Homeಅಂತರಾಷ್ಟ್ರೀಯನೊಬೆಲ್‌ 2020: ಕಪ್ಪು ಕುಳಿ ಬಗೆಗಿನ ಸಂಶೋಧನೆಗೆ ಭೌತಶಾಸ್ತ್ರದ ನೊಬೆಲ್

ನೊಬೆಲ್‌ 2020: ಕಪ್ಪು ಕುಳಿ ಬಗೆಗಿನ ಸಂಶೋಧನೆಗೆ ಭೌತಶಾಸ್ತ್ರದ ನೊಬೆಲ್

ಗೆಲಾಕ್ಸಿ ಹಾಗೂ ಕಪ್ಪು ಕುಳಿ ಕುರಿತು ನಡೆಸಿದ ಅಧ್ಯಯನಕ್ಕೆ ಮೂರು ವಿಜ್ಞಾನಿಗಳಿಗೆ ಈ ಬಾರಿಯ ಭೌತಶಾಸ್ತ್ರದ ನೊಬೆಲ್ ಪುರಸ್ಕಾರವನ್ನು ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ಘೋಷಿಸಿದೆ

- Advertisement -
- Advertisement -

ಮಹಿಳಾ ವಿಜ್ಞಾನಿ ಸೇರಿ ವಿಶ್ವದ ಆಳ ಗರ್ಭದಲ್ಲಿರುವ ರಹಸ್ಯಗಳನ್ನು ಅನಾವರಣ ಮಾಡಿದ ಮೂವರು ಭೌತವಿಜ್ಞಾನಿಗಳಿಗೆ ರಾಯಲ್‌ ಸ್ವೀಡಿಷ್‌ ಅಕಾಡೆಮಿ ಆಫ್‌ ಸೈನ್ಸ್‌ ನೀಡುವ ಪ್ರತಿಷ್ಠಿತ ಭೌತಶಾಸ್ತ್ರದ ನೊಬೆಲ್‌ ಪುರಸ್ಕಾರ ಲಭಿಸಿದೆ.

ಇಂಗ್ಲೆಂಡಿನ ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿರುವ ರೋಜರ್‌ ಪೆನ್ರೋಸ್‌, ಆಲ್ಬರ್ಟ್‌ ಐನ್‌ಸ್ಟೀನ್‌ ಅವರ ಸಾಪೇಕ್ಷ ಸಿದ್ದಾಂತವನ್ನು ಅನ್ವೇಷಿಸುವುದಕ್ಕೆ ಗಣಿತದ ವಿನೂತನ ಪದ್ಧತಿಯನ್ನು ಕಂಡುಕೊಂಡವರು. ಈ ಪದ್ಧತಿಯ ಮೂಲಕ ಕಪ್ಪು ಕುಳಿ(black hole) ರೂಪ ಪಡೆಯುವ ಬಗೆಯನ್ನು ವಿವರಿಸಿದರು. ಇವರಿಗೆ ಪ್ರಶಸ್ತ್ರಿಯ ಒಂದು ಭಾಗವನ್ನು ನೀಡಲಾಗುತ್ತಿದೆ.

1965ರಲ್ಲಿ ರೋಜರ್‌ ಕಪ್ಪು ಕುಳಿಗಳು ನಿಜಕ್ಕೂ ಸೃಷ್ಟಿಯಾಗಬಹುದೆಂದು ನಿರೂಪಿಸಿದರು ಹಾಗೂ ಆ ಬಗ್ಗೆ ವಿವರವಾಗಿ ಉಲ್ಲೇಖಿಸಿದರು.

ಜರ್ಮನಿಯ ಮ್ಯಾಕ್ಸ್‌ಪ್ಲಾಂಕ್‌ ಇನ್‌ಸ್ಟ್ರಿಟ್ಯೂಟ್‌ ಆಫ್‌ ಎಕ್ಸ್‌ಟ್ರಾಟೆರಿಸ್ಟ್ರಿಯಲ್‌ ಫಿಸಿಕ್ಸ್‌ನಲ್ಲಿ ನಿರ್ದೇಶಕರಾಗಿರುವ ರೀನ್‌ಹಾರ್ಡ್‌ ಗೆಂಜೆಲ್‌ ಮತ್ತು ಲಾಸ್‌ ಏಂಜೆಲಿಸ್‌ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿರುವ ಆಂಡ್ರಿಯಾ ಘೆಜ್‌ ಪ್ರಶಸ್ತಿಯ ಇನ್ನೊಂದು ಭಾಗವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ನೂತನ ಹೆಪಟೈಟಿಸ್‌ ‘ಸಿ’ ವೈರಸ್‌ ಬಗೆಗಿನ ಸಂಶೋಧನೆಗೆ 2020ರ ನೊಬೆಲ್‌ ಪ್ರಶಸ್ತಿ

ತೊಂಬತ್ತರ ದಶಕದಿಂದ ಈ ಇಬ್ಬರು ವಿಜ್ಞಾನಿಗಳು ತಮ್ಮದೇ ತಂಡದ ಮೂಲಕ ನಮ್ಮ ಸೌರಮಂಡಲದಲ್ಲಿರುವ ಮಿಲ್ಕಿ ವೇ ಗೆಲಾಕ್ಸಿಯನ್ನು ಅಧ್ಯಯನ ಮಾಡಲಾರಂಭಿಸಿದರು. ಈ ಇಬ್ಬರು ವಿಜ್ಞಾನಿಗಳ ತಂಡವು ಗೆಲಾಕ್ಸಿಯ ಕೇಂದ್ರದಲ್ಲಿ, ಅದೃಶ್ಯವೂ ಹಾಗೂ ಅತ್ಯಂತ ಭಾರತದ ಕಾಯವಿರುವುದನ್ನು ಗುರುತಿಸಿತು. ಇದು ಗೆಲಾಕ್ಸಿಯ ನಕ್ಷತ್ರಗಳನ್ನು ನಿಯಂತ್ರಿಸುತ್ತದೆ ಎಂಬುದು ತಿಳಿಯಿತು.

40 ಲಕ್ಷ ಸೂರ್ಯರ ಸಾಂದ್ರತೆಯನ್ನ ಒಟ್ಟು ಮಾಡಿದರೆ ಆಗಬಹುದಾದ ದೊಡ್ಡದಾದ ಕಾಯವಿದು ಎಂಬುದನ್ನು ಗೆಂಜೆಲ್‌ ಮತ್ತು ಘೆಜ್‌ ತಂಡಗಳು ಕಂಡುಕೊಂಡವು.

ವಿಶೇಷವೆಂದರೆ ಘೆಜ್‌ ಭೌತಶಾಸ್ತ್ರದಲ್ಲಿ ನೊಬೆಲ್‌ ಗೌರವಕ್ಕೆ ಭಾಜನರಾದ ನಾಲ್ಕನೆಯ ಮಹಿಳಾ ವಿಜ್ಞಾನಿಯಾಗಿದ್ದಾರೆ. 1903ರಲ್ಲಿ ಪೊಲ್ಯಾಂಡಿನ ಮೇರಿ ಸ್ಕೊಲೊಡೋಸ್ಕ್‌, 1963ರಲ್ಲಿ ಅಮೆರಿಕದ ಮಾರಿಯಾ ಗೋಪರ್ಟ್‌ ಮೇಯರ್‌, 2018ರಲ್ಲಿ ಕೆನಡಾದ ಡೊನಾ ಸ್ಟ್ರಿಕ್‌ಲ್ಯಾಂಡ್‌ ಈ ಗೌರವಕ್ಕೆ ಪಾತ್ರರಾಗಿದ್ದರು.

ಕೃಪೆ: ಟೆಕ್ ಕನ್ನಡ


 

ಇದನ್ನೂ ಓದಿ: ಕೊರೋನಾ – ಭಾರತದ ಆರ್ಥಿಕತೆ: ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞರು ಏನೇಳ್ತಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...