Homeಗೌರಿ ಕಾರ್ನರ್ಗೌರಿ ಇಲ್ಲದಿದ್ದರೆ ನಾವು ಸುಲಭವಾಗಿ ಮುಖ್ಯವಾಹಿನಿಗೆ ಬರುತ್ತಿರಲಿಲ್ಲವೇನೋ? : ಸಿರಿಮನೆ ನಾಗರಾಜ್

ಗೌರಿ ಇಲ್ಲದಿದ್ದರೆ ನಾವು ಸುಲಭವಾಗಿ ಮುಖ್ಯವಾಹಿನಿಗೆ ಬರುತ್ತಿರಲಿಲ್ಲವೇನೋ? : ಸಿರಿಮನೆ ನಾಗರಾಜ್

ಅಜ್ಞಾತವಾಸದಲ್ಲಿದ್ದಾಗ ಗೌರಿ ನಮ್ಮನ್ನು ಸುಮಾರು ಮೂರು ಗಂಟೆಗೂ ಹೆಚ್ಚು ಹೊತ್ತು ತೀಕ್ಷ್ಣವಾದ ‘ಪಾಟಿಸವಾಲಿಗೆ’ ಒಳಪಡಿಸಿದ್ದರು.

- Advertisement -
- Advertisement -

ಗೌರಿ ಲಂಕೇಶ್ ಜೊತೆಗೆ ನನ್ನ ಮುಖಾಮುಖಿ ಒಡನಾಟ ಶುರುವಾಗಿದ್ದು ನಾನು ಮತ್ತು ನೂರ್ ಶ್ರೀಧರ್ ಅಜ್ಞಾತವಾಸದಿಂದ (‘ಅಂಡರ್‌ಗ್ರೌಂಡ್’ನಿಂದ) ಮುಖ್ಯವಾಹಿನಿಗೆ ಮರಳುವ ಪ್ರಕ್ರಿಯೆಯ ಸಂದರ್ಭದಲ್ಲಿ – ಅಂದರೆ ಸುಮಾರು 2014ರ ಕೊನೆಯ ಭಾಗದಲ್ಲಿ. ಅಲ್ಲಿಯವರೆಗೂ ಇಬ್ಬರಿಗೂ ಮತ್ತೊಬ್ಬರ ಬಗೆಗೆ ಗೊತ್ತಿತ್ತೇ ಹೊರತು ಮುಖತಃ ಭೇಟಿ ಆಗಿರಲಿಲ್ಲ. 2012ರಲ್ಲಿ ಪತ್ರಿಕೆಯ ಉಳಿವು ಮತ್ತು ಬೆಳವಣಿಗೆಗೆ ಸಂಬಂಧಿಸಿದಂತೆ ಅವರಿಗೊಂದು ದೀರ್ಘ ಪತ್ರ ಬರೆದಿದ್ದೆ. ಅವರು ಕೂಡಲೇ ಸ್ಪಂದಿಸಿದ್ದರು. ಅಷ್ಟೇ.

2013-14ರಲ್ಲಿ ಶ್ರೀ ಎಚ್.ಎಸ್.ದೊರೆಸ್ವಾಮಿಯವರ ಮುಂದಾಳ್ತನದಲ್ಲಿ ‘ಶಾಂತಿಗಾಗಿ ನಾಗರಿಕರ ವೇದಿಕೆ’ಯಡಿ ಎ.ಕೆ.ಸುಬ್ಬಯ್ಯ, ದೇವನೂರು ಮಹಾದೇವ, ಇಂದೂಧರ ಹೊನ್ನಾಪುರ, ಗೌರಿ ಇನ್ನೂ ಮುಂತಾದ ಸಹೃದಯರು ನಮ್ಮಗಳನ್ನು ಮುಖ್ಯವಾಹಿನಿಗೆ ಕರೆತರುವ ಪ್ರಯತ್ನವನ್ನು ಗಂಭೀರವಾಗಿ ಕೈಗೆತ್ತಿಕೊಂಡರಷ್ಟೆ. ಅದರ ಕೊನೆಯ ಹಂತದಲ್ಲಿ, ಈ ತಂಡದವರು ಸರ್ಕಾರದ ಜೊತೆ ಕೊನೆಯ ಸುತ್ತಿನ ಮಾತುಕತೆಗಳಿಗೆ ಮುಂದಾಗುವ ಮೊದಲು ನಮ್ಮ ಜೊತೆ ನೇರವಾಗಿ ಚರ್ಚಿಸಬೇಕು ಎಂಬ ಪ್ರಸ್ತಾಪ ಬಂದು, ಅದಕ್ಕಾಗಿ ಯಾರೋ ಒಬ್ಬರ ಸ್ನೇಹಿತರ ತೋಟದ ಮನೆಯಲ್ಲಿ ಭೇಟಿ ವ್ಯವಸ್ಥೆಯಾಗಿತ್ತು. ಅಲ್ಲಿ ಅವರುಗಳು ನಮ್ಮನ್ನು ಸುಮಾರು ಮೂರು ಗಂಟೆಗೂ ಹೆಚ್ಚು ಹೊತ್ತು ತೀಕ್ಷ್ಣವಾದ ‘ಪಾಟಿಸವಾಲಿಗೆ’ ಒಳಪಡಿಸಿದರು.

ನಾವು ಅಜ್ಞಾತವಾಸದಿಂದ ಹೊರಬರುತ್ತಿರುವುದು ಒಂದು ತಾತ್ಕಾಲಿಕ ಕಾರ್ಯತಂತ್ರದ, ‘ಹಿಡನ್ ಅಜೆಂಡಾ’ದ ಭಾಗವಾಗಿ ಅಲ್ಲ; ಬದಲಿಗೆ, ಸಂವಿಧಾನದ ಚೌಕಟ್ಟಿನಲ್ಲಿ ಬಹಿರಂಗವಾದ ಸಮೂಹ ಹೋರಾಟ ಕಟ್ಟದೆ, ದೇಶವ್ಯಾಪಿಯಾಗಿ ಎಲ್ಲ ಜನಸಮುದಾಯಗಳನ್ನು ಒಳಗೊಂಡ ಬೃಹತ್ ಸಮೂಹ ಚಳವಳಿ ಎದ್ದುನಿಲ್ಲದೆ ಈ ದೇಶದಲ್ಲಿ ಕ್ರಾಂತಿ ಅಥವಾ ಯಾವುದೇ ಮೂಲಭೂತ ಸಾಮಾಜಿಕ-ಆರ್ಥಿಕ-ರಾಜಕೀಯ ಪರಿವರ್ತನೆ ಸಾಧ್ಯವಿಲ್ಲ ಎನ್ನುವುದು ಈ ಮೂರು ದಶಕಕ್ಕೂ ಹೆಚ್ಚು ಕಾಲದ ಹೋರಾಟದಲ್ಲಿ ನಮಗೆ ದೃಢವಾಗಿ ಮನವರಿಕೆಯಾಗಿದೆ; ಆದ್ದರಿಂದ ನಾವು ನಮ್ಮ ಹಳೆಯ ನಿಲುವುಗಳಿಗೆ ಅಂಟಿಕೂರದೆ, ದೇಶದ ಈ ಕಾಲಘಟ್ಟದ ವಾಸ್ತವಕ್ಕೆ ಹೊಂದುವಂತಹ ಸಮೂಹ ಚಳವಳಿ-ಹೋರಾಟಗಳನ್ನು ರೂಪಿಸಬೇಕು, ಸಮಾಜದೊಳಗಿನ ಎಲ್ಲ ಬಗೆಯ ಅಸಮಾನತೆ-ತಾರತಮ್ಯಗಳ ವಿರುದ್ಧವೂ ಸಂಘಟನೆ-ಹೋರಾಟಗಳನ್ನು ಕಟ್ಟಬೇಕು; ಅದರಲ್ಲಿ ಎಲ್ಲ ಶೋಷಿತ-ದಮನಿತ ಸಮುದಾಯಗಳನ್ನೂ ಒಳಗೊಳ್ಳಬೇಕು, ಎಲ್ಲಾ ಜನಪರ-ಪ್ರಜಾಪ್ರಭುತ್ವವಾದಿ-ದೇಶಪ್ರೇಮಿ ಪ್ರಜ್ಞಾವಂತರನ್ನೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂಬ ನಮ್ಮ ಮೂಲಭೂತ ಪರಿಕಲ್ಪನೆಗಳನ್ನು ಅವರ ಮುಂದಿಟ್ಟೆವು.

ಅಷ್ಟೇ ಅಲ್ಲದೆ, ಅವರುಗಳು ನಮ್ಮ ಮೇಲೆ ಇಡುತ್ತಿರುವ ವಿಶ್ವಾಸಕ್ಕೆ ನಾವು ಖಂಡಿತಾ ಎರಡು ಬಗೆಯುವುದಿಲ್ಲ ಎಂಬುದನ್ನೂ ಮನವರಿಕೆ ಮಾಡಿಕೊಟ್ಟೆವು; ಇದರಿಂದ ಅವರುಗಳಿಗೆ ನಮ್ಮ ಪ್ರಾಮಾಣಿಕತೆಯ ಬಗ್ಗೆ ಪೂರ್ತಿ ನಂಬಿಕೆ ಉಂಟಾಯಿತೆನ್ನಿಸುತ್ತೆ. ನಮ್ಮನ್ನು ಮುಖ್ಯವಾಹಿನಿಗೆ ಕರೆತರುವ ಕೊನೇ ಹಂತದ ಪ್ರಯತ್ನವನ್ನು ದೃಢವಾಗಿ ಪೂರ್ಣ ಆತ್ಮವಿಶ್ವಾಸದೊಂದಿಗೆ ಕೈಗೊಳ್ಳಲು ಅವರು ತೀರ್ಮಾನ ಮಾಡಿದರು. ಮುಂದೆ ನಡೆದದ್ದೆಲ್ಲ ಎಲ್ಲರಿಗೂ ತಿಳಿದೇ ಇದೆ.

ಅಂದು ಈ ಎಲ್ಲ ಚರ್ಚೆ ನಡೆದ ನಂತರ, ಅವರುಗಳು ‘ಮೈಚಳಿ ಬಿಟ್ಟು’ ನಮ್ಮೊಂದಿಗೆ ಒಂದಷ್ಟು ಹೊತ್ತು ಲೋಕಾಭಿರಾಮವಾಗಿ, ತಮಾಷೆಯಾಗಿ ಮಾತಾಡುತ್ತ ಕಳೆದರು. ಪರಸ್ಪರ ವಿಶ್ವಾಸ, ಆತ್ಮೀಯತೆಯ ಭಾವನೆಯೊಂದಿಗೆ ನಾವಿಬ್ಬರೂ ವಾಪಸ್ ಹೊರಟೆವು. ಗೌರಿ ಈ ಇಡೀ ಪ್ರಕ್ರಿಯೆಯಲ್ಲಿ ಎಷ್ಟೊಂದು ಕಕ್ಕುಲಾತಿಯಿಂದ, ಉತ್ಕಟತೆಯಿಂದ ತೊಡಗಿಸಿಕೊಂಡರೆಂದರೆ, ಅವರು ಇರದಿದ್ದರೆ ನಾವು ಬಹಿರಂಗಕ್ಕೆ ಬರುವ ಪ್ರಕ್ರಿಯೆ ಇಷ್ಟು ಸುಮುಖವಾಗಿ ಪೂರ್ಣಗೊಳ್ಳಲು ಸಾಧ್ಯವಿತ್ತಾ ಎಂದು ಒಮ್ಮೊಮ್ಮೆ ಅನ್ನಿಸುತ್ತದೆ. ಅಷ್ಟೇ ಅಲ್ಲ, ಆ ನಂತರವೂ ಸಹ ಕಳೆದ ಐದೂಮುಕ್ಕಾಲು ವರ್ಷಗಳಲ್ಲಿ ದೊರೆಸ್ವಾಮಿಯವರ ಜೊತೆ ನಿಂತು, ಇನ್ನೂ ಹಲವಾರು ಸಮಾನ ಮನಸ್ಕ ಹೋರಾಟ ನಿರತ ಸಂಘನೆಗಳನ್ನೂ, ಮುಂದಾಳುಗಳನ್ನೂ ಜೊತೆಗೂಡಿಕೊಂಡು ನಾವು ಏನೇನು ಜನಪರ ಕೆಲಸಗಳನ್ನು ಮಾಡುತ್ತ ಬರಲು ಸಾಧ್ಯವಾಯಿತೋ, ಅದೆಲ್ಲದರಲ್ಲೂ ಗೌರಿಯವರ ಪಾತ್ರ ಅಚ್ಚಳಿಯದೆ ಬೆಸೆದುಕೊಂಡಿದೆ. ಅವರ ಹತ್ಯೆಯೊಂದು ಹೇಗೆ ಇಡೀ ನಾಡಿನ ಜನಪರ ಹೋರಾಟ-ಚಳವಳಿಗಳಿಗೆ ಉಂಟಾದ ಮರ್ಮಾಘಾತವೋ ಹಾಗೆಯೇ ನಮ್ಮ ಎಲ್ಲಾ ಸಮಾಜಮುಖಿ ಕೆಲಸಗಳಿಗೂ ಉಂಟಾದ ಗಂಭೀರ ನಷ್ಟ ಎಂದರೆ ಉತ್ಪ್ರೇಕ್ಷೆಯಲ್ಲ.


ಇದಮ್ಮೂ ಓದಿ: ವಿದ್ಯಾರ್ಥಿ ಮಿತ್ರರಾಗಿ ಸ್ಫೂರ್ತಿ ತುಂಬುತ್ತಿದ್ದ ಗೌರಿ ಮೇಡಂ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮಾತಾಡುವಾಗ “ಹತ್ಯೆ” ಎಂಬ ಪದವನ್ನು ಕನ್ನಡಿಗರು ಬಳಸುವುದನ್ನು ಕೇಳಿದ್ದೀರಾ?

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...