Homeಮುಖಪುಟಬಾಬ್ರಿ ಮಸೀದಿ ಕೆಡವುದರ ಹಿಂದೆ ಯಾರ ಸಂಚು ಇಲ್ಲ ಎಂಬ ತೀರ್ಮಾನಕ್ಕೆ ನ್ಯಾಯಾಧೀಶರು ಕೊಟ್ಟ10 ಕಾರಣಗಳು!

ಬಾಬ್ರಿ ಮಸೀದಿ ಕೆಡವುದರ ಹಿಂದೆ ಯಾರ ಸಂಚು ಇಲ್ಲ ಎಂಬ ತೀರ್ಮಾನಕ್ಕೆ ನ್ಯಾಯಾಧೀಶರು ಕೊಟ್ಟ10 ಕಾರಣಗಳು!

ಭದ್ರತಾ ವ್ಯವಸ್ಥೆಗಳು ಸೂಕ್ತವಾಗಿತ್ತೋ ಇಲ್ಲವೋ ಎಂಬುದನ್ನು ನಮಗೆ ಪತ್ರಕರ್ತರು ಹೇಳಬೇಕಿಲ್ಲ. ನಮಗೆ ಅದನ್ನು ತಿಳಿಸಬೇಕಿರುವವರು ಪೊಲೀಸ್ ಅಧಿಕಾರಿಗಳು. - ಸುಪ್ರೀಂ ಕೋರ್ಟ್

- Advertisement -
- Advertisement -

ಬಾಬ್ರಿ ಮಸೀದಿ ಕೆಡವುದರ ಹಿಂದೆ ಯಾರ ಸಂಚು ಇಲ್ಲ ಎಂದು ಸೆಪ್ಟಂಬರ್ 30 ರಂದು ಸಿಬಿಐ ಕೋರ್ಟ್ ತೀರ್ಪು ನೀಡಿರುವುದು ಗೊತ್ತಿರುವ ವಿಚಾರ. ಆದರೆ ಏಕ್ ಧಕ್ಕಾ ಔರ್ ಧೋ-ಬಾಬ್ರಿ ಮಸ್ಜಿದ್ ಥೋಡ್ ದೋ ಎಂದು ಅದ್ವಾನಿಯಾದಿಯಾಗಿ ಎಲ್ಲಾ ಆರೋಪಿಗಳು ದೇಶಾದ್ಯಂತ ಪ್ರಚೋದನಾತ್ಮಕ ಭಾಷಣ ಮಾಡಿ ಮಸೀದಿಯನ್ನು ಬೀಳಿಸಲೆಂದೇ ಅಯೋಧ್ಯೆಗೆ ಕರಸೇವಕರನ್ನು ಕರೆತಂದದ್ದು ಜಗತ್ತಿಗೇ ಗೊತ್ತಿತ್ತು. ಹಾಗಿದ್ದರೂ ನ್ಯಾಯಾಧೀಶರು ಯಾವ ನ್ಯಾಯ-ನೀತಿ-ತರ್ಕ-ಸಾಕ್ಶ್ಯ-ಆಧಾರಗಳ ಮೇಲೆ ಇವರನ್ನೆಲ್ಲಾ ಬಿಡುಗಡೆ ಮಾಡಿದರು?

ನ್ಯಾಯಾಧೀಶ ಯಾದವ್ ಅವರ ತೀರ್ಪು 2300 ಪುಟಗಳಷ್ಟಿದೆ ಮತ್ತು ಹಿಂದಿಯಲ್ಲಿದೆ. ನ್ಯಾಯಾಧೀಶ ಯಾದವ್ ಅವರು ತಮ್ಮ ಅಂತಿಮ ತೀರ್ಪಿಗೆ ಕೊಟ್ಟಿರುವ 10 ಪ್ರಮುಖ ಕಾರಣಗಳನ್ನು ದೆಹಲಿ ವಿಶ್ವವಿದ್ಯಾಲಯದ ಹಿಂದಿ ಪ್ರೊಫೆಸರ್ ಆಗಿರುವ ಅಪೂರ್ವಾನಂದ್ ಅವರು The Wire ಪತ್ರಿಕೆಗಾಗಿ ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ. ಅದನ್ನು ಚಿಂತಕ ಶಿವಸುಂದರ್ ಕನ್ನಡೀಕರಿಸಿದ್ದಾರೆ ಅದರ ಕನ್ನಡಾನುವಾದ ಇಲ್ಲಿದೆ.

1. ಲಾಲ್ ಕೃಷ್ಣ ಅದ್ವಾನಿಯವರು ಬಾಬ್ರಿ ಮಸೀದಿ ನಾಶದ ಬಗ್ಗೆ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಅವರು ಈ ಅಪರಾಧದಲ್ಲಿ ಪಾಲುದಾರರಾಗಿರಲು ಸಾಧ್ಯವೇ ಇಲ್ಲ. ಹಾಗೂ ಅವರ ವ್ಯಕ್ತಪಡಿಸಿದ ದುಃಖದ ಬಗ್ಗೆ ಇತರ ಸಹ ಆರೋಪಿಗಳೂ ಕೂಡಾ ಯಾವುದೇ ಆಕ್ಷೇಪಣೆಯನ್ನು ವ್ಯಕ್ತಪಡಿಸಿಲ್ಲ. (ಅಂದರೆ ಉಳಿದ ಆರೋಪಿಗಳೂ ಈ ದುಃಖದಲ್ಲಿ ಭಾಗಿಯಾಗಿದ್ದಾರೆಂಬ ತಾತ್ಪರ್ಯವಾಗುವುದರಿಂದ ಅವರುಗಳೂ ಕೂಡಾ ಅಪರಾಧದಲ್ಲಿ ಭಾಗಿಯಾಗಿರಲು ಸಾಧ್ಯವಿಲ್ಲ!)

2. ಆಗ ಮುಖ್ಯಮಂತ್ರಿಯಾಗಿದ್ದ ಕಲ್ಯಾಣ್ ಸಿಂಗ್ ಅವರು ಅಯೋಧ್ಯೆಯಲ್ಲಿ ಯಥಾಸ್ಥಿತಿಯನ್ನು ಉಳಿಸಿಕೊಳ್ಳಲಾಗುವುದು ಎಂದು ಮುಚ್ಚಳಿಕೆ ಬರೆದುಕೊಟ್ಟಿದ್ದರಿಂದ ಅವರು ಈ ಅಪರಾಧದಲ್ಲಿ ಭಾಗಿಯಾಗಿರಲು ಸಾಧ್ಯವೇ ಇಲ್ಲ. ಎಲ್ಲಕ್ಕಿಂತ ಹೆಚ್ಚಾಗಿ ಅವರು ಸ್ಥಳದಲ್ಲಿ ಬೇರೆ ಸಮುದಾಯಗಳ ಧಾರ್ಮಿಕ ಭಾವನೆಗಳಿಗೆ ಭಂಗ ತರುವ ಯಾವ ಮಾತುಗಳನ್ನೂ ಆಡಿಲ್ಲ.

3. ಘಟನೆ ನಡೆದ ಸ್ಥಳದಲ್ಲಿ ಅಸಂಖ್ಯಾತ ಜನರು ಸೇರಿದ್ದರಿಂದ ಮತ್ತು ಅವರನ್ನು ಚದುರಿಸಲು ಪ್ರಯತ್ನಿಸಿದ್ದರೆ ಅಸಂಖ್ಯಾತ ಜನರು ಸಾವು-ನೋವುಗಳಿಗೆ ಗುರಿಯಾಗುವ ಸಾಧ್ಯತೆಯೂ ಇದ್ದಿದ್ದರಿಂದ ಜನರನ್ನು ನಿಯಂತ್ರಣ ಮಾಡದಿರುವುದಕ್ಕೆ ಯಾರನ್ನೂ ದೂರಲೂ ಸಾಧ್ಯವಿಲ್ಲ. ಅಲ್ಲದೆ ಮಹಿಳಾ ಕರಸೇವಕರು ರಾಸ್ತಾ ರೋಖೋ ಮಾಡುತ್ತಿದ್ದರಿಂದ ಹೆಚ್ಚುವರಿ ಪೊಲೀಸರು ಸ್ಥಳವನ್ನು ತಲುಪಲಾಗಲಿಲ್ಲ.

4. ಭದ್ರತಾ ವ್ಯವಸ್ಥೆಗಳು ಸೂಕ್ತವಾಗಿತ್ತೋ ಇಲ್ಲವೋ ಎಂಬುದನ್ನು ನಮಗೆ ಪತ್ರಕರ್ತರು ಹೇಳಬೇಕಿಲ್ಲ. ನಮಗೆ ಅದನ್ನು ತಿಳಿಸಬೇಕಿರುವವರು ಪೊಲೀಸ್ ಅಧಿಕಾರಿಗಳು.

5. ಆಡಳಿತ ವ್ಯವಸ್ಥೆಗೆ ಮತ್ತು ಪೊಲೀಸರಿಗೆ ಆ ಕಟ್ಟಡದ ಭದ್ರತೆಯನ್ನು ನೋಡಿಕೊಳ್ಳುವುದರ ಜೊತೆಗೆ ಇನ್ನೂ ಎಷ್ಟೋ ಬೇರೆ ಕೆಲಸಗಳಿದ್ದವು.

6. ವಿವಾದಿತ ಸ್ಥಳದಲ್ಲಿ ಇತರ ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಅಥವಾ ರಾಷ್ಟ್ರದ ಐಕ್ಯತೆ ಮತ್ತು ಸಮಗ್ರತೆಗೆ ಧಕ್ಕೆ ಬರುವ ಯಾವ ಕೃತ್ಯಗಳೂ ಜರುಗಿಲ್ಲ. ಅಯೋಧ್ಯಾದ ಮುಸ್ಲಿಮರಿಗೆ ಕರಸೇವೆಯಿಂದ ಯಾವುದೇ ಭೀತಿಯುಂಟಾಗಿರಲಿಲ್ಲ. ಅದರ ಬಗ್ಗೆ ಅವರಿಗೆ ನಿರಾಸಕ್ತ ಭಾವನೆಯೇ ಇದ್ದಿತು. ಅಲ್ಲದೇ ಒಬ್ಬ ಹಿಂದೂ ಮಹಿಳೆಯು ಮುಸ್ಲಿಂ ಪುರುಷನನ್ನು ರಕ್ಷಿಸಿದ ವಿಷಯವು ದಾಖಲಾಗಿರುವುದರಿಂದ ಅಯೋಧ್ಯೆಯಲ್ಲಿ ಖಂಡಿತವಾದ ಕೋಮು ಸೌಹಾರ್ದವಿತ್ತು ಎಂಬ ನಿರ್ಣಯಕ್ಕೆ ನಿಶ್ಚಿತವಾಗಿ ಬರಬಹುದು.

7. ಬಿಜೆಪಿ ನಾಯಕರು ಬಾಬರ್ ಮತ್ತು ಔರಂಗಜೇಬ್‌ಗಳಂತಾಗ ಬಯಸುವವರ ವಿರುದ್ಧವಿದ್ದಾರೆಯೇ ವಿನಾ ಇಡೀ ಮುಸ್ಲಿಂ ಸಮುದಾಯದ ವಿರುದ್ಧವಲ್ಲ.

8. ಒಂದೆಡೆ ಕರಸೇವಕರು ಕರಸೇವೆಯ ಬಗ್ಗೆ ಅತ್ಯುತ್ಸಾಹದಲ್ಲಿದ್ದರೆ ಕೆಲವು ಮುಸ್ಲಿಮ್ ಪುಂಡರು ಗೋರಿಗಳಿಗೆ ಹಾನಿ ಮಾಡಿ ಕೋಮುದ್ವೇಷ ಹುಟ್ಟಿಸುವ ಪ್ರಯತ್ನ ಮಾಡಿದ್ದರು.

9. ಸುಪ್ರೀಂ ಕೋರ್ಟನ್ನು ಎಲ್ಲರೂ ಗೌರವಿಸುತ್ತಾರೆ ಮತ್ತು ಅದರ ಆದೇಶಗಳನ್ನು ಒಪ್ಪಿಕೊಳ್ಳುತ್ತಾರೆ. ಹಾಗಿರುವಾಗ ಸುಪ್ರಿಂಕೋರ್ಟೇ ವಿವಾದಿತ ಸ್ಥಳದಲ್ಲಿ ಯಥಾಸ್ಥಿತಿ ಕಾಪಾಡಬೇಕೆಂದು ಆದೇಶ ನೀಡಿದ್ದಾಗ ಅದರ ವಿರುದ್ಧ ಯಾರೂ ನಡೆಯಬಯಸಲು ಸಾಧ್ಯವೇ ಇಲ್ಲ.

10. ಆ ಕಟ್ಟಡಕ್ಕೆ ಹಾನಿಯುಂಟಾಗುತ್ತದೆಂಬುದನ್ನಾಗಲೀ ಅಥವಾ ನೆಲಸಮ ಮಾಡಲಾಗುತ್ತದೆಂಬುದನ್ನಾಗಲೀ ಯಾರೂ ನಿರೀಕ್ಷಿಸಿರಲು ಸಾಧ್ಯವಿರಲಿಲ್ಲ. ಅದೇನೇ ಇದ್ದರೂ ಆ ವಿವಾದಿತ ಪ್ರದೇಶದಲ್ಲಿ ನಮಾಜ್ ಮಾಡುತ್ತಿದ್ದ ಬಗ್ಗೆಯೂ ಯಾವುದೇ ಸಾಕ್ಷಿ ಇಲ್ಲ.

ಕೃಪೆ: ಶಿವಸುಂದರ್


ಇದನ್ನೂ ಓದಿ: ಡಿಸೆಂಬರ್‌ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು: ತೀರ್ಪು ವಿರುದ್ದ ಟ್ವಿಟ್ಟರ್‌‌ನಲ್ಲಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...