Homeಮುಖಪುಟ"ದಿ ಕಪಿಲ್‌ ಶರ್ಮಾ ಶೋ" ಬಾಯ್ಕಾಟ್: ಸಿಡಿದೆದ್ದ ಅರ್ನಾಬ್ ಅಭಿಮಾನಿಗಳು?

“ದಿ ಕಪಿಲ್‌ ಶರ್ಮಾ ಶೋ” ಬಾಯ್ಕಾಟ್: ಸಿಡಿದೆದ್ದ ಅರ್ನಾಬ್ ಅಭಿಮಾನಿಗಳು?

ಅರ್ನಾಬ್ ಗೋಸ್ವಾಮಿಯ ಅಭಿಮಾನಿಗಳು ರೊಚ್ಚಿಗೆದ್ದಿದ್ದು ಈ ಪ್ರದರ್ಶನವನ್ನು ನೊಡಿವುದಿಲ್ಲ, ಮತ್ತು ಇದನ್ನು ಬಾಯ್ಕಾಟ್ ಮಾಡಬೇಕು ಎಂದು ಟ್ವಿಟ್ಟರ್‌ನಲ್ಲಿ ಅಭಿಯಾನ ನಡೆಸುತ್ತಿದ್ದಾರೆ. ಜೊತೆಗೆ ಈ ಪ್ರದರ್ಶನವನ್ನು ಬೆಂಬಲಿಸಿ ಹಲವರು ಟ್ವೀಟ್‌ಗಳನ್ನು ಮಾಡಿದ್ದಾರೆ.

- Advertisement -
- Advertisement -

ಅರ್ನಾಬ್ ಗೋಸ್ವಾಮಿ ವಿರುದ್ಧ ವಿವಾದಾತ್ಮಕ ಪ್ರದರ್ಶನ ನೀಡಿದ್ದಕ್ಕಾಗಿ “ದಿ ಕಪಿಲ್ ಶರ್ಮಾ ಶೋ”ವನ್ನು ಬಾಯ್ಕಾಟ್ ಮಾಡಬೇಕು ಎಂದು ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗುತ್ತಿದ್ದು, ಕಳೆದ ವಾರ ಅರ್ನಾಬ್ ಗೊಸ್ವಾಮಿಯನ್ನು ಅನುಕರಿಸಿ ಪ್ರದರ್ಶನವೊಂದನ್ನು ನೀಡಿದ್ದರು.

ಇತ್ತೀಚೆಗೆ ಹಿಂದಿಯ ಪ್ರಖ್ಯಾತ ದಿ ಕಪಿಲ್ ಶರ್ಮಾ ಶೋ ಹಲವು ಕಾರಣಗಳಿಗೆ ಸುದ್ಧಿಯಲ್ಲಿತ್ತು. ಕಳೆದ ವಾರ ಅರ್ನಾಬ್ ಗೋಸ್ವಾಮಿಯನ್ನು ಅನುಕರಿಸಿ, ಹೆಸರು ಹೇಳದೆಯೇ ಆತನ ಹಾವ-ಭಾವಗಳನ್ನು ಅನುಕರಿಸಿ ಶೋ ಮಾಡಿದ್ದರು. ಈ ಶೋನಲ್ಲಿ ಸಲ್ಮಾನ್ ಖಾನ್ ಅವರನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿದ್ದ ಅರ್ನಾಬ್ ಗೊಸ್ವಾಮಿಯ ಮೇಲೆ ಕಿಕು ಶಾರ್ದ ಹಾಗೂ ಕೃಷ್ಣ ಅಭಿಷೇಕ್ ಪ್ರತಿದಾಳಿಯನ್ನು ಮಾಡಿದ್ದರು. ಇಂದು ಇಂಡಿಯಾ ಟುಡೆಯ ಹಿರಿಯ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಕೂಡ ಅರ್ನಾಬ್‌ ಮೇಲೆ ತೀವ್ರವಾದ ವಾಗ್ದಾಳಿ ನಡೆಸಿದ್ದು ವೈರಲ್ ಆಗಿತ್ತು.

“ಅರ್ನಾಬ್ ಗೋಸ್ವಾಮಿ ನೀವು ಬನಾನಾ ರಿಪಬ್ಲಿಕ್ ಚಾನೆಲ್ ನಡೆಸುತ್ತಿದ್ದೀರಿ. ನಿಮ್ಮ ವಿಚಾರಗಳಿಗೆ ತಕ್ಕಂತೆ ಉದ್ದೇಶಪೂರ್ವಕವಾಗಿ ವಿಷಯಗಳನ್ನು ತಿರುಚುತ್ತಿದ್ದೀರಿ. ಪತ್ರಿಕೋದ್ಯಮವನ್ನು ನೀವು ಇಷ್ಟೊಂದು ಕೀಳು ಮಟ್ಟಕ್ಕೆ ಒಯ್ಯಬೇಡಿ. ನಿಮಗೆ ಒಂದು ಸಲಹೆ ನೀಡುತ್ತಿದ್ದೇನೆ. ಪತ್ರಿಕೋದ್ಯಮವೆಂದರೆ ಇದಲ್ಲ. ಕಳೆದ ಎರಡು ತಿಂಗಳಿನಿಂದ ನೀವು ಪ್ರಸಾರ ಮಾಡುತ್ತಿದ್ದ ಅಸಹ್ಯವಾದ ವಿಚಾರವನ್ನು ಕೇಳಿಸಿಕೊಂಡು ನಾನು ಸುಮ್ಮನಿದ್ದೆ. ಟಿಆರ್‌ಪಿಗಿಂತಲೂ ಹೆಚ್ಚಾಗಿರುವುದು ಇದೆ ಗೆಳಯ, ಅದು ಟೆಲಿವಿಶನ್ ರೆಸ್ಪೆಕ್ಟ್ ಪಾಯಿಂಟ್ಸ್” ಎಂದು ‘ಇಂಡಿಯಾ ಟುಡೆ’ ಟಿವಿ ವಾಹಿನಿಯ ಕಾರ್ಯಕ್ರಮ ಪ್ರಸಾರದ ವೇಳೆ ತಮ್ಮ ತಾಳ್ಮೆ ಕಳೆದುಕೊಂಡು ರಾಜ್‌ದೀಪ್ ಸರ್ದೇಸಾಯಿ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ನಿಮ್ಮದು ಬನಾನಾ ರಿಪಬ್ಲಿಕ್ ಚಾನೆಲ್: ಅರ್ನಾಬ್ ಗೋಸ್ವಾಮಿ ವಿರುದ್ಧ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಆಕ್ರೋಶ

ಈಗ ಅರ್ನಾಬ್ ಗೋಸ್ವಾಮಿಯ ಅಭಿಮಾನಿಗಳು ರೊಚ್ಚಿಗೆದ್ದಿದ್ದು ಈ ಪ್ರದರ್ಶನವನ್ನು ನೋಡುವುದಿಲ್ಲ, ಮತ್ತು ಇದನ್ನು ಬಾಯ್ಕಾಟ್ ಮಾಡಬೇಕು ಎಂದು ಟ್ವಿಟ್ಟರ್‌ನಲ್ಲಿ ಅಭಿಯಾನ ನಡೆಸುತ್ತಿದ್ದಾರೆ. ಜೊತೆಗೆ ಈ ಪ್ರದರ್ಶನವನ್ನು ಬೆಂಬಲಿಸಿ ಹಲವರು ಟ್ವೀಟ್‌ಗಳನ್ನು ಮಾಡಿದ್ದಾರೆ.

ಪ್ರಶಾಂತ್ ಎಂಬುವವರು ಟ್ವೀಟ್ ಮಾಡಿದ್ದು, “#BoycottKapilSharmaShow, ನಿಮ್ಮ ಪ್ರದರ್ಶನದಿಂದ ಸ್ವಲ್ಪ ತಾಳ್ಮೆ ನಿರೀಕ್ಷಿಸಿದ್ದೆ. ಆದರೆ ಇಂದು ನಮ್ಮಂತಹವರನ್ನು ನಿರಾಶೆಗೊಳಿಸಿದಿರಿ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಬಾಯ್ಕಾಟ್ ಚೀನಾ: ಟೀಶರ್ಟ್‌ ಸುಟ್ಟು ಪ್ರತಿಭಟಿಸಿದ ಜೊಮಾಟೊ ಉದ್ಯೋಗಿಗಳು!

ಅಲೋಕ್ ಶ್ರಿವಾಸ್ತವ ಎಂಬುವವರು ಈ ಪ್ರದರ್ಶನದ ಪರವಾಗಿ ಟ್ವೀಟ್ ಮಾಡಿದ್ದು, “ಎಂಥಾ ಉಲ್ಲಾಸದಾಯಕವಾದ ಮತ್ತು ಅದ್ಭುತವಾದ ಪ್ರದರ್ಶನ” ಎಂದು ಬರೆದುಕೊಂಡಿದ್ದು, ತಂಡಕ್ಕೆ ಜಿಂದಾಬಾದ್ ಹೇಳಿದ್ದಾರೆ.

ಇದನ್ನೂ ಓದಿ: ಇದ್ದಕ್ಕಿದ್ದಂತೆ ಸಾಧ್ಯವಿಲ್ಲ: ’ಬಾಯ್ಕಾಟ್ ಚೀನಾ’ ಅಭಿಯಾನಕ್ಕೆ ಕ್ರೀಡಾ ಕ್ಷೇತ್ರದ ವಿರೋಧವೇಕೆ?

ಇಷ್ಟು ದಿನ ಪ್ರದರ್ಶನವನ್ನು ಇಷ್ಟಪಡುತ್ತಿದ್ದವರು, ಅರ್ನಾಬ್ ವಿರುದ್ಧ ಒಂದು ಎಪಿಸೋಡ್ ಮಾಡಿದ್ದಾರೆಂದು ಹೇಳಿ ಇಡೀ ಪ್ರದರ್ಶನವನ್ನು ಬಾಯ್ಕಾಟ್ ಮಾಡಿ ಎಂದು ಹೇಳುತ್ತಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದ್ದು, ಇದರ ಹಿಂದೆ ಯಾವುದೋ ಪಕ್ಷದ ಐಟಿ ಸೆಲ್ ಕೆಲಸ ಮಾಡುತ್ತಿದೆ ಎಂದು ಹಲವರು ಆರೋಪಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಬಾಯ್ಕಾಟ್, ಬ್ಯಾನ್‌ಗಳು ತುಂಬಾ ಹೆಚ್ಚಾಗುತ್ತಿದ್ದು, ತಮಗೆ ಮತ್ತು ತಮ್ಮ ಸಿದ್ಧಾಂತಕ್ಕೆ ಹೊಂದದ ಸಿನಿಮಾ, ರಿಯಾಲಿಟಿ ಶೋ, ನಟ, ನಟಿ, ನಿರ್ದೇಶಕ ಮುಂತಾದ ಎಲ್ಲರನ್ನೂ ಬಾಯ್ಕಾಟ್ ಮಾಡಬೇಕು ಎಂದು ತುಂಬಾ ಜನರು ದನಿಯೆತ್ತುತ್ತಾರೆ. ಆದರೆ ಇದಾದ ನಂತರ, ಯಾರನ್ನು ಅಥವಾ ಯಾವುದನ್ನು ಬಾಯ್ಕಾಟ್ ಮಾಡಬೇಕು ಎಂದು ಹೇಳಿದ್ದರೋ ಅವುಗಳೇ ಅತ್ಯುತ್ತಮ ಪ್ರದರ್ಶನ ಕಾಣುವ ಸಾಧ್ಯತೆಗಳಿವೆ.

ಈ ಸಾಲಿಗೆ ಈಗ “ದಿ ಕಪಿಲ್ ಶರ್ಮಾ ಶೋ” ಸೇರಿಕೊಳ್ಳುವುದೇ ಎಂದು ಕಾದುನೊಡಬೇಕಿದೆ.


ಇದನ್ನೂ ಓದಿ: ಮತ್ತೊಂದು ಧೋಕ್‍ಲಾಂ ಆಗಲಿದೆಯೇ ಲಡಾಖ್‍ನ ಗಾಲ್ವನ್ ಕಣಿವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...