Homeಮುಖಪುಟಹತ್ರಾಸ್: ಶವ ಸುಟ್ಟಿದ್ದನ್ನು ಸುಪ್ರೀಂ‌ನಲ್ಲಿ ಸಮರ್ಥಿಸಿಕೊಂಡ ಯುಪಿ ಸರ್ಕಾರ!

ಹತ್ರಾಸ್: ಶವ ಸುಟ್ಟಿದ್ದನ್ನು ಸುಪ್ರೀಂ‌ನಲ್ಲಿ ಸಮರ್ಥಿಸಿಕೊಂಡ ಯುಪಿ ಸರ್ಕಾರ!

ಯುಪಿ ಸರ್ಕಾರದ ಅಫಿಡವಿಟ್‌ಗೆ ವಿರುದ್ಧವಾಗಿ ಸಂತ್ರಸ್ತ ಕುಟುಂಬವು ಶವ ನೀಡುವಂತೆ ಗೋಗರೆಯುತ್ತಿರುವ ಮತ್ತು ಹತ್ರಾಸ್ ಜಿಲ್ಲಾಧಿಕಾರಿ ಸಂತ್ರಸ್ತೆಗೆ ತಂದೆಗೆ ಧಮಕಿ ಹಾಕುತ್ತಿರುವ ವಿಡಿಯೋಗಳು ವೈರಲ್ ಆಗಿದ್ದವು. 

- Advertisement -
- Advertisement -

ಹತ್ರಾಸ್‌‌ನಲ್ಲಿ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟಿದ್ದ ದಲಿತ ಯುವತಿಯ ಶವವನ್ನು ’ರಾಜ್ಯದಲ್ಲಿ ದೊಡ್ಡ ಪ್ರಮಾಣದ ಹಿಂಸಾಚಾರ ನಡೆಯುವುದನ್ನು ತಪ್ಪಿಸುವುದಕ್ಕಾಗಿ ಬೇಕಾಗಿಯೇ’ ರಾತ್ರೋ ರಾತ್ರಿ ಸುಟ್ಟಿದ್ದೇವೆ ಎಂದು ಗುಪ್ತಚರ ಇಲಾಖೆಯ ಮಾಹಿತಿ ಉಲ್ಲೇಖಿಸಿ ಸುಪ್ರೀಂ ಕೋರ್ಟ್‌ನಲ್ಲಿ ಉತ್ತರ ಪ್ರದೇಶ ಸರ್ಕಾರ ಸಮರ್ಥನೆ ಮಾಡಿಕೊಂಡಿದೆ

ಉತ್ತರ ಪ್ರದೇಶ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ನೀಡಿದ ಅಫಿಡವಿಟ್‌ನಲ್ಲಿ, “ಬಾಬರಿ ಮಸೀದಿ ತೀರ್ಪು ಬರುತ್ತಿದ್ದರಿಂದ ಜಿಲ್ಲೆಯಲ್ಲಿ ಹೈಅಲರ್ಟ್ ಘೋಷನೆಯಾಗಿತ್ತು. ಹಾಗಾಗಿ ಮುಂಜಾನೆ 2.30 ರಲ್ಲಿ ಅಂತ್ಯಕ್ರಿಯೆ ನಡೆಸಿದ್ದೇವೆ” ಎಂದು ಸಮರ್ಥಿಸಿಕೊಂಡಿದೆ.

ಇದನ್ನೂ ಓದಿ: ಹತ್ರಾಸ್‌: ಸಂತ್ರಸ್ಥೆಯ ಗುಪ್ತಾಂಗದಲ್ಲಿ ಆಳವಾದ ಗಾಯವಿದೆ; ಫೋರೆನ್ಸಿಕ್ ವರದಿ

“ಇಡೀ ಪ್ರಕರಣಕ್ಕೆ ಜಾತಿ/ಕೋಮು ಬಣ್ಣವನ್ನು ನೀಡಲಾಗುತ್ತಿದೆ ಹಾಗೂ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಧರಣಿ ನಡೆಯುತ್ತಿರುವ ಬಗ್ಗೆ ಸೆಪ್ಟೆಂಬರ್ 29 ರ ಬೆಳಿಗ್ಗೆಯಿಂದಲೆ ಹತ್ರಾಸ್‌ನಲ್ಲಿನ ಜಿಲ್ಲಾಡಳಿತವು ಹಲವಾರು ಗುಪ್ತಚರ ಮಾಹಿತಿಯನ್ನು ಪಡೆದಿತ್ತು” ಎಂದು ಉತ್ತರ ಪ್ರದೇಶ ಹೇಳಿದೆ.

ರಾಜಕೀಯ ಪಕ್ಷಗಳ ಬೆಂಬಲಿಗರೊಂದಿಗೆ ಎರಡೂ ಸಮುದಾಯಗಳ/ಜಾತಿಗಳ ಲಕ್ಷಾಂತರ ಪ್ರತಿಭಟನಾಕಾರರು ಹಾಗೂ ಮಾಧ್ಯಮಗಳು ಮರುದಿನ ಬೆಳಿಗ್ಗೆ ಹಳ್ಳಿಯಲ್ಲಿ ಒಟ್ಟುಗೂಡುತ್ತಾರೆ ಎಂಬ ಮಾಹಿತಿ ಸರ್ಕಾರಕ್ಕೆ ಲಭಿಸಿತ್ತು ಮತ್ತು ಇದು ಹಿಂಸಾಚಾರಕ್ಕೆ ಹಾಗೂ ಕಾನೂನು ಸುವ್ಯವಸ್ಥೆಗೆ ದಕ್ಕೆ ತರಬಹುದಾಗಿತ್ತು ಎಂದು ಸರ್ಕಾರ ಹೇಳಿದೆ.

ಅಷ್ಟೇ ಅಲ್ಲದೆ ಬಾಬ್ರಿ ಮಸೀದಿ ತೀರ್ಪು ಮತ್ತು ಕೊರೊನಾ ವೈರಸ್ ಸುರಕ್ಷತಾ ನಿಯಮಗಳಿಂದಾಗಿ ಅಲರ್ಟ್ ಕೂಡಾ ಇತ್ತು ಎಂದು ತನ್ನ ಅಫಿಡವಿಟ್‌ನಲ್ಲಿ ತಿಳಿಸಿದೆ.

“ಇಂತಹ ಅಸಾಮಾನ್ಯ ಮತ್ತು ತೀವ್ರವಾದ ಸನ್ನಿವೇಶದಲ್ಲಿ, ಬೆಳಿಗ್ಗೆ ನಡೆಯುವ ದೊಡ್ಡ ಪ್ರಮಾಣದ ಹಿಂಸಾಚಾರವನ್ನು ತಪ್ಪಿಸಲು ಬೇಕಾಗಿಯೇ, ಯುವತಿ ಮೃತಪಟ್ಟು ಆಕೆಯ ಮರಣೋತ್ತರ ಪರೀಕ್ಷೆಯ 20 ಗಂಟೆಗಳ ನಂತರ ಎಲ್ಲಾ ಧಾರ್ಮಿಕ ವಿಧಿಗಳೊಂದಿಗೆ ಸಂತ್ರಸ್ತ ಕುಟುಂಬದ ಮನವೊಲಿಸಿ ಜಿಲ್ಲಾಡಳಿತವು ನಿರ್ಧಾರ ತೆಗೆದುಕೊಂಡಿತ್ತು” ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿದೆ.

ಇದನ್ನೂ ಓದಿ: ಬಹುಜನರಿಗೆ ಬಂದೂಕು ನೀಡಿ: ಹತ್ರಾಸ್‌ಗೆ ಹೊರಟ ಭೀಮ್ ಆರ್ಮಿ ಮುಖ್ಯಸ್ಥ ಆಜಾದ್

“ಕೆಲವು ಪಟ್ಟಭದ್ರ ಹಿತಾಸಕ್ತಿಗಳಿಂದ ಉಂಟಾಗುವ ಯೋಜಿತ ಜಾತಿ ಸಂಘರ್ಷವನ್ನು ತಪ್ಪಿಸಲು ಮಾತ್ರವೆ ಶವಸಂಸ್ಕಾರವನ್ನು ತರಾತುರಿಯಲ್ಲಿ ಮಾಡಲಾಗಿತ್ತೇ ಹೊರತು, ಯಾವುದೇ ಕೆಟ್ಟ ಉದ್ದೇಶವಿಲ್ಲ” ಎಂದು ಅದು ನ್ಯಾಯಾಲಯಕ್ಕೆ ತಿಳಿಸಿದೆ.

ಕಳೆದ ಮಂಗಳವಾರ ಕುಟುಂಬದ ಅನುಪಸ್ಥಿತಿಯಲ್ಲಿ ಪೊಲೀಸರು ದಲಿತ ಯುವತಿಯ ದೇಹವನ್ನು ಸುಟ್ಟಿದ್ದು ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿದೆ. ಯುಪಿ ಸರ್ಕಾರ ಸುಪ್ರೀಂನಲ್ಲಿ ಸಲ್ಲಿಸಿರುವ ಅಫಿಡವಿಡ್‌ಗೆ ವಿರುದ್ಧವಾಗಿ ಸಂತ್ರಸ್ತ ಕುಟುಂಬವು ಶವ ನೀಡುವಂತೆ ಗೋಗರೆಯುತ್ತಿರುವ ಮತ್ತು ಹತ್ರಾಸ್ ಜಿಲ್ಲಾಧಿಕಾರಿ ಸಂತ್ರಸ್ತೆಗೆ ತಂದೆಗೆ ಧಮಕಿ ಹಾಕುತ್ತಿರುವ ವಿಡಿಯೋಗಳು ವೈರಲ್ ಆಗಿದ್ದವು.

ಸೆಪ್ಟೆಂಬರ್ 14 ರಂದು ತನ್ನ ಗ್ರಾಮದ ನಾಲ್ಕು ಮೇಲ್ಜಾತಿಯವರಿಂದ ಹಲ್ಲೆ ಮತ್ತು ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಗಂಭೀರ ಗಾಯಗಳಿಂದಾಗಿ ದಲಿತ ಯುವತಿ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಇದರ ನಂತರ ಯುಪಿ ಪೊಲೀಸರು ಯುವತಿಯ ಶವವನ್ನು ತೆಗೆದುಕೊಂಡು ಹತ್ರಾಸ್‌ಗೆ ಕೊಂಡೊಯ್ದಿದ್ದರು, ಶವವನ್ನು ಮನೆಗೆ ಕೊಂಡೊಯ್ಯಲು ಅನುಮತಿ ನೀಡುವಂತೆ ಆಕೆಯ ಕುಟುಂಬ ಪರಿಪರಿಯಾಗಿ ಬೇಡಿಕೊಂಡರು ಕೂಡಾ ಅದಕ್ಕೆ ಸಮ್ಮತಿಸದ ಪೊಲೀಸರು ಮನೆಯವರನ್ನು ಬಂಧಿಸಿ ಮಧ್ಯರಾತ್ರಿಯೇ ಶವವನ್ನು ಸುಟ್ಟಿದ್ದರು. ಈ ದೃಶ್ಯವನ್ನು ರಾಷ್ಟ್ರೀಯ ಸುದ್ದಿ ಮಾಧ್ಯಮಗಳು ವರದಿ ಮಾಡಿದ್ದವು.

ಇದನ್ನೂ ಓದಿ: ಹತ್ರಾಸ್‌‌ ಅತ್ಯಾಚಾರ: ಸಂತ್ರಸ್ಥೆಯ ತಂದೆಗೆ ಧಮಕಿ ಹಾಕುತ್ತಿರುವ ಜಿಲ್ಲಾಧಿಕಾರಿ ವಿಡಿಯೋ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...