Homeಮುಖಪುಟತಮಿಳುನಾಡು ಶಾಸಕನ ಅಂತರ್ಜಾತಿ ವಿವಾಹದ ವಿಡಿಯೋ ವೈರಲ್: ಯುವತಿಯ ತಂದೆ ಆತ್ಮಹತ್ಯೆಗೆ ಯತ್ನ!

ತಮಿಳುನಾಡು ಶಾಸಕನ ಅಂತರ್ಜಾತಿ ವಿವಾಹದ ವಿಡಿಯೋ ವೈರಲ್: ಯುವತಿಯ ತಂದೆ ಆತ್ಮಹತ್ಯೆಗೆ ಯತ್ನ!

36 ವರ್ಷದ ದಲಿತ ಶಾಸಕರೊಬ್ಬರು ಸೋಮವಾರ ಬೆಳಿಗ್ಗೆ ತಮ್ಮ ನಿವಾಸದಲ್ಲಿ ಸೌಂದರ್ಯ ಎಂಬ ಬ್ರಾಹ್ಮಣ ಯುವತಿಯನ್ನು ವಿವಾಹವಾಗಿದ್ದರು. ಇದನ್ನು ಒಪ್ಪದ ಯುವತಿಯ ತಂದೆ ಎಸ್‌.ಸ್ವಾಮಿನಾಥನ್ ಅಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ್ದರು.

- Advertisement -
- Advertisement -

ತಮಿಳುನಾಡಿನ ಎಐಎಡಿಎಂಕೆ ಶಾಸಕ ಅಂತರ್ಜಾತಿ ವಿವಾಹ ಮಾಡಿಕೊಂಡಿದ್ದು, ಈ ಸುದ್ಧಿ ರಾಜ್ಯದಾದ್ಯಂತ ಶರವೇಗದಲ್ಲಿ ವೈರಲ್ ಆಗಿತ್ತು. ಆದರೆ, ಯುವತಿಯ ತಂದೆ, “ತನ್ನ ಮಗಳನ್ನು ಅಪಹರಿಸಿ, ತಮ್ಮ ನಂಬಿಕೆಯನ್ನು ಹಾಳುಮಾಡಿದ್ದಾರೆ ಎಂದು ಆರೋಪಿಸಿ, ಆತ್ಮಹತ್ಯೆಗೆ ಯತ್ನಿಸಿದ್ದು, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳುವ ಮೊದಲೇ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಅಂತರ್ಜಾತಿ ವಿವಾಹದಿಂದ ಹತ್ಯೆಯಾದ ಪ್ರಣಯ್ ಹೆಂಡತಿ ಅಮೃತಗೆ ತಂದೆಯಿಂದ ಮತ್ತೆ ಬೆದರಿಕೆ: ದೂರು ದಾಖಲು

ದಲಿತ ಸಮುದಾಯಕ್ಕೆ ಸೇರಿದ 36 ವರ್ಷದ ಶಾಸಕ ಪ್ರಭು ಸೋಮವಾರ ಬೆಳಿಗ್ಗೆ ತಮ್ಮ ನಿವಾಸದಲ್ಲಿ ಸೌಂದರ್ಯ ಎಂಬ ಬ್ರಾಹ್ಮಣ ಯುವತಿಯನ್ನು ವಿವಾಹವಾಗಿದ್ದರು. ಇದನ್ನು ಒಪ್ಪದ ಯುವತಿಯ ತಂದೆ ಎಸ್‌.ಸ್ವಾಮಿನಾಥನ್ ಅಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ್ದರು.

ಇದನ್ನೂ ಓದಿ: 19 ದಿನಗಳಲ್ಲಿ ಮುರಿದು ಬಿದ್ದ ಅಂತರ್ಜಾತಿ ವಿವಾಹ : ಹುಡುಗ ಆಸ್ಪತ್ರೆಯಲ್ಲಿ, ಹುಡುಗಿಗೆ ಮತ್ತೊಂದು ಮದುವೆಗೆ ಸಿದ್ಧತೆ

“ಪ್ರಭು ನಮಗೆ ಹಲವು ವರ್ಷಗಳಿಂದ ಪರಿಚಯವಿದ್ದು, ನನ್ನ ಮಗನಂತೆ ಇದ್ದ. ಈಗ ಆ ನಂಬಿಕೆಯನ್ನು ಹಾಳುಮಾಡಿದ್ದಾನೆ.  ನನ್ನ ಮಗಳಿಗೆ ಆಮಿಷವೊಡ್ಡಿದ್ದಾನೆ. ಆಕೆಗೆ ಬೆದರಿಕೆ ಒಡ್ಡಿ ವಿವಾಹವಾಗಿದ್ದಾನೆ. ನನಗೆ ಜಾತಿ ಸಮಸ್ಯೆಯಲ್ಲ. ಆದರೆ ಅವರಿಬ್ಬರ ನಡುವೆ 17 ವರ್ಷಗಳ ವಯಸ್ಸಿನ ಅಂತರವಿದೆ. ಅಕ್ಟೋಬರ್ 1 ರಂದು 4 ಗಂಟೆಯ ಸುಮಾರಿಗೆ ತನ್ನ ಮಗಳನ್ನು ಅಪರಿಹಿಸಿದ್ದಾನೆ” ಎಂದು ಯುವತಿಯ ಪೋಷಕರು ಆರೋಪಿಸಿದ್ದಾರೆ.

ಆದರೆ ಪ್ರಭು ಅಪಹರಣದ ಆರೋಪವನ್ನು ತಿರಸ್ಕರಿಸಿ, ಇದನ್ನು ಸ್ಪಷ್ಟಪಡಿಸಲು ಸೌಂದರ್ಯ ಅವರೊಂದಿಗಿನ ವೀಡಿಯೋವೊಂದನ್ನು ಬಿಡುಗಡೆ ಮಾಡಿದ್ದರು. ಇದು ಈಗ ವೈರಲ್ ಆಗುತ್ತಿದೆ. ಯುವತಿಯ ಪೋಷಕರ ಆರೋಪಗಳನ್ನು ತಿರಸ್ಕರಿಸಿದ ಪ್ರಭು, “ಈ ವಿವಾಹಕ್ಕೆ ಅವರ ಅನುಮತಿ ಕೋರಿದ್ದೆ. ಆದರೆ ಅವರು ಒಪ್ಪಲಿಲ್ಲ. ನಾವಿಬ್ಬರೂ ಪರಸ್ಪರ ಪ್ರೀತಿಸಿದ್ದೇವೆ. ನನ್ನ ತಂದೆ ತಾಯಿಯ ಒಪ್ಪಿಗೆಯೊಂದಿಗೆ ಈಗ ವಿವಾಹವಾಗಿದ್ದೇವೆ. ಯುವತಿಯ ಪೋಷಕರು ಆರೋಪಿಸುವಂತೆ ಯಾವುದೇ ಕೊಲೆ ಬೆದರಿಕೆಯನ್ನೂ ನಾನು ಹಾಕಿಲ್ಲ” ಎಂದು ವೀಡಿಯೋದಲ್ಲಿ ಹೆಳಿದ್ದಾರೆ.

ಇದನ್ನೂ ಓದಿ: ಅಂತರ್ಜಾತಿ ವಿವಾಹವಾಗಿದ್ದ ಶಾಸಕನ ಪುತ್ರಿಯ ಗಂಡನ ಮೇಲೆ ಕೋರ್ಟ್ ಹಾಲ್ ನಲ್ಲಿ ಹಲ್ಲೆ

ವಿವಾಹ ಸ್ಥಳದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯ ತಂದೆಯ ಮೇಲೆ ಐಪಿಸಿ ಸೆಕ್ಷನ್ 309ರ ಅಡಿಯಲ್ಲಿ ಆತ್ಮಹತ್ಯೆ ಪ್ರಯತ್ನದ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ: ಜಾತಿಯಾಧಾರಿತ ಮ್ಯಾಟ್ರಿಮೋನಿಗೆ ಪರ್ಯಾಯ; “ಚೇಂಜ್ ಮೇಕರ್ಸ್ ಮ್ಯಾಟ್ರಿಮೋನಿ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...