Homeಕರ್ನಾಟಕಸಿಎಂ ಪುತ್ರನ ವಿರುದ್ಧ ಸುದ್ದಿ ಮಾಡಿದ್ದಕ್ಕೆ ಸ್ಥಗಿತ: ನಾಳೆಯಿಂದ ಆನ್‌ ಏರ್‌ ಆಗಲಿದೆ ಪವರ್‌ ಟಿವಿ

ಸಿಎಂ ಪುತ್ರನ ವಿರುದ್ಧ ಸುದ್ದಿ ಮಾಡಿದ್ದಕ್ಕೆ ಸ್ಥಗಿತ: ನಾಳೆಯಿಂದ ಆನ್‌ ಏರ್‌ ಆಗಲಿದೆ ಪವರ್‌ ಟಿವಿ

ಸಿಸಿಬಿ ಪೊಲೀಸರು ಸರ್ವರ್ ತೆಗೆದುಕೊಂಡು ಹೋಗಿರುವುದರಿಂದ ಪ್ರಸಾರ ನಿಲ್ಲಿಸಲಾಗಿತ್ತು. ಈಗ ಹೊಸ ಸರ್ವರ್ ವ್ಯವಸ್ಥೆ ಆಗಿರುವುದರಿಂದ ನಾಳೆಯಿಂದ ಮತ್ತೆ ಚಾನೆಲ್ ಕಾರ್ಯಾರಂಭವಾಗಲಿದೆ. ಇದು ನ್ಯಾಯಕ್ಕೆ ಸಿಕ್ಕ ಗೆಲುವು ಎಂದು ಉದ್ಯೋಗಿಗಳು ಪ್ರತಿಕ್ರಿಯಿಸಿದ್ದಾರೆ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ಪುತ್ರ ಬಿ.ವೈ ವಿಜಯೇಂದ್ರ ಭ್ರಷ್ಟಾಚಾರ ನಡೆಸಿದ್ದಾರೆಂದು ಆರೋಪಿಸಿ ದಾಖಲೆ ಸಹಿತ ವರದಿ ಮಾಡಿದ್ದಕ್ಕೆ ಸ್ಥಗಿತಗೊಂಡಿದ್ದ ಕನ್ನಡದ ಸುದ್ದಿ ಮಾಧ್ಯಮ ಪವರ್‌ ಟಿವಿ ನಾಳೆಯಿಂದ ಮತ್ತೆ ಕಾರ್ಯರಂಭ ಮಾಡಲಿದೆ.

ಸಿಎಂ ಪುತ್ರನ ಭ್ರಷ್ಟಾಚಾರ ಬಯಲು ಮಾಡಿದ ಕಾರಣ ರಾಜ್ಯ ಸರ್ಕಾರ ದ್ವೇಷ ರಾಜಕೀಯ ಮಾಡಿ ನಮ್ಮ ಸಂಸ್ಥೆಯನ್ನು ಮುಚ್ಚಿಸುವ ಹುನ್ನಾರ ಮಾಡಲಾಗುತ್ತಿದೆ ಎಂದು ಪವರ್ ಟಿವಿ ಆರೋಪಿಸಿತ್ತು.

ಸೆ.28ರಂದು ಕನ್ನಡದ ಸುದ್ದಿ ಮಾಧ್ಯಮ ಪವರ್‌ ಟಿವಿ ಮುಖ್ಯಸ್ಥರ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ನಂತರ ಚಾನೆಲ್‌ನ ಪ್ರಿನ್ಸಿಪಲ್ ಎಡಿಟರ್‌ ರಹಮಾನ್ ಹಾಸನ್ ಅವರನ್ನು ವಿಚಾರಣೆಗೆಂದು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಲಾಗಿತ್ತು. ಮುಖ್ಯಮಂತ್ರಿ ಕುಟುಂಬ ಭಾರಿ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಸಾಕ್ಷಿ ಸಮೇತ ನಿರಂತರ ಸುದ್ದಿ ಪ್ರಸಾರ ಮಾಡಿದ್ದಕ್ಕೆ ಪೊಲೀಸರಿಂದ ದಾಳಿ ಮಾಡಿಸಿ ಬೆದರಿಸುವ ಹುನ್ನಾರವಿದು ಎಂದು ಸುದ್ದಿ ಸಂಸ್ಥೆ ಪ್ರತಿಕ್ರಿಯಿಸಿತ್ತು.

ಅದೇ ದಿನ ತಮ್ಮ ಖಾಸಗಿ ಫೇಸ್‌ಬುಕ್‌ನಿಂದ ಲೈವ್ ಬಂದು ಮಾತನಾಡಿದ್ದ ರಹಮಾನ್ ಹಾಸನ್, ’ಸಿಸಿಬಿ ಪೊಲೀಸರು ಕೇಸಿಗೆ ಸಂಬಂಧಪಟ್ಟಂತೆ ಸರ್ಚ್ ವಾರೆಂಟ್ ತಂದು ಪವರ್‌ ಟಿವಿ ಕಚೇರಿಯಲ್ಲಿ ಸರ್ಚ್ ಮಾಡಿದ್ದಾರೆ. ಅವರಿಗೆ ಬೇಕಾಗಿರುವ ಸಿಸ್ಟಂ, ಲ್ಯಾಪ್‌ಟಾಪ್‌, ಹಾರ್ಡ್‌ಡಿಸ್ಕ್‌ ಸಹಿತ ಎಲ್ಲಾ ದಾಖಲೆಗಳನ್ನು ಪಡೆದಿದ್ದಾರೆ. ಅಷ್ಟೇ ಅಲ್ಲದೆ ಪವರ್‌ ಟಿವಿಯ ಫೇಸ್‌ಬುಕ್ ಲೈವ್‌ ಕೂಡಾ ತಡೆಹಿಡಿಯಲಾಗಿದೆ. ಸುಮಾರು 250  ಉದ್ಯೋಗಿಗಳಿರುವ ಚಾನೆಲನ್ನು ತಡೆಹಿಡಿದಿದ್ದಾರೆ, ಎಲ್ಲರೂ ಬೀದಿಗೆ ಬಂದಿದ್ದಾರೆ ಎಂದು ಭಾವುಕರಾಗಿದ್ದರು.

ಇದನ್ನೂ ಓದಿ: ಸಿಎಂ ಮಗನ ಭ್ರಷ್ಟಾಚಾರ ಬಯಲು: ಪವರ್‌ ಟಿವಿ ಪ್ರಸಾರಕ್ಕೆ ತಡೆ!

’ನಮ್ಮ ಕಚೇರಿಗೆ ಬಂದಿದ್ದ ಸಿಸಿಬಿ ಪೊಲೀಸರು ದಾಖಲೆಗಳನ್ನು ಪಡೆದು ಕೊನೆಗೆ ಚಾನೆಲ್ ಸರ್ವರ್‌‌‌ನ್ನು ಕೂಡಾ ವಶಕ್ಕೆ ಪಡೆದರು. ನಾವು ಚಾನೆಲನ್ನು ಮುಚ್ಚಿಸಬೇಡಿ ಎಂದು ಎಷ್ಟೇ ಕೇಳಿಕೊಂಡರೂ ಸರ್ವರ್‌ ಸಿಸ್ಟಂ ಕೂಡಾ ಪಡೆದರು. ನಮಗೆ ನ್ಯಾಯಾಂಗದ ಮೇಲೆ ವಿಶ್ವಾಸವಿದೆ. ನಾವು ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇವೆ” ಎಂದು ರಹಮಾನ್‌ ಹೇಳಿದ್ದರು.

Power TV

ರಾಜ್ಯದಲ್ಲಿ ಅನೇಕ ಸಂಘಟನೆಗಳು ಪವರ್ ಬೆಂಬಲಕ್ಕೆ ನಿಂತಿದ್ದರು. ಸರ್ಕಾರದ ನಿರ್ಧಾರ ಪ್ರಜಾಪ್ರಭುತ್ವಕ್ಕೆ ಮಾರಕ ಎಂದಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ we are with power tv ಟ್ರೆಂಡ್ ಆಗಿತ್ತು. ನೇರ ಪ್ರಸಾರ ತಡೆಹಿಡಿದಿದ್ದರು ಬೇರೆ ಖಾತೆಗಳ ಫೇಸ್‌ಬುಕ್ ಲೈವ್‌ಗಳ ಮೂಲಕ ಸುದ್ದಿ ಪ್ರಸಾರ ಮಾಡುತ್ತಿತ್ತು.

ಸಿಸಿಬಿ ಪೊಲೀಸರು ಸರ್ವರ್ ತೆಗೆದುಕೊಂಡು ಹೋಗಿರುವುದರಿಂದ ಪ್ರಸಾರ ನಿಲ್ಲಿಸಲಾಗಿತ್ತು. ಈಗ ಹೊಸ ಸರ್ವರ್ ವ್ಯವಸ್ಥೆ ಆಗಿರುವುದರಿಂದ ನಾಳೆಯಿಂದ ಮತ್ತೆ ಚಾನೆಲ್ ಕಾರ್ಯಾರಂಭವಾಗಲಿದೆ. ಇದು ನ್ಯಾಯಕ್ಕೆ ಸಿಕ್ಕ ಗೆಲುವು ಎಂದು ಉದ್ಯೋಗಿಗಳು ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿ: ಪವರ್ ಟಿವಿ ಪ್ರಕರಣ ಎತ್ತುವ ಪ್ರಶ್ನೆಗಳು ಯಾರ ಮನೆ ಬಾಗಿಲೆದುರು ನಿಲ್ಲುತ್ತವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...