Homeಅಂತರಾಷ್ಟ್ರೀಯನೊಬೆಲ್‌ 2020: ಕಪ್ಪು ಕುಳಿ ಬಗೆಗಿನ ಸಂಶೋಧನೆಗೆ ಭೌತಶಾಸ್ತ್ರದ ನೊಬೆಲ್

ನೊಬೆಲ್‌ 2020: ಕಪ್ಪು ಕುಳಿ ಬಗೆಗಿನ ಸಂಶೋಧನೆಗೆ ಭೌತಶಾಸ್ತ್ರದ ನೊಬೆಲ್

ಗೆಲಾಕ್ಸಿ ಹಾಗೂ ಕಪ್ಪು ಕುಳಿ ಕುರಿತು ನಡೆಸಿದ ಅಧ್ಯಯನಕ್ಕೆ ಮೂರು ವಿಜ್ಞಾನಿಗಳಿಗೆ ಈ ಬಾರಿಯ ಭೌತಶಾಸ್ತ್ರದ ನೊಬೆಲ್ ಪುರಸ್ಕಾರವನ್ನು ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ಘೋಷಿಸಿದೆ

- Advertisement -
- Advertisement -

ಮಹಿಳಾ ವಿಜ್ಞಾನಿ ಸೇರಿ ವಿಶ್ವದ ಆಳ ಗರ್ಭದಲ್ಲಿರುವ ರಹಸ್ಯಗಳನ್ನು ಅನಾವರಣ ಮಾಡಿದ ಮೂವರು ಭೌತವಿಜ್ಞಾನಿಗಳಿಗೆ ರಾಯಲ್‌ ಸ್ವೀಡಿಷ್‌ ಅಕಾಡೆಮಿ ಆಫ್‌ ಸೈನ್ಸ್‌ ನೀಡುವ ಪ್ರತಿಷ್ಠಿತ ಭೌತಶಾಸ್ತ್ರದ ನೊಬೆಲ್‌ ಪುರಸ್ಕಾರ ಲಭಿಸಿದೆ.

ಇಂಗ್ಲೆಂಡಿನ ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿರುವ ರೋಜರ್‌ ಪೆನ್ರೋಸ್‌, ಆಲ್ಬರ್ಟ್‌ ಐನ್‌ಸ್ಟೀನ್‌ ಅವರ ಸಾಪೇಕ್ಷ ಸಿದ್ದಾಂತವನ್ನು ಅನ್ವೇಷಿಸುವುದಕ್ಕೆ ಗಣಿತದ ವಿನೂತನ ಪದ್ಧತಿಯನ್ನು ಕಂಡುಕೊಂಡವರು. ಈ ಪದ್ಧತಿಯ ಮೂಲಕ ಕಪ್ಪು ಕುಳಿ(black hole) ರೂಪ ಪಡೆಯುವ ಬಗೆಯನ್ನು ವಿವರಿಸಿದರು. ಇವರಿಗೆ ಪ್ರಶಸ್ತ್ರಿಯ ಒಂದು ಭಾಗವನ್ನು ನೀಡಲಾಗುತ್ತಿದೆ.

1965ರಲ್ಲಿ ರೋಜರ್‌ ಕಪ್ಪು ಕುಳಿಗಳು ನಿಜಕ್ಕೂ ಸೃಷ್ಟಿಯಾಗಬಹುದೆಂದು ನಿರೂಪಿಸಿದರು ಹಾಗೂ ಆ ಬಗ್ಗೆ ವಿವರವಾಗಿ ಉಲ್ಲೇಖಿಸಿದರು.

ಜರ್ಮನಿಯ ಮ್ಯಾಕ್ಸ್‌ಪ್ಲಾಂಕ್‌ ಇನ್‌ಸ್ಟ್ರಿಟ್ಯೂಟ್‌ ಆಫ್‌ ಎಕ್ಸ್‌ಟ್ರಾಟೆರಿಸ್ಟ್ರಿಯಲ್‌ ಫಿಸಿಕ್ಸ್‌ನಲ್ಲಿ ನಿರ್ದೇಶಕರಾಗಿರುವ ರೀನ್‌ಹಾರ್ಡ್‌ ಗೆಂಜೆಲ್‌ ಮತ್ತು ಲಾಸ್‌ ಏಂಜೆಲಿಸ್‌ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿರುವ ಆಂಡ್ರಿಯಾ ಘೆಜ್‌ ಪ್ರಶಸ್ತಿಯ ಇನ್ನೊಂದು ಭಾಗವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ನೂತನ ಹೆಪಟೈಟಿಸ್‌ ‘ಸಿ’ ವೈರಸ್‌ ಬಗೆಗಿನ ಸಂಶೋಧನೆಗೆ 2020ರ ನೊಬೆಲ್‌ ಪ್ರಶಸ್ತಿ

ತೊಂಬತ್ತರ ದಶಕದಿಂದ ಈ ಇಬ್ಬರು ವಿಜ್ಞಾನಿಗಳು ತಮ್ಮದೇ ತಂಡದ ಮೂಲಕ ನಮ್ಮ ಸೌರಮಂಡಲದಲ್ಲಿರುವ ಮಿಲ್ಕಿ ವೇ ಗೆಲಾಕ್ಸಿಯನ್ನು ಅಧ್ಯಯನ ಮಾಡಲಾರಂಭಿಸಿದರು. ಈ ಇಬ್ಬರು ವಿಜ್ಞಾನಿಗಳ ತಂಡವು ಗೆಲಾಕ್ಸಿಯ ಕೇಂದ್ರದಲ್ಲಿ, ಅದೃಶ್ಯವೂ ಹಾಗೂ ಅತ್ಯಂತ ಭಾರತದ ಕಾಯವಿರುವುದನ್ನು ಗುರುತಿಸಿತು. ಇದು ಗೆಲಾಕ್ಸಿಯ ನಕ್ಷತ್ರಗಳನ್ನು ನಿಯಂತ್ರಿಸುತ್ತದೆ ಎಂಬುದು ತಿಳಿಯಿತು.

40 ಲಕ್ಷ ಸೂರ್ಯರ ಸಾಂದ್ರತೆಯನ್ನ ಒಟ್ಟು ಮಾಡಿದರೆ ಆಗಬಹುದಾದ ದೊಡ್ಡದಾದ ಕಾಯವಿದು ಎಂಬುದನ್ನು ಗೆಂಜೆಲ್‌ ಮತ್ತು ಘೆಜ್‌ ತಂಡಗಳು ಕಂಡುಕೊಂಡವು.

ವಿಶೇಷವೆಂದರೆ ಘೆಜ್‌ ಭೌತಶಾಸ್ತ್ರದಲ್ಲಿ ನೊಬೆಲ್‌ ಗೌರವಕ್ಕೆ ಭಾಜನರಾದ ನಾಲ್ಕನೆಯ ಮಹಿಳಾ ವಿಜ್ಞಾನಿಯಾಗಿದ್ದಾರೆ. 1903ರಲ್ಲಿ ಪೊಲ್ಯಾಂಡಿನ ಮೇರಿ ಸ್ಕೊಲೊಡೋಸ್ಕ್‌, 1963ರಲ್ಲಿ ಅಮೆರಿಕದ ಮಾರಿಯಾ ಗೋಪರ್ಟ್‌ ಮೇಯರ್‌, 2018ರಲ್ಲಿ ಕೆನಡಾದ ಡೊನಾ ಸ್ಟ್ರಿಕ್‌ಲ್ಯಾಂಡ್‌ ಈ ಗೌರವಕ್ಕೆ ಪಾತ್ರರಾಗಿದ್ದರು.

ಕೃಪೆ: ಟೆಕ್ ಕನ್ನಡ


 

ಇದನ್ನೂ ಓದಿ: ಕೊರೋನಾ – ಭಾರತದ ಆರ್ಥಿಕತೆ: ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞರು ಏನೇಳ್ತಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...