Homeಮುಖಪುಟನಿಮ್ಮದು ಬನಾನಾ ರಿಪಬ್ಲಿಕ್ ಚಾನೆಲ್: ಅರ್ನಾಬ್ ಗೋಸ್ವಾಮಿ ವಿರುದ್ಧ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಆಕ್ರೋಶ

ನಿಮ್ಮದು ಬನಾನಾ ರಿಪಬ್ಲಿಕ್ ಚಾನೆಲ್: ಅರ್ನಾಬ್ ಗೋಸ್ವಾಮಿ ವಿರುದ್ಧ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಆಕ್ರೋಶ

ನಿಮ್ಮ ವಿಚಾರಗಳಿಗೆ ತಕ್ಕಂತೆ ಉದ್ದೇಶಪೂರ್ವಕವಾಗಿ ವಿಷಯಗಳನ್ನು ತಿರುಚುತ್ತಿದ್ದೀರಿ. ಪತ್ರಿಕೋದ್ಯಮವನ್ನು ನೀವು ಇಷ್ಟೊಂದು ಕೀಳು ಮಟ್ಟಕ್ಕೆ ಒಯ್ಯಬೇಡಿ - ರಾಜ್‌ದೀಪ್

- Advertisement -
- Advertisement -

ಇಂಡಿಯಾ ಟುಡೆ ಪತ್ರಕರ್ತರಾದ ರಾಜ್‌ದೀಪ್ ಸರ್ದೇಸಾಯಿ ಇಂದು ರಿಪಬ್ಲಿಕ್ ಟಿವಿಯ ಸ್ಥಾಪಕ ಮತ್ತು ಪತ್ರಕರ್ತ ಅರ್ನಾಬ್ ಗೋಸ್ವಾಮಿ ಮೇಲೆ ತೀವ್ರವಾದ ವಾಗ್ದಾಳಿ ನಡೆಸಿದ್ದು, “ನಿಮ್ಮದು ಬನಾನಾ ರಿಪಬ್ಲಿಕ್ ಚಾನೆಲ್” ಎಂದು ಕಿಡಿಕಾರಿದ್ದಾರೆ.

ಇತ್ತೀಚೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಗುರಿಯಾಗಿಸಿಕೊಂಡು ಟಿವಿ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದ್ದ ಅರ್ನಾಬ್ ಗೋಸ್ವಾಮಿಗೆ “ದಿ ಕಪಿಲ್ ಶರ್ಮ ಶೋ”ನಲ್ಲಿ ಕಿಕು ಶಾರ್ದ ಹಾಗೂ ಕೃಷ್ಣ ಅಭಿಷೇಕ್ ತಿರುಗೇಟು ನೀಡಿದ ನಂತರದ ಬೆಳವಣಿಗೆಯಲ್ಲಿ ಹಿರಿಯ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಕೂಡ ಅರ್ನಾಬ್ ವಿರುದ್ಧ ಬಹಿರಂಗವಾಗಿ ತಮ್ಮ ಟಿವಿ ಕಾರ್ಯಕ್ರಮದಲ್ಲಿ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಅರ್ನಾಬ್ ಗೋಸ್ವಾಮಿ ವಿರುದ್ಧ ಕ್ರಮಕ್ಕೆ ಒತ್ತಾಯ: ಶಿವಸೇನೆ ಸಂಸದರಿಂದ ಗೃಹ ಸಚಿವರಿಗೆ ಪತ್ರ

ಇದನ್ನೂ ಓದಿ: ಅರ್ನಾಬ್ ಗೋಸ್ವಾಮಿ ಕೈಮುಗಿದು ಕ್ಷಮೆಯಾಚಿಸಲಿ: ಶಿವಸೇನೆ ಮುಖಂಡನ ಆಗ್ರಹ

“ಅರ್ನಾಬ್ ಗೋಸ್ವಾಮಿ ನೀವು ಬನಾನಾ ರಿಪಬ್ಲಿಕ್ ಚಾನೆಲ್ ನಡೆಸುತ್ತಿದ್ದೀರಿ. ನಿಮ್ಮ ವಿಚಾರಗಳಿಗೆ ತಕ್ಕಂತೆ ಉದ್ದೇಶಪೂರ್ವಕವಾಗಿ ವಿಷಯಗಳನ್ನು ತಿರುಚುತ್ತಿದ್ದೀರಿ. ಪತ್ರಿಕೋದ್ಯಮವನ್ನು ನೀವು ಇಷ್ಟೊಂದು ಕೀಳು ಮಟ್ಟಕ್ಕೆ ಒಯ್ಯಬೇಡಿ. ನಿಮಗೆ ಒಂದು ಸಲಹೆ ನೀಡುತ್ತಿದ್ದೇನೆ. ಪತ್ರಿಕೋದ್ಯಮವೆಂದರೆ ಇದಲ್ಲ. ಕಳೆದ ಎರಡು ತಿಂಗಳಿನಿಂದ ನೀವು ಪ್ರಸಾರ ಮಾಡುತ್ತಿದ್ದ ಅಸಹ್ಯವಾದ ವಿಚಾರವನ್ನು ಕೇಳಿಸಿಕೊಂಡು ನಾನು ಸುಮ್ಮನಿದ್ದೆ. ಟಿಆರ್‌ಪಿಗಿಂತಲೂ ಹೆಚ್ಚಾಗಿರುವುದು ಇದೆ ಗೆಳಯ, ಅದು ಟೆಲಿವಿಶನ್ ರೆಸ್ಪೆಕ್ಟ್ ಪಾಯಿಂಟ್ಸ್” ಎಂದು ‘ಇಂಡಿಯಾ ಟುಡೆ’ ಟಿವಿ ವಾಹಿನಿಯ ಕಾರ್ಯಕ್ರಮ ಪ್ರಸಾರದ ವೇಳೆ ತಮ್ಮ ತಾಳ್ಮೆ ಕಳೆದುಕೊಂಡು ರಾಜ್‌ದೀಪ್ ಸರ್ದೇಸಾಯಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಟಿವಿ ಡಿಬೆಟ್‌ನಲ್ಲಿ ಊಟ ಮಾಡಿದ ಪ್ಯಾನೆಲಿಸ್ಟ್; ಟ್ರೋಲ್ ಆದ ಅರ್ನಾಬ್ ಗೋಸ್ವಾಮಿ

ನಟಿ ರಿಯಾ ಚಕ್ರವರ್ತಿಯ ವಿಶೇಷ ಸಂದರ್ಶನವನ್ನು ತಮ್ಮ ಚಾನೆಲ್‍ನಲ್ಲಿ ರಾಜ್‌ದೀಪ್ ಪ್ರಸಾರ ಮಾಡಿದ ನಂತರ ಅರ್ನಾಬ್ ಗೋಸ್ವಾಮಿಯು ರಾಜ್‌ದೀಪ್ ವಿರುದ್ಧ ಕಿಡಿಕಾರುತ್ತಲೇ ಇದ್ದರು. ಸುಶಾಂತ್ ಸಿಂಗ್ ರಜಪುತ್ ಅವರದ್ದು ಕೊಲೆ ಎಂದೇ ಅರ್ನಾಬ್ ಗೋಸ್ವಾಮಿ ವಾದಿಸುತ್ತಿದ್ದರು. ಆದರೆ ಏಮ್ಸ್ ವೈದ್ಯ ಡಾ. ಸುಧೀರ್ ಗುಪ್ತಾ, ಸುಶಾಂತ್ ಅವರದ್ದು ಆತ್ಮಹತ್ಯೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.


ಇದನ್ನೂ ಓದಿ: ರಿಪಬ್ಲಿಕ್ ಟಿವಿ ಅರ್ನಾಬ್ ಗೋಸ್ವಾಮಿ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...