Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌‌: ಪಂಜಾಬ್‌‌ನ ಈ ಮಹಿಳಾ ಅಧಿಕಾರಿ ಮೃತಪಟ್ಟಿದ್ದು ಅತ್ಯಾಚಾರದಿಂದಲ್ಲ, ರಸ್ತೆ ಅಫಘಾತದಿಂದ

ಫ್ಯಾಕ್ಟ್‌‌ಚೆಕ್‌‌: ಪಂಜಾಬ್‌‌ನ ಈ ಮಹಿಳಾ ಅಧಿಕಾರಿ ಮೃತಪಟ್ಟಿದ್ದು ಅತ್ಯಾಚಾರದಿಂದಲ್ಲ, ರಸ್ತೆ ಅಫಘಾತದಿಂದ

ಪಂಜಾಬ್‌ನ ಅಮೃತಸರದಲ್ಲಿ ಮಹಿಳಾ ಕಾನ್‌ಸ್ಟೇಬಲ್ ಸಾವಿನ ಬಗ್ಗೆ ಕಾಂಗ್ರೆಸ್‌ ಏಕೆ ಮಾತನಾಡುತ್ತಿಲ್ಲ’ ಎಂದು ಆರೋಪಿಸಿ ಹಲವಾರು ಪೋಸ್ಟ್‌ಗಳು ಹರಿದಾಡುತ್ತಿವೆ.

- Advertisement -
- Advertisement -

ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರ ಮೃತ ದೇಹದ ಫೋಟೋವೊಂದು, ’ಪಂಜಾಬ್‌‌ನಲ್ಲಿ ಮಹಿಳಾ ಪೊಲೀಸ್‌ ಒಬ್ಬರನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಲಾಗಿದೆ’ ಎಂಬ ಬರಹದೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಬಿಜೆಪಿ ಆಡಳಿತ ಇರುವ ಉತ್ತರ ಪ್ರದೇಶದಲ್ಲಿ ಹತ್ರಾಸ್‌ ಅತ್ಯಾಚಾರ ಘಟನೆಯನ್ನು ಪ್ರಶ್ನಿಸುತ್ತಿರುವ ಕಾಂಗ್ರೆಸ್‌ಗೆ ಪ್ರತಿಕ್ರಿಯೆಯಾಗಿ ಸಾಮಾಜಿಕ ಜಾಲತಾಣದಲ್ಲಿ ಇದನ್ನು ಹರಿಯಬಿಡಲಾಗುತ್ತಿದೆ. ವೈರಲ್ ಪೋಟೋದಲ್ಲಿ, ಪಂಜಾಬ್‌ನ ಅಮೃತಸರದಲ್ಲಿ ಮಹಿಳಾ ಕಾನ್‌ಸ್ಟೇಬಲ್ ಸಾವಿನ ಬಗ್ಗೆ ಕಾಂಗ್ರೆಸ್‌ ಏಕೆ ಮಾತನಾಡುತ್ತಿಲ್ಲ’ ಎಂದು ಆರೋಪಿಸಿ ಹಲವಾರು ಪೋಸ್ಟ್‌ಗಳು ಹರಿದಾಡುತ್ತಿವೆ.

ಇದನ್ನೂ ಓದಿ: ಬಾಲಿವುಡ್ ನಟಿ ಶ್ರೀದೇವಿಯ ಸಾವು ಸಹಜವಲ್ಲವೇ?

ಆರ್ಕೈವ್ ಇಲ್ಲಿದೆ

ಅತ್ಯಾಚಾರಕ್ಕೊಳಗಾದ ನಂತರ ಕಾನ್‌ಸ್ಟೆಬಲ್ ನೋಮಿಯನ್ನು ಕೊಲೆ ಮಾಡಲಾಗಿದೆ ಎಂದು ಪ್ರತಿಪಾದಿಸುವ ಹಲವಾರು ಪೋಸ್ಟ್‌ಗಲು ಸಾಮಾಜಿಕ ಜಾಲತಾಣದಲ್ಲಿ ಬಳಕೆದಾರರು ಹಂಚಿಕೊಳ್ಳುತ್ತಿದ್ದಾರೆ. ಈ ಅತ್ಯಾಚಾರದ ಬಗ್ಗೆ ಕಾಂಗ್ರೆಸ್ ಮುಖಂಡರಾದ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಮೌನವಾಗಿದ್ದಾರೆ ಎಂದು ಆರೋಪಿಸಲಾಗಿದೆ. ಅಂತಹ ಪೋಸ್ಟ್‌ಗಳ ಆರ್ಕೈವ್‌ಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ವೀಕ್ಷಿಸಬಹುದು.

ಫ್ಯಾಕ್ಟ್‌‌ಚೆಕ್

ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಈ ಪೋಟೋದಲ್ಲಿರುವ ಮಹಿಳಾ ಕಾನ್‌ಸ್ಟೆಬಲ್‌ ವಾಸ್ತವದಲ್ಲಿ ರಸ್ತೆ ಅಫಘಾತದಿಂದಾಗಿ ಸಾವಿಗೀಡಾಗಿದ್ದಾರೆ, ಇದು ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಅಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ರಿವರ್ಸ್ ಇಮೇಜ್ ಮೂಲಕ ಈ ವೈರಲ್ ಚಿತ್ರವನ್ನು ಹುಡುಕಾಡಿದರೆ ಹಿಂದಿ ದಿನಪತ್ರಿಕೆ ದೈನಿಕ್ ಸವೆರಾ ಟೈಮ್ಸ್‌‌ನ ವರದಿಯೊಂದನ್ನು ನೋಡಬಹುದಾಗಿದೆ. ಅದರ ವರದಿಯಲ್ಲಿ, ”ಅಮೃತಸರದಲ್ಲಿ ಮಹಿಳಾ ಕಾನ್‌ಸ್ಟೆಬಲ್‌ನ ಶವ ಪತ್ತೆಯಾಗಿದೆ ಎಂದು ತಿಳಿಸಲಾಗಿದೆ. ಈ ಕುರಿತು ಹಲವಾರು ವರದಿಗಳನ್ನು ನೋಡಬಹುದಾಗಿದೆ.

ಇದನ್ನೂ ಓದಿ: ಪ್ರಧಾನಿ ಉದ್ಘಾಟಿಸಿದ ಅಟಲ್ ಸುರಂಗ ಎಂದು ಅಮೇರಿಕಾ ಸುರಂಗದ ಚಿತ್ರ ಹಂಚಿಕೊಂಡ ಮಾಧ್ಯಮಗಳು!

ಟ್ರಿಬ್ಯೂನ್ ಇಂಡಿಯಾದ ಅಮೃತಸರದಿಂದ ಅಕ್ಟೋಬರ್‌ 1 ರಂದು ಮಾಡಿದ ವರದಿಯ ಪ್ರಕಾರ, “ನೋಮಿ ಎಂಬ ಮಹಿಳಾ ಪೊಲೀಸ್ ಕಾನ್‌ಸ್ಟೆಬಲ್‌‌ ಅವರ ಸ್ಕೂಟರ್‌‌ಗೆ ವೇಗದಿಂದ ಬಂದ ಕಾರೊಂದು ಸಂಗತ್ಪುರ ಗ್ರಾಮದ ಬಳಿ ಡಿಕ್ಕಿ ಹೊಡೆದ ಕಾರಣ ಅವರು ಮೃತಪಟ್ಟಿದ್ದಾರೆ” ಎಂದು ಹೇಳುತ್ತದೆ.

ಪೊಲೀಸ್ ಉಪ ಆಯುಕ್ತ ಮುಖ್ವಿಂದರ್ ಸಿಂಗ್ ಭುಲ್ಲರ್ ಅವರು ಮಹಿಳಾ ಕಾನ್‌ಸ್ಟೆಬಲ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ದೃಪಡಿಸಿದ್ದಾರೆಂದು ದಿ ಕ್ವಿಂಟ್ ವರದಿ ಮಾಡಿದೆ. ಅಪಘಾತದ ಕುರಿತು ಹೆಚ್ಚಿನ ತನಿಖೆ ನಡೆಸಲು ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವಂತೆ ಮಹಿಳಾ ಅಧಿಕಾರಿಯ ಮೇಲೆ ಅತ್ಯಾಚಾರ ನಡೆದಿಲ್ಲ. ಅವರು ರಸ್ತೆ ಅಪಘಾತದಿಂದಾಗಿ ಮೃತಪಟ್ಟಿದ್ದಾರೆ ಎಂದು ಈ ಮೂಲಕ ಸ್ಪಷ್ಟವಾಗುತ್ತದೆ.

ಇದನ್ನೂ ಓದಿ: ನರೇಂದ್ರ ಮೋದಿ ಗುಜರಾತ್‌ನಲ್ಲಿ ಕ್ರೂಸ್ ಹಡಗು ಸೇವೆಯನ್ನು ಪ್ರಾರಂಭಿಸಿದ್ದಾರೆಯೇ? ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...