Homeಮುಖಪುಟಹತ್ರಾಸ್: ಘಟನೆಯನ್ನು ’ಅಸಾಧಾರಣ ಮತ್ತು ಆಘಾತಕಾರಿ’ ಎಂದು ಕರೆದ ಸುಪ್ರೀಂ

ಹತ್ರಾಸ್: ಘಟನೆಯನ್ನು ’ಅಸಾಧಾರಣ ಮತ್ತು ಆಘಾತಕಾರಿ’ ಎಂದು ಕರೆದ ಸುಪ್ರೀಂ

ಪ್ರಕರಣದಲ್ಲಿ ಸಾಕ್ಷಿಗಳನ್ನು ಹೇಗೆ ರಕ್ಷಿಸಲಾಗುತ್ತಿದೆ ಎಂಬ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರಿಂ ಆದೇಶಿಸಿದೆ.

- Advertisement -
- Advertisement -

ಹತ್ರಾಸ್‌ನಲ್ಲಿ ನಡೆದ ದಲಿತ ಯುವತಿಯ ಮೇಲಿನ ಅತ್ಯಾಚಾರ ಮತ್ತು ಹತ್ಯೆಯನ್ನು ಸುಪ್ರೀಂ ಕೋರ್ಟ್ “ಅಸಾಧಾರಣ ಮತ್ತು ಆಘಾತಕಾರಿ” ಎಂದು ಕರೆದಿದ್ದು, ಪ್ರಕರಣದಲ್ಲಿ ಸಾಕ್ಷಿಗಳನ್ನು ಹೇಗೆ ರಕ್ಷಿಸಲಾಗುತ್ತಿದೆ ಎಂಬ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಆದೇಶಿಸಿದೆ.

ಪ್ರಕರಣವನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಎಸ್‌.ಎ ಬೊಬ್ಡೆ, “ಈ ಘಟನೆ ಅತ್ಯಂತ ಅಸಾಧಾರಣ ಮತ್ತು ಆಘಾತಕಾರಿ. ಹತ್ರಾಸ್ ಪ್ರಕರಣದ ಸಾಕ್ಷಿಯನ್ನು ಹೇಗೆ ರಕ್ಷಿಸಲಾಗಿದೆ ಎಂಬ ಅಫಿಡವಿಟನ್ನು ಮತ್ತು ಸಂತ್ರಸ್ತೆಯ ಕುಟುಂಬವು ವಕೀಲರನ್ನು ಆಯ್ಕೆ ಮಾಡಿದ್ದಾರಾ ಎಂಬ ಬಗ್ಗೆ ನೀವು ಕಂಡುಹಿಡಿಯಬೇಕೆಂದು ನಾವು ಬಯಸುತ್ತೇವೆ’’ ಉತ್ತರ ಪ್ರದೇಶ ಸರ್ಕಾರಕ್ಕೆ ಹೇಳಿದ್ದಾರೆ.

ಇದನ್ನೂ ಓದಿ: ಹತ್ರಾಸ್: ಶವ ಸುಟ್ಟಿದ್ದನ್ನು ಸುಪ್ರೀಂ‌ನಲ್ಲಿ ಸಮರ್ಥಿಸಿಕೊಂಡ ಯುಪಿ ಸರ್ಕಾರ!

ಯುಪಿ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಈ ಘಟನೆಗೆ ವಿಭಿನ್ನ ನಿರೂಪಣೆಗಳನ್ನು ನೀಡಲಾಗುತ್ತಿದ್ದು, ಸುಪ್ರೀಂ ಕೋರ್ಟ್ ತನಿಖೆಯನ್ನು ನೋಡಿಕೊಳ್ಳಬೇಕು ಎಂದು ಕೇಳಿಕೊಂಡರು.

ಫೋರೆನ್ಸಿಕ್

ಅರ್ಜಿದಾರರ ಪರವಾಗಿ ವಾದಿಸಿದ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಸಾಕ್ಷಿಗಳಿಗೆ ರಕ್ಷಣೆ ಮತ್ತು ಪ್ರಕರಣದ ವಿಚಾರಣೆಯನ್ನು ಯುಪಿಯಿಂದ ಬೇರೆಡೆಗೆ ವರ್ಗಾಯಿಸಲು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಾಲಿಟರ್‌ ಜನರಲ್ ತುಷಾರ್‌ ಮೆಹ್ತಾ ’ಸಾಕ್ಷಿಗಳನ್ನು ಈಗಾಗಲೇ ರಕ್ಷಿಸಲಾಗಿದೆ. ಸಾಕ್ಷಿಗಳ ರಕ್ಷಣೆಗಾಗಿ ಕಾನೂನು ಅಗತ್ಯವಿಲ್ಲ. ಅವರನ್ನು ರಕ್ಷಿಸಲಾಗುತ್ತದೆ” ಎಂದು ಹೇಳಿದರು.

ಇದನ್ನೂ ಓದಿ: ’ಯುಪಿ, ಬಿಹಾರದಂತೆ ಪ.ಬಂಗಾಳವೂ ಮಾಫಿಯಾ ರಾಜ್ಯವಾಗುತ್ತಿದೆ’- ಬಿಜೆಪಿ ನಾಯಕ

ಯುಪಿ ಸರ್ಕಾರ ಮತ್ತು ರಾಜ್ಯದ ಅಧಿಕಾರಿಗಳು ಆರೋಪಿಗಳ ವಿರುದ್ಧ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿ, ಸಾಮಾಜಿಕ ಕಾರ್ಯಕರ್ತ ಸತ್ಯಮಾ ದುಬೆ, ವಕೀಲರಾದ ವಿಶಾಲ್ ಠಾಕ್ರೆ ಮತ್ತು ರುದ್ರ ಪ್ರತಾಪ್ ಯಾದವ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಯುತ್ತಿದೆ.

ಹತ್ರಾಸ್‌‌ನಲ್ಲಿ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟಿದ್ದ ದಲಿತ ಯುವತಿಯ ಶವವನ್ನು ’ರಾಜ್ಯದಲ್ಲಿ ದೊಡ್ಡ ಪ್ರಮಾಣದ ಹಿಂಸಾಚಾರ ನಡೆಯುವುದನ್ನು ತಪ್ಪಿಸುವುದಕ್ಕಾಗಿ ಬೇಕಾಗಿಯೇ ರಾತ್ರೋ ರಾತ್ರಿ ಸುಟ್ಟಿದ್ದೇವೆ’ ಎಂದು ಗುಪ್ತಚರ ಇಲಾಖೆಯ ಮಾಹಿತಿ ಉಲ್ಲೇಖಿಸಿ ಸುಪ್ರೀಂ ಕೋರ್ಟ್‌ನಲ್ಲಿ ಉತ್ತರ ಪ್ರದೇಶ ಸರ್ಕಾರ ಸಮರ್ಥನೆ ಮಾಡಿಕೊಂಡಿದೆ.

PC:The Quint

ಉತ್ತರ ಪ್ರದೇಶ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ನೀಡಿದ ಅಫಿಡವಿಟ್‌ನಲ್ಲಿ, “ಬಾಬರಿ ಮಸೀದಿ ತೀರ್ಪು ಬರುತ್ತಿದ್ದರಿಂದ ಜಿಲ್ಲೆಯಲ್ಲಿ ಹೈಅಲರ್ಟ್ ಘೋಷನೆಯಾಗಿತ್ತು. ಹಾಗಾಗಿ ಮುಂಜಾನೆ 2.30 ರಲ್ಲಿ ಅಂತ್ಯಕ್ರಿಯೆ ನಡೆಸಿದ್ದೇವೆ” ಎಂದಿದೆ.

ಇದನ್ನೂ ಓದಿ: ಬಾಬ್ರಿ ಮಸೀದಿ ಕೆಡವುದರ ಹಿಂದೆ ಯಾರ ಸಂಚು ಇಲ್ಲ ಎಂಬ ತೀರ್ಮಾನಕ್ಕೆ ನ್ಯಾಯಾಧೀಶರು ಕೊಟ್ಟ10 ಕಾರಣಗಳು!

“ಇಡೀ ಪ್ರಕರಣಕ್ಕೆ ಜಾತಿ/ಕೋಮು ಬಣ್ಣವನ್ನು ನೀಡಲಾಗುತ್ತಿದೆ ಹಾಗೂ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಧರಣಿ ನಡೆಯುತ್ತಿರುವ ಬಗ್ಗೆ ಸೆಪ್ಟೆಂಬರ್ 29 ರ ಬೆಳಿಗ್ಗೆಯಿಂದಲೆ ಹತ್ರಾಸ್‌ನಲ್ಲಿನ ಜಿಲ್ಲಾಡಳಿತವು ಹಲವಾರು ಗುಪ್ತಚರ ಮಾಹಿತಿಯನ್ನು ಪಡೆದಿತ್ತು” ಎಂದು ಉತ್ತರ ಪ್ರದೇಶ ಹೇಳಿದೆ.

ರಾಜಕೀಯ ಪಕ್ಷಗಳ ಬೆಂಬಲಿಗರೊಂದಿಗೆ ಎರಡೂ ಸಮುದಾಯಗಳ/ಜಾತಿಗಳ ಲಕ್ಷಾಂತರ ಪ್ರತಿಭಟನಾಕಾರರು ಹಾಗೂ ಮಾಧ್ಯಮಗಳು ಮರುದಿನ ಬೆಳಿಗ್ಗೆ ಹಳ್ಳಿಯಲ್ಲಿ ಒಟ್ಟುಗೂಡುತ್ತಾರೆ ಎಂಬ ಮಾಹಿತಿ ಸರ್ಕಾರಕ್ಕೆ ಲಭಿಸಿತ್ತು ಮತ್ತು ಇದು ಹಿಂಸಾಚಾರಕ್ಕೆ ಹಾಗೂ ಕಾನೂನು ಸುವ್ಯವಸ್ಥೆಗೆ ದಕ್ಕೆ ತರಬಹುದಾಗಿತ್ತು ಎಂದು ಸರ್ಕಾರ ಹೇಳಿದೆ.

ಅಷ್ಟೇ ಅಲ್ಲದೆ ಬಾಬ್ರಿ ಮಸೀದಿ ತೀರ್ಪು ಮತ್ತು ಕೊರೊನಾ ವೈರಸ್ ಸುರಕ್ಷತಾ ನಿಯಮಗಳಿಂದಾಗಿ ಅಲರ್ಟ್ ಕೂಡಾ ಇತ್ತು ಎಂದು ತನ್ನ ಅಫಿಡವಿಟ್‌ನಲ್ಲಿ ತಿಳಿಸಿದೆ.

ಇದನ್ನೂ ಓದಿ: ಡಿಸೆಂಬರ್‌ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು: ತೀರ್ಪು ವಿರುದ್ದ ಟ್ವಿಟ್ಟರ್‌‌ನಲ್ಲಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...