Homeಕರ್ನಾಟಕಪಾಕ್‌ಗೆ ಆಹಾರವಾದ ಯಡಿಯೂರಪ್ಪ : ಆ ಮಾತು ಬಿಜೆಪಿಯ ಒಳ ಆಶಯವೇ?

ಪಾಕ್‌ಗೆ ಆಹಾರವಾದ ಯಡಿಯೂರಪ್ಪ : ಆ ಮಾತು ಬಿಜೆಪಿಯ ಒಳ ಆಶಯವೇ?

- Advertisement -
ಭಾರತೀಯ ವಾಯುಸೇನೆ ಬಾಲಕೋಟ್ ಮೇಲೆ ನಡೆಸಿದ ದಾಳಿಯಿಂದಾಗಿ ಬಿಜೆಪಿ ಕರ್ನಾಟಕದಲ್ಲಿ 22 ಸ್ಥಾನ ಗೆಲ್ಲೋದು ಗ್ಯಾರಂಟಿ ಅನ್ನೋ ಸ್ಟೇಟ್‌ಮೆಂಟ್ ಕೊಟ್ಟಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರು ಇಡೀ ದೇಶದ ಮಾನವನ್ನೇ ಹರಾಜು ಹಾಕಿದ್ದಾರೆ. ಸೇನೆಯನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳಲು ಬಿಜೆಪಿ ಯೋಜಿಸಿದೆಯಾ? ಅನ್ನೋ ಪ್ರಶ್ನೆ ಇದೀಗ ಲೋಕಸಭಾ ಚುನಾವಣಾ ಹೊಸ್ತಿಲಲ್ಲಿರುವ ದೇಶದ ನಾಗರೀಕರನ್ನು ಕಾಡಲು ಶುರು ಮಾಡಿರುವ ಹೊತ್ತಿನಲ್ಲೇ, ಅತ್ತ ಪಾಕಿಸ್ತಾನವು ಕೂಡಾ ಯಡಿಯೂರಪ್ಪನವರ ಈ ಹೇಳಿಕೆಯನ್ನೇ ಆಧಾರವಾಗಿಟ್ಟುಕೊಂಡು ಜಾಗತಿಕ ವೇದಿಕೆಗಳಲ್ಲಿ ಭಾರತವನ್ನು ಏಕಾಂಗಿಯಾಗಿಸುವ ಯತ್ನದಲ್ಲಿದೆ!
ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರಿಕ್-ಇ-ಇನ್ಸಾಪ್ (ಪಿಟಿಐ) ಪಕ್ಷದ ನಾಯಕರುಗಳು ಯಡಿಯೂರಪ್ಪನವರ ಹೇಳಿಕೆ ಇರುವ ವೀಡಿಯೋವನ್ನು ಟ್ಯಾಗ್ ಮಾಡಿ “ಎಲೆಕ್ಷನ್‌ನಲ್ಲಿ ಗೆಲ್ಲಲು ಹತಾಶೆಗೊಂಡಿರುವ ಜನರ ಹುನ್ನಾರದಿಂದಾಗಿ ಭಾರತೀಯರು ಯುದ್ಧೋನ್ಮಾದಕ್ಕೆ ಬಲಿಯಾಗಿದ್ದಾರೆ” ಎಂದು ಹೀಗಳೆದಿದ್ದಾರೆ. ಪತ್ರಕರ್ತೆ ಬರ್ಖಾ ದತ್ ಅವರು ಯಡಿಯೂರಪ್ಪನವರ ಹೇಳಿಕೆಯನ್ನು ಖಂಡಿಸಿದ್ದ ಟ್ವೀಟ್ ಅನ್ನು ಉಲ್ಲೇಖಿಸುತ್ತಾ ಪಾರ್ಟಿಯ ಅಧಿಕೃತ ಅಕೌಂಟ್‌ನಲ್ಲಿ ಇವತ್ತು (ಫೆಬ್ರವರಿ 28, ಗುರುವಾರ) ಹೀಗೆ ಟ್ವೀಟ್ ಮಾಡಲಾಗಿದೆ.
- Advertisement -

ಇದು ಹೊರಬಿದ್ದ ಅರ್ಧಗಂಟೆಯಲ್ಲೇ, ಪಿಟಿಐ ಮತ್ತೊಂದು ಟ್ವೀಟ್ ಅನ್ನು ಪೋಸ್ಟ್ ಮಾಡಿದ್ದು, ಅದರಲ್ಲಿ ಯುದ್ಧವನ್ನು ಎಲೆಕ್ಷನ್ ತಂತ್ರವಾಗಿ ಬಳಸಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಪಿಟಿಐನ ಟ್ವೀಟ್‌ಗಳಿಗೆ ಎರಡು ಉದ್ದೇಶಗಳಿರುವಂತಿದೆ:
  • ಎಲೆಕ್ಷನ್ ಗೆಲ್ಲಲು ಹತಾಶೆಗೊಂಡಿರುವ ಒಬ್ಬ ವ್ಯಕ್ತಿಯ (ಪ್ರಧಾನಿ ನರೇಂದ್ರ ಮೋದಿ ಎಂದು ಪರೋಕ್ಷವಾಗಿ ಸೂಚಿಸುತ್ತದೆ) ಅನರ್ಥ ಯತ್ನದಿಂದಾಗಿ ‘ಪಾಕಿಸ್ತಾನದ ವಿರುದ್ಧ ಸಿಡಿದು ನಿಲ್ಲುವಿಕೆಯು’ ಭಾರತ ಸರ್ಕಾರವನ್ನು ಜನರೊಂದಿಗೆ ಬೆಸೆಯುವ ಯತ್ನವೆಂದು ತೋರಿಸುವುದು.
  • ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಯಾದ ಜೈಶ್-ಎ-ಮೊಹ್ಮದ್‌ನಿಂದ ಫೆಬ್ರವರಿ 14ರಂದು ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಬಾಲಕೋಟ್ ವಾಯುದಾಳಿ ನಡೆದಿದೆ ಎಂಬ ವಾಸ್ತವವನ್ನು ಮರೆಮಾಚುವುದು.
ಪುಲ್ವಾಮಾ ಮತ್ತು ಬಾಲಕೋಟ್ ಎರಡೂ ದಾಳಿಗಳ ಕುರಿತಂತೆ ಉಭಯ ರಾಷ್ಟ್ರಗಳ ವಿರೋಧ ಪಕ್ಷಗಳು ಯಾವ ವಿವಾದಕ್ಕೂ ಆಸ್ಪದಕೊಡದಂತೆ ಆಯಾ ಸರ್ಕಾರಗಳ ಪರವಾಗಿ ನಿಂತಿವೆ. ಆದರೆ ನಿಜಕ್ಕೂ ಇರುವ ಸಮಸ್ಯೆ ಏನೆಂದರೆ, ಯಡಿಯೂರಪ್ಪನವರ ಈ ಹೇಳಿಕೆಯಿಂದಾಗಿ ’ಬಿಜೆಪಿಯ ಚುನಾವಣೆಯ ಹುನ್ನಾರದ ಭಾಗವಾಗಿ ಇಂಡಿಯಾ-ಪಾಕಿಸ್ತಾನಗಳು ಯುದ್ಧ ಸನ್ನದ್ಧವಾಗಬೇಕಾಗಿ ಬಂದಿದೆಯೇ ವಿನಾಃ ಪುಲ್ವಾಮಾ ದಾಳಿಯಿಂದಾಗಿ ಅಲ್ಲ’ ಎಂದು ಜಗತ್ತಿನ ಇತರೆ ರಾಷ್ಟ್ರಗಳ ಮುಂದೆ ವಾದ ಮಂಡಿಸಲು ಪಾಕಿಸ್ತಾನಕ್ಕೆ ಒಂದು ಅವಕಾಶ ಸಿಕ್ಕಂತಾಗಿದೆ.
ಯಡಿಯೂರಪ್ಪ ಇದೀಗ ಎಚ್ಚೆತ್ತುಕೊಂಡು ತನ್ನ ಹೇಳಿಕೆಯನ್ನು ತಪ್ಪಾಗಿ ತಿರುಚಲಾಗಿದೆ ಅಂತ ಹೇಳುತ್ತಿರಬಹುದು. ಆದರೆ ಇದರಿಂದ ದೇಶಕ್ಕೆ ಆಗಬೇಕಾದ ಲುಕ್ಸಾನು ಆಗಿಹೋಗಿದೆ. ಅವರದೇ ಪಕ್ಷದ ಕೇಂದ್ರ ವಿದೇಶಾಂಗ ರಾಜ್ಯ ಖಾತೆ ಸಚಿವ ಹಾಗೂ ಸೇನೆಯ ಮಾಜಿ ಜನರಲ್ ಕೂಡಾ ಆದ ವಿ.ಕೆ.ಸಿಂಗ್ ಅವರು “ಬಿಎಸ್‌ವೈಜೀ, ನಾನು ನಿಮ್ಮ ಮಾತನ್ನು ಒಪ್ಪುವುದಿಲ್ಲ. ನಾವು ಒಂದು ರಾಷ್ಟ್ರವಾಗಿ ನಿಲ್ಲುತ್ತೇವೆ. ನಮ್ಮ ದೇಶದ ರಕ್ಷಣೆ ಮತ್ತು ನಾಗರೀಕರ ಸುರಕ್ಷತೆಗಾಗಿ ಸರ್ಕಾರ ಈ ಕಾರ್ಯಾಚರಣೆ ನಡೆಸಿದೆಯೇ ವಿನಾಃ ಕೆಲ ಹೆಚ್ಚುವರಿ ಸೀಟುಗಳನ್ನು ಗೆಲ್ಲುವುದಕ್ಕಲ್ಲ” ಎಂದು ಟ್ವೀಟಿಸಿದ್ದಾರೆ.

ಪಾಕಿಸ್ತಾನದಲ್ಲಿ ಯಡಿಯೂರಪ್ಪನವರ ಹೇಳಿಕೆ ವೈರಲ್ ಆಗುವ ಒಂದು ದಿನದ ಹಿಂದಷ್ಟೇ, ಅಂದರೆ ಫೆಬ್ರವರಿ 27ರಂದು ಕೇಂದ್ರ ಹಣಕಾಸು ಮಂತ್ರಿ ಅರುಣ್ ಜೇಟ್ಲಿಯವರು “ವಿರೋಧ ಪಕ್ಷಗಳು ಪಾಕಿಸ್ತಾನದ ಕೈಗೊಂಬೆಯಂತೆ ವರ್ತಿಸಿ ಸೇನಾ ದಾಳಿಯನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿವೆ” ಎಂದು ಹರಿಹಾಯ್ದಿದ್ದರು. ಆದರೆ ಈಗ ವಿರೋಧ ಪಕ್ಷಗಳ ಅವರದೇ ಪಾರ್ಟಿಯ ಯಡಿಯೂರಪ್ಪನವರ ಹೇಳಿಕೆಯೇ ಪಾಕಿಸ್ತಾನಕ್ಕೆ ಆಯುಧವಾಗಿ ಬಳಕೆಗೊಳ್ಳುತ್ತಿದೆ.
ದುರಂತವೆಂದರೆ, ಗೋ.ಮಧುಸೂದನ್ ಥರದ ಸ್ಥಳೀಯ ಬಿಜೆಪಿ ನಾಯಕರು ದೇಶಕ್ಕೆ ಮುಜುಗರ ಉಂಟು ಮಾಡುತ್ತಿರುವ ಈ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸುವುದರ ಬದಲು ತಮ್ಮ ಪಕ್ಷದ ನಾಯಕನ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಭರಾಟೆಯಲ್ಲಿ ‘ದೇಶಭಕ್ತಿ’ಯಲ್ಲೂ ರಾಜಕಾರಣ ಬೆರೆಸುತ್ತಿದ್ದಾರೆ. ಟೀವಿ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಹೌದು, ಯಡಿಯೂರಪ್ಪನವರು ಹೇಳಿದ್ದು ಸರಿ, ನಾವು ಇಪ್ಪತ್ತೆರಡಲ್ಲ, ಈಗ ಇಪ್ಪತ್ತೆಂಟು ಸೀಟು ಗೆಲ್ತೀವಿ ನೋಡ್ಕಳಿ. ದೇಶದ್ರೋಹಿ ’ಕಾಂಗ್ರೆಸ್’ ಜನ ತಕ್ಕ ಪಾಠ ಕಲಿಸ್ತಾರೆ ನೋಡ್ತಾ ಇರಿ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
ಪುಲ್ವಾಮಾದಲ್ಲಿ ಸೈನಿಕರು ಸತ್ತಾಗ ದೇಶದೆಲ್ಲೆಡೆ ಜನರು ಮರುಗಿದರೆ, ಅದರಿಂದ ರಾಜಕೀಯ ಲಾಭ ಪಡೆದುಕೊಳ್ಳುವವರು ಹಿಗ್ಗುತ್ತಾರೆನ್ನುವುದು ವಿಪರ್ಯಾಸ. ದೇಶಕ್ಕಿಂತ, ಸೈನಿಕರ ಜೀವಕ್ಕಿಂತ ತಮ್ಮ ಸೀಟು ಗಳಿಕೆಯೇ ಹೆಚ್ಚಾಯಿತೇ ಎಂಬ ಪ್ರಶ್ನೆ ಉದ್ಭವಿಸಿದೆ. ಕವಿಯೊಬ್ಬರು ಹೇಳಿದಂತೆ ’ಬೀದಿಯಲ್ಲಿಂದು ಶವಗಳ ಮಳೆ, ಮುಂದಿನ ಚುನಾವಣೆಯಲ್ಲಿ ಅವರಿಗೆ ಹುಲುಸಾದ ಬೆಳೆ’ ಎಂಬಂತೆ ಆದರೆ, ದೇಶದ ನೈತಿಕ ಪ್ರಜ್ಞೆಯು ನಾಶದ ಹಾದಿ ಹಿಡಿದಂತೆ. ಇದನ್ನು ಈ ರಾಜಕಾರಣಿಗಳಿಗೆ ತಿಳಿಸಿ ಹೇಳುವ ಕೆಲಸ ತುರ್ತಾಗಿ ಆಗಬೇಕಿದೆ.
ಆಧಾರ: ದಿ ಕ್ವಿಂಟ್
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...