Homeಮುಖಪುಟಹತ್ರಾಸ್: ಶವ ಸುಟ್ಟಿದ್ದನ್ನು ಸುಪ್ರೀಂ‌ನಲ್ಲಿ ಸಮರ್ಥಿಸಿಕೊಂಡ ಯುಪಿ ಸರ್ಕಾರ!

ಹತ್ರಾಸ್: ಶವ ಸುಟ್ಟಿದ್ದನ್ನು ಸುಪ್ರೀಂ‌ನಲ್ಲಿ ಸಮರ್ಥಿಸಿಕೊಂಡ ಯುಪಿ ಸರ್ಕಾರ!

ಯುಪಿ ಸರ್ಕಾರದ ಅಫಿಡವಿಟ್‌ಗೆ ವಿರುದ್ಧವಾಗಿ ಸಂತ್ರಸ್ತ ಕುಟುಂಬವು ಶವ ನೀಡುವಂತೆ ಗೋಗರೆಯುತ್ತಿರುವ ಮತ್ತು ಹತ್ರಾಸ್ ಜಿಲ್ಲಾಧಿಕಾರಿ ಸಂತ್ರಸ್ತೆಗೆ ತಂದೆಗೆ ಧಮಕಿ ಹಾಕುತ್ತಿರುವ ವಿಡಿಯೋಗಳು ವೈರಲ್ ಆಗಿದ್ದವು. 

- Advertisement -
- Advertisement -

ಹತ್ರಾಸ್‌‌ನಲ್ಲಿ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟಿದ್ದ ದಲಿತ ಯುವತಿಯ ಶವವನ್ನು ’ರಾಜ್ಯದಲ್ಲಿ ದೊಡ್ಡ ಪ್ರಮಾಣದ ಹಿಂಸಾಚಾರ ನಡೆಯುವುದನ್ನು ತಪ್ಪಿಸುವುದಕ್ಕಾಗಿ ಬೇಕಾಗಿಯೇ’ ರಾತ್ರೋ ರಾತ್ರಿ ಸುಟ್ಟಿದ್ದೇವೆ ಎಂದು ಗುಪ್ತಚರ ಇಲಾಖೆಯ ಮಾಹಿತಿ ಉಲ್ಲೇಖಿಸಿ ಸುಪ್ರೀಂ ಕೋರ್ಟ್‌ನಲ್ಲಿ ಉತ್ತರ ಪ್ರದೇಶ ಸರ್ಕಾರ ಸಮರ್ಥನೆ ಮಾಡಿಕೊಂಡಿದೆ

ಉತ್ತರ ಪ್ರದೇಶ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ನೀಡಿದ ಅಫಿಡವಿಟ್‌ನಲ್ಲಿ, “ಬಾಬರಿ ಮಸೀದಿ ತೀರ್ಪು ಬರುತ್ತಿದ್ದರಿಂದ ಜಿಲ್ಲೆಯಲ್ಲಿ ಹೈಅಲರ್ಟ್ ಘೋಷನೆಯಾಗಿತ್ತು. ಹಾಗಾಗಿ ಮುಂಜಾನೆ 2.30 ರಲ್ಲಿ ಅಂತ್ಯಕ್ರಿಯೆ ನಡೆಸಿದ್ದೇವೆ” ಎಂದು ಸಮರ್ಥಿಸಿಕೊಂಡಿದೆ.

ಇದನ್ನೂ ಓದಿ: ಹತ್ರಾಸ್‌: ಸಂತ್ರಸ್ಥೆಯ ಗುಪ್ತಾಂಗದಲ್ಲಿ ಆಳವಾದ ಗಾಯವಿದೆ; ಫೋರೆನ್ಸಿಕ್ ವರದಿ

“ಇಡೀ ಪ್ರಕರಣಕ್ಕೆ ಜಾತಿ/ಕೋಮು ಬಣ್ಣವನ್ನು ನೀಡಲಾಗುತ್ತಿದೆ ಹಾಗೂ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಧರಣಿ ನಡೆಯುತ್ತಿರುವ ಬಗ್ಗೆ ಸೆಪ್ಟೆಂಬರ್ 29 ರ ಬೆಳಿಗ್ಗೆಯಿಂದಲೆ ಹತ್ರಾಸ್‌ನಲ್ಲಿನ ಜಿಲ್ಲಾಡಳಿತವು ಹಲವಾರು ಗುಪ್ತಚರ ಮಾಹಿತಿಯನ್ನು ಪಡೆದಿತ್ತು” ಎಂದು ಉತ್ತರ ಪ್ರದೇಶ ಹೇಳಿದೆ.

ರಾಜಕೀಯ ಪಕ್ಷಗಳ ಬೆಂಬಲಿಗರೊಂದಿಗೆ ಎರಡೂ ಸಮುದಾಯಗಳ/ಜಾತಿಗಳ ಲಕ್ಷಾಂತರ ಪ್ರತಿಭಟನಾಕಾರರು ಹಾಗೂ ಮಾಧ್ಯಮಗಳು ಮರುದಿನ ಬೆಳಿಗ್ಗೆ ಹಳ್ಳಿಯಲ್ಲಿ ಒಟ್ಟುಗೂಡುತ್ತಾರೆ ಎಂಬ ಮಾಹಿತಿ ಸರ್ಕಾರಕ್ಕೆ ಲಭಿಸಿತ್ತು ಮತ್ತು ಇದು ಹಿಂಸಾಚಾರಕ್ಕೆ ಹಾಗೂ ಕಾನೂನು ಸುವ್ಯವಸ್ಥೆಗೆ ದಕ್ಕೆ ತರಬಹುದಾಗಿತ್ತು ಎಂದು ಸರ್ಕಾರ ಹೇಳಿದೆ.

ಅಷ್ಟೇ ಅಲ್ಲದೆ ಬಾಬ್ರಿ ಮಸೀದಿ ತೀರ್ಪು ಮತ್ತು ಕೊರೊನಾ ವೈರಸ್ ಸುರಕ್ಷತಾ ನಿಯಮಗಳಿಂದಾಗಿ ಅಲರ್ಟ್ ಕೂಡಾ ಇತ್ತು ಎಂದು ತನ್ನ ಅಫಿಡವಿಟ್‌ನಲ್ಲಿ ತಿಳಿಸಿದೆ.

“ಇಂತಹ ಅಸಾಮಾನ್ಯ ಮತ್ತು ತೀವ್ರವಾದ ಸನ್ನಿವೇಶದಲ್ಲಿ, ಬೆಳಿಗ್ಗೆ ನಡೆಯುವ ದೊಡ್ಡ ಪ್ರಮಾಣದ ಹಿಂಸಾಚಾರವನ್ನು ತಪ್ಪಿಸಲು ಬೇಕಾಗಿಯೇ, ಯುವತಿ ಮೃತಪಟ್ಟು ಆಕೆಯ ಮರಣೋತ್ತರ ಪರೀಕ್ಷೆಯ 20 ಗಂಟೆಗಳ ನಂತರ ಎಲ್ಲಾ ಧಾರ್ಮಿಕ ವಿಧಿಗಳೊಂದಿಗೆ ಸಂತ್ರಸ್ತ ಕುಟುಂಬದ ಮನವೊಲಿಸಿ ಜಿಲ್ಲಾಡಳಿತವು ನಿರ್ಧಾರ ತೆಗೆದುಕೊಂಡಿತ್ತು” ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿದೆ.

ಇದನ್ನೂ ಓದಿ: ಬಹುಜನರಿಗೆ ಬಂದೂಕು ನೀಡಿ: ಹತ್ರಾಸ್‌ಗೆ ಹೊರಟ ಭೀಮ್ ಆರ್ಮಿ ಮುಖ್ಯಸ್ಥ ಆಜಾದ್

“ಕೆಲವು ಪಟ್ಟಭದ್ರ ಹಿತಾಸಕ್ತಿಗಳಿಂದ ಉಂಟಾಗುವ ಯೋಜಿತ ಜಾತಿ ಸಂಘರ್ಷವನ್ನು ತಪ್ಪಿಸಲು ಮಾತ್ರವೆ ಶವಸಂಸ್ಕಾರವನ್ನು ತರಾತುರಿಯಲ್ಲಿ ಮಾಡಲಾಗಿತ್ತೇ ಹೊರತು, ಯಾವುದೇ ಕೆಟ್ಟ ಉದ್ದೇಶವಿಲ್ಲ” ಎಂದು ಅದು ನ್ಯಾಯಾಲಯಕ್ಕೆ ತಿಳಿಸಿದೆ.

ಕಳೆದ ಮಂಗಳವಾರ ಕುಟುಂಬದ ಅನುಪಸ್ಥಿತಿಯಲ್ಲಿ ಪೊಲೀಸರು ದಲಿತ ಯುವತಿಯ ದೇಹವನ್ನು ಸುಟ್ಟಿದ್ದು ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿದೆ. ಯುಪಿ ಸರ್ಕಾರ ಸುಪ್ರೀಂನಲ್ಲಿ ಸಲ್ಲಿಸಿರುವ ಅಫಿಡವಿಡ್‌ಗೆ ವಿರುದ್ಧವಾಗಿ ಸಂತ್ರಸ್ತ ಕುಟುಂಬವು ಶವ ನೀಡುವಂತೆ ಗೋಗರೆಯುತ್ತಿರುವ ಮತ್ತು ಹತ್ರಾಸ್ ಜಿಲ್ಲಾಧಿಕಾರಿ ಸಂತ್ರಸ್ತೆಗೆ ತಂದೆಗೆ ಧಮಕಿ ಹಾಕುತ್ತಿರುವ ವಿಡಿಯೋಗಳು ವೈರಲ್ ಆಗಿದ್ದವು.

ಸೆಪ್ಟೆಂಬರ್ 14 ರಂದು ತನ್ನ ಗ್ರಾಮದ ನಾಲ್ಕು ಮೇಲ್ಜಾತಿಯವರಿಂದ ಹಲ್ಲೆ ಮತ್ತು ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಗಂಭೀರ ಗಾಯಗಳಿಂದಾಗಿ ದಲಿತ ಯುವತಿ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಇದರ ನಂತರ ಯುಪಿ ಪೊಲೀಸರು ಯುವತಿಯ ಶವವನ್ನು ತೆಗೆದುಕೊಂಡು ಹತ್ರಾಸ್‌ಗೆ ಕೊಂಡೊಯ್ದಿದ್ದರು, ಶವವನ್ನು ಮನೆಗೆ ಕೊಂಡೊಯ್ಯಲು ಅನುಮತಿ ನೀಡುವಂತೆ ಆಕೆಯ ಕುಟುಂಬ ಪರಿಪರಿಯಾಗಿ ಬೇಡಿಕೊಂಡರು ಕೂಡಾ ಅದಕ್ಕೆ ಸಮ್ಮತಿಸದ ಪೊಲೀಸರು ಮನೆಯವರನ್ನು ಬಂಧಿಸಿ ಮಧ್ಯರಾತ್ರಿಯೇ ಶವವನ್ನು ಸುಟ್ಟಿದ್ದರು. ಈ ದೃಶ್ಯವನ್ನು ರಾಷ್ಟ್ರೀಯ ಸುದ್ದಿ ಮಾಧ್ಯಮಗಳು ವರದಿ ಮಾಡಿದ್ದವು.

ಇದನ್ನೂ ಓದಿ: ಹತ್ರಾಸ್‌‌ ಅತ್ಯಾಚಾರ: ಸಂತ್ರಸ್ಥೆಯ ತಂದೆಗೆ ಧಮಕಿ ಹಾಕುತ್ತಿರುವ ಜಿಲ್ಲಾಧಿಕಾರಿ ವಿಡಿಯೋ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....