Homeಮುಖಪುಟಸುಶಾಂತ್ ಪ್ರಕರಣದಲ್ಲಿ ಮುಂಬೈ ಪೊಲೀಸರನ್ನು ಹಣಿಯಲು 80 ಸಾವಿರ ಫೇಕ್ ಅಕೌಂಟ್‌ಗಳ ಸೃಷ್ಠಿ : BJP...

ಸುಶಾಂತ್ ಪ್ರಕರಣದಲ್ಲಿ ಮುಂಬೈ ಪೊಲೀಸರನ್ನು ಹಣಿಯಲು 80 ಸಾವಿರ ಫೇಕ್ ಅಕೌಂಟ್‌ಗಳ ಸೃಷ್ಠಿ : BJP ಕೈವಾಡದ ಆರೋಪ

ಬಿಜೆಪಿ ಮತ್ತು ಬಿಜೆಪಿ ಪರವಿರುವ ಕಾರ್ಯಕರ್ತರು ಕೊಲೆ ಸಿದ್ಧಾಂತವನ್ನು, ಊಹಾಪೋಹಗಳನ್ನು ಹರಿಯಬಿಟ್ಟಿದ್ದಾರೆ. ಹಲವು ಟ್ರೋಲ್ ಪೇಜ್‌ಗಳು ಮುಂಬೈ ಪೊಲೀಸರನ್ನು ಗುರಿಯಾಗಿಸಿಕೊಂಡಿವೆ ಎಂದು ಸಂಶೋಧನೆ ತಿಳಿಸಿದೆ.

- Advertisement -
- Advertisement -

ಜೂನ್ 14 ರಂದು ನಟ ಸುಶಾಂತ್ ಸಿಂಗ್ ರಜಪೂತ್ ತನ್ನ ಮುಂಬೈ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದರು. ಸಾಂದರ್ಭಿಕ ಸಾಕ್ಷ್ಯಗಳು ಮತ್ತು ಪ್ರಾಥಮಿಕ ತನಿಖೆಯನ್ನಾಧರಿಸಿ ಮುಂಬೈ ಪೊಲೀಸರು ಅದನ್ನು ಆತ್ಮಹತ್ಯೆಯೆಂದು ಕರೆದಿದ್ದರು. ಆದರೆ ಅದು ಕೊಲೆಯೆಂದು, ಮುಂಬೈ ಪೊಲೀಸರು ಪ್ರಕರಣ ಮುಚ್ಚಿಹಾಕುತ್ತಿದ್ದಾರೆ ಎಂದು ಆರೋಪಿಸಿ, ಸುಶಾಂತ್ ಸಿಂಗ್‌ಗೆ ನ್ಯಾಯ ಬೇಕೆಂದು ಆಗ್ರಹಿಸಿ ದೊಡ್ಡ ಪ್ರಚಾರಾಂದೋಲನ ನಡೆದಿತ್ತು. ಇದಕ್ಕಾಗಿ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಸುಮಾರು 80,000ಕ್ಕೂ ಹೆಚ್ಚು ಫೇಕ್ ಅಕೌಂಟ್‌ಗಳನ್ನು ರಚಿಸಲಾಗಿತ್ತು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ವಿದೇಶಗಳಿಂದಲೂ ಖಾತೆ ತೆರೆದು ವಿದೇಶಿ ಭಾಷೆಗಳಿಂದಲೂ ಸೇರಿ #justiceforsushant, #sushantsinghrajput #SSR ಹ್ಯಾಷ್‌ಟ್ಯಾಗ್‌ಗಳನ್ನು ಟ್ರೆಂಡ್‌ ಮಾಡಲಾಗಿತ್ತು. ಹಲವಾರು ಟ್ವೀಟ್‌ಗಳು ಇಟಲಿ, ಜಪಾನ್, ಪೋಲಾಂಡ್, ಸ್ಲೋವೇನಿಯ, ಇಂಡೋನೇಷ್ಯ, ತುರ್ಕಿ, ಫ್ರಾನ್ಸ್, ಥೈಲ್ಯಾಂಡ್, ರೋಮೇನಿಯ ದೇಶಗಳಿಂದ ದಾಖಲಾಗಿವೆ ಎಂದು ಮುಂಬೈ ಪೊಲೀಸರ ಸೈಬರ್ ವಿಭಾಗ ಸಲ್ಲಿಸಿರುವ ವರದಿಯಲ್ಲಿ ತಿಳಿಸಲಾಗಿದೆ.

ಸುಶಾಂತ್ ಸಿಂಗ್ ಕೊಲೆಯಾಗಿಲ್ಲ; ಇದು ಆತ್ಮಹತ್ಯೆ: ಮುಂಬೈ ಪೊಲೀಸ್
Courtesy: www.jagran.com

ಮುಂಬೈ ಪೊಲೀಸರನ್ನು ಕೆಳಮಟ್ಟದ ಭಾಷೆಯಲ್ಲಿ ಹಣಿಯಲು ಮತ್ತು ಅದು ಕೊಲೆ ಎಂದು ಬಿಂಬಿಸಲು ವ್ಯವಸ್ಥಿತವಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ನಡೆಸಲಾಗಿತ್ತು. ಬಾಲಿವುಡ್ ನಟಿ ಕಂಗನಾ ರಾಣಾವತ್ ಮತ್ತು ಸುಶಾಂತ್ ಕುಟುಂಬ ಕೊಲೆ ಎಂದು ಆರೋಪಿಸಿದ ನಂತರ ಬಿಹಾರ ಪೊಲೀಸರ ಒತ್ತಾಯದ ಮೇರೆಗೆ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ. ಎರಡು ತಿಂಗಳು ಕಳೆದರೂ ಕೊಲೆ ಎಂದು ಸಾಬೀತುಪಡಿಸಲು ಸಿಬಿಐಗೆ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ ಎಂದು ಮೂಲಗಳು ತಿಳಿಸಿವೆ.

ಅಲ್ಲದೇ ಮೊನ್ನೆ ಏಮ್ಸ್‌ನ 7 ವೈದ್ಯರ ತಂಡವು ಸುಶಾಂತ್ ಸಿಂಗ್ ಸಾವಿನ ಕುರಿತು ವೈದ್ಯಕೀಯ ತನಿಖೆ ಪೂರ್ಣಗೊಳಿಸಿದ್ದು, ಇದು ಸ್ಪಷ್ಟವಾದ ಆತ್ಮಹತ್ಯೆ, ಕೊಲೆಯಲ್ಲ ಎಂದು ಘೋಷಿಸಿದ್ದಾರೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ‘ಕೊಲೆ ಸಿದ್ದಾಂತ’ ಸಂಪೂರ್ಣ ಸುಳ್ಳು: ಏಮ್ಸ್ ಮೂಲಗಳು

ಈ ಅಕೌಂಟ್‌ಗಳ ಕುರಿತು ತನಿಖೆ ನಡೆಸಲು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಸೈಬರ್ ವಿಭಾಗಕ್ಕೆ ಮುಂಬೈ ಪೊಲೀಸ್ ಕಮಿಷನರ್ ಪರಮ್ ಬಿರ್ ಸಿಂಗ್ ನಿರ್ದೇಶಿಸಿದ್ದಾರೆ.

ಕೊಲೆ ಎಂಬ ಪ್ರಚಾರದ ಹಿಂದಿದೆ ಬಿಜೆಪಿ ಪಾತ್ರ

ಸುಶಾಂತ್ ಕೊಲೆ ಸಿದ್ಧಾಂತದ ಹಿಂದೆ ಬಿಜೆಪಿ ಪಕ್ಷದ ಕಾರ್ಯಕರ್ತರು ವ್ಯವಸ್ಥಿತವಾಗಿ ಕೆಲಸ ಮಾಡಿದೆ ಎಂದು ಮಿಚಿಗನ್ ವಿಶ್ವವಿದ್ಯಾಲಯದ ಇತ್ತೀಚಿನ ಸಂಶೋಧನೆ ತಿಳಿಸಿದೆ. ಜೂನ್ 14 (ಸುಶಾಂತ್ ಸಾವಿನ ದಿನ) ರಿಂದ ಸೆಪ್ಟಂಬರ್ 12 ರವರೆಗಿನ ಸಾಮಾಜಿಕ ಜಾಲತಾಣದಲ್ಲಿನ ಟ್ರೆಂಡ್‌ಗಳು, ಪ್ರವೃತ್ತಿಗಳು, ಹ್ಯಾಂಡಲ್‌ಗಳು ಮತ್ತು ರಾಜಕಾರಣಿಗಳು, ಬಾಲಿವುಡ್ ನಟ-ನಟಿಯರು ಮತ್ತು ಮಾಧ್ಯಮಗಳ ಟ್ವೀಟ್‌ಗಳನ್ನು ಅಧ್ಯಯನ ಮಾಡಲಾಗಿದೆ. ಇವೆಲ್ಲವುಗಳ ಆಧಾರದಲ್ಲಿ ಬಿಜೆಪಿ ಮತ್ತು ಬಿಜೆಪಿ ಪರವಿರುವ ಕಾರ್ಯಕರ್ತರು ಕೊಲೆ ಸಿದ್ಧಾಂತವನ್ನು, ಊಹಾಪೋಹಗಳನ್ನು ಹರಿಯಬಿಟ್ಟಿದ್ದಾರೆ. ಹಲವು ಟ್ರೋಲ್ ಪೇಜ್‌ಗಳು ಮುಂಬೈ ಪೊಲೀಸರನ್ನು ಗುರಿಯಾಗಿಸಿಕೊಂಡಿವೆ ಎಂದು ಸಂಶೋಧನಾ ವರದಿಯಲ್ಲಿ ತಿಳಿಸಲಾಗಿದೆ.

Image Courtesy: IChowk

ಮಹಾರಾಷ್ಟ್ರ ಸರ್ಕಾರ ಎಕ್ಸ್‌ಪೊಸ್ಡ್‌, ಗೃಹಮಂತ್ರಿ ಅನಿಲ್ ದೇಶ್ಮುಖ್ ಸುಶಾಂತ್ ಕೊಲೆಯ ಆರೋಪಿಗಳನ್ನು ರಕ್ಷಿಸುತ್ತಿದ್ದಾರೆ, ಮುಂಬೈ ಪೊಲೀಸರು ಅಡಿಯಾಳುಗಳು ಎಂದೆಲ್ಲಾ ಪ್ರಚಾರ ಮಾಡಲಾಯ್ತು. ನಿಜವಾಗಿಯೂ ಸುಶಾಂತ್ ಆತ್ಮಹತ್ಯೆಯನ್ನು ಮಾನಸಿಕ ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಚರ್ಚಿಸಲು ಇದ್ದ ಅವಕಾಶವನ್ನು ಕೊಲೆ ಎಂದು ದಿಕ್ಕುತಪ್ಪಿಸಲಾಯ್ತು ಎಂದು ಸಂಶೋಧನೆ ತಿಳಿಸಿದೆ.

ಇದನ್ನೂ ಓದಿ: ಬಿಹಾರ ಚುನಾವಣೆವರೆಗೂ ಮುಂದುವರೆಯಲಿದೆ ಸುಶಾಂತ್ ಸಿಂಗ್- ಕಂಗನಾ ವಿವಾದಗಳು

ಸುಶಾಂತ್ ಸಾವನ್ನು ಬಿಹಾರ ವಿಧಾನಸಭಾ ಚುನಾವಣೆಗೆ ಸಂಬಂಧ ಕಲ್ಪಿಸಲಾಯ್ತು. ಬಿಜೆಪಿ ಪಕ್ಷವು ತನ್ನ ಬ್ಯಾನರ್‌ಗಳಲ್ಲಿ ಸುಶಾಂತ್‌ಗೆ ನ್ಯಾಯಕೊಡಿಸುತ್ತೇವೆ ಎಂದು ಚಿತ್ರ ಸಮೇತ ಪ್ರಕಟಿಸಿಕೊಂಡಿದ್ದರು. ರಿಪಬ್ಲಿಕ್ ಟಿವಿ ಸೇರಿದಂತೆ ಕೆಲ ಮಾಧ್ಯಮಗಳು ಪ್ರತಿದಿನ ಇದೇ ಸುದ್ದಿಯನ್ನು ಬಿತ್ತರಿಸಿದ್ದರು. ಒಟ್ಟಿನಲ್ಲಿ ನಟನೊಬ್ಬನ ಸಾವನ್ನು ರಾಜಕೀಯಕ್ಕೆ ಬಳಸಿಕೊಂಡಿರುವುದು ದೇಶದ ದುರಂತವಾಗಿದೆ.


ಇದನ್ನೂ ಓದಿ: ಸುಶಾಂತ್ ಸಾವನ್ನು ಬಿಹಾರ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...