Homeಗೌರಿ ಕಾರ್ನರ್ಗೌರಿ ಇಲ್ಲದಿದ್ದರೆ ನಾವು ಸುಲಭವಾಗಿ ಮುಖ್ಯವಾಹಿನಿಗೆ ಬರುತ್ತಿರಲಿಲ್ಲವೇನೋ? : ಸಿರಿಮನೆ ನಾಗರಾಜ್

ಗೌರಿ ಇಲ್ಲದಿದ್ದರೆ ನಾವು ಸುಲಭವಾಗಿ ಮುಖ್ಯವಾಹಿನಿಗೆ ಬರುತ್ತಿರಲಿಲ್ಲವೇನೋ? : ಸಿರಿಮನೆ ನಾಗರಾಜ್

ಅಜ್ಞಾತವಾಸದಲ್ಲಿದ್ದಾಗ ಗೌರಿ ನಮ್ಮನ್ನು ಸುಮಾರು ಮೂರು ಗಂಟೆಗೂ ಹೆಚ್ಚು ಹೊತ್ತು ತೀಕ್ಷ್ಣವಾದ ‘ಪಾಟಿಸವಾಲಿಗೆ’ ಒಳಪಡಿಸಿದ್ದರು.

- Advertisement -
- Advertisement -

ಗೌರಿ ಲಂಕೇಶ್ ಜೊತೆಗೆ ನನ್ನ ಮುಖಾಮುಖಿ ಒಡನಾಟ ಶುರುವಾಗಿದ್ದು ನಾನು ಮತ್ತು ನೂರ್ ಶ್ರೀಧರ್ ಅಜ್ಞಾತವಾಸದಿಂದ (‘ಅಂಡರ್‌ಗ್ರೌಂಡ್’ನಿಂದ) ಮುಖ್ಯವಾಹಿನಿಗೆ ಮರಳುವ ಪ್ರಕ್ರಿಯೆಯ ಸಂದರ್ಭದಲ್ಲಿ – ಅಂದರೆ ಸುಮಾರು 2014ರ ಕೊನೆಯ ಭಾಗದಲ್ಲಿ. ಅಲ್ಲಿಯವರೆಗೂ ಇಬ್ಬರಿಗೂ ಮತ್ತೊಬ್ಬರ ಬಗೆಗೆ ಗೊತ್ತಿತ್ತೇ ಹೊರತು ಮುಖತಃ ಭೇಟಿ ಆಗಿರಲಿಲ್ಲ. 2012ರಲ್ಲಿ ಪತ್ರಿಕೆಯ ಉಳಿವು ಮತ್ತು ಬೆಳವಣಿಗೆಗೆ ಸಂಬಂಧಿಸಿದಂತೆ ಅವರಿಗೊಂದು ದೀರ್ಘ ಪತ್ರ ಬರೆದಿದ್ದೆ. ಅವರು ಕೂಡಲೇ ಸ್ಪಂದಿಸಿದ್ದರು. ಅಷ್ಟೇ.

2013-14ರಲ್ಲಿ ಶ್ರೀ ಎಚ್.ಎಸ್.ದೊರೆಸ್ವಾಮಿಯವರ ಮುಂದಾಳ್ತನದಲ್ಲಿ ‘ಶಾಂತಿಗಾಗಿ ನಾಗರಿಕರ ವೇದಿಕೆ’ಯಡಿ ಎ.ಕೆ.ಸುಬ್ಬಯ್ಯ, ದೇವನೂರು ಮಹಾದೇವ, ಇಂದೂಧರ ಹೊನ್ನಾಪುರ, ಗೌರಿ ಇನ್ನೂ ಮುಂತಾದ ಸಹೃದಯರು ನಮ್ಮಗಳನ್ನು ಮುಖ್ಯವಾಹಿನಿಗೆ ಕರೆತರುವ ಪ್ರಯತ್ನವನ್ನು ಗಂಭೀರವಾಗಿ ಕೈಗೆತ್ತಿಕೊಂಡರಷ್ಟೆ. ಅದರ ಕೊನೆಯ ಹಂತದಲ್ಲಿ, ಈ ತಂಡದವರು ಸರ್ಕಾರದ ಜೊತೆ ಕೊನೆಯ ಸುತ್ತಿನ ಮಾತುಕತೆಗಳಿಗೆ ಮುಂದಾಗುವ ಮೊದಲು ನಮ್ಮ ಜೊತೆ ನೇರವಾಗಿ ಚರ್ಚಿಸಬೇಕು ಎಂಬ ಪ್ರಸ್ತಾಪ ಬಂದು, ಅದಕ್ಕಾಗಿ ಯಾರೋ ಒಬ್ಬರ ಸ್ನೇಹಿತರ ತೋಟದ ಮನೆಯಲ್ಲಿ ಭೇಟಿ ವ್ಯವಸ್ಥೆಯಾಗಿತ್ತು. ಅಲ್ಲಿ ಅವರುಗಳು ನಮ್ಮನ್ನು ಸುಮಾರು ಮೂರು ಗಂಟೆಗೂ ಹೆಚ್ಚು ಹೊತ್ತು ತೀಕ್ಷ್ಣವಾದ ‘ಪಾಟಿಸವಾಲಿಗೆ’ ಒಳಪಡಿಸಿದರು.

ನಾವು ಅಜ್ಞಾತವಾಸದಿಂದ ಹೊರಬರುತ್ತಿರುವುದು ಒಂದು ತಾತ್ಕಾಲಿಕ ಕಾರ್ಯತಂತ್ರದ, ‘ಹಿಡನ್ ಅಜೆಂಡಾ’ದ ಭಾಗವಾಗಿ ಅಲ್ಲ; ಬದಲಿಗೆ, ಸಂವಿಧಾನದ ಚೌಕಟ್ಟಿನಲ್ಲಿ ಬಹಿರಂಗವಾದ ಸಮೂಹ ಹೋರಾಟ ಕಟ್ಟದೆ, ದೇಶವ್ಯಾಪಿಯಾಗಿ ಎಲ್ಲ ಜನಸಮುದಾಯಗಳನ್ನು ಒಳಗೊಂಡ ಬೃಹತ್ ಸಮೂಹ ಚಳವಳಿ ಎದ್ದುನಿಲ್ಲದೆ ಈ ದೇಶದಲ್ಲಿ ಕ್ರಾಂತಿ ಅಥವಾ ಯಾವುದೇ ಮೂಲಭೂತ ಸಾಮಾಜಿಕ-ಆರ್ಥಿಕ-ರಾಜಕೀಯ ಪರಿವರ್ತನೆ ಸಾಧ್ಯವಿಲ್ಲ ಎನ್ನುವುದು ಈ ಮೂರು ದಶಕಕ್ಕೂ ಹೆಚ್ಚು ಕಾಲದ ಹೋರಾಟದಲ್ಲಿ ನಮಗೆ ದೃಢವಾಗಿ ಮನವರಿಕೆಯಾಗಿದೆ; ಆದ್ದರಿಂದ ನಾವು ನಮ್ಮ ಹಳೆಯ ನಿಲುವುಗಳಿಗೆ ಅಂಟಿಕೂರದೆ, ದೇಶದ ಈ ಕಾಲಘಟ್ಟದ ವಾಸ್ತವಕ್ಕೆ ಹೊಂದುವಂತಹ ಸಮೂಹ ಚಳವಳಿ-ಹೋರಾಟಗಳನ್ನು ರೂಪಿಸಬೇಕು, ಸಮಾಜದೊಳಗಿನ ಎಲ್ಲ ಬಗೆಯ ಅಸಮಾನತೆ-ತಾರತಮ್ಯಗಳ ವಿರುದ್ಧವೂ ಸಂಘಟನೆ-ಹೋರಾಟಗಳನ್ನು ಕಟ್ಟಬೇಕು; ಅದರಲ್ಲಿ ಎಲ್ಲ ಶೋಷಿತ-ದಮನಿತ ಸಮುದಾಯಗಳನ್ನೂ ಒಳಗೊಳ್ಳಬೇಕು, ಎಲ್ಲಾ ಜನಪರ-ಪ್ರಜಾಪ್ರಭುತ್ವವಾದಿ-ದೇಶಪ್ರೇಮಿ ಪ್ರಜ್ಞಾವಂತರನ್ನೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂಬ ನಮ್ಮ ಮೂಲಭೂತ ಪರಿಕಲ್ಪನೆಗಳನ್ನು ಅವರ ಮುಂದಿಟ್ಟೆವು.

ಅಷ್ಟೇ ಅಲ್ಲದೆ, ಅವರುಗಳು ನಮ್ಮ ಮೇಲೆ ಇಡುತ್ತಿರುವ ವಿಶ್ವಾಸಕ್ಕೆ ನಾವು ಖಂಡಿತಾ ಎರಡು ಬಗೆಯುವುದಿಲ್ಲ ಎಂಬುದನ್ನೂ ಮನವರಿಕೆ ಮಾಡಿಕೊಟ್ಟೆವು; ಇದರಿಂದ ಅವರುಗಳಿಗೆ ನಮ್ಮ ಪ್ರಾಮಾಣಿಕತೆಯ ಬಗ್ಗೆ ಪೂರ್ತಿ ನಂಬಿಕೆ ಉಂಟಾಯಿತೆನ್ನಿಸುತ್ತೆ. ನಮ್ಮನ್ನು ಮುಖ್ಯವಾಹಿನಿಗೆ ಕರೆತರುವ ಕೊನೇ ಹಂತದ ಪ್ರಯತ್ನವನ್ನು ದೃಢವಾಗಿ ಪೂರ್ಣ ಆತ್ಮವಿಶ್ವಾಸದೊಂದಿಗೆ ಕೈಗೊಳ್ಳಲು ಅವರು ತೀರ್ಮಾನ ಮಾಡಿದರು. ಮುಂದೆ ನಡೆದದ್ದೆಲ್ಲ ಎಲ್ಲರಿಗೂ ತಿಳಿದೇ ಇದೆ.

ಅಂದು ಈ ಎಲ್ಲ ಚರ್ಚೆ ನಡೆದ ನಂತರ, ಅವರುಗಳು ‘ಮೈಚಳಿ ಬಿಟ್ಟು’ ನಮ್ಮೊಂದಿಗೆ ಒಂದಷ್ಟು ಹೊತ್ತು ಲೋಕಾಭಿರಾಮವಾಗಿ, ತಮಾಷೆಯಾಗಿ ಮಾತಾಡುತ್ತ ಕಳೆದರು. ಪರಸ್ಪರ ವಿಶ್ವಾಸ, ಆತ್ಮೀಯತೆಯ ಭಾವನೆಯೊಂದಿಗೆ ನಾವಿಬ್ಬರೂ ವಾಪಸ್ ಹೊರಟೆವು. ಗೌರಿ ಈ ಇಡೀ ಪ್ರಕ್ರಿಯೆಯಲ್ಲಿ ಎಷ್ಟೊಂದು ಕಕ್ಕುಲಾತಿಯಿಂದ, ಉತ್ಕಟತೆಯಿಂದ ತೊಡಗಿಸಿಕೊಂಡರೆಂದರೆ, ಅವರು ಇರದಿದ್ದರೆ ನಾವು ಬಹಿರಂಗಕ್ಕೆ ಬರುವ ಪ್ರಕ್ರಿಯೆ ಇಷ್ಟು ಸುಮುಖವಾಗಿ ಪೂರ್ಣಗೊಳ್ಳಲು ಸಾಧ್ಯವಿತ್ತಾ ಎಂದು ಒಮ್ಮೊಮ್ಮೆ ಅನ್ನಿಸುತ್ತದೆ. ಅಷ್ಟೇ ಅಲ್ಲ, ಆ ನಂತರವೂ ಸಹ ಕಳೆದ ಐದೂಮುಕ್ಕಾಲು ವರ್ಷಗಳಲ್ಲಿ ದೊರೆಸ್ವಾಮಿಯವರ ಜೊತೆ ನಿಂತು, ಇನ್ನೂ ಹಲವಾರು ಸಮಾನ ಮನಸ್ಕ ಹೋರಾಟ ನಿರತ ಸಂಘನೆಗಳನ್ನೂ, ಮುಂದಾಳುಗಳನ್ನೂ ಜೊತೆಗೂಡಿಕೊಂಡು ನಾವು ಏನೇನು ಜನಪರ ಕೆಲಸಗಳನ್ನು ಮಾಡುತ್ತ ಬರಲು ಸಾಧ್ಯವಾಯಿತೋ, ಅದೆಲ್ಲದರಲ್ಲೂ ಗೌರಿಯವರ ಪಾತ್ರ ಅಚ್ಚಳಿಯದೆ ಬೆಸೆದುಕೊಂಡಿದೆ. ಅವರ ಹತ್ಯೆಯೊಂದು ಹೇಗೆ ಇಡೀ ನಾಡಿನ ಜನಪರ ಹೋರಾಟ-ಚಳವಳಿಗಳಿಗೆ ಉಂಟಾದ ಮರ್ಮಾಘಾತವೋ ಹಾಗೆಯೇ ನಮ್ಮ ಎಲ್ಲಾ ಸಮಾಜಮುಖಿ ಕೆಲಸಗಳಿಗೂ ಉಂಟಾದ ಗಂಭೀರ ನಷ್ಟ ಎಂದರೆ ಉತ್ಪ್ರೇಕ್ಷೆಯಲ್ಲ.


ಇದಮ್ಮೂ ಓದಿ: ವಿದ್ಯಾರ್ಥಿ ಮಿತ್ರರಾಗಿ ಸ್ಫೂರ್ತಿ ತುಂಬುತ್ತಿದ್ದ ಗೌರಿ ಮೇಡಂ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮಾತಾಡುವಾಗ “ಹತ್ಯೆ” ಎಂಬ ಪದವನ್ನು ಕನ್ನಡಿಗರು ಬಳಸುವುದನ್ನು ಕೇಳಿದ್ದೀರಾ?

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...