Homeಮುಖಪುಟಸಿದ್ದಾರ್ಥ್ ವರದರಾಜನ್ - `ದಾಳಿಗಿದ್ದ ಟಾರ್ಗೆಟ್ ಮೂರು; ಗುರಿಗೆ ಸಿಕ್ಕಿದ್ದು ಒಂದು!'

ಸಿದ್ದಾರ್ಥ್ ವರದರಾಜನ್ – `ದಾಳಿಗಿದ್ದ ಟಾರ್ಗೆಟ್ ಮೂರು; ಗುರಿಗೆ ಸಿಕ್ಕಿದ್ದು ಒಂದು!’

- Advertisement -
- Advertisement -

ಸಿದ್ದಾರ್ಥ್ ವರದರಾಜನ್ (Thewire.in  ಸಂಸ್ಥಾಪಕ) |

ಭಾರತದ ವಿದೇಶಾಂಗ ಕಾರ್ಯದರ್ಶಿ, ಇದು ಮಿಲಿಟರಿ ದಾಳಿಯಲ್ಲ, ಸಂಭಾವ್ಯ ದಾಳಿ ತಡೆಗಟ್ಟಲು ನಡೆಸಿದ ದಾಳಿ’ ಎಂದು ಒತ್ತಿ ಹೇಳಿದಾಗ ಅವರ ಮನದಲ್ಲಿ ಅಂತರಾಷ್ಟ್ರೀಯ ಕಾನೂನು ಇತ್ತೇನೋ? ಆದರೆ, ಪಾಕಿಸ್ತಾನದ ಬಾಲಾಕೋಟ್‌ನಲ್ಲಿ ಇತ್ತೆನ್ನಲಾದ ಉಗ್ರರ ತರಬೇತಿ ಶಿಬಿರದ ಮೇಲಿನ ವಾಯುದಾಳಿಯನ್ನು ಪ್ರಾಮಾಣಿಕವಾಗಿ ಹೀಗೆ ವಿಶ್ಲೇಷಿಸಬಹುದು: ಮೂರು ವಿಭಿನ್ನ ’ಪ್ರೇಕ್ಷಕರಿಗೆ’ ಸಂದೇಶವೊಂದನ್ನು ನೀಡಲು ಉದ್ದೇಶಿಸಿದ ಪ್ರತೀಕಾರದ ಕ್ರಮ…

  • ಅದರ ಮಿಲಿಟರಿ ಉದ್ದೇಶ: ಪಾಕಿಸ್ತಾನ ನಿಮಗೆ ಒದಗಿಸಿರುವ ಸುರಕ್ಷಿತ ತಾಣಗಳು ಅಷ್ಟು ಸುರಕ್ಷಿತವಲ್ಲ ಎಂದು ಜೈಶ್ ಮತ್ತು ಪಾಕಿಸ್ತಾನದ ಇತರ ಭಯೋತ್ಪಾದನಾ ಗುಂಪುಗಳಿಗೆ ಸಂದೇಶ ನೀಡುವುದು.
  • ಅದರ ರಾಜತಾಂತ್ರಿಕ ಉದ್ದೇಶ: ಭಯೋತ್ಪಾದನೆ ಬೆಂಬಲಿಸುವ ಪಾಕಿಸ್ತಾನಕ್ಕೆ ನೀವು ಎಂದಿನಂತೆ ಸಹಜವಾಗಿ ನೀಡುತ್ತಿರುವ ಬೆಂಬಲ ನೀಡಲಾಗದು ಎಂದು ಬಹುಪಾಲು ರಾಷ್ಟ್ರಗಳಿಗೆ ಸಂದೇಶ ನೀಡುವುದು.
  • ರಾಜಕೀಯ ಉದ್ದೇಶ: ಸಾರ್ವತ್ರಿಕ ಚುನಾವಣೆಯನ್ನು ತಲೆಯಲ್ಲಿ ಇಟ್ಟಕೊಂಡು, ’ದೇಶವನ್ನು ಕಾಪಾಡುವ ರಾಜಕೀಯ ಇಚ್ಛಾಶಕ್ತಿ ಇರುವ ನಾಯಕ ನರೇಂದ್ರ ಮೋದಿ’ ಎಂಬ ಸಂದೇಶವನ್ನು ದೇಶದ ಪ್ರೇಕ್ಷಕರಿಗೆ (ಪ್ರಜೆಗಳಿಗೆ) ನೀಡುವುದು.

ಇವುಗಳಲ್ಲಿ, ಕೇವಲ ರಾಜಕೀಯ ಉದ್ದೇಶ ಈಡೇರಿದೆ ಎಂದು ಮೋದಿ ಆತ್ಮವಿಶ್ವಾಸದಿಂದ ಹೇಳಬಹುದು.

ಭಾರತೀಯ ವಾಯುಸೇನೆಗೆ ಒಂದು ಕಠಿಣ ಮತ್ತು ಅಪಾಯಕಾರಿ ಕಾರ್ಯವನ್ನು ನೀಡಿದ ಸರ್ಕಾರ, ಈಗ ಆಪರೇಷನ್ ಸಕ್ಸಸ್ ಎಂದು ಘೋಷಿಸಿದೆ. ಆದರೆ ಪರಿಶೀಲನೆಗೆ ಅರ್ಹವಾದ ಯಾವುದೇ ಮಾಹಿತಿ ನೀಡದೇ ಇದನ್ನು ಮಾಡಲಾಗುತ್ತಿದೆ. ಭಾರತೀಯ ಮಾಧ್ಯಮಗಳಿಗೆ ತಲುಪಿದ ಅತಿರಂಜಿತ ಮಾಹಿತಿಗಳಿಂದಾಗಿ, ಪಾಕಿಸ್ತಾನ ಸುಮ್ಮನೇ ಕೂಡುವುದಂತೂ ಕಷ್ಟ.

2016ರ ಸರ್ಜಿಕಲ್ ದಾಳಿ ಮತ್ತು ಈಗಿನ ವಾಯುದಾಳಿ-ಈ ಎರಡರಿಂದಲೂ ಯಾವುದೇ ಹಾನಿಯಾಗಿಲ್ಲ ಎಂದು ಪಾಕಿಸ್ತಾನಿ ಸೇನೆ ಹೇಳಿದೆ. ಆದರೆ ಈ ಸಲ ರಾಜಕೀಯ ಮತ್ತು ಮಿಲಿಟರಿ ಎರಡೂ ವ್ಯವಸ್ಥೆಗಳು ಇದಕ್ಕೆ ಸೇನಾತ್ಮಕ ಪ್ರತಿಕ್ರಿಯೆ ಖಂಡಿತ ಎಂದು ಘೋಷಿಸಿವೆ. ಈ ಬೆದರಿಕೆಯನ್ನು ಹಗುರವಾಗಿ ಪರಿಗಣಿಸಲು ಯಾವ ಕಾರಣವೂ ಇಲ್ಲ.

ನಮ್ಮ ವಾಯುಸೇನೆಯ ಶಕ್ತಿ-ಸಾಮರ್ಥ್ಯಗಳ ಬಗ್ಗೆ ಎಂದಿಗೂ ಸಕಾರಾತ್ಮಕ ನಿಲುವೇ ಇದೆ. ಆದರೆ 1971ರ ನಂತರ ಮೊದಲ ಬಾರಿಗೆ ವಾಯುಸೇನೆಯನ್ನು ಗಡಿಯಾಚೆ ನುಗ್ಗಿಸುವ ಕೆಲಸ ಮಾಡಿದ್ದಾರೆ ಮೋದಿ.

ಹಿಂದಿನ ಸರ್ಕಾರಗಳು ನಿಯಂತ್ರಣ ರೇಖೆಗೆ ಹೊಂದಿಕೊಂಡಿರುವ ಮತ್ತು ಪಾಕಿಸ್ತಾನದೊಳಗೆ ಇರುವ ಉಗ್ರರ ನೆಲೆಗಳ ಮೇಲೆ ವಾಯುದಾಳಿಯ ಪ್ರಯೋಗದಿಂದ ದೂರ ಉಳಿದಿದ್ದವು. ಇದಕ್ಕೆ ಪಾಕಿಸ್ತಾನ ಅಣ್ವಸ್ತ್ರ ರಾಷ್ಟ್ರ ಎಂಬ ಭಯವಾಗಲೀ  ಅಥವಾ ರಾಜಕೀಯ ಇಚ್ಛಾಶಕ್ತಿಯ ಕೊರತೆಯಾಗಲೀ ಕಾರಣವಲ್ಲ. ಆದರೆ, ಗಡಿಯಾಚೆಯಿಂದ ಬರುವ ಭಯೋತ್ಪಾದನಾ ಬೆದರಿಕೆಯನ್ನು ಇಂತಹ ಕ್ರಮಗಳಿಂದ ತಟಸ್ಥಗೊಳಿಸಿವುದು ಅಸಾಧ್ಯ ಎಂಬ ಅರಿವು ಆ ಸರ್ಕಾರಗಳಿಗಿತ್ತು.

ಇದನ್ನು ಅರ್ಥ ಮಾಡಿಕೊಳ್ಳಲು, 2016 ಸೆಪ್ಟೆಂಬರ್‌ನ ಸರ್ಜಿಕಲ್ ದಾಳಿಯ ನಂತರದ ಬೆಳವಣಿಗೆಗಳನ್ನು ನೋಡಬಹುದು. ಪಾಕಿಸ್ತಾನ ಮೂಲದ ಉಗ್ರರ ಗುಂಪುಗಳಿಂದ ಭವಿಷ್ಯದಲ್ಲಿ ದಾಳಿಗಳನ್ನು ತಡೆಯಬಹುದೆಂಬ ನಿರೀಕ್ಷೆಯನ್ನು ಆ ಸರ್ಜಿಕಲ್ ದಾಳಿ ಹುಸಿಗೊಳಿಸಿತು. ಈ ವಿಷಯದಲ್ಲಿ ಅದು ಪುಟ್ಟಾಪೂರಾ ವಿಫಲವಾಯಿತು. ಆ ಸರ್ಜಿಕಲ್ ದಾಳಿಯ ನಂತರ ಉಗ್ರರ ದಾಳಿಗಳು ಹೆಚ್ಚಾದವು ಮತ್ತು 1989ರಲ್ಲಿ ಕಣಿವೆಯಲ್ಲಿ ಭಯೋತ್ಪಾದನೆ ಭುಗಿಲೆದ್ದ ನಂತರ ಅತಿ ಭಯಾನಕ ದಾಳಿ ಎನಿಸಿದ ಪುಲ್ವಾಮಾ ದಾಳಿಯೂ ಸಂಭವಿಸಿತು.

ಪಾಕಿಸ್ತಾನದಲ್ಲಿರುವ ಉಗ್ರರ ನೆಲೆ ಮೇಲೆ ದಾಳಿ ಮಾಡಲು ಯೋಚಿಸಿದ ಪ್ರಧಾನಿ ಮೋದಿ ಒಬ್ಬರೇ ಅಲ್ಲ. 2001ರಲ್ಲಿ ಸಂಸತ್ ಮೇಲೆ ದಾಳಿ ಆದಾಗ ವಾಜಪೇಯಿ ಮತ್ತು 2008ರಲ್ಲಿ ಮುಂಬೈ ಮೇಲೆ ದಾಳಿ ನಡೆದಾಗ ಮನಮೋಹನಸಿಂಗ್ ಕೂಡ ಯೋಚಿಸಿದ್ದರು. ಆದರೆ ಸುದೀರ್ಘ ಸಮಾಲೋಚನೆ ನಂತರ ಈ ಮಾರ್ಗದಿಂದ ಭಯೋತ್ಪಾದನೆ ತಡೆಯುವುದು ಅಸಾಧ್ಯ ಎಂಬ ಸತ್ಯವನ್ನು ಅರಿತಿದ್ದರು. ಮಾತುಕತೆ ಮತ್ತು ಭಯೋತ್ಪಾದನೆ ಎರಡೂ ಒಟ್ಟಿಗೆ ಸಾಧ್ಯವಿಲ್ಲ ಎಂಬುದು ಇವತ್ತಿನ ಮಂತ್ರವಾಗಿರಬಹುದು. ಆದರೆ ಭಯೋತ್ಪಾದನೆ ನಿಗ್ರಹಿಸುತ್ತಲೇ ಮಾತುಕತೆಯನ್ನು ಜಾರಿಯಲ್ಲಿಡುವ ಮೂಲಕ ವಾಜಪೇಯಿ ಮತ್ತು ಮನಮೋಹನಸಿಂಗ್ ಕಾಶ್ಮೀರವನ್ನು ಸಾಧ್ಯವಾದಷ್ಟು ಶಾಂತವಾಗಿಡಲು ಸಫಲರಾಗಿದ್ದರು.

ಮೋದಿ ಈಗ ಮಿಲಿಟರಿ ಕಾರ್ಡ್ ಆಟದ ಮೂಲಕ ಗ್ಯಾಂಬ್ಲಿಂಗ್ ಮಾಡಿದ್ದಾರೆ. ಕ್ಷುದ್ರ ಪಾಕಿಸ್ತಾನ ನಡೆಸುವ ಪ್ರತೀಕಾರವೂ ಅವರಿಗೆ ಶಕ್ತಿ ತುಂಬಬಹುದು. ಆದರೆ ಒಂದು ಕಾಲ ಊಹಿಸಿದ್ದಕ್ಕಿಂತ ಬೇಗನೆ ಬರಲಿದೆ- ಭಯೋತ್ಪಾದನೆಯ ಸಮಸ್ಯೆ ಮುಗಿದಿಲ್ಲ, ಬದಲಾಗಿ ಇನ್ನಷ್ಟು ಸಂಕೀರ್ಣಗೊಂಡಿದೆ ಮತ್ತು ನಿಯಂಯ್ರಣ ಮೀರುತ್ತಿದೆ ಎಂಬುದನ್ನು ಈ ದೇಶದ ಸಾಮಾನ್ಯ ನಾಗರಿಕರು ಅರಿಯುವ ಕಾಲ.

(ಭಾವಾನುವಾದ: ಮಲ್ಲಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...