Homeಗೌರಿ ಕಾರ್ನರ್ಗೌರಿ ಇಲ್ಲದಿದ್ದರೆ ನಾವು ಸುಲಭವಾಗಿ ಮುಖ್ಯವಾಹಿನಿಗೆ ಬರುತ್ತಿರಲಿಲ್ಲವೇನೋ? : ಸಿರಿಮನೆ ನಾಗರಾಜ್

ಗೌರಿ ಇಲ್ಲದಿದ್ದರೆ ನಾವು ಸುಲಭವಾಗಿ ಮುಖ್ಯವಾಹಿನಿಗೆ ಬರುತ್ತಿರಲಿಲ್ಲವೇನೋ? : ಸಿರಿಮನೆ ನಾಗರಾಜ್

ಅಜ್ಞಾತವಾಸದಲ್ಲಿದ್ದಾಗ ಗೌರಿ ನಮ್ಮನ್ನು ಸುಮಾರು ಮೂರು ಗಂಟೆಗೂ ಹೆಚ್ಚು ಹೊತ್ತು ತೀಕ್ಷ್ಣವಾದ ‘ಪಾಟಿಸವಾಲಿಗೆ’ ಒಳಪಡಿಸಿದ್ದರು.

- Advertisement -
- Advertisement -

ಗೌರಿ ಲಂಕೇಶ್ ಜೊತೆಗೆ ನನ್ನ ಮುಖಾಮುಖಿ ಒಡನಾಟ ಶುರುವಾಗಿದ್ದು ನಾನು ಮತ್ತು ನೂರ್ ಶ್ರೀಧರ್ ಅಜ್ಞಾತವಾಸದಿಂದ (‘ಅಂಡರ್‌ಗ್ರೌಂಡ್’ನಿಂದ) ಮುಖ್ಯವಾಹಿನಿಗೆ ಮರಳುವ ಪ್ರಕ್ರಿಯೆಯ ಸಂದರ್ಭದಲ್ಲಿ – ಅಂದರೆ ಸುಮಾರು 2014ರ ಕೊನೆಯ ಭಾಗದಲ್ಲಿ. ಅಲ್ಲಿಯವರೆಗೂ ಇಬ್ಬರಿಗೂ ಮತ್ತೊಬ್ಬರ ಬಗೆಗೆ ಗೊತ್ತಿತ್ತೇ ಹೊರತು ಮುಖತಃ ಭೇಟಿ ಆಗಿರಲಿಲ್ಲ. 2012ರಲ್ಲಿ ಪತ್ರಿಕೆಯ ಉಳಿವು ಮತ್ತು ಬೆಳವಣಿಗೆಗೆ ಸಂಬಂಧಿಸಿದಂತೆ ಅವರಿಗೊಂದು ದೀರ್ಘ ಪತ್ರ ಬರೆದಿದ್ದೆ. ಅವರು ಕೂಡಲೇ ಸ್ಪಂದಿಸಿದ್ದರು. ಅಷ್ಟೇ.

2013-14ರಲ್ಲಿ ಶ್ರೀ ಎಚ್.ಎಸ್.ದೊರೆಸ್ವಾಮಿಯವರ ಮುಂದಾಳ್ತನದಲ್ಲಿ ‘ಶಾಂತಿಗಾಗಿ ನಾಗರಿಕರ ವೇದಿಕೆ’ಯಡಿ ಎ.ಕೆ.ಸುಬ್ಬಯ್ಯ, ದೇವನೂರು ಮಹಾದೇವ, ಇಂದೂಧರ ಹೊನ್ನಾಪುರ, ಗೌರಿ ಇನ್ನೂ ಮುಂತಾದ ಸಹೃದಯರು ನಮ್ಮಗಳನ್ನು ಮುಖ್ಯವಾಹಿನಿಗೆ ಕರೆತರುವ ಪ್ರಯತ್ನವನ್ನು ಗಂಭೀರವಾಗಿ ಕೈಗೆತ್ತಿಕೊಂಡರಷ್ಟೆ. ಅದರ ಕೊನೆಯ ಹಂತದಲ್ಲಿ, ಈ ತಂಡದವರು ಸರ್ಕಾರದ ಜೊತೆ ಕೊನೆಯ ಸುತ್ತಿನ ಮಾತುಕತೆಗಳಿಗೆ ಮುಂದಾಗುವ ಮೊದಲು ನಮ್ಮ ಜೊತೆ ನೇರವಾಗಿ ಚರ್ಚಿಸಬೇಕು ಎಂಬ ಪ್ರಸ್ತಾಪ ಬಂದು, ಅದಕ್ಕಾಗಿ ಯಾರೋ ಒಬ್ಬರ ಸ್ನೇಹಿತರ ತೋಟದ ಮನೆಯಲ್ಲಿ ಭೇಟಿ ವ್ಯವಸ್ಥೆಯಾಗಿತ್ತು. ಅಲ್ಲಿ ಅವರುಗಳು ನಮ್ಮನ್ನು ಸುಮಾರು ಮೂರು ಗಂಟೆಗೂ ಹೆಚ್ಚು ಹೊತ್ತು ತೀಕ್ಷ್ಣವಾದ ‘ಪಾಟಿಸವಾಲಿಗೆ’ ಒಳಪಡಿಸಿದರು.

ನಾವು ಅಜ್ಞಾತವಾಸದಿಂದ ಹೊರಬರುತ್ತಿರುವುದು ಒಂದು ತಾತ್ಕಾಲಿಕ ಕಾರ್ಯತಂತ್ರದ, ‘ಹಿಡನ್ ಅಜೆಂಡಾ’ದ ಭಾಗವಾಗಿ ಅಲ್ಲ; ಬದಲಿಗೆ, ಸಂವಿಧಾನದ ಚೌಕಟ್ಟಿನಲ್ಲಿ ಬಹಿರಂಗವಾದ ಸಮೂಹ ಹೋರಾಟ ಕಟ್ಟದೆ, ದೇಶವ್ಯಾಪಿಯಾಗಿ ಎಲ್ಲ ಜನಸಮುದಾಯಗಳನ್ನು ಒಳಗೊಂಡ ಬೃಹತ್ ಸಮೂಹ ಚಳವಳಿ ಎದ್ದುನಿಲ್ಲದೆ ಈ ದೇಶದಲ್ಲಿ ಕ್ರಾಂತಿ ಅಥವಾ ಯಾವುದೇ ಮೂಲಭೂತ ಸಾಮಾಜಿಕ-ಆರ್ಥಿಕ-ರಾಜಕೀಯ ಪರಿವರ್ತನೆ ಸಾಧ್ಯವಿಲ್ಲ ಎನ್ನುವುದು ಈ ಮೂರು ದಶಕಕ್ಕೂ ಹೆಚ್ಚು ಕಾಲದ ಹೋರಾಟದಲ್ಲಿ ನಮಗೆ ದೃಢವಾಗಿ ಮನವರಿಕೆಯಾಗಿದೆ; ಆದ್ದರಿಂದ ನಾವು ನಮ್ಮ ಹಳೆಯ ನಿಲುವುಗಳಿಗೆ ಅಂಟಿಕೂರದೆ, ದೇಶದ ಈ ಕಾಲಘಟ್ಟದ ವಾಸ್ತವಕ್ಕೆ ಹೊಂದುವಂತಹ ಸಮೂಹ ಚಳವಳಿ-ಹೋರಾಟಗಳನ್ನು ರೂಪಿಸಬೇಕು, ಸಮಾಜದೊಳಗಿನ ಎಲ್ಲ ಬಗೆಯ ಅಸಮಾನತೆ-ತಾರತಮ್ಯಗಳ ವಿರುದ್ಧವೂ ಸಂಘಟನೆ-ಹೋರಾಟಗಳನ್ನು ಕಟ್ಟಬೇಕು; ಅದರಲ್ಲಿ ಎಲ್ಲ ಶೋಷಿತ-ದಮನಿತ ಸಮುದಾಯಗಳನ್ನೂ ಒಳಗೊಳ್ಳಬೇಕು, ಎಲ್ಲಾ ಜನಪರ-ಪ್ರಜಾಪ್ರಭುತ್ವವಾದಿ-ದೇಶಪ್ರೇಮಿ ಪ್ರಜ್ಞಾವಂತರನ್ನೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂಬ ನಮ್ಮ ಮೂಲಭೂತ ಪರಿಕಲ್ಪನೆಗಳನ್ನು ಅವರ ಮುಂದಿಟ್ಟೆವು.

ಅಷ್ಟೇ ಅಲ್ಲದೆ, ಅವರುಗಳು ನಮ್ಮ ಮೇಲೆ ಇಡುತ್ತಿರುವ ವಿಶ್ವಾಸಕ್ಕೆ ನಾವು ಖಂಡಿತಾ ಎರಡು ಬಗೆಯುವುದಿಲ್ಲ ಎಂಬುದನ್ನೂ ಮನವರಿಕೆ ಮಾಡಿಕೊಟ್ಟೆವು; ಇದರಿಂದ ಅವರುಗಳಿಗೆ ನಮ್ಮ ಪ್ರಾಮಾಣಿಕತೆಯ ಬಗ್ಗೆ ಪೂರ್ತಿ ನಂಬಿಕೆ ಉಂಟಾಯಿತೆನ್ನಿಸುತ್ತೆ. ನಮ್ಮನ್ನು ಮುಖ್ಯವಾಹಿನಿಗೆ ಕರೆತರುವ ಕೊನೇ ಹಂತದ ಪ್ರಯತ್ನವನ್ನು ದೃಢವಾಗಿ ಪೂರ್ಣ ಆತ್ಮವಿಶ್ವಾಸದೊಂದಿಗೆ ಕೈಗೊಳ್ಳಲು ಅವರು ತೀರ್ಮಾನ ಮಾಡಿದರು. ಮುಂದೆ ನಡೆದದ್ದೆಲ್ಲ ಎಲ್ಲರಿಗೂ ತಿಳಿದೇ ಇದೆ.

ಅಂದು ಈ ಎಲ್ಲ ಚರ್ಚೆ ನಡೆದ ನಂತರ, ಅವರುಗಳು ‘ಮೈಚಳಿ ಬಿಟ್ಟು’ ನಮ್ಮೊಂದಿಗೆ ಒಂದಷ್ಟು ಹೊತ್ತು ಲೋಕಾಭಿರಾಮವಾಗಿ, ತಮಾಷೆಯಾಗಿ ಮಾತಾಡುತ್ತ ಕಳೆದರು. ಪರಸ್ಪರ ವಿಶ್ವಾಸ, ಆತ್ಮೀಯತೆಯ ಭಾವನೆಯೊಂದಿಗೆ ನಾವಿಬ್ಬರೂ ವಾಪಸ್ ಹೊರಟೆವು. ಗೌರಿ ಈ ಇಡೀ ಪ್ರಕ್ರಿಯೆಯಲ್ಲಿ ಎಷ್ಟೊಂದು ಕಕ್ಕುಲಾತಿಯಿಂದ, ಉತ್ಕಟತೆಯಿಂದ ತೊಡಗಿಸಿಕೊಂಡರೆಂದರೆ, ಅವರು ಇರದಿದ್ದರೆ ನಾವು ಬಹಿರಂಗಕ್ಕೆ ಬರುವ ಪ್ರಕ್ರಿಯೆ ಇಷ್ಟು ಸುಮುಖವಾಗಿ ಪೂರ್ಣಗೊಳ್ಳಲು ಸಾಧ್ಯವಿತ್ತಾ ಎಂದು ಒಮ್ಮೊಮ್ಮೆ ಅನ್ನಿಸುತ್ತದೆ. ಅಷ್ಟೇ ಅಲ್ಲ, ಆ ನಂತರವೂ ಸಹ ಕಳೆದ ಐದೂಮುಕ್ಕಾಲು ವರ್ಷಗಳಲ್ಲಿ ದೊರೆಸ್ವಾಮಿಯವರ ಜೊತೆ ನಿಂತು, ಇನ್ನೂ ಹಲವಾರು ಸಮಾನ ಮನಸ್ಕ ಹೋರಾಟ ನಿರತ ಸಂಘನೆಗಳನ್ನೂ, ಮುಂದಾಳುಗಳನ್ನೂ ಜೊತೆಗೂಡಿಕೊಂಡು ನಾವು ಏನೇನು ಜನಪರ ಕೆಲಸಗಳನ್ನು ಮಾಡುತ್ತ ಬರಲು ಸಾಧ್ಯವಾಯಿತೋ, ಅದೆಲ್ಲದರಲ್ಲೂ ಗೌರಿಯವರ ಪಾತ್ರ ಅಚ್ಚಳಿಯದೆ ಬೆಸೆದುಕೊಂಡಿದೆ. ಅವರ ಹತ್ಯೆಯೊಂದು ಹೇಗೆ ಇಡೀ ನಾಡಿನ ಜನಪರ ಹೋರಾಟ-ಚಳವಳಿಗಳಿಗೆ ಉಂಟಾದ ಮರ್ಮಾಘಾತವೋ ಹಾಗೆಯೇ ನಮ್ಮ ಎಲ್ಲಾ ಸಮಾಜಮುಖಿ ಕೆಲಸಗಳಿಗೂ ಉಂಟಾದ ಗಂಭೀರ ನಷ್ಟ ಎಂದರೆ ಉತ್ಪ್ರೇಕ್ಷೆಯಲ್ಲ.


ಇದಮ್ಮೂ ಓದಿ: ವಿದ್ಯಾರ್ಥಿ ಮಿತ್ರರಾಗಿ ಸ್ಫೂರ್ತಿ ತುಂಬುತ್ತಿದ್ದ ಗೌರಿ ಮೇಡಂ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮಾತಾಡುವಾಗ “ಹತ್ಯೆ” ಎಂಬ ಪದವನ್ನು ಕನ್ನಡಿಗರು ಬಳಸುವುದನ್ನು ಕೇಳಿದ್ದೀರಾ?

LEAVE A REPLY

Please enter your comment!
Please enter your name here

- Advertisment -

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....