Homeಮುಖಪುಟಮಾಫಿಯಾ ರಾಜ್ ಹೇಳಿಕೆ: ಟ್ವಿಟ್ಟರ್‌ನಲ್ಲಿ ಟ್ರೋಲ್ ಆದ ಬಿಜೆಪಿಯ ದಿಲೀಪ್ ಘೋಷ್

ಮಾಫಿಯಾ ರಾಜ್ ಹೇಳಿಕೆ: ಟ್ವಿಟ್ಟರ್‌ನಲ್ಲಿ ಟ್ರೋಲ್ ಆದ ಬಿಜೆಪಿಯ ದಿಲೀಪ್ ಘೋಷ್

ಟ್ವಿಟ್ಟರ್‌ನಲ್ಲಿ ಬಿಜೆಪಿ ನಾಯಕನ ಹೇಳಿಕೆಯನ್ನು ಟ್ಯಾಗ್ ಮಾಡಿ ಹಲವು ಮಂದಿ ’ಯುಪಿ ಮತ್ತು ಬಿಹಾರದಲ್ಲಿ ಮಾಫಿಯಾ ರಾಜ್ ಆಡಳಿತವಿದೆ ಎಂದು ಸತ್ಯ ನುಡಿದಿದ್ದಕ್ಕೆ ಥ್ಯಾಂಕ್ಯೂ ದಿಲೀಪ್ ಘೋಷ್’‌ ಎಂದಿದ್ದಾರೆ.

- Advertisement -
- Advertisement -

ಪಶ್ಚಿಮ ಬಂಗಾಳ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ ಮತ್ತು ಕ್ರಮೇಣ ಇದು ಉತ್ತರ ಪ್ರದೇಶ ಮತ್ತು ಬಿಹಾರದಂತಹ ಮಾಫಿಯಾ ಆಡಳಿತದ ರಾಜ್ಯವಾಗುತ್ತಿದೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ನಿನ್ನೆ ಆರೋಪಿಸಿದ್ದರು. ಮಾಫಿಯಾ ರಾಜ್ ಹೇಳಿಕೆಗೆ ಜನ ಟ್ವಿಟ್ಟರ್‌ನಲ್ಲಿ ದಿಲೀಪ್ ಘೋಷ್‌ಗೆ ಧನ್ಯವಾದ ಸಲ್ಲಿಸಿ ವ್ಯಂಗ್ಯವಾಡಿದ್ದಾರೆ.

‘ಪಶ್ಚಿಮ ಬಂಗಾಳವು ಉತ್ತರ ಪ್ರದೇಶ ಮತ್ತು ಬಿಹಾರದಂತಹ ಮಾಫಿಯಾ-ರಾಜ್‌ ವ್ಯವಸ್ಥೆಗೆ ಜಾರುತ್ತಿದೆ.  ಸ್ಟೆನ್‌ಗನ್ ಬಳಸಿ ಪೊಲೀಸ್ ಠಾಣೆಯ ಮುಂದೆಯೇ ಕೌನ್ಸಿಲರ್‌ನನ್ನು ಗುಂಡಿಕ್ಕಿ ಕೊಂದಿದ್ದು ನಾಚಿಕೆಗೇಡಿನ ಘಟನೆ’ ಎಂದು ಘೋಷ್‌ ಹೇಳಿದ್ದರು. ಉತ್ತರ 24 ಪರಗಣ ಜಿಲ್ಲೆಯ ತಿತಾಗರ್‌ನಲ್ಲಿ ಬಿಜೆಪಿ ನಾಯಕ ಮನೀಶ್ ಶುಕ್ಲಾ‍ ಅವರನ್ನು ಗುಂಡಿಟ್ಟು ಕೊಂದಿದ್ದನ್ನು ಉಲ್ಲೇಖಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ತೃಣಮೂಲ ಕಾಂಗ್ರೆಸ್, ಬಿಜೆಪಿ ಅಧಿಕಾರದಲ್ಲಿರುವ  ಉತ್ತರ ಪ್ರದೇಶ ಮತ್ತು ಬಿಹಾರ ಎರಡು ರಾಜ್ಯಗಳಲ್ಲಿ ಮಾಫಿಯಾ-ರಾಜ್ ಅಸ್ತಿತ್ವದಲ್ಲಿದೆ ಎಂದು ಒಪ್ಪಿಕೊಳ್ಳುವುದು ಒಳ್ಳೆಯ ಬೆಳವಣಿಗೆ ಎಂದು ವ್ಯಂಗ್ಯವಾಡಿತ್ತು.

ಇದನ್ನೂ ಓದಿ: ’ಯುಪಿ, ಬಿಹಾರದಂತೆ ಪ.ಬಂಗಾಳವೂ ಮಾಫಿಯಾ ರಾಜ್ಯವಾಗುತ್ತಿದೆ’- ಬಿಜೆಪಿ ನಾಯಕ

“ಬಿಜೆಪಿ ಆಡಳಿತದ ಯುಪಿ ಮತ್ತು ಬಿಹಾರದಲ್ಲಿ ಮಾಫಿಯಾ ರಾಜ್ ಅಸ್ತಿತ್ವದಲ್ಲಿದೆ ಎಂದು ಅವರು ಒಪ್ಪಿಕೊಂಡಿರುವುದು ಒಳ್ಳೆಯದು. ಒಮ್ಮೆಯಾದರೂ ಅವರು ಸತ್ಯವನ್ನು ಮಾತನಾಡಿದ್ದಕ್ಕೆ ನಮಗೆ ಸಂತೋಷವಾಗಿದೆ ”ಎಂದು ಟಿಎಂಸಿಯ ಹಿರಿಯ ಮುಖಂಡ ಮತ್ತು ಸಚಿವ ಫಿರ್ಹಾದ್ ಹಕೀಮ್ ವ್ಯಂಗ್ಯವಾಡಿದ್ದರು.

ಟ್ವಿಟ್ಟರ್‌ನಲ್ಲಿ ಬಿಜೆಪಿ ನಾಯಕನ ಹೇಳಿಕೆಯನ್ನು ಟ್ಯಾಗ್ ಮಾಡಿ ಹಲವು ಮಂದಿ ’ಯುಪಿ ಮತ್ತು ಬಿಹಾರದಲ್ಲಿ ಮಾಫಿಯಾ ರಾಜ್ ಆಡಳಿತವಿದೆ ಎಂದು ಸತ್ಯ ನುಡಿದಿದ್ದಕ್ಕೆ ಥ್ಯಾಂಕ್ಯೂ ದಿಲೀಪ್ ಘೋಷ್’‌ ಎಂದಿದ್ದಾರೆ.

 

ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಟ್ವಿಟ್ ಮಾಡಿ ’ದಿಲೀಪ್ ಘೋಷ್‌ ನಿಮಗೆ ತುಂಬಾ ತುಂಬಾ ಧನ್ಯವಾದಗಳು. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಮತ್ತು ಬಿಹಾರದ ನಿತೀಶ್ ಕುಮಾರ್ ಸರ್ಕಾರದಲ್ಲಿ ಮಾಫಿಯಾ ರಾಜ್ ನಡೆಯುತ್ತಿದೆ ಎಂದು ಒಪ್ಪಿಕೊಂಡಿರುವುದಕ್ಕೆ ಧನ್ಯವಾದ’ ಎಂದಿದ್ದಾರೆ.

ಕೆಲ ಮೂಲಗಳ ಪ್ರಕಾರ ಮುಕುಲ್ ರಾಯ್ ಅವರಿಗೆ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನ ನೀಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಲು ದಿಲೀಪ್ ಘೋಷ್ ಹೀಗೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: ಬಾಬ್ರಿ ಮಸೀದಿ ಕೆಡವುದರ ಹಿಂದೆ ಯಾರ ಸಂಚು ಇಲ್ಲ ಎಂಬ ತೀರ್ಮಾನಕ್ಕೆ ನ್ಯಾಯಾಧೀಶರು ಕೊಟ್ಟ10 ಕಾರಣಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...