Homeಕರ್ನಾಟಕಪಾಕ್‌ಗೆ ಆಹಾರವಾದ ಯಡಿಯೂರಪ್ಪ : ಆ ಮಾತು ಬಿಜೆಪಿಯ ಒಳ ಆಶಯವೇ?

ಪಾಕ್‌ಗೆ ಆಹಾರವಾದ ಯಡಿಯೂರಪ್ಪ : ಆ ಮಾತು ಬಿಜೆಪಿಯ ಒಳ ಆಶಯವೇ?

- Advertisement -
ಭಾರತೀಯ ವಾಯುಸೇನೆ ಬಾಲಕೋಟ್ ಮೇಲೆ ನಡೆಸಿದ ದಾಳಿಯಿಂದಾಗಿ ಬಿಜೆಪಿ ಕರ್ನಾಟಕದಲ್ಲಿ 22 ಸ್ಥಾನ ಗೆಲ್ಲೋದು ಗ್ಯಾರಂಟಿ ಅನ್ನೋ ಸ್ಟೇಟ್‌ಮೆಂಟ್ ಕೊಟ್ಟಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರು ಇಡೀ ದೇಶದ ಮಾನವನ್ನೇ ಹರಾಜು ಹಾಕಿದ್ದಾರೆ. ಸೇನೆಯನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳಲು ಬಿಜೆಪಿ ಯೋಜಿಸಿದೆಯಾ? ಅನ್ನೋ ಪ್ರಶ್ನೆ ಇದೀಗ ಲೋಕಸಭಾ ಚುನಾವಣಾ ಹೊಸ್ತಿಲಲ್ಲಿರುವ ದೇಶದ ನಾಗರೀಕರನ್ನು ಕಾಡಲು ಶುರು ಮಾಡಿರುವ ಹೊತ್ತಿನಲ್ಲೇ, ಅತ್ತ ಪಾಕಿಸ್ತಾನವು ಕೂಡಾ ಯಡಿಯೂರಪ್ಪನವರ ಈ ಹೇಳಿಕೆಯನ್ನೇ ಆಧಾರವಾಗಿಟ್ಟುಕೊಂಡು ಜಾಗತಿಕ ವೇದಿಕೆಗಳಲ್ಲಿ ಭಾರತವನ್ನು ಏಕಾಂಗಿಯಾಗಿಸುವ ಯತ್ನದಲ್ಲಿದೆ!
ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರಿಕ್-ಇ-ಇನ್ಸಾಪ್ (ಪಿಟಿಐ) ಪಕ್ಷದ ನಾಯಕರುಗಳು ಯಡಿಯೂರಪ್ಪನವರ ಹೇಳಿಕೆ ಇರುವ ವೀಡಿಯೋವನ್ನು ಟ್ಯಾಗ್ ಮಾಡಿ “ಎಲೆಕ್ಷನ್‌ನಲ್ಲಿ ಗೆಲ್ಲಲು ಹತಾಶೆಗೊಂಡಿರುವ ಜನರ ಹುನ್ನಾರದಿಂದಾಗಿ ಭಾರತೀಯರು ಯುದ್ಧೋನ್ಮಾದಕ್ಕೆ ಬಲಿಯಾಗಿದ್ದಾರೆ” ಎಂದು ಹೀಗಳೆದಿದ್ದಾರೆ. ಪತ್ರಕರ್ತೆ ಬರ್ಖಾ ದತ್ ಅವರು ಯಡಿಯೂರಪ್ಪನವರ ಹೇಳಿಕೆಯನ್ನು ಖಂಡಿಸಿದ್ದ ಟ್ವೀಟ್ ಅನ್ನು ಉಲ್ಲೇಖಿಸುತ್ತಾ ಪಾರ್ಟಿಯ ಅಧಿಕೃತ ಅಕೌಂಟ್‌ನಲ್ಲಿ ಇವತ್ತು (ಫೆಬ್ರವರಿ 28, ಗುರುವಾರ) ಹೀಗೆ ಟ್ವೀಟ್ ಮಾಡಲಾಗಿದೆ.
- Advertisement -

ಇದು ಹೊರಬಿದ್ದ ಅರ್ಧಗಂಟೆಯಲ್ಲೇ, ಪಿಟಿಐ ಮತ್ತೊಂದು ಟ್ವೀಟ್ ಅನ್ನು ಪೋಸ್ಟ್ ಮಾಡಿದ್ದು, ಅದರಲ್ಲಿ ಯುದ್ಧವನ್ನು ಎಲೆಕ್ಷನ್ ತಂತ್ರವಾಗಿ ಬಳಸಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಪಿಟಿಐನ ಟ್ವೀಟ್‌ಗಳಿಗೆ ಎರಡು ಉದ್ದೇಶಗಳಿರುವಂತಿದೆ:
  • ಎಲೆಕ್ಷನ್ ಗೆಲ್ಲಲು ಹತಾಶೆಗೊಂಡಿರುವ ಒಬ್ಬ ವ್ಯಕ್ತಿಯ (ಪ್ರಧಾನಿ ನರೇಂದ್ರ ಮೋದಿ ಎಂದು ಪರೋಕ್ಷವಾಗಿ ಸೂಚಿಸುತ್ತದೆ) ಅನರ್ಥ ಯತ್ನದಿಂದಾಗಿ ‘ಪಾಕಿಸ್ತಾನದ ವಿರುದ್ಧ ಸಿಡಿದು ನಿಲ್ಲುವಿಕೆಯು’ ಭಾರತ ಸರ್ಕಾರವನ್ನು ಜನರೊಂದಿಗೆ ಬೆಸೆಯುವ ಯತ್ನವೆಂದು ತೋರಿಸುವುದು.
  • ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಯಾದ ಜೈಶ್-ಎ-ಮೊಹ್ಮದ್‌ನಿಂದ ಫೆಬ್ರವರಿ 14ರಂದು ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಬಾಲಕೋಟ್ ವಾಯುದಾಳಿ ನಡೆದಿದೆ ಎಂಬ ವಾಸ್ತವವನ್ನು ಮರೆಮಾಚುವುದು.
ಪುಲ್ವಾಮಾ ಮತ್ತು ಬಾಲಕೋಟ್ ಎರಡೂ ದಾಳಿಗಳ ಕುರಿತಂತೆ ಉಭಯ ರಾಷ್ಟ್ರಗಳ ವಿರೋಧ ಪಕ್ಷಗಳು ಯಾವ ವಿವಾದಕ್ಕೂ ಆಸ್ಪದಕೊಡದಂತೆ ಆಯಾ ಸರ್ಕಾರಗಳ ಪರವಾಗಿ ನಿಂತಿವೆ. ಆದರೆ ನಿಜಕ್ಕೂ ಇರುವ ಸಮಸ್ಯೆ ಏನೆಂದರೆ, ಯಡಿಯೂರಪ್ಪನವರ ಈ ಹೇಳಿಕೆಯಿಂದಾಗಿ ’ಬಿಜೆಪಿಯ ಚುನಾವಣೆಯ ಹುನ್ನಾರದ ಭಾಗವಾಗಿ ಇಂಡಿಯಾ-ಪಾಕಿಸ್ತಾನಗಳು ಯುದ್ಧ ಸನ್ನದ್ಧವಾಗಬೇಕಾಗಿ ಬಂದಿದೆಯೇ ವಿನಾಃ ಪುಲ್ವಾಮಾ ದಾಳಿಯಿಂದಾಗಿ ಅಲ್ಲ’ ಎಂದು ಜಗತ್ತಿನ ಇತರೆ ರಾಷ್ಟ್ರಗಳ ಮುಂದೆ ವಾದ ಮಂಡಿಸಲು ಪಾಕಿಸ್ತಾನಕ್ಕೆ ಒಂದು ಅವಕಾಶ ಸಿಕ್ಕಂತಾಗಿದೆ.
ಯಡಿಯೂರಪ್ಪ ಇದೀಗ ಎಚ್ಚೆತ್ತುಕೊಂಡು ತನ್ನ ಹೇಳಿಕೆಯನ್ನು ತಪ್ಪಾಗಿ ತಿರುಚಲಾಗಿದೆ ಅಂತ ಹೇಳುತ್ತಿರಬಹುದು. ಆದರೆ ಇದರಿಂದ ದೇಶಕ್ಕೆ ಆಗಬೇಕಾದ ಲುಕ್ಸಾನು ಆಗಿಹೋಗಿದೆ. ಅವರದೇ ಪಕ್ಷದ ಕೇಂದ್ರ ವಿದೇಶಾಂಗ ರಾಜ್ಯ ಖಾತೆ ಸಚಿವ ಹಾಗೂ ಸೇನೆಯ ಮಾಜಿ ಜನರಲ್ ಕೂಡಾ ಆದ ವಿ.ಕೆ.ಸಿಂಗ್ ಅವರು “ಬಿಎಸ್‌ವೈಜೀ, ನಾನು ನಿಮ್ಮ ಮಾತನ್ನು ಒಪ್ಪುವುದಿಲ್ಲ. ನಾವು ಒಂದು ರಾಷ್ಟ್ರವಾಗಿ ನಿಲ್ಲುತ್ತೇವೆ. ನಮ್ಮ ದೇಶದ ರಕ್ಷಣೆ ಮತ್ತು ನಾಗರೀಕರ ಸುರಕ್ಷತೆಗಾಗಿ ಸರ್ಕಾರ ಈ ಕಾರ್ಯಾಚರಣೆ ನಡೆಸಿದೆಯೇ ವಿನಾಃ ಕೆಲ ಹೆಚ್ಚುವರಿ ಸೀಟುಗಳನ್ನು ಗೆಲ್ಲುವುದಕ್ಕಲ್ಲ” ಎಂದು ಟ್ವೀಟಿಸಿದ್ದಾರೆ.

ಪಾಕಿಸ್ತಾನದಲ್ಲಿ ಯಡಿಯೂರಪ್ಪನವರ ಹೇಳಿಕೆ ವೈರಲ್ ಆಗುವ ಒಂದು ದಿನದ ಹಿಂದಷ್ಟೇ, ಅಂದರೆ ಫೆಬ್ರವರಿ 27ರಂದು ಕೇಂದ್ರ ಹಣಕಾಸು ಮಂತ್ರಿ ಅರುಣ್ ಜೇಟ್ಲಿಯವರು “ವಿರೋಧ ಪಕ್ಷಗಳು ಪಾಕಿಸ್ತಾನದ ಕೈಗೊಂಬೆಯಂತೆ ವರ್ತಿಸಿ ಸೇನಾ ದಾಳಿಯನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿವೆ” ಎಂದು ಹರಿಹಾಯ್ದಿದ್ದರು. ಆದರೆ ಈಗ ವಿರೋಧ ಪಕ್ಷಗಳ ಅವರದೇ ಪಾರ್ಟಿಯ ಯಡಿಯೂರಪ್ಪನವರ ಹೇಳಿಕೆಯೇ ಪಾಕಿಸ್ತಾನಕ್ಕೆ ಆಯುಧವಾಗಿ ಬಳಕೆಗೊಳ್ಳುತ್ತಿದೆ.
ದುರಂತವೆಂದರೆ, ಗೋ.ಮಧುಸೂದನ್ ಥರದ ಸ್ಥಳೀಯ ಬಿಜೆಪಿ ನಾಯಕರು ದೇಶಕ್ಕೆ ಮುಜುಗರ ಉಂಟು ಮಾಡುತ್ತಿರುವ ಈ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸುವುದರ ಬದಲು ತಮ್ಮ ಪಕ್ಷದ ನಾಯಕನ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಭರಾಟೆಯಲ್ಲಿ ‘ದೇಶಭಕ್ತಿ’ಯಲ್ಲೂ ರಾಜಕಾರಣ ಬೆರೆಸುತ್ತಿದ್ದಾರೆ. ಟೀವಿ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಹೌದು, ಯಡಿಯೂರಪ್ಪನವರು ಹೇಳಿದ್ದು ಸರಿ, ನಾವು ಇಪ್ಪತ್ತೆರಡಲ್ಲ, ಈಗ ಇಪ್ಪತ್ತೆಂಟು ಸೀಟು ಗೆಲ್ತೀವಿ ನೋಡ್ಕಳಿ. ದೇಶದ್ರೋಹಿ ’ಕಾಂಗ್ರೆಸ್’ ಜನ ತಕ್ಕ ಪಾಠ ಕಲಿಸ್ತಾರೆ ನೋಡ್ತಾ ಇರಿ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
ಪುಲ್ವಾಮಾದಲ್ಲಿ ಸೈನಿಕರು ಸತ್ತಾಗ ದೇಶದೆಲ್ಲೆಡೆ ಜನರು ಮರುಗಿದರೆ, ಅದರಿಂದ ರಾಜಕೀಯ ಲಾಭ ಪಡೆದುಕೊಳ್ಳುವವರು ಹಿಗ್ಗುತ್ತಾರೆನ್ನುವುದು ವಿಪರ್ಯಾಸ. ದೇಶಕ್ಕಿಂತ, ಸೈನಿಕರ ಜೀವಕ್ಕಿಂತ ತಮ್ಮ ಸೀಟು ಗಳಿಕೆಯೇ ಹೆಚ್ಚಾಯಿತೇ ಎಂಬ ಪ್ರಶ್ನೆ ಉದ್ಭವಿಸಿದೆ. ಕವಿಯೊಬ್ಬರು ಹೇಳಿದಂತೆ ’ಬೀದಿಯಲ್ಲಿಂದು ಶವಗಳ ಮಳೆ, ಮುಂದಿನ ಚುನಾವಣೆಯಲ್ಲಿ ಅವರಿಗೆ ಹುಲುಸಾದ ಬೆಳೆ’ ಎಂಬಂತೆ ಆದರೆ, ದೇಶದ ನೈತಿಕ ಪ್ರಜ್ಞೆಯು ನಾಶದ ಹಾದಿ ಹಿಡಿದಂತೆ. ಇದನ್ನು ಈ ರಾಜಕಾರಣಿಗಳಿಗೆ ತಿಳಿಸಿ ಹೇಳುವ ಕೆಲಸ ತುರ್ತಾಗಿ ಆಗಬೇಕಿದೆ.
ಆಧಾರ: ದಿ ಕ್ವಿಂಟ್
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...