Homeಕರ್ನಾಟಕಲಾಕ್‌ಡೌನ್‌ ಅವಧಿಯಲ್ಲಿ 1,550 ಟನ್ ಆಹಾರಧಾನ್ಯ ಹಾಳು!

ಲಾಕ್‌ಡೌನ್‌ ಅವಧಿಯಲ್ಲಿ 1,550 ಟನ್ ಆಹಾರಧಾನ್ಯ ಹಾಳು!

ಲಾಕ್‌ಡೌನ್‌ ಅವಧಿಯಲ್ಲಿ ಬಹಳಷ್ಟು ಜನರಿಗೆ ಆಹಾರ ಸಿಗದೇ ಒದ್ದಾಡಿದ್ದರು. ಆಗ ಅವರ ಹಸಿವನ್ನು ದೂರ ಮಾಡಲು ಆಹಾರಧಾನ್ಯಗಳನ್ನು ಬಳಸದೇ, ವ್ಯರ್ಥ ಮಾಡಿದ್ದು ಸರಿಯಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

- Advertisement -
- Advertisement -

ಲಾಕ್ ಡೌನ್ ಅವಧಿಯಲ್ಲಿ ಭಾರತೀಯ ಆಹಾರ ನಿಗಮದ ಉಗ್ರಾಣದಲ್ಲಿ ಶೇಖರಿಸಲ್ಪಟ್ಟಿದ್ದ 1,550 ಟನ್ ಆಹಾರಧಾನ್ಯ ಹಾಳಾಗಿದೆ ಎಂಬುದು ಗ್ರಾಹಕರ ವ್ಯವಹಾರಗಳ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿ ಅಂಶಗಳಿಂದ ದೃಢಪಟ್ಟಿದೆ ಎಂದು ದಿ ವೈರ್.ಇನ್ ವರದಿ ಮಾಡಿದೆ.

ಮೇ ತಿಂಗಳಲ್ಲಿ 26 ಟನ್ ಮತ್ತು ಜೂನ್ ತಿಂಗಳಲ್ಲಿ 1453 ಟನ್ ಆಹಾರಧಾನ್ಯ ನಷ್ಟವಾಗಿದೆ ಎಂದು ಅಂಕಿಅಂಶಗಳು ಸ್ಪಷ್ಟಪಡಿಸಿವೆ. ಜುಲೈ-ಆಗಸ್ಟ್ ತಿಂಗಳಲ್ಲಿ ಕ್ರಮವಾಗಿ 41, 51 ಟನ್ ಆಹಾರಧಾನ್ಯ ನಷ್ಟವಾಗಿರುವುದು ದಾಖಲಾಗಿದೆ. ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಶೂನ್ಯನಷ್ಟವಾಗಿರುವುದು ದಾಖಲೆಗಳಿಂದ ತಿಳಿದುಬಂದಿದೆ.

ಈ ಸಂದರ್ಭದಲ್ಲಿ ಕೆಲಸ ಕಳೆದುಕೊಂಡಿದ್ದ ವಲಸೆ ಕಾರ್ಮಿಕರು ತಮ್ಮ ದೂರದ ಗ್ರಾಮಗಳಿಗೆ ಕಾಲ್ನಡಿಗೆಯಲ್ಲೇ ಪ್ರಯಾಣ ಬೆಳೆಸಿದರು. ಬಹಳಷ್ಟು ಜನರಿಗೆ ಆಹಾರ ಸಿಗದೇ ಒದ್ದಾಡಿದ್ದರು. ಆಗ ಅವರ ಹಸಿವನ್ನು ದೂರ ಮಾಡಲು ಆಹಾರಧಾನ್ಯಗಳನ್ನು ಬಳಸದೇ, ವ್ಯರ್ಥ ಮಾಡಿದ್ದು ಸರಿಯಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಗ್ರಾಹಕರ ವ್ಯವಹಾರಗಳ ಸಚಿವಾಲಯ ನೀಡಿದ ದಾಖಲೆಗಳಂತೆ ಭಾರತೀಯ ಆಹಾರ ನಿಗಮದ ಉಗ್ರಾಣಗಳಲ್ಲಿ ಆಹಾರಧಾನ್ಯಗಳನ್ನು ಸಂಗ್ರಹ ಮಾಡಲಾಗಿತ್ತು. ಈ ಆಹಾರಧಾನ್ಯಗಳು ಹಾಳಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲಾಗಿತ್ತು. ಕೀಟನಾಶಕವನ್ನು ಸಿಂಪಡಿಸಲಾಗಿತ್ತು ಎಂದು ಹೇಳಲಾಗಿದೆ.

ಇದನ್ನೂ ಓದಿ: ಲಾಕ್‌ಡೌನ್ ವಿಧಿಸಿದ್ದು ನೀವು, ಈಗ ನೀವೇ ನೆರವು ನೀಡಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

’ಆಹಾರಧಾನ್ಯಗಳು ನಷ್ಟವಾಗಿದ್ದರೆ ಶೀಘ್ರವೇ ತನಿಖೆ ಮಾಡುತ್ತೇವೆ. ಪ್ರಕರಣ ದಾಖಲಿಸುತ್ತೇವೆ. ಅದರ ಆಧಾರದ ಮೇಲೆ ಸಂಬಂಧಪಟ್ಟ ಪ್ರಾಧಿಕಾರವು ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳಲಿದೆ. 2014 ರಿಂದ 2018ರ ಅವಧಿಯಲ್ಲಿ 125 ಮಂದಿ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದ’ ಎಂದು ಸಚಿವ ರಾಮ್ ವಿಲಾಸ್ ಪಾಸ್ವಾನ್ ತಿಳಿಸಿದ್ದಾರೆಂದು ದಿ ವೈರ್.ಇನ್ ವರದಿ ಮಾಡಿದೆ.

ಪ್ರಸಕ್ತ ವರ್ಷದ ಏಪ್ರಿಲ್‌ನಲ್ಲಿ ಉಗ್ರಾಣಗಳಲ್ಲಿ ಸರ್ಕಾರ ವೈಜ್ಞಾನಿಕ ಮಾದರಿಯನ್ನು ಅಳವಡಿಸಿಕೊಂಡಿದ್ದರಿಂದ ನಷ್ಟ ಕಡಿಮೆಯಾಗಿದೆ. ಸಂಗ್ರಹ ಮತ್ತು ವಿತರಣೆಗೆ ಅನುಕೂಲವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

2015-16 ಸಾಲಿನಲ್ಲಿ 60.3 ದಶಲಕ್ಷ ಟನ್ ಅಕ್ಕಿ ಮತ್ತು ಗೋಧಿ ಖರೀದಿಸಿದ್ದು 3116 ಟನ್ ಆಹಾರ ಧಾನ್ಯ ಗಳು ಹಾಳಾಗಿದೆ. ಇದು ಒಟ್ಟು ಖರೀದಿಯಲ್ಲಿ ಕೇವಲ ಶೇ. 0.005ರಷ್ಟು ಮಾತ್ರ ಎಂದು ಪಾಸ್ವಾನ್ ಸ್ಪಷ್ಟಪಡಿಸಿದ್ದಾರೆ. 2016-17ನೇ ಸಾಲಿನಲ್ಲಿ 61 ದಶಲಕ್ಷ ಟನ್ ಖರೀದಿಸಿದ್ದು ನಷ್ಟ ಪ್ರಮಾಣ ಕೇವಲ ಶೇ. 0.014ರಷ್ಟು ಆಗಿದೆ ಎಂದು ವರದಿ ತಿಳಿಸಿದೆ.

ಈ ನಡುವೆ 2017-18, 2018-19ನೇ ಸಾಲಿನಲ್ಲಿ ಶೇ. 0.003ರಷ್ಟು ಮತ್ತು ಶೇ. 0.006 ರಷ್ಟು ನಷ್ಟವಾಗಿದೆ. 2019-20ರಲ್ಲಿ 75.17 ದಶಲಕ್ಷ ಟನ್ ಆಹಾರಧಾನ್ಯ ಖರೀದಿಸಿತ್ತು. ಇದರಲ್ಲಿ 1930 ಟನ್ ನಷ್ಟವಾಗಿದೆ. ಇದು ಒಟ್ಟು ಖರೀದಿಯ ಕೇವಲ ಶೇ.0.002ರಷ್ಟು ಆಗಿದೆ ಎಂದು ದಿ ವೈರ್.ಇನ್ ವರದಿ ಮಾಡಿದೆ.


ಇದನ್ನೂ ಓದಿ: ಭಾರಿ ಮಳೆ, ಲಾಕ್‌ಡೌನ್ ಎಫೆಕ್ಟ್: ಮುಂದಿನ ವರ್ಷ ಉಪ್ಪಿನ ಕೊರತೆ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...