HomeUncategorizedಕೊರೊನಾ ಬಗ್ಗೆ ತಪ್ಪು ಮಾಹಿತಿ: ಟ್ರಂಪ್ ಟ್ವೀಟ್‌ ಅನ್ನು ನಿರ್ಬಂಧಿಸಿದ ಟ್ವಿಟ್ಟರ್

ಕೊರೊನಾ ಬಗ್ಗೆ ತಪ್ಪು ಮಾಹಿತಿ: ಟ್ರಂಪ್ ಟ್ವೀಟ್‌ ಅನ್ನು ನಿರ್ಬಂಧಿಸಿದ ಟ್ವಿಟ್ಟರ್

ಇದು ಜನರನ್ನು ತಪ್ಪುದಾರಿಗೆಳೆಯುವ ಮಾಹಿತಿ ಎಂದು ಟ್ವಿಟ್ಟರ್ ಸಂಸ್ಥೆ ಎಚ್ಚರಿಕೆ ನೀಡಿದ್ದು, ಟ್ರಂಪ್ ಮಾಡಿದ್ದ ಟ್ವೀಟನ್ನು ನಿರ್ಬಂಧಿಸಿದೆ.

- Advertisement -
- Advertisement -

ಕೊರೊನಾ ಸೋಂಕಿಗೆ ಒಳಗಾಗಿದ್ದ ಟ್ರಂಪ್ ಕೊರೊನಾ ಸೋಂಕಿನ ಕುರಿತು ಮಾಡಿರುವ ಟ್ವೀಟ್‌ ಅನ್ನು ಟ್ವಿಟ್ಟರ್ ಸಂಸ್ಥೆ ಅಳಿಸಿಹಾಕಿದ್ದು, ಇದು ತಪ್ಪು ಮಾಹಿತಿ ನೀಡುತ್ತದೆ ಎಂದು ಎಚ್ಚರಿಕೆ ನೀಡಿದೆ.

ಕೊರೊನಾ ಸೋಂಕಿನ ತೀವ್ರತೆಯನ್ನು ಅರಿಯದೇ, ಇದು ಕೇವಲ ಸಾಮಾನ್ಯ ಜ್ವರ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಮಂಗಳವಾರ ಟ್ವೀಟ್ ಮಾಡಿದ್ದರು. ಇದು ಜನರನ್ನು ತಪ್ಪುದಾರಿಗೆಳೆಯುವ ಮಾಹಿತಿ ಎಂದು ಟ್ವಿಟ್ಟರ್ ಸಂಸ್ಥೆ ಎಚ್ಚರಿಕೆ ನೀಡಿದ್ದು, ಟ್ರಂಪ್ ಮಾಡಿದ್ದ ಟ್ವೀಟನ್ನು ನಿರ್ಬಂಧಿಸಿದೆ.

ಇದನ್ನೂ ಓದಿ: ಜಗತ್ತಿನ 10 ಜನರಲ್ಲಿ ಒಬ್ಬರಿಗೆ ಕೊರೊನಾ: WHO ಕಳವಳ

“ಜ್ವರ ಪ್ರತಿವರ್ಷವೂ ಬರುತ್ತದೆ. ಅನೆಕ ಜನರು, ಕೆಲವೊಮ್ಮೆ 100,000ಕ್ಕಿಂತ ಹೆಚ್ಚು ಜನರು ಲಸಿಕೆ ನೀಡಿದ ಹೊರತಾಗಿಯೂ ಜ್ವರದಿಂದ ಸಾಯುತ್ತಾರೆ. ನಾವು ನಮ್ಮ ದೇಶವನ್ನು ಮುಚ್ಚುತ್ತೇವೆಯೇ? ಇಲ್ಲ, ನಾವು ಅದರೊಟ್ಟಿಗೆ ಬದುಕಲು ಕಲಿತಿರುವಂತೆಯೇ ಕೋವಿಡ್‌ನೊಡನೆಯೂ ಬದುಕಲು ಕಲಿತಿದ್ದೇವೆ” ಎಂದು ಟ್ರಂಪ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕೊರೊನಾದಿಂದ 551 ವೈದ್ಯರ ಸಾವು: ಭಾರತೀಯ ವೈದ್ಯಕೀಯ ಸಂಘಟನೆಯ ದತ್ತಾಂಶ

ಟ್ರಂಪ್‌ ಕೊರೊನಾ ವೈರಸ್‌ಗೆ ತುತ್ತಾಗಿದ್ದರಿಂದ, ಅವರನ್ನು ಮೇರಿಲ್ಯಾಂಡ್‌ನ ವಾಲ್ಟರ್ ರೀಡ್ ರಾಷ್ಟ್ರೀಯ ಮಿಲಿಟರಿ ವೈದ್ಯಕೀಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಅಲ್ಲಿಂದ ಬಿಡುಗಡೆಯಾದ ಕೆಲವೇ ಗಂಟೆಗಳ ನಂತರ ಈ ಟ್ವೀಟ್ ಮಾಡಿದ್ದಾರೆ. ಕೋವಿಡ್‌ಗೆ ಭಯಪಡಬೇಡಿ ಎಂದು ನಾಗರೀಕರಿಗೆ ಹೇಳುತ್ತಾ, ತಮಗಿನ್ನೂ ಸೋಂಕು ಸಂಪೂರ್ಣವಾಗಿ ನಿವಾರಣೆಯಾಗಿಲ್ಲದಿದ್ದರೂ, ಕ್ಯಾಮರಾಗೆ ಪೋಸ್ ನೀಡಲು ತಮ್ಮ ಮಾಸ್ಕನ್ನು ಕಿತ್ತೊಗೆದರು.

ಈ ಹಿಂದೆಯೂ ಟ್ರಂಪ್ ಇದೇ ರೀತಿಯ ತಪ್ಪು ಮಾಹಿತಿ ನೀಡುವ ಪೋಸ್ಟನ್ನು ಫೇಸ್‌ಬುಕ್‌ನಲ್ಲಿ ಮಾಡಿದ್ದರು. ಆಗ ಫೇಸ್‌ಬುಕ್ ಇದನ್ನು ನಿರ್ಬಂಧಿಸಿತ್ತು ಎಂದು CNN ತಿಳಿಸಿದೆ.

ಇದನ್ನೂ ಓದಿ: ‘ನನಗೆ ಕೊರೊನಾ ಬಂದರೆ ಮಮತಾ ಬ್ಯಾನರ್ಜಿಯನ್ನು ತಬ್ಬಿಕೊಳ್ಳುವೆ’ ಎಂದಿದ್ದ ಬಿಜೆಪಿ ನಾಯಕನಿಗೆ ಕೊರೊನಾ ದೃಢ!

ಕೊರೊನಾ ಸಾಂಕ್ರಾಮಿಕವು ಅಮೇರಿಕಾದಲ್ಲಿ ಮಾತ್ರ ಕನಿಷ್ಠ 2 ಲಕ್ಷ ಜೀವಗಳನ್ನು ಬಲಿತೆಗೆದುಕೊಂಡಿದೆ. ಅಮೇರಿಕಾದ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಸೇರಿದಂತೆ ಅನೇಕ ಶ್ವೇತಭವನದ ಅಧಿಕಾರಿಗಳು ಇತ್ತೀಚೆಗೆ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಸೋಮವಾರ ಶ್ವೇತಭವನ್ ಪತ್ರಿಕಾ ಕಾರ್ಯದರ್ಶಿ ಕೇಲೀ ಮೆಗ್ ಎನಾನಿ ಸೋಂಕಿಗೆ ಒಳಗಾಗಿದ್ದರು.

ನಿನ್ನೆ  ವಿಶ್ವ ಆರೋಗ್ಯ ಸಂಸ್ಥೆ ತನ್ನ ವಿಶೇಷ ಸಭೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು. “ಜಗತ್ತಿನ ಜನಸಂಖ್ಯೆಯಲ್ಲಿ ಶೇಕಡಾ 10 ರಷ್ಟು ಜನರಿಗೆ ಸೋಂಕು ತಗುಲಿದೆ. ಹಾಗಾಗಿ ನಾವು ಅಪಾಯದ ಅಂಚಿನಲ್ಲಿದ್ದೇವೆ” ಎಂದು ಎಚ್ಚರಿಕೆ ನೀಡಿತ್ತು.


ಇದನ್ನೂ ಓದಿ: ಕ್ಯಾಟ್‌ ಕ್ಯೂ ವೈರಸ್: ಕೊರೊನಾದಂತೆಯೇ ಮತ್ತೊಂದು ಅಪಾಯಕಾರಿ ವೈರಸ್: ICMR ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...