ಥಿತವಾಗಿ ಕೆಲಸ ಮಾಡಿದೆ ಎಂದು ಮಿಚಿಗನ್ ವಿಶ್ವವಿದ್ಯಾಲಯದ ಇತ್ತೀಚಿನ ಸಂಶೋಧನೆ ತಿಳಿಸಿದೆ. ಜೂನ್ 14 (ಸುಶಾಂತ್ ಸಾವಿನ ದಿನ) ರಿಂದ ಸೆಪ್ಟಂಬರ್ 12 ರವರೆಗಿನ ಸಾಮಾಜಿಕ ಜಾಲತಾಣದಲ್ಲಿನ ಟ್ರೆಂಡ್‌ಗಳು, ಪ್ರವೃತ್ತಿಗಳು, ಹ್ಯಾಂಡಲ್‌ಗಳು ಮತ್ತು ರಾಜಕಾರಣಿಗಳು, ಬಾಲಿವುಡ್ ನಟ-ನಟಿಯರು ಮತ್ತು ಮಾಧ್ಯಮಗಳ ಟ್ವೀಟ್‌ಗಳನ್ನು ಅಧ್ಯಯನ ಮಾಡಲಾಗಿದೆ. ಇವೆಲ್ಲವುಗಳ ಆಧಾರದಲ್ಲಿ ಬಿಜೆಪಿ ಮತ್ತು ಬಿಜೆಪಿ ಪರವಿರುವ ಕಾರ್ಯಕರ್ತರು ಕೊಲೆ ಸಿದ್ಧಾಂತವನ್ನು, ಊಹಾಪೋಹಗಳನ್ನು ಹರಿಯಬಿಟ್ಟಿದ್ದಾರೆ. ಹಲವು ಟ್ರೋಲ್ ಪೇಜ್‌ಗಳು ಮುಂಬೈ ಪೊಲೀಸರನ್ನು ಗುರಿಯಾಗಿಸಿಕೊಂಡಿವೆ ಎಂದು ಸಂಶೋಧನಾ ವರದಿಯಲ್ಲಿ ತಿಳಿಸಲಾಗಿದೆ.

Image Courtesy: IChowk

ಮಹಾರಾಷ್ಟ್ರ ಸರ್ಕಾರ ಎಕ್ಸ್‌ಪೊಸ್ಡ್‌, ಗೃಹಮಂತ್ರಿ ಅನಿಲ್ ದೇಶ್ಮುಖ್ ಸುಶಾಂತ್ ಕೊಲೆಯ ಆರೋಪಿಗಳನ್ನು ರಕ್ಷಿಸುತ್ತಿದ್ದಾರೆ, ಮುಂಬೈ ಪೊಲೀಸರು ಅಡಿಯಾಳುಗಳು ಎಂದೆಲ್ಲಾ ಪ್ರಚಾರ ಮಾಡಲಾಯ್ತು. ನಿಜವಾಗಿಯೂ ಸುಶಾಂತ್ ಆತ್ಮಹತ್ಯೆಯನ್ನು ಮಾನಸಿಕ ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಚರ್ಚಿಸಲು ಇದ್ದ ಅವಕಾಶವನ್ನು ಕೊಲೆ ಎಂದು ದಿಕ್ಕುತಪ್ಪಿಸಲಾಯ್ತು ಎಂದು ಸಂಶೋಧನೆ ತಿಳಿಸಿದೆ.

ಇದನ್ನೂ ಓದಿ: ಬಿಹಾರ ಚುನಾವಣೆವರೆಗೂ ಮುಂದುವರೆಯಲಿದೆ ಸುಶಾಂತ್ ಸಿಂಗ್- ಕಂಗನಾ ವಿವಾದಗಳು

ಸುಶಾಂತ್ ಸಾವನ್ನು ಬಿಹಾರ ವಿಧಾನಸಭಾ ಚುನಾವಣೆಗೆ ಸಂಬಂಧ ಕಲ್ಪಿಸಲಾಯ್ತು. ಬಿಜೆಪಿ ಪಕ್ಷವು ತನ್ನ ಬ್ಯಾನರ್‌ಗಳಲ್ಲಿ ಸುಶಾಂತ್‌ಗೆ ನ್ಯಾಯಕೊಡಿಸುತ್ತೇವೆ ಎಂದು ಚಿತ್ರ ಸಮೇತ ಪ್ರಕಟಿಸಿಕೊಂಡಿದ್ದರು. ರಿಪಬ್ಲಿಕ್ ಟಿವಿ ಸೇರಿದಂತೆ ಕೆಲ ಮಾಧ್ಯಮಗಳು ಪ್ರತಿದಿನ ಇದೇ ಸುದ್ದಿಯನ್ನು ಬಿತ್ತರಿಸಿದ್ದರು. ಒಟ್ಟಿನಲ್ಲಿ ನಟನೊಬ್ಬನ ಸಾವನ್ನು ರಾಜಕೀಯಕ್ಕೆ ಬಳಸಿಕೊಂಡಿರುವುದು ದೇಶದ ದುರಂತವಾಗಿದೆ.


ಇದನ್ನೂ ಓದಿ: ಸುಶಾಂತ್ ಸಾವನ್ನು ಬಿಹಾರ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...