Homeಮುಖಪುಟಹತ್ರಾಸ್: ಶವ ಸುಟ್ಟಿದ್ದನ್ನು ಸುಪ್ರೀಂ‌ನಲ್ಲಿ ಸಮರ್ಥಿಸಿಕೊಂಡ ಯುಪಿ ಸರ್ಕಾರ!

ಹತ್ರಾಸ್: ಶವ ಸುಟ್ಟಿದ್ದನ್ನು ಸುಪ್ರೀಂ‌ನಲ್ಲಿ ಸಮರ್ಥಿಸಿಕೊಂಡ ಯುಪಿ ಸರ್ಕಾರ!

ಯುಪಿ ಸರ್ಕಾರದ ಅಫಿಡವಿಟ್‌ಗೆ ವಿರುದ್ಧವಾಗಿ ಸಂತ್ರಸ್ತ ಕುಟುಂಬವು ಶವ ನೀಡುವಂತೆ ಗೋಗರೆಯುತ್ತಿರುವ ಮತ್ತು ಹತ್ರಾಸ್ ಜಿಲ್ಲಾಧಿಕಾರಿ ಸಂತ್ರಸ್ತೆಗೆ ತಂದೆಗೆ ಧಮಕಿ ಹಾಕುತ್ತಿರುವ ವಿಡಿಯೋಗಳು ವೈರಲ್ ಆಗಿದ್ದವು. 

- Advertisement -
- Advertisement -

ಹತ್ರಾಸ್‌‌ನಲ್ಲಿ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟಿದ್ದ ದಲಿತ ಯುವತಿಯ ಶವವನ್ನು ’ರಾಜ್ಯದಲ್ಲಿ ದೊಡ್ಡ ಪ್ರಮಾಣದ ಹಿಂಸಾಚಾರ ನಡೆಯುವುದನ್ನು ತಪ್ಪಿಸುವುದಕ್ಕಾಗಿ ಬೇಕಾಗಿಯೇ’ ರಾತ್ರೋ ರಾತ್ರಿ ಸುಟ್ಟಿದ್ದೇವೆ ಎಂದು ಗುಪ್ತಚರ ಇಲಾಖೆಯ ಮಾಹಿತಿ ಉಲ್ಲೇಖಿಸಿ ಸುಪ್ರೀಂ ಕೋರ್ಟ್‌ನಲ್ಲಿ ಉತ್ತರ ಪ್ರದೇಶ ಸರ್ಕಾರ ಸಮರ್ಥನೆ ಮಾಡಿಕೊಂಡಿದೆ

ಉತ್ತರ ಪ್ರದೇಶ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ನೀಡಿದ ಅಫಿಡವಿಟ್‌ನಲ್ಲಿ, “ಬಾಬರಿ ಮಸೀದಿ ತೀರ್ಪು ಬರುತ್ತಿದ್ದರಿಂದ ಜಿಲ್ಲೆಯಲ್ಲಿ ಹೈಅಲರ್ಟ್ ಘೋಷನೆಯಾಗಿತ್ತು. ಹಾಗಾಗಿ ಮುಂಜಾನೆ 2.30 ರಲ್ಲಿ ಅಂತ್ಯಕ್ರಿಯೆ ನಡೆಸಿದ್ದೇವೆ” ಎಂದು ಸಮರ್ಥಿಸಿಕೊಂಡಿದೆ.

ಇದನ್ನೂ ಓದಿ: ಹತ್ರಾಸ್‌: ಸಂತ್ರಸ್ಥೆಯ ಗುಪ್ತಾಂಗದಲ್ಲಿ ಆಳವಾದ ಗಾಯವಿದೆ; ಫೋರೆನ್ಸಿಕ್ ವರದಿ

“ಇಡೀ ಪ್ರಕರಣಕ್ಕೆ ಜಾತಿ/ಕೋಮು ಬಣ್ಣವನ್ನು ನೀಡಲಾಗುತ್ತಿದೆ ಹಾಗೂ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಧರಣಿ ನಡೆಯುತ್ತಿರುವ ಬಗ್ಗೆ ಸೆಪ್ಟೆಂಬರ್ 29 ರ ಬೆಳಿಗ್ಗೆಯಿಂದಲೆ ಹತ್ರಾಸ್‌ನಲ್ಲಿನ ಜಿಲ್ಲಾಡಳಿತವು ಹಲವಾರು ಗುಪ್ತಚರ ಮಾಹಿತಿಯನ್ನು ಪಡೆದಿತ್ತು” ಎಂದು ಉತ್ತರ ಪ್ರದೇಶ ಹೇಳಿದೆ.

ರಾಜಕೀಯ ಪಕ್ಷಗಳ ಬೆಂಬಲಿಗರೊಂದಿಗೆ ಎರಡೂ ಸಮುದಾಯಗಳ/ಜಾತಿಗಳ ಲಕ್ಷಾಂತರ ಪ್ರತಿಭಟನಾಕಾರರು ಹಾಗೂ ಮಾಧ್ಯಮಗಳು ಮರುದಿನ ಬೆಳಿಗ್ಗೆ ಹಳ್ಳಿಯಲ್ಲಿ ಒಟ್ಟುಗೂಡುತ್ತಾರೆ ಎಂಬ ಮಾಹಿತಿ ಸರ್ಕಾರಕ್ಕೆ ಲಭಿಸಿತ್ತು ಮತ್ತು ಇದು ಹಿಂಸಾಚಾರಕ್ಕೆ ಹಾಗೂ ಕಾನೂನು ಸುವ್ಯವಸ್ಥೆಗೆ ದಕ್ಕೆ ತರಬಹುದಾಗಿತ್ತು ಎಂದು ಸರ್ಕಾರ ಹೇಳಿದೆ.

ಅಷ್ಟೇ ಅಲ್ಲದೆ ಬಾಬ್ರಿ ಮಸೀದಿ ತೀರ್ಪು ಮತ್ತು ಕೊರೊನಾ ವೈರಸ್ ಸುರಕ್ಷತಾ ನಿಯಮಗಳಿಂದಾಗಿ ಅಲರ್ಟ್ ಕೂಡಾ ಇತ್ತು ಎಂದು ತನ್ನ ಅಫಿಡವಿಟ್‌ನಲ್ಲಿ ತಿಳಿಸಿದೆ.

“ಇಂತಹ ಅಸಾಮಾನ್ಯ ಮತ್ತು ತೀವ್ರವಾದ ಸನ್ನಿವೇಶದಲ್ಲಿ, ಬೆಳಿಗ್ಗೆ ನಡೆಯುವ ದೊಡ್ಡ ಪ್ರಮಾಣದ ಹಿಂಸಾಚಾರವನ್ನು ತಪ್ಪಿಸಲು ಬೇಕಾಗಿಯೇ, ಯುವತಿ ಮೃತಪಟ್ಟು ಆಕೆಯ ಮರಣೋತ್ತರ ಪರೀಕ್ಷೆಯ 20 ಗಂಟೆಗಳ ನಂತರ ಎಲ್ಲಾ ಧಾರ್ಮಿಕ ವಿಧಿಗಳೊಂದಿಗೆ ಸಂತ್ರಸ್ತ ಕುಟುಂಬದ ಮನವೊಲಿಸಿ ಜಿಲ್ಲಾಡಳಿತವು ನಿರ್ಧಾರ ತೆಗೆದುಕೊಂಡಿತ್ತು” ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿದೆ.

ಇದನ್ನೂ ಓದಿ: ಬಹುಜನರಿಗೆ ಬಂದೂಕು ನೀಡಿ: ಹತ್ರಾಸ್‌ಗೆ ಹೊರಟ ಭೀಮ್ ಆರ್ಮಿ ಮುಖ್ಯಸ್ಥ ಆಜಾದ್

“ಕೆಲವು ಪಟ್ಟಭದ್ರ ಹಿತಾಸಕ್ತಿಗಳಿಂದ ಉಂಟಾಗುವ ಯೋಜಿತ ಜಾತಿ ಸಂಘರ್ಷವನ್ನು ತಪ್ಪಿಸಲು ಮಾತ್ರವೆ ಶವಸಂಸ್ಕಾರವನ್ನು ತರಾತುರಿಯಲ್ಲಿ ಮಾಡಲಾಗಿತ್ತೇ ಹೊರತು, ಯಾವುದೇ ಕೆಟ್ಟ ಉದ್ದೇಶವಿಲ್ಲ” ಎಂದು ಅದು ನ್ಯಾಯಾಲಯಕ್ಕೆ ತಿಳಿಸಿದೆ.

ಕಳೆದ ಮಂಗಳವಾರ ಕುಟುಂಬದ ಅನುಪಸ್ಥಿತಿಯಲ್ಲಿ ಪೊಲೀಸರು ದಲಿತ ಯುವತಿಯ ದೇಹವನ್ನು ಸುಟ್ಟಿದ್ದು ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿದೆ. ಯುಪಿ ಸರ್ಕಾರ ಸುಪ್ರೀಂನಲ್ಲಿ ಸಲ್ಲಿಸಿರುವ ಅಫಿಡವಿಡ್‌ಗೆ ವಿರುದ್ಧವಾಗಿ ಸಂತ್ರಸ್ತ ಕುಟುಂಬವು ಶವ ನೀಡುವಂತೆ ಗೋಗರೆಯುತ್ತಿರುವ ಮತ್ತು ಹತ್ರಾಸ್ ಜಿಲ್ಲಾಧಿಕಾರಿ ಸಂತ್ರಸ್ತೆಗೆ ತಂದೆಗೆ ಧಮಕಿ ಹಾಕುತ್ತಿರುವ ವಿಡಿಯೋಗಳು ವೈರಲ್ ಆಗಿದ್ದವು.

ಸೆಪ್ಟೆಂಬರ್ 14 ರಂದು ತನ್ನ ಗ್ರಾಮದ ನಾಲ್ಕು ಮೇಲ್ಜಾತಿಯವರಿಂದ ಹಲ್ಲೆ ಮತ್ತು ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಗಂಭೀರ ಗಾಯಗಳಿಂದಾಗಿ ದಲಿತ ಯುವತಿ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಇದರ ನಂತರ ಯುಪಿ ಪೊಲೀಸರು ಯುವತಿಯ ಶವವನ್ನು ತೆಗೆದುಕೊಂಡು ಹತ್ರಾಸ್‌ಗೆ ಕೊಂಡೊಯ್ದಿದ್ದರು, ಶವವನ್ನು ಮನೆಗೆ ಕೊಂಡೊಯ್ಯಲು ಅನುಮತಿ ನೀಡುವಂತೆ ಆಕೆಯ ಕುಟುಂಬ ಪರಿಪರಿಯಾಗಿ ಬೇಡಿಕೊಂಡರು ಕೂಡಾ ಅದಕ್ಕೆ ಸಮ್ಮತಿಸದ ಪೊಲೀಸರು ಮನೆಯವರನ್ನು ಬಂಧಿಸಿ ಮಧ್ಯರಾತ್ರಿಯೇ ಶವವನ್ನು ಸುಟ್ಟಿದ್ದರು. ಈ ದೃಶ್ಯವನ್ನು ರಾಷ್ಟ್ರೀಯ ಸುದ್ದಿ ಮಾಧ್ಯಮಗಳು ವರದಿ ಮಾಡಿದ್ದವು.

ಇದನ್ನೂ ಓದಿ: ಹತ್ರಾಸ್‌‌ ಅತ್ಯಾಚಾರ: ಸಂತ್ರಸ್ಥೆಯ ತಂದೆಗೆ ಧಮಕಿ ಹಾಕುತ್ತಿರುವ ಜಿಲ್ಲಾಧಿಕಾರಿ ವಿಡಿಯೋ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...