Homeಮುಖಪುಟತಮಿಳುನಾಡು ಶಾಸಕನ ಅಂತರ್ಜಾತಿ ವಿವಾಹದ ವಿಡಿಯೋ ವೈರಲ್: ಯುವತಿಯ ತಂದೆ ಆತ್ಮಹತ್ಯೆಗೆ ಯತ್ನ!

ತಮಿಳುನಾಡು ಶಾಸಕನ ಅಂತರ್ಜಾತಿ ವಿವಾಹದ ವಿಡಿಯೋ ವೈರಲ್: ಯುವತಿಯ ತಂದೆ ಆತ್ಮಹತ್ಯೆಗೆ ಯತ್ನ!

36 ವರ್ಷದ ದಲಿತ ಶಾಸಕರೊಬ್ಬರು ಸೋಮವಾರ ಬೆಳಿಗ್ಗೆ ತಮ್ಮ ನಿವಾಸದಲ್ಲಿ ಸೌಂದರ್ಯ ಎಂಬ ಬ್ರಾಹ್ಮಣ ಯುವತಿಯನ್ನು ವಿವಾಹವಾಗಿದ್ದರು. ಇದನ್ನು ಒಪ್ಪದ ಯುವತಿಯ ತಂದೆ ಎಸ್‌.ಸ್ವಾಮಿನಾಥನ್ ಅಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ್ದರು.

- Advertisement -
- Advertisement -

ತಮಿಳುನಾಡಿನ ಎಐಎಡಿಎಂಕೆ ಶಾಸಕ ಅಂತರ್ಜಾತಿ ವಿವಾಹ ಮಾಡಿಕೊಂಡಿದ್ದು, ಈ ಸುದ್ಧಿ ರಾಜ್ಯದಾದ್ಯಂತ ಶರವೇಗದಲ್ಲಿ ವೈರಲ್ ಆಗಿತ್ತು. ಆದರೆ, ಯುವತಿಯ ತಂದೆ, “ತನ್ನ ಮಗಳನ್ನು ಅಪಹರಿಸಿ, ತಮ್ಮ ನಂಬಿಕೆಯನ್ನು ಹಾಳುಮಾಡಿದ್ದಾರೆ ಎಂದು ಆರೋಪಿಸಿ, ಆತ್ಮಹತ್ಯೆಗೆ ಯತ್ನಿಸಿದ್ದು, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳುವ ಮೊದಲೇ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಅಂತರ್ಜಾತಿ ವಿವಾಹದಿಂದ ಹತ್ಯೆಯಾದ ಪ್ರಣಯ್ ಹೆಂಡತಿ ಅಮೃತಗೆ ತಂದೆಯಿಂದ ಮತ್ತೆ ಬೆದರಿಕೆ: ದೂರು ದಾಖಲು

ದಲಿತ ಸಮುದಾಯಕ್ಕೆ ಸೇರಿದ 36 ವರ್ಷದ ಶಾಸಕ ಪ್ರಭು ಸೋಮವಾರ ಬೆಳಿಗ್ಗೆ ತಮ್ಮ ನಿವಾಸದಲ್ಲಿ ಸೌಂದರ್ಯ ಎಂಬ ಬ್ರಾಹ್ಮಣ ಯುವತಿಯನ್ನು ವಿವಾಹವಾಗಿದ್ದರು. ಇದನ್ನು ಒಪ್ಪದ ಯುವತಿಯ ತಂದೆ ಎಸ್‌.ಸ್ವಾಮಿನಾಥನ್ ಅಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ್ದರು.

ಇದನ್ನೂ ಓದಿ: 19 ದಿನಗಳಲ್ಲಿ ಮುರಿದು ಬಿದ್ದ ಅಂತರ್ಜಾತಿ ವಿವಾಹ : ಹುಡುಗ ಆಸ್ಪತ್ರೆಯಲ್ಲಿ, ಹುಡುಗಿಗೆ ಮತ್ತೊಂದು ಮದುವೆಗೆ ಸಿದ್ಧತೆ

“ಪ್ರಭು ನಮಗೆ ಹಲವು ವರ್ಷಗಳಿಂದ ಪರಿಚಯವಿದ್ದು, ನನ್ನ ಮಗನಂತೆ ಇದ್ದ. ಈಗ ಆ ನಂಬಿಕೆಯನ್ನು ಹಾಳುಮಾಡಿದ್ದಾನೆ.  ನನ್ನ ಮಗಳಿಗೆ ಆಮಿಷವೊಡ್ಡಿದ್ದಾನೆ. ಆಕೆಗೆ ಬೆದರಿಕೆ ಒಡ್ಡಿ ವಿವಾಹವಾಗಿದ್ದಾನೆ. ನನಗೆ ಜಾತಿ ಸಮಸ್ಯೆಯಲ್ಲ. ಆದರೆ ಅವರಿಬ್ಬರ ನಡುವೆ 17 ವರ್ಷಗಳ ವಯಸ್ಸಿನ ಅಂತರವಿದೆ. ಅಕ್ಟೋಬರ್ 1 ರಂದು 4 ಗಂಟೆಯ ಸುಮಾರಿಗೆ ತನ್ನ ಮಗಳನ್ನು ಅಪರಿಹಿಸಿದ್ದಾನೆ” ಎಂದು ಯುವತಿಯ ಪೋಷಕರು ಆರೋಪಿಸಿದ್ದಾರೆ.

ಆದರೆ ಪ್ರಭು ಅಪಹರಣದ ಆರೋಪವನ್ನು ತಿರಸ್ಕರಿಸಿ, ಇದನ್ನು ಸ್ಪಷ್ಟಪಡಿಸಲು ಸೌಂದರ್ಯ ಅವರೊಂದಿಗಿನ ವೀಡಿಯೋವೊಂದನ್ನು ಬಿಡುಗಡೆ ಮಾಡಿದ್ದರು. ಇದು ಈಗ ವೈರಲ್ ಆಗುತ್ತಿದೆ. ಯುವತಿಯ ಪೋಷಕರ ಆರೋಪಗಳನ್ನು ತಿರಸ್ಕರಿಸಿದ ಪ್ರಭು, “ಈ ವಿವಾಹಕ್ಕೆ ಅವರ ಅನುಮತಿ ಕೋರಿದ್ದೆ. ಆದರೆ ಅವರು ಒಪ್ಪಲಿಲ್ಲ. ನಾವಿಬ್ಬರೂ ಪರಸ್ಪರ ಪ್ರೀತಿಸಿದ್ದೇವೆ. ನನ್ನ ತಂದೆ ತಾಯಿಯ ಒಪ್ಪಿಗೆಯೊಂದಿಗೆ ಈಗ ವಿವಾಹವಾಗಿದ್ದೇವೆ. ಯುವತಿಯ ಪೋಷಕರು ಆರೋಪಿಸುವಂತೆ ಯಾವುದೇ ಕೊಲೆ ಬೆದರಿಕೆಯನ್ನೂ ನಾನು ಹಾಕಿಲ್ಲ” ಎಂದು ವೀಡಿಯೋದಲ್ಲಿ ಹೆಳಿದ್ದಾರೆ.

ಇದನ್ನೂ ಓದಿ: ಅಂತರ್ಜಾತಿ ವಿವಾಹವಾಗಿದ್ದ ಶಾಸಕನ ಪುತ್ರಿಯ ಗಂಡನ ಮೇಲೆ ಕೋರ್ಟ್ ಹಾಲ್ ನಲ್ಲಿ ಹಲ್ಲೆ

ವಿವಾಹ ಸ್ಥಳದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯ ತಂದೆಯ ಮೇಲೆ ಐಪಿಸಿ ಸೆಕ್ಷನ್ 309ರ ಅಡಿಯಲ್ಲಿ ಆತ್ಮಹತ್ಯೆ ಪ್ರಯತ್ನದ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ: ಜಾತಿಯಾಧಾರಿತ ಮ್ಯಾಟ್ರಿಮೋನಿಗೆ ಪರ್ಯಾಯ; “ಚೇಂಜ್ ಮೇಕರ್ಸ್ ಮ್ಯಾಟ್ರಿಮೋನಿ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...