Homeಮುಖಪುಟಒಂದು ಸ್ವತಂತ್ರ ಮಾಧ್ಯಮವನ್ನು ನನಗೆ ಕೊಡಿ, ಮರುಕ್ಷಣ ಈ ಸರ್ಕಾರ ಅಧಿಕಾರದಲ್ಲಿರುವುದಿಲ್ಲ: ರಾಹುಲ್ ಗಾಂಧಿ

ಒಂದು ಸ್ವತಂತ್ರ ಮಾಧ್ಯಮವನ್ನು ನನಗೆ ಕೊಡಿ, ಮರುಕ್ಷಣ ಈ ಸರ್ಕಾರ ಅಧಿಕಾರದಲ್ಲಿರುವುದಿಲ್ಲ: ರಾಹುಲ್ ಗಾಂಧಿ

ಗೆಳಯರೇ, ನೀವೂ ಸಹ ಗುಲಾಮಗಿರಿಗೆ ಒಳಗಾಗುತ್ತಿದ್ದೀರಿ. ಒಂದು ದೇಶದ ಭೂಭಾಗವನ್ನು ಇನ್ನೊಂದು ದೇಶ ಆಕ್ರಮಿಸಿದೆ. ಆದರೆ ಮಾಧ್ಯಮಗಳೂ ಕೂಡ ಸರ್ಕಾರವನ್ನು ಪ್ರಶ್ನಿಸದೇ ಇರುವಂತಹ ಪರಿಸ್ಥಿತಿಯನ್ನು ಜಗತ್ತಿನಲ್ಲಿ ಯಾವುದೇ ದೇಶ ಇಂದು ಎದುರಿಸುತ್ತಿಲ್ಲ.

- Advertisement -
- Advertisement -

“ಒಂದು ಸ್ವತಂತ್ರ ಮಾಧ್ಯಮವನ್ನು ನನಗೆ ಕೊಡಿ. ಸ್ವತಂತ್ರ ಸಂಸ್ಥೆಗಳನ್ನು ನೀಡಿ. ಮರುಕ್ಷಣ ಈ ಕೇಂದ್ರ ಸರ್ಕಾರ ಆಡಳಿತದಲ್ಲಿರುವುದಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಿರೋಧಿಸಿ ಕೈಗೊಂಡಿದ್ದ ಯಾತ್ರೆಯ ಅಂತಿಮ ದಿನವಾದ ಇಂದು ಪಂಜಾಬಿನ ಪಟಿಯಾಲದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಅವರು ನರೇಂದ್ರ ಮೋದಿ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ

ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಟ್ರ್ಯಾಕ್ಟರ್‌ ರ್‍ಯಾಲಿ

ವಿರೋಧ ಪಕ್ಷಗಳು ದುರ್ಬಲವಾಗಿವೆ ಎಂಬ ಆರೋಪವನ್ನು ಸಾರಾಸಗಟಾಗಿ ತಳ್ಳಿಹಾಕಿದ ರಾಹುಲ್ ಗಾಂಧಿ, “ದುರ್ಬಲಗೊಂಡಿರುವುದು ವಿರೋಧ ಪಕ್ಷಗಳಲ್ಲ. ನಮ್ಮ ಸುದ್ದಿ ಮಾಧ್ಯಮಗಳನ್ನು, ಸಂಸ್ಥೆಗಳನ್ನು ಎಲ್ಲವನ್ನೂ ಕೈವಶ ಮಾಡಿಕೊಳ್ಳಲಾಗಿದೆ. ಒಂದು ಸ್ವತಂತ್ರ ಮಾಧ್ಯಮವನ್ನು ನನಗೆ ಕೊಡಿ, ಸ್ವತಂತ್ರವಾಗಿರುವ ಸಂಸ್ಥೆಗಳನ್ನು ಕೊಡಿ. ಮರುಗಳಿಗೆ ಈ ಸರಕಾರ ಅಧಿಕಾರದಲ್ಲಿ ಇರುವುದಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಕರಾಳ ಕಾಯ್ದೆಗಳನ್ನು ತೆಗೆದುಹಾಕುತ್ತದೆ: ರಾಹುಲ್ ಗಾಂಧಿ

“ಸರಿ ವಿರೋಧ ಪಕ್ಷಗಳು ದುರ್ಬಲವಾಗಿವೆ ಎಂಬುದು ನಿಮ್ಮ ಆರೋಪ. ಆದರೆ ಗೆಳಯರೇ, ನೀವೂ ಸಹ ಗುಲಾಮಗಿರಿಗೆ ಒಳಗಾಗುತ್ತಿದ್ದೀರಿ. ಒಂದು ದೇಶದ ಭೂಭಾಗವನ್ನು ಇನ್ನೊಂದು ದೇಶ ಆಕ್ರಮಿಸಿದೆ. ಆದರೆ ಮಾಧ್ಯಮಗಳೂ ಕೂಡ ಸರ್ಕಾರವನ್ನು ಪ್ರಶ್ನಿಸದೇ ಇರುವಂತಹ ಪರಿಸ್ಥಿತಿಯನ್ನು ಜಗತ್ತಿನಲ್ಲಿ ಯಾವುದೇ ದೇಶ ಇಂದು ಎದುರಿಸುತ್ತಿಲ್ಲ. ನೀವೇಕೆ ಅವರನ್ನು ಪತ್ರಿಕಾಗೋಷ್ಠಿಗಳಲ್ಲಿ ಪ್ರಶ್ನಿಸಬಾರದು?” ಎಂದು ಮಾಧ್ಯಮಗಳಿಗೆ ಮರುಪ್ರಶ್ನೆ ಮಾಡಿದ್ದಾರೆ.


“ಸರ್ಕಾರ ವಿವಿಧ ಸಂಸ್ಥೆಗಳನ್ನು ತನ್ನ ಕೈವಶ ಮಾಡಿರಬಹುದು. ಆದರೆ ರೈತರನ್ನು, ಯುವಜನತೆಯನ್ನು ಹಾಗೂ ಸಣ್ಣ ವರ್ತಕರ ವಿಚಾರದಲ್ಲಿ ಹಾಗೆ ಮಾಡಲು ಸಾಧ್ಯವಿಲ್ಲ. ಮೋದಿ ಸರ್ಕಾರದ ನೀತಿಗಳಿಂದ ತೀವ್ರ ಬಾಧಿತಕ್ಕೊಳಗಾಗಿರುವ ಜನರೊಂದಿಗೆ ನಾನಿದ್ದೇನೆ. ನಾನು ತಾಳ್ಮೆ ಇರುವ ವ್ಯಕ್ತಿ. ಜನರಿಗೆ ಸತ್ಯದ ಅರಿವು ಆಗುವ ತನಕ ಕಾಯುತ್ತೇನೆ” ಎಂದು ಹೇಳಿದರು.

ಇದನ್ನೂ ಓದಿ: ವಿವಾದಾತ್ಮಕ ಮಸೂದೆ ವಿರುದ್ಧ ನಿಲ್ಲದ ರೈತರ ಪ್ರತಿಭಟನೆ: ಜೈ ಕಿಸಾನ್ ಆಂದೋಲನ

ಕೃಷಿ ಮಸೂದೆಗಳನ್ನು ವಿರೋಧಿಸಿ ರಾಹುಲ್ ಗಾಂಧಿ ಮುಂದಾಳತ್ವದಲ್ಲಿ ಪಂಜಾಬ್‌ನಿಂದ ದೆಹಲಿಯವರೆಗೆ ಟ್ರ್ಯಾಕ್ಟರ್ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ ಹರಿಯಾಣ ಗಡಿಯ ಬಳಿ ಅವರನ್ನು ತಡೆಯಲಾಗಿದೆ. ವಿಶೇಷವೆಂದರೆ ಈ ರ‍್ಯಾಲಿಯಲ್ಲಿ ರಾಹುಲ್ ಗಾಂಧಿಯವರೇ ಸ್ವತಃ ಟ್ರ್ಯಾಕ್ಟರ್ ಚಲಾಯಿಸಿದ್ದರು.

ತಮ್ಮನ್ನು ಗಡಿಯಲ್ಲಿ ತಡೆದಿದ್ದನ್ನು ವಿರೋಧಿಸಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಅವರು ನಮ್ಮನ್ನು ಹರಿಯಾಣ ಗಡಿಯ ಬ್ರಿಡ್ಜ್ ಬಳಿ ತಡೆಯಲಾಗಿದೆ. ನಾನು ಅಲುಗಾಡುವುದಿಲ್ಲ. ಇಲ್ಲಿ ಕಾಯುವುದಕ್ಕೆ ನನಗೆ ಸಂತೋಷವಿದೆ. 1 ಗಂಟೆ, 5 ಗಂಟೆ, 24 ಗಂಟೆ, 100 ಗಂಟೆಗಳು, 1000 ಗಂಟೆಗಳು ಅಥವಾ 5000 ಗಂಟೆಗಳು ಬೇಕಾದರೂ ಕಾಯುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ದೇಶಾದ್ಯಂತ ”ಅನ್ನದಾತ’ರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...