Homeಮುಖಪುಟಬಾಬ್ರಿ ಮಸೀದಿ ಕೆಡವುದರ ಹಿಂದೆ ಯಾರ ಸಂಚು ಇಲ್ಲ ಎಂಬ ತೀರ್ಮಾನಕ್ಕೆ ನ್ಯಾಯಾಧೀಶರು ಕೊಟ್ಟ10 ಕಾರಣಗಳು!

ಬಾಬ್ರಿ ಮಸೀದಿ ಕೆಡವುದರ ಹಿಂದೆ ಯಾರ ಸಂಚು ಇಲ್ಲ ಎಂಬ ತೀರ್ಮಾನಕ್ಕೆ ನ್ಯಾಯಾಧೀಶರು ಕೊಟ್ಟ10 ಕಾರಣಗಳು!

ಭದ್ರತಾ ವ್ಯವಸ್ಥೆಗಳು ಸೂಕ್ತವಾಗಿತ್ತೋ ಇಲ್ಲವೋ ಎಂಬುದನ್ನು ನಮಗೆ ಪತ್ರಕರ್ತರು ಹೇಳಬೇಕಿಲ್ಲ. ನಮಗೆ ಅದನ್ನು ತಿಳಿಸಬೇಕಿರುವವರು ಪೊಲೀಸ್ ಅಧಿಕಾರಿಗಳು. - ಸುಪ್ರೀಂ ಕೋರ್ಟ್

- Advertisement -
- Advertisement -

ಬಾಬ್ರಿ ಮಸೀದಿ ಕೆಡವುದರ ಹಿಂದೆ ಯಾರ ಸಂಚು ಇಲ್ಲ ಎಂದು ಸೆಪ್ಟಂಬರ್ 30 ರಂದು ಸಿಬಿಐ ಕೋರ್ಟ್ ತೀರ್ಪು ನೀಡಿರುವುದು ಗೊತ್ತಿರುವ ವಿಚಾರ. ಆದರೆ ಏಕ್ ಧಕ್ಕಾ ಔರ್ ಧೋ-ಬಾಬ್ರಿ ಮಸ್ಜಿದ್ ಥೋಡ್ ದೋ ಎಂದು ಅದ್ವಾನಿಯಾದಿಯಾಗಿ ಎಲ್ಲಾ ಆರೋಪಿಗಳು ದೇಶಾದ್ಯಂತ ಪ್ರಚೋದನಾತ್ಮಕ ಭಾಷಣ ಮಾಡಿ ಮಸೀದಿಯನ್ನು ಬೀಳಿಸಲೆಂದೇ ಅಯೋಧ್ಯೆಗೆ ಕರಸೇವಕರನ್ನು ಕರೆತಂದದ್ದು ಜಗತ್ತಿಗೇ ಗೊತ್ತಿತ್ತು. ಹಾಗಿದ್ದರೂ ನ್ಯಾಯಾಧೀಶರು ಯಾವ ನ್ಯಾಯ-ನೀತಿ-ತರ್ಕ-ಸಾಕ್ಶ್ಯ-ಆಧಾರಗಳ ಮೇಲೆ ಇವರನ್ನೆಲ್ಲಾ ಬಿಡುಗಡೆ ಮಾಡಿದರು?

ನ್ಯಾಯಾಧೀಶ ಯಾದವ್ ಅವರ ತೀರ್ಪು 2300 ಪುಟಗಳಷ್ಟಿದೆ ಮತ್ತು ಹಿಂದಿಯಲ್ಲಿದೆ. ನ್ಯಾಯಾಧೀಶ ಯಾದವ್ ಅವರು ತಮ್ಮ ಅಂತಿಮ ತೀರ್ಪಿಗೆ ಕೊಟ್ಟಿರುವ 10 ಪ್ರಮುಖ ಕಾರಣಗಳನ್ನು ದೆಹಲಿ ವಿಶ್ವವಿದ್ಯಾಲಯದ ಹಿಂದಿ ಪ್ರೊಫೆಸರ್ ಆಗಿರುವ ಅಪೂರ್ವಾನಂದ್ ಅವರು The Wire ಪತ್ರಿಕೆಗಾಗಿ ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ. ಅದನ್ನು ಚಿಂತಕ ಶಿವಸುಂದರ್ ಕನ್ನಡೀಕರಿಸಿದ್ದಾರೆ ಅದರ ಕನ್ನಡಾನುವಾದ ಇಲ್ಲಿದೆ.

1. ಲಾಲ್ ಕೃಷ್ಣ ಅದ್ವಾನಿಯವರು ಬಾಬ್ರಿ ಮಸೀದಿ ನಾಶದ ಬಗ್ಗೆ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಅವರು ಈ ಅಪರಾಧದಲ್ಲಿ ಪಾಲುದಾರರಾಗಿರಲು ಸಾಧ್ಯವೇ ಇಲ್ಲ. ಹಾಗೂ ಅವರ ವ್ಯಕ್ತಪಡಿಸಿದ ದುಃಖದ ಬಗ್ಗೆ ಇತರ ಸಹ ಆರೋಪಿಗಳೂ ಕೂಡಾ ಯಾವುದೇ ಆಕ್ಷೇಪಣೆಯನ್ನು ವ್ಯಕ್ತಪಡಿಸಿಲ್ಲ. (ಅಂದರೆ ಉಳಿದ ಆರೋಪಿಗಳೂ ಈ ದುಃಖದಲ್ಲಿ ಭಾಗಿಯಾಗಿದ್ದಾರೆಂಬ ತಾತ್ಪರ್ಯವಾಗುವುದರಿಂದ ಅವರುಗಳೂ ಕೂಡಾ ಅಪರಾಧದಲ್ಲಿ ಭಾಗಿಯಾಗಿರಲು ಸಾಧ್ಯವಿಲ್ಲ!)

2. ಆಗ ಮುಖ್ಯಮಂತ್ರಿಯಾಗಿದ್ದ ಕಲ್ಯಾಣ್ ಸಿಂಗ್ ಅವರು ಅಯೋಧ್ಯೆಯಲ್ಲಿ ಯಥಾಸ್ಥಿತಿಯನ್ನು ಉಳಿಸಿಕೊಳ್ಳಲಾಗುವುದು ಎಂದು ಮುಚ್ಚಳಿಕೆ ಬರೆದುಕೊಟ್ಟಿದ್ದರಿಂದ ಅವರು ಈ ಅಪರಾಧದಲ್ಲಿ ಭಾಗಿಯಾಗಿರಲು ಸಾಧ್ಯವೇ ಇಲ್ಲ. ಎಲ್ಲಕ್ಕಿಂತ ಹೆಚ್ಚಾಗಿ ಅವರು ಸ್ಥಳದಲ್ಲಿ ಬೇರೆ ಸಮುದಾಯಗಳ ಧಾರ್ಮಿಕ ಭಾವನೆಗಳಿಗೆ ಭಂಗ ತರುವ ಯಾವ ಮಾತುಗಳನ್ನೂ ಆಡಿಲ್ಲ.

3. ಘಟನೆ ನಡೆದ ಸ್ಥಳದಲ್ಲಿ ಅಸಂಖ್ಯಾತ ಜನರು ಸೇರಿದ್ದರಿಂದ ಮತ್ತು ಅವರನ್ನು ಚದುರಿಸಲು ಪ್ರಯತ್ನಿಸಿದ್ದರೆ ಅಸಂಖ್ಯಾತ ಜನರು ಸಾವು-ನೋವುಗಳಿಗೆ ಗುರಿಯಾಗುವ ಸಾಧ್ಯತೆಯೂ ಇದ್ದಿದ್ದರಿಂದ ಜನರನ್ನು ನಿಯಂತ್ರಣ ಮಾಡದಿರುವುದಕ್ಕೆ ಯಾರನ್ನೂ ದೂರಲೂ ಸಾಧ್ಯವಿಲ್ಲ. ಅಲ್ಲದೆ ಮಹಿಳಾ ಕರಸೇವಕರು ರಾಸ್ತಾ ರೋಖೋ ಮಾಡುತ್ತಿದ್ದರಿಂದ ಹೆಚ್ಚುವರಿ ಪೊಲೀಸರು ಸ್ಥಳವನ್ನು ತಲುಪಲಾಗಲಿಲ್ಲ.

4. ಭದ್ರತಾ ವ್ಯವಸ್ಥೆಗಳು ಸೂಕ್ತವಾಗಿತ್ತೋ ಇಲ್ಲವೋ ಎಂಬುದನ್ನು ನಮಗೆ ಪತ್ರಕರ್ತರು ಹೇಳಬೇಕಿಲ್ಲ. ನಮಗೆ ಅದನ್ನು ತಿಳಿಸಬೇಕಿರುವವರು ಪೊಲೀಸ್ ಅಧಿಕಾರಿಗಳು.

5. ಆಡಳಿತ ವ್ಯವಸ್ಥೆಗೆ ಮತ್ತು ಪೊಲೀಸರಿಗೆ ಆ ಕಟ್ಟಡದ ಭದ್ರತೆಯನ್ನು ನೋಡಿಕೊಳ್ಳುವುದರ ಜೊತೆಗೆ ಇನ್ನೂ ಎಷ್ಟೋ ಬೇರೆ ಕೆಲಸಗಳಿದ್ದವು.

6. ವಿವಾದಿತ ಸ್ಥಳದಲ್ಲಿ ಇತರ ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಅಥವಾ ರಾಷ್ಟ್ರದ ಐಕ್ಯತೆ ಮತ್ತು ಸಮಗ್ರತೆಗೆ ಧಕ್ಕೆ ಬರುವ ಯಾವ ಕೃತ್ಯಗಳೂ ಜರುಗಿಲ್ಲ. ಅಯೋಧ್ಯಾದ ಮುಸ್ಲಿಮರಿಗೆ ಕರಸೇವೆಯಿಂದ ಯಾವುದೇ ಭೀತಿಯುಂಟಾಗಿರಲಿಲ್ಲ. ಅದರ ಬಗ್ಗೆ ಅವರಿಗೆ ನಿರಾಸಕ್ತ ಭಾವನೆಯೇ ಇದ್ದಿತು. ಅಲ್ಲದೇ ಒಬ್ಬ ಹಿಂದೂ ಮಹಿಳೆಯು ಮುಸ್ಲಿಂ ಪುರುಷನನ್ನು ರಕ್ಷಿಸಿದ ವಿಷಯವು ದಾಖಲಾಗಿರುವುದರಿಂದ ಅಯೋಧ್ಯೆಯಲ್ಲಿ ಖಂಡಿತವಾದ ಕೋಮು ಸೌಹಾರ್ದವಿತ್ತು ಎಂಬ ನಿರ್ಣಯಕ್ಕೆ ನಿಶ್ಚಿತವಾಗಿ ಬರಬಹುದು.

7. ಬಿಜೆಪಿ ನಾಯಕರು ಬಾಬರ್ ಮತ್ತು ಔರಂಗಜೇಬ್‌ಗಳಂತಾಗ ಬಯಸುವವರ ವಿರುದ್ಧವಿದ್ದಾರೆಯೇ ವಿನಾ ಇಡೀ ಮುಸ್ಲಿಂ ಸಮುದಾಯದ ವಿರುದ್ಧವಲ್ಲ.

8. ಒಂದೆಡೆ ಕರಸೇವಕರು ಕರಸೇವೆಯ ಬಗ್ಗೆ ಅತ್ಯುತ್ಸಾಹದಲ್ಲಿದ್ದರೆ ಕೆಲವು ಮುಸ್ಲಿಮ್ ಪುಂಡರು ಗೋರಿಗಳಿಗೆ ಹಾನಿ ಮಾಡಿ ಕೋಮುದ್ವೇಷ ಹುಟ್ಟಿಸುವ ಪ್ರಯತ್ನ ಮಾಡಿದ್ದರು.

9. ಸುಪ್ರೀಂ ಕೋರ್ಟನ್ನು ಎಲ್ಲರೂ ಗೌರವಿಸುತ್ತಾರೆ ಮತ್ತು ಅದರ ಆದೇಶಗಳನ್ನು ಒಪ್ಪಿಕೊಳ್ಳುತ್ತಾರೆ. ಹಾಗಿರುವಾಗ ಸುಪ್ರಿಂಕೋರ್ಟೇ ವಿವಾದಿತ ಸ್ಥಳದಲ್ಲಿ ಯಥಾಸ್ಥಿತಿ ಕಾಪಾಡಬೇಕೆಂದು ಆದೇಶ ನೀಡಿದ್ದಾಗ ಅದರ ವಿರುದ್ಧ ಯಾರೂ ನಡೆಯಬಯಸಲು ಸಾಧ್ಯವೇ ಇಲ್ಲ.

10. ಆ ಕಟ್ಟಡಕ್ಕೆ ಹಾನಿಯುಂಟಾಗುತ್ತದೆಂಬುದನ್ನಾಗಲೀ ಅಥವಾ ನೆಲಸಮ ಮಾಡಲಾಗುತ್ತದೆಂಬುದನ್ನಾಗಲೀ ಯಾರೂ ನಿರೀಕ್ಷಿಸಿರಲು ಸಾಧ್ಯವಿರಲಿಲ್ಲ. ಅದೇನೇ ಇದ್ದರೂ ಆ ವಿವಾದಿತ ಪ್ರದೇಶದಲ್ಲಿ ನಮಾಜ್ ಮಾಡುತ್ತಿದ್ದ ಬಗ್ಗೆಯೂ ಯಾವುದೇ ಸಾಕ್ಷಿ ಇಲ್ಲ.

ಕೃಪೆ: ಶಿವಸುಂದರ್


ಇದನ್ನೂ ಓದಿ: ಡಿಸೆಂಬರ್‌ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು: ತೀರ್ಪು ವಿರುದ್ದ ಟ್ವಿಟ್ಟರ್‌‌ನಲ್ಲಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...