Homeಮುಖಪುಟಮೋದಿಯ ₹8000 ಕೋಟಿ ವಿಮಾನದ ಬಗ್ಗೆ ಪ್ರಶ್ನೆ ಯಾಕಿಲ್ಲ?- ರಾಹುಲ್ ಗಾಂಧಿ

ಮೋದಿಯ ₹8000 ಕೋಟಿ ವಿಮಾನದ ಬಗ್ಗೆ ಪ್ರಶ್ನೆ ಯಾಕಿಲ್ಲ?- ರಾಹುಲ್ ಗಾಂಧಿ

’ನಾನು ಸೋಫಾ​ ಮೇಲೆ ಕುಳಿತಿದ್ದನ್ನು ಎಲ್ಲರೂ ಬೆರಳು ಮಾಡಿ ತೋರಿಸುತ್ತಿದ್ದಾರೆ. ಇಷ್ಟು ದೊಡ್ಡ ಮೊತ್ತಕ್ಕೆ ಖರೀದಿಸಿದ ಬೋಯಿಂಗ್ 777 ಬಗ್ಗೆ ಯಾರೂ ಕೇಳುತ್ತಿಲ್ಲ ಎಂಬುದು ವಿಚಿತ್ರ’ - ರಾಹುಲ್ ಗಾಂಧಿ

- Advertisement -
- Advertisement -

ವಿವಾದಿತ ಕೃಷಿ ಮಸೂದೆಗಳನ್ನು ವಿರೋಧಿಸಿ ಪಂಜಾಬ್‌ನಲ್ಲಿ ನಡೆದ ಟ್ರ್ಯಾಕ್ಟರ್ ರ್‍ಯಾಲಿಯಲ್ಲಿ ಸೋಫಾ ಮೇಲೆ ಕುಳಿತಿದ್ದನ್ನು ಟೀಕಿಸಿದ ಆಡಳಿತ ಪಕ್ಷಗಳಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ಪ್ರಧಾನ ಮಂತ್ರಿಗಳು ಐಷಾರಾಮಿ ವಿಮಾನಗಳ ಖರೀದಿಗೆ ಸಾವಿರಾರು ಕೋಟಿಗಳನ್ನು ವ್ಯರ್ಥ ಮಾಡುತ್ತಿದ್ದಾರೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಕಸ್ಟಮ್ ನಿರ್ಮಿತ ಬೋಯಿಂಗ್ ವಿಮಾನಗಳು “ಕೇವಲ ಒಂದು ಸೋಫಾ ಹೊಂದಿಲ್ಲ, ಅವರಿಗಾಗಿ ಇಡೀ ವಿಮಾನದ ತುಂಬಾ ಐಷಾರಾಮಿ ಹಾಸಿಗೆಗಳೇ ಇವೆ. ಈ ಬಗ್ಗೆ ನೀವು ಅವರನ್ನು ಯಾಕೆ ಪ್ರಶ್ನಿಸಬಾರದು..?” ಎಂದರು.

“ನಾನು ಸೋಫಾ​ ಮೇಲೆ ಕುಳಿತಿದ್ದನ್ನ ಎಲ್ಲರೂ ಬೆರಳು ಮಾಡಿ ತೋರಿಸುತ್ತಿದ್ದಾರೆ. ಇಷ್ಟು ದೊಡ್ಡ ಮೊತ್ತಕ್ಕೆ ಖರೀದಿಸಿದ ಬೋಯಿಂಗ್ 777 ಬಗ್ಗೆ ಯಾರೂ ಕೇಳುತ್ತಿಲ್ಲ ಎಂಬುದು ವಿಚಿತ್ರ” ಎಂದು ಪಟಿಯಾಲದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ್ದಾರೆ.

ಇದನ್ನೂ ಓದಿ: ದೆಹಲಿಗೆ ಆಗಮಿಸಿದ ಪ್ರಧಾನಿಯ ಪ್ರಯಾಣಕ್ಕೆಂದೆ ವಿಶೇಷವಾಗಿ ತಯಾರಾದ ವಿಮಾನ!

ಭಾರತ-ಚೀನಾ ಗಡಿಯಲ್ಲಿ ಚೀನಾದೊಂದಿಗೆ ಬಿಕ್ಕಟ್ಟು ಹೆಚ್ಚಾಗಿದ್ದು, ಸರ್ಕಾರ ಅಗತ್ಯ ಶಸ್ತ್ರಾಸ್ತ್ರ, ಗುಂಡುಮದ್ದುಗಳು, ಇಂಧನ, ಆಹಾರ, ನೀರು ಮತ್ತು ಚಳಿಗಾಲದ ಅಗತ್ಯ ವಸ್ತುಗಳನ್ನು ಪೂರ್ವ ಲಡಾಖ್‌ಗೆ ಕಳಿಸುತ್ತಿದೆ. ಇಂತಹ ಸಮಯದಲ್ಲಿ ಎರಡು ವಿಶೇಷ ವಿಮಾನಗಳಿಗೆ ಇಷ್ಟೊಂದು ಹಣ ಖರ್ಚು ಮಾಡಿದ್ದಾರೆ. ಯಾಕೆಂದರೆ ತನ್ನ ಸ್ನೇಹಿತ ಅಮೆರಿಕಾ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಬಳಿ ಅಂಥದ್ದೇ ವಿಮಾನ ಇದೆ ಅನ್ನೋ ಕಾರಣಕ್ಕೆ ಎಂದು ಅವರು ಟ್ರೋಲ್ ಮಾಡಿದವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಒಂದೆಡೆ ಪ್ರಧಾನಿ ಮೋದಿ 8,000 ಕೋಟಿ ರೂಪಾಯಿ ಮೌಲ್ಯದ ಎರಡು ವಿಮಾನಗಳನ್ನು ಖರೀದಿಸಿದ್ದಾರೆ. ಮತ್ತೊಂದೆಡೆ, ಚೀನಾ ನಮ್ಮ ಗಡಿಯಲ್ಲಿದೆ ಮತ್ತು ನಮ್ಮ ಭದ್ರತಾ ಪಡೆಗಳು ಚಳಿಯಲ್ಲಿ ನಡುಗುತ್ತಾ ನಮ್ಮನ್ನ ರಕ್ಷಣೆ ಮಾಡ್ತಿದ್ದಾರೆ” ಎಂದು ಅವರು ಹೇಳಿದರು, ಜೊತೆಗೆ ಸೋಫಾಗಳನ್ನು ತಮ್ಮ ಹಿತೈಷಿಗಳು ಅಲ್ಲಿ ಇರಿಸಿದ್ದರು ಎಂದಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪ್ರಧಾನಿ ಉದ್ಘಾಟಿಸಿದ ಅಟಲ್ ಸುರಂಗ ಎಂದು ಅಮೇರಿಕಾ ಸುರಂಗದ ಚಿತ್ರ ಹಂಚಿಕೊಂಡ ಮಾಧ್ಯಮಗಳು!

ಇತ್ತ ಸರ್ಕಾರ ವಿಮಾನಗಳ ಖರೀದಿಯನ್ನು ಸಮರ್ಥಿಸಿಕೊಂಡಿದ್ದು, ವಿಮಾನಗಳು ಭಾರತೀಯ ವಾಯುಪಡೆಗೆ ಸೇರಿವೆ. ಅದು ಕೇವಲ ಪ್ರಧಾನಮಂತ್ರಿಯ ವಿಮಾನ ಅಲ್ಲ, ಇತರ ವಿವಿಐಪಿಗಳ ಬಳಕೆಗಾಗಿವೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.

ಭಾರತದ ರಾಷ್ಟ್ರಪತಿ, ಉಪರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿಯಂತಹ ಗಣ್ಯವಕ್ತಿಗಳು ಪ್ರಯಾಣಿಸಲೆಂದೇ ವಿಶೇಷವಾಗಿ ತಯಾರಿಸಲಾಗಿರುವ B777(ಏರ್​ ಇಂಡಿಯಾ ಒನ್) ವಿಮಾನ ತಿಂಗಳ ಆರಂಭದಲ್ಲಿ ಅಮೆರಿಕಾದಿಂದ ದೆಹಲಿಗೆ ಬಂದಿಳಿದಿತ್ತು.

ಪ್ರಸ್ತುತ ರಾಷ್ಟ್ರಪತಿ, ಉಪರಾಷ್ಟ್ರಪತಿ ಹಾಗೂ ಪ್ರಧಾನಿಗಳು ಏರ್​ ಇಂಡಿಯಾದ ಬಿ747 ವಿಮಾನವನ್ನ ಪ್ರಯಾಣಕ್ಕಾಗಿ ಬಳಸುತ್ತಿದ್ದು, ಇದನ್ನು ಏರ್​ ಇಂಡಿಯಾ ಪೈಲಟ್​ಗಳೇ ಚಾಲನೆ ಮಾಡುತ್ತಾರೆ. ಆದರೆ ಹೊಸದಾಗಿ ಆಗಮಿಸಿರುವ ವಿಶೇಷ ವಿಮಾನವನ್ನು ಏರ್​ ಇಂಡಿಯಾ ಪೈಲಟ್​ಗಳ ಬದಲಾಗಿ ಭಾರತೀಯ ವಾಯುಸೇನೆಯ ಪೈಲಟ್​​ಗಳು ಚಾಲನೆ ಮಾಡಲಿದ್ದಾರೆ.


ಇದನ್ನೂ ಓದಿ: ಪ್ರಧಾನಿ ಮೋದಿಯ 58 ದೇಶಗಳ ಭೇಟಿಗೆ 517 ಕೋಟಿ ವೆಚ್ಚ: ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...