Homeಮುಖಪುಟಒಳಮೀಸಲಾತಿ: ಬಾಣಲೆಯಿಂದ ಬೆಂಕಿಗೆ ಹಾರುವುದು ಬೇಡ.. - ಕರಿಯಪ್ಪ ಗುಡಿಮನಿ

ಒಳಮೀಸಲಾತಿ: ಬಾಣಲೆಯಿಂದ ಬೆಂಕಿಗೆ ಹಾರುವುದು ಬೇಡ.. – ಕರಿಯಪ್ಪ ಗುಡಿಮನಿ

ಬೆಳಗಾವಿ ಅಧಿವೇಶನದಲ್ಲಿ ಒಳಮೀಸಲಾತಿ ಪರ ಹೋರಾಟಗಾರರ ಮೈತುಂಬಾ ಬಾಸುಂಡೆ ಬರುವಂತೆ ಲಾಠಿ ಚಾರ್ಜ್ ಮಾಡಿಸಿದ ಸರ್ಕಾರ ಯಾರದಾಗಿತ್ತು?

- Advertisement -
- Advertisement -

ಆದಿಮ ಕಾಲದ ಮಾದಿಗರು ಸಮಾಜದ ಬ್ರಾಹ್ಮಣ್ಯೀಕರಣದಿಂದ ಅಸ್ಪೃಶ್ಯರಾದರು. ಗಾಂಧೀಜಿಯವರಿಂದ ಹರಿಜನರಾದರು. ಅಂಬೇಡ್ಕರರಿಂದ ಸ್ವಾಭಿಮಾನಿ ದಲಿತರಾದರು. ಹಲವು ಪರಿಶಿಷ್ಟ ಜಾತಿಗಳಲ್ಲಿಂದು ಮಾದಿಗರು ಸಹ ಒಂದು ಸಮುದಾಯವಾಗಿದೆ.

ಮಾದಿಗ ಸಮುದಾಯವು ಸ್ವತಂತ್ರಪೂರ್ವದಲ್ಲಿ ಜಂಡಾ ಹಿಡಿದು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಸಮುದಾಯವಾಗಿದೆ. ಆದರೆ ಸ್ವಾತಂತ್ರ್ಯದ ನಂತರದ ರಾಜಕೀಯದಲ್ಲಿ ಮಾದಿಗ ಸಮುದಾಯವನ್ನು ಬೆಲೆಯಿಲ್ಲದ, ನೆಲೆಯಿಲ್ಲದ ಸಮುದಾಯವನ್ನಾಗಿ ಮಾಡಲಾಗಿದೆ. ಇಂದಿಗೂ ಕೃಷಿ ಭೂಮಿ ರಹಿತರಾಗಿರುವ ಮಾದಿಗ ಸಮುದಾಯ ಜಮೀನ್ದಾರರ ಕೈ ಕೆಳಗೆ ನರಳುತ್ತಿದೆ. ಉತ್ತರ ಕರ್ನಾಟಕದಲ್ಲಂತು ಇದು ಎದ್ದು ಕಾಣುವ ಸಂಗತಿಯಾಗಿದೆ. ಬೆನ್ನಿಗೆ ನಿಲ್ಲದ ಸಹೋದರ ಸಮುದಾಯಗಳು, ಕೈಗೆ ಅಧಿಕಾರ ನೀಡದ ರಾಜಕೀಯ ಪಕ್ಷಗಳು, ನಿಷ್ಟೆ ಇಲ್ಲದ ಸಮುದಾಯದ ಮುಖಂಡರು, ಅಸ್ಪೃಶ್ಯತೆಯನ್ನು ಮೆರೆಯುವ ಮೇಲ್ವರ್ಗಗಳು. ಹೀಗೆ ಎತ್ತ ನೋಡಿದರೂ ಅಡ್ಡಗಾಲುಗಳು. ನಮ್ಮ ಹಾಸಿಗೆಯಲ್ಲಿ ನಾವೇ ಕಾಲು ಚಾಚದ ಸ್ಥಿತಿ.

ಇಂತಹ ಪರಿಸ್ಥಿತಿಯಲ್ಲಿ ಎಂದಿಗೂ ಮಾದಿಗರ ಪರ ನಿಲ್ಲದ ವಿವಿಧ ಭ್ರಷ್ಟ ರಾಜಕಾರಣಿಗಳ ಮನೆಯ ಹೆಬ್ಬಾಗಿಲುಗಳಲ್ಲಿ ನಮ್ಮ ಸಮುದಾಯದ ಮುಖಂಡರುಗಳಿಂದು ನಿಂತಿದ್ದಾರೆ. ಮತ್ತಷ್ಟೂ ಹಾದಿ ತಪ್ಪಿ ಅಸ್ಪೃಶ್ಯತೆಯನ್ನು ನಮ್ಮ ಮಾದಿಗರ ಮೇಲೆ ಹೇರಿದ ಬ್ರಾಹ್ಮಣ್ಯದ ತವರು ಸ್ಥಾನ ಸಂಘಪರಿವಾರ, ಆರೆಸ್ಸೆಸ್ ದ್ವಾರದ ಮುಂದೆ ಹೋರಾಟ ಮಾಡದೇ, ಒಳಮೀಸಲಾತಿಯ ಧರ್ಮಭಿಕ್ಷೆ ಬೇಡಲು ನಿಂತಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಒಳಮೀಸಲಾತಿ ಪರ ಹೋರಾಟಗಾರರ ಮೈತುಂಬಾ ಬಾಸುಂಡೆ ಬರುವಂತೆ ಲಾಠಿ ಚಾರ್ಜ್ ಮಾಡಿಸಿದ ಸರ್ಕಾರ ಯಾರದಾಗಿತ್ತು? ಇದು ಖಂಡಿತವಾಗಿಯೂ ಮಾದಿಗ ಸಮುದಾಯದಲ್ಲಿನ ಪ್ರಾಮಾಣಿಕ ಹೋರಾಟಗಾರರಿಗೆ ಚಿಂತೆಗೀಡು ಮಾಡಿದೆ.

ಇಂದು ಮಾದಿಗ ಸಮುದಾಯ ತನ್ನೊಳಗೂ ಹಾಗೂ ಹೊರಗೂ ಪ್ರಾಮಾಣಿಕ ಹೋರಾಟಗಾರರನ್ನು ಕಂಡುಕೊಳ್ಳಬೇಕಿದೆ. ಸದಾ ಚುನಾವಣಾ ರಾಜಕೀಯ ಹಿತಾಸಕ್ತಿಯನ್ನೇ ಬಯಸುವ ದಲಿತ ರಾಜಕಾರಣಿಗಳ ವಿರುದ್ಧವೂ ನಿಲ್ಲಬೇಕಿದೆ. ನಮ್ಮ ಸಂಕಟಗಳು ಬೆಟ್ಟದಷ್ಟಿರುವಾಗ ಆ ಬೆಟ್ಟವನ್ನು ನೆಲಸಮಗೊಳಿಸಲು ಒಳಮೀಸಲಾತಿ ಜಾರಿಯಾಗಲೇಬೇಕಿದೆ.

ಮೊದಲು ಸದಾಶಿವ ಆಯೋಗದ ವರದಿ ಬಹಿರಂಗಗೊಳ್ಳಬೇಕು. ಕಾಲ್ಪನಿಕ ಸೋರಿಕೆ ವಿಚಾರಗಳನ್ನು ಬದಿಗಿಟ್ಟು ಸಾರ್ವಜನಿಕ ಚರ್ಚೆಗಳಾಗಬೇಕು. ಇಡೀ 101 ದಲಿತ ಜಾತಿಗಳ ಪ್ರತಿನಿಧಿಗಳು ಒಂದೆಡೆ ಕುಳಿತು ಆಯೋಗದ ಶಿಫಾರಸ್ಸುಗಳನ್ನು ಪರಿಶೀಲಿಸಿ ಒಳಮೀಸಲಾತಿ ಜಾರಿಗೊಳ್ಳುವ ಸರಿಯಾದ ಕ್ರಮಗಳನ್ನು ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ಒಳಮೀಸಲಾತಿ ದಲಿತರ ಒಗ್ಗಟ್ಟನ್ನು ಮುರಿಯುತ್ತದೆ ಎಂಬ ಕಾಲ್ಪನಿಕ ಭಯದೊಂದಿಗೆ ಗುದ್ದಾಡದೆ, ಅದನ್ನು ಬಗೆಹರಿಸಿಕೊಂಡು ಮುಂದೆ ದಲಿತ ಜಾತಿಗಳು ಖಾಸಗಿ ಮೀಸಲಾತಿಗಾಗಿ ಹೋರಾಡಬೇಕು. ಸಮಸಮಾಜದೆಡಗೆ ನಮ್ಮ ನಡಿಗೆ ಆದಷ್ಟು ಬೇಗ ಮತ್ತೆ ಗಟ್ಟಿಗೊಳ್ಳಬೇಕು.

  • ಕರಿಯಪ್ಪ ಗುಡಿಮನಿ

(ಕರ್ನಾಟಕ ಮಾದಿಗ ರಕ್ಷಣಾ ವೇದಿಕೆಯ ರಾಜ್ಯ ಅಧ್ಯಕ್ಷರಾದ ಗುಡಿಮನಿಯವರು ಮೂರ್ನಾಲ್ಕು ದಶಕಗಳಿಂದ  ದಲಿತ, ಎಡಪಂಥೀಯ ಚಳುವಳಿಯಲ್ಲಿ ಸಕ್ರಿಯವಾಗಿರುವವರು. ಬಳ್ಳಾರಿ ಭಾಗದ ಭೂಹೋರಾಟದಲ್ಲಿ ಪ್ರಧಾನವಾಗಿ ಮಾದಿಗ ಸಮುದಾಯದ ಜೊತೆ, ಆದರೆ ಎಲ್ಲಾ ಜಾತಿಗಳಿಗೆ ಸೇರಿದ ಶೋಷಿತರ ಪರವಾದ ಯಶಸ್ವಿ ಹೋರಾಟಗಳನ್ನು ಸಂಘಟಿಸಸಿದವರು.)


ಇದನ್ನೂ ಓದಿ: ಜಗದ ಕಣ್ತೆರೆಸಿದ ಮಾದಿಗರ ಒಳಮೀಸಲಾತಿ ಹೋರಾಟ : ಗುರುಪ್ರಸಾದ್ ಕಂಟಲಗೆರೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...