Homeಕರ್ನಾಟಕಪಾಕ್‌ಗೆ ಆಹಾರವಾದ ಯಡಿಯೂರಪ್ಪ : ಆ ಮಾತು ಬಿಜೆಪಿಯ ಒಳ ಆಶಯವೇ?

ಪಾಕ್‌ಗೆ ಆಹಾರವಾದ ಯಡಿಯೂರಪ್ಪ : ಆ ಮಾತು ಬಿಜೆಪಿಯ ಒಳ ಆಶಯವೇ?

- Advertisement -
ಭಾರತೀಯ ವಾಯುಸೇನೆ ಬಾಲಕೋಟ್ ಮೇಲೆ ನಡೆಸಿದ ದಾಳಿಯಿಂದಾಗಿ ಬಿಜೆಪಿ ಕರ್ನಾಟಕದಲ್ಲಿ 22 ಸ್ಥಾನ ಗೆಲ್ಲೋದು ಗ್ಯಾರಂಟಿ ಅನ್ನೋ ಸ್ಟೇಟ್‌ಮೆಂಟ್ ಕೊಟ್ಟಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರು ಇಡೀ ದೇಶದ ಮಾನವನ್ನೇ ಹರಾಜು ಹಾಕಿದ್ದಾರೆ. ಸೇನೆಯನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳಲು ಬಿಜೆಪಿ ಯೋಜಿಸಿದೆಯಾ? ಅನ್ನೋ ಪ್ರಶ್ನೆ ಇದೀಗ ಲೋಕಸಭಾ ಚುನಾವಣಾ ಹೊಸ್ತಿಲಲ್ಲಿರುವ ದೇಶದ ನಾಗರೀಕರನ್ನು ಕಾಡಲು ಶುರು ಮಾಡಿರುವ ಹೊತ್ತಿನಲ್ಲೇ, ಅತ್ತ ಪಾಕಿಸ್ತಾನವು ಕೂಡಾ ಯಡಿಯೂರಪ್ಪನವರ ಈ ಹೇಳಿಕೆಯನ್ನೇ ಆಧಾರವಾಗಿಟ್ಟುಕೊಂಡು ಜಾಗತಿಕ ವೇದಿಕೆಗಳಲ್ಲಿ ಭಾರತವನ್ನು ಏಕಾಂಗಿಯಾಗಿಸುವ ಯತ್ನದಲ್ಲಿದೆ!
ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರಿಕ್-ಇ-ಇನ್ಸಾಪ್ (ಪಿಟಿಐ) ಪಕ್ಷದ ನಾಯಕರುಗಳು ಯಡಿಯೂರಪ್ಪನವರ ಹೇಳಿಕೆ ಇರುವ ವೀಡಿಯೋವನ್ನು ಟ್ಯಾಗ್ ಮಾಡಿ “ಎಲೆಕ್ಷನ್‌ನಲ್ಲಿ ಗೆಲ್ಲಲು ಹತಾಶೆಗೊಂಡಿರುವ ಜನರ ಹುನ್ನಾರದಿಂದಾಗಿ ಭಾರತೀಯರು ಯುದ್ಧೋನ್ಮಾದಕ್ಕೆ ಬಲಿಯಾಗಿದ್ದಾರೆ” ಎಂದು ಹೀಗಳೆದಿದ್ದಾರೆ. ಪತ್ರಕರ್ತೆ ಬರ್ಖಾ ದತ್ ಅವರು ಯಡಿಯೂರಪ್ಪನವರ ಹೇಳಿಕೆಯನ್ನು ಖಂಡಿಸಿದ್ದ ಟ್ವೀಟ್ ಅನ್ನು ಉಲ್ಲೇಖಿಸುತ್ತಾ ಪಾರ್ಟಿಯ ಅಧಿಕೃತ ಅಕೌಂಟ್‌ನಲ್ಲಿ ಇವತ್ತು (ಫೆಬ್ರವರಿ 28, ಗುರುವಾರ) ಹೀಗೆ ಟ್ವೀಟ್ ಮಾಡಲಾಗಿದೆ.
- Advertisement -

ಇದು ಹೊರಬಿದ್ದ ಅರ್ಧಗಂಟೆಯಲ್ಲೇ, ಪಿಟಿಐ ಮತ್ತೊಂದು ಟ್ವೀಟ್ ಅನ್ನು ಪೋಸ್ಟ್ ಮಾಡಿದ್ದು, ಅದರಲ್ಲಿ ಯುದ್ಧವನ್ನು ಎಲೆಕ್ಷನ್ ತಂತ್ರವಾಗಿ ಬಳಸಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಪಿಟಿಐನ ಟ್ವೀಟ್‌ಗಳಿಗೆ ಎರಡು ಉದ್ದೇಶಗಳಿರುವಂತಿದೆ:
  • ಎಲೆಕ್ಷನ್ ಗೆಲ್ಲಲು ಹತಾಶೆಗೊಂಡಿರುವ ಒಬ್ಬ ವ್ಯಕ್ತಿಯ (ಪ್ರಧಾನಿ ನರೇಂದ್ರ ಮೋದಿ ಎಂದು ಪರೋಕ್ಷವಾಗಿ ಸೂಚಿಸುತ್ತದೆ) ಅನರ್ಥ ಯತ್ನದಿಂದಾಗಿ ‘ಪಾಕಿಸ್ತಾನದ ವಿರುದ್ಧ ಸಿಡಿದು ನಿಲ್ಲುವಿಕೆಯು’ ಭಾರತ ಸರ್ಕಾರವನ್ನು ಜನರೊಂದಿಗೆ ಬೆಸೆಯುವ ಯತ್ನವೆಂದು ತೋರಿಸುವುದು.
  • ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಯಾದ ಜೈಶ್-ಎ-ಮೊಹ್ಮದ್‌ನಿಂದ ಫೆಬ್ರವರಿ 14ರಂದು ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಬಾಲಕೋಟ್ ವಾಯುದಾಳಿ ನಡೆದಿದೆ ಎಂಬ ವಾಸ್ತವವನ್ನು ಮರೆಮಾಚುವುದು.
ಪುಲ್ವಾಮಾ ಮತ್ತು ಬಾಲಕೋಟ್ ಎರಡೂ ದಾಳಿಗಳ ಕುರಿತಂತೆ ಉಭಯ ರಾಷ್ಟ್ರಗಳ ವಿರೋಧ ಪಕ್ಷಗಳು ಯಾವ ವಿವಾದಕ್ಕೂ ಆಸ್ಪದಕೊಡದಂತೆ ಆಯಾ ಸರ್ಕಾರಗಳ ಪರವಾಗಿ ನಿಂತಿವೆ. ಆದರೆ ನಿಜಕ್ಕೂ ಇರುವ ಸಮಸ್ಯೆ ಏನೆಂದರೆ, ಯಡಿಯೂರಪ್ಪನವರ ಈ ಹೇಳಿಕೆಯಿಂದಾಗಿ ’ಬಿಜೆಪಿಯ ಚುನಾವಣೆಯ ಹುನ್ನಾರದ ಭಾಗವಾಗಿ ಇಂಡಿಯಾ-ಪಾಕಿಸ್ತಾನಗಳು ಯುದ್ಧ ಸನ್ನದ್ಧವಾಗಬೇಕಾಗಿ ಬಂದಿದೆಯೇ ವಿನಾಃ ಪುಲ್ವಾಮಾ ದಾಳಿಯಿಂದಾಗಿ ಅಲ್ಲ’ ಎಂದು ಜಗತ್ತಿನ ಇತರೆ ರಾಷ್ಟ್ರಗಳ ಮುಂದೆ ವಾದ ಮಂಡಿಸಲು ಪಾಕಿಸ್ತಾನಕ್ಕೆ ಒಂದು ಅವಕಾಶ ಸಿಕ್ಕಂತಾಗಿದೆ.
ಯಡಿಯೂರಪ್ಪ ಇದೀಗ ಎಚ್ಚೆತ್ತುಕೊಂಡು ತನ್ನ ಹೇಳಿಕೆಯನ್ನು ತಪ್ಪಾಗಿ ತಿರುಚಲಾಗಿದೆ ಅಂತ ಹೇಳುತ್ತಿರಬಹುದು. ಆದರೆ ಇದರಿಂದ ದೇಶಕ್ಕೆ ಆಗಬೇಕಾದ ಲುಕ್ಸಾನು ಆಗಿಹೋಗಿದೆ. ಅವರದೇ ಪಕ್ಷದ ಕೇಂದ್ರ ವಿದೇಶಾಂಗ ರಾಜ್ಯ ಖಾತೆ ಸಚಿವ ಹಾಗೂ ಸೇನೆಯ ಮಾಜಿ ಜನರಲ್ ಕೂಡಾ ಆದ ವಿ.ಕೆ.ಸಿಂಗ್ ಅವರು “ಬಿಎಸ್‌ವೈಜೀ, ನಾನು ನಿಮ್ಮ ಮಾತನ್ನು ಒಪ್ಪುವುದಿಲ್ಲ. ನಾವು ಒಂದು ರಾಷ್ಟ್ರವಾಗಿ ನಿಲ್ಲುತ್ತೇವೆ. ನಮ್ಮ ದೇಶದ ರಕ್ಷಣೆ ಮತ್ತು ನಾಗರೀಕರ ಸುರಕ್ಷತೆಗಾಗಿ ಸರ್ಕಾರ ಈ ಕಾರ್ಯಾಚರಣೆ ನಡೆಸಿದೆಯೇ ವಿನಾಃ ಕೆಲ ಹೆಚ್ಚುವರಿ ಸೀಟುಗಳನ್ನು ಗೆಲ್ಲುವುದಕ್ಕಲ್ಲ” ಎಂದು ಟ್ವೀಟಿಸಿದ್ದಾರೆ.

ಪಾಕಿಸ್ತಾನದಲ್ಲಿ ಯಡಿಯೂರಪ್ಪನವರ ಹೇಳಿಕೆ ವೈರಲ್ ಆಗುವ ಒಂದು ದಿನದ ಹಿಂದಷ್ಟೇ, ಅಂದರೆ ಫೆಬ್ರವರಿ 27ರಂದು ಕೇಂದ್ರ ಹಣಕಾಸು ಮಂತ್ರಿ ಅರುಣ್ ಜೇಟ್ಲಿಯವರು “ವಿರೋಧ ಪಕ್ಷಗಳು ಪಾಕಿಸ್ತಾನದ ಕೈಗೊಂಬೆಯಂತೆ ವರ್ತಿಸಿ ಸೇನಾ ದಾಳಿಯನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿವೆ” ಎಂದು ಹರಿಹಾಯ್ದಿದ್ದರು. ಆದರೆ ಈಗ ವಿರೋಧ ಪಕ್ಷಗಳ ಅವರದೇ ಪಾರ್ಟಿಯ ಯಡಿಯೂರಪ್ಪನವರ ಹೇಳಿಕೆಯೇ ಪಾಕಿಸ್ತಾನಕ್ಕೆ ಆಯುಧವಾಗಿ ಬಳಕೆಗೊಳ್ಳುತ್ತಿದೆ.
ದುರಂತವೆಂದರೆ, ಗೋ.ಮಧುಸೂದನ್ ಥರದ ಸ್ಥಳೀಯ ಬಿಜೆಪಿ ನಾಯಕರು ದೇಶಕ್ಕೆ ಮುಜುಗರ ಉಂಟು ಮಾಡುತ್ತಿರುವ ಈ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸುವುದರ ಬದಲು ತಮ್ಮ ಪಕ್ಷದ ನಾಯಕನ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಭರಾಟೆಯಲ್ಲಿ ‘ದೇಶಭಕ್ತಿ’ಯಲ್ಲೂ ರಾಜಕಾರಣ ಬೆರೆಸುತ್ತಿದ್ದಾರೆ. ಟೀವಿ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಹೌದು, ಯಡಿಯೂರಪ್ಪನವರು ಹೇಳಿದ್ದು ಸರಿ, ನಾವು ಇಪ್ಪತ್ತೆರಡಲ್ಲ, ಈಗ ಇಪ್ಪತ್ತೆಂಟು ಸೀಟು ಗೆಲ್ತೀವಿ ನೋಡ್ಕಳಿ. ದೇಶದ್ರೋಹಿ ’ಕಾಂಗ್ರೆಸ್’ ಜನ ತಕ್ಕ ಪಾಠ ಕಲಿಸ್ತಾರೆ ನೋಡ್ತಾ ಇರಿ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
ಪುಲ್ವಾಮಾದಲ್ಲಿ ಸೈನಿಕರು ಸತ್ತಾಗ ದೇಶದೆಲ್ಲೆಡೆ ಜನರು ಮರುಗಿದರೆ, ಅದರಿಂದ ರಾಜಕೀಯ ಲಾಭ ಪಡೆದುಕೊಳ್ಳುವವರು ಹಿಗ್ಗುತ್ತಾರೆನ್ನುವುದು ವಿಪರ್ಯಾಸ. ದೇಶಕ್ಕಿಂತ, ಸೈನಿಕರ ಜೀವಕ್ಕಿಂತ ತಮ್ಮ ಸೀಟು ಗಳಿಕೆಯೇ ಹೆಚ್ಚಾಯಿತೇ ಎಂಬ ಪ್ರಶ್ನೆ ಉದ್ಭವಿಸಿದೆ. ಕವಿಯೊಬ್ಬರು ಹೇಳಿದಂತೆ ’ಬೀದಿಯಲ್ಲಿಂದು ಶವಗಳ ಮಳೆ, ಮುಂದಿನ ಚುನಾವಣೆಯಲ್ಲಿ ಅವರಿಗೆ ಹುಲುಸಾದ ಬೆಳೆ’ ಎಂಬಂತೆ ಆದರೆ, ದೇಶದ ನೈತಿಕ ಪ್ರಜ್ಞೆಯು ನಾಶದ ಹಾದಿ ಹಿಡಿದಂತೆ. ಇದನ್ನು ಈ ರಾಜಕಾರಣಿಗಳಿಗೆ ತಿಳಿಸಿ ಹೇಳುವ ಕೆಲಸ ತುರ್ತಾಗಿ ಆಗಬೇಕಿದೆ.
ಆಧಾರ: ದಿ ಕ್ವಿಂಟ್
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...