Homeಮುಖಪುಟರಿಯಾ ಜೊತೆ ಮಾಧ್ಯಮಗಳ ದುರ್ವತನೆ: ಕೊನೆಗೂ ಎಚ್ಚೆತ್ತ ಮುಂಬೈ ಪೊಲೀಸರು

ರಿಯಾ ಜೊತೆ ಮಾಧ್ಯಮಗಳ ದುರ್ವತನೆ: ಕೊನೆಗೂ ಎಚ್ಚೆತ್ತ ಮುಂಬೈ ಪೊಲೀಸರು

ಪೊಲೀಸರು ಯಾವುದೇ ಸೆಲೆಬ್ರಿಟಿ, ವಕೀಲ ಅಥವಾ ಸಂದರ್ಶನ ಮಾಡಲು ಬಯಸುವ ಯಾವುದೇ ವ್ಯಕ್ತಿಯ ವಾಹನವನ್ನು ಬೆನ್ನಟ್ಟಿದರೆ ಮಾಧ್ಯಮಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದರು.

- Advertisement -
- Advertisement -

ಅಂದು ಸೆಪ್ಟೆಂಬರ್ 6, ರಿಯಾ ಚಕ್ರವರ್ತಿ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವಿನ ಪ್ರಕರಣದಲ್ಲಿ ಆರೋಪಿಯಾಗಿ, ಡ್ರಗ್ ಕೇಸ್‌ನಲ್ಲಿ ವಿಚಾರಣೆಗಾಗಿ ನಟಿ ರಿಯಾ ಚಕ್ರವರ್ತಿ ಎನ್‌ಸಿಬಿ ಕಚೇರಿಗೆ ಆಗಮಿಸಿದ್ದರು. ಆಕೆ ಬರುತ್ತಿದ್ದಂತೆ ಮಾಧ್ಯಮಗಳ ವರ್ತನೆ ನಿಜಕ್ಕೂ ವಾಕರಿಕೆ ಬರುವಂತಿತ್ತು.

ಸುದ್ದಿ ಸಂಸ್ಥೆಗಳ ನೂರಾರು ಜನ ಗಂಡಸರು ಒಮ್ಮೆಲೇ ಆಕೆಯ ಮೇಲೆ ಮುಗಿಬಿದ್ದಿದ್ದರು. ಆಕೆಯನ್ನು ಕಚೇರಿಯ ಒಳಗೆ ಹೋಗಲು ಸಹ ಅವಕಾಶ ನೀಡದೇ ಸುತ್ತುವರೆದಿದ್ದವು. ಯಾವುದೇ ವ್ಯಕ್ತಿಗೂ ತನ್ನದೇ ಆದ ವೈಯಕ್ತಿಕ ಗೌರವಗಳಿರುತ್ತವೆ. ಆದರೆ ರಿಯಾ ವಿಚಾರಣೆಗೆ ಆಗಮಿಸಿದಾಗ ಮಾಧ್ಯಮಗಳು ತಮ್ಮ ಎಲ್ಲಾ ಮಿತಿಗಳನ್ನು ಉಲ್ಲಂಘಿಸಿದ್ದವು.

ಅಂದು ನಟಿ ರಿಯಾಳ ಖಾಸಗಿ ಸಮಯ, ತನ್ನದೇ ದೇಹದ ಮೇಲಿನ ಹಕ್ಕುಗಳು ಕೂಡ ಆಕೆಯಿಂದ ಕಿತ್ತುಕೊಳ್ಳಲಾಯಿತು. ಕ್ಯಾಮೆರಾ, ಚಾನೆಲ್ ಲೋಗೋ ಅಷ್ಟೇ ಏಕೆ ವರದಿಗಾರರ ಕೈಗಳು ಆಕೆಯ ದೇಹವನ್ನು ಚುಚ್ಚುತ್ತಿದ್ದವು. ಇದ್ಯಾವುದು ಕೂಡಾ ದೌರ್ಜನ್ಯ ಎಂದು ಅಲ್ಲಿದ್ದವರಿಗೆ ಅನ್ನಿಸಲೇ ಇಲ್ಲ. ಅವರಿಗೆ ಬೇಕಾಗಿದ್ದು ಆಕೆ ಛಾಯಾಚಿತ್ರಗಳು, ದೃಶ್ಯಾವಳಿಗಳು ಮಾತ್ರ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕಾದ ಮಾಧ್ಯಮಗಳು ಹದ್ದುಗಳಂತೆ ಆಕೆಯ ಮೇಲೆ ದಾಳಿ ನಡೆಸಿದ್ದು, ತಾವು ಆಕೆಯ ಮೇಲೆ ದೌರ್ಜನ್ಯ ಮಾಡುತ್ತಿದ್ದೇವೆ ಅನ್ನಿಸಿರಲಿಲ್ಲ.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ಆದರೆ ಮರುದಿನ ಇದು ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಸುದ್ದಿಯಾಯಿತು. ಹಲವು ಮಂದಿ ಮಾಧ್ಯಮಗಳ ನಡೆಯನ್ನು ಖಂಡಿಸಿದರು. ಆಕೆಯ ಮೇಲಾದ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿದ್ದರು.

ರಾಷ್ಟ್ರೀಯ ಮಹಿಳಾ ಆಯೋಗದ ಮುಖ್ಯಸ್ಥೆ ರೇಖಾ ಶರ್ಮಾ, ನಟಿ ಸ್ವರಾ ಭಾಸ್ಕರ್, ತಾಪ್ಸಿ ಪನ್ನು ಸೇರಿದಂತೆ ಅನೇಕ ಮಂದಿ ಟ್ವೀಟ್ ಮಾಡಿ ಸರ್ಕಾರವನ್ನು ಟೀಕಿಸಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿ ಆಕೆಯ ಪರಿಸ್ಥಿತಿಯನ್ನು ವ್ಯಂಗ್ಯಚಿತ್ರಗಳ ಮೂಲಕ ತೋರಿಸಲಾಗಿತ್ತು.

Vultures': Mir Suhail's Scathing Cartoon on Rhea Media Trial Storms Internet | Clarion India

ಅಂದು ಮುಂಬೈ ಪೊಲೀಸರು ಆಕೆಯ ಸಹಾಯಕ್ಕೆ ಬಂದಿರಲಿಲ್ಲ. ಮಾಧ್ಯಮಗಳಿಗೆ ಎಚ್ಚರಿಕೆ ನೀಡುವ ಕೆಲಸ ಮಾಡಿದ್ದರೆ ಆಕೆಯ ಮೇಲೆ ಮಾಧ್ಯಮಗಳು ದೌರ್ಜನ್ಯ ನಡೆಸುತ್ತಿರಲಿಲ್ಲ.

ಇಂದು ರಿಯಾ ಕಳೆದ 28 ದಿನಗಳ ನಂತರ ಜಾಮೀನು ಪಡೆದು ಬೈಕುಲಾ ಜೈಲಿನಿಂದ ಹೊರಬಂದಿದ್ದಾರೆ. ಕಳೆದ ತಿಂಗಳು ತಾವು ನಿರ್ಲಕ್ಷ್ಯ ವಹಿಸಿದಕ್ಕೆ ನಡೆದ ಘಟನೆ ಕುರಿತು ಎಚ್ಚರ ವಹಿಸಿರುವ ಮುಂಬೈ ಪೊಲೀಸರು ಇಂದು ಮಾಧ್ಯಮಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ‘ಕೊಲೆ ಸಿದ್ದಾಂತ’ ಸಂಪೂರ್ಣ ಸುಳ್ಳು: ಏಮ್ಸ್ ಮೂಲಗಳು

ನಟ ರಿಯಾ ಚಕ್ರವರ್ತಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದ ಕೂಡಲೇ, ಎಚ್ಚೆತ್ತ ಮುಂಬೈ ಪೊಲೀಸರು ಪತ್ರಕರ್ತರಿಗೆ ಎಚ್ಚರಿಕೆ ನೀಡಿದ್ದು, ಯಾವುದೇ ಸೆಲೆಬ್ರಿಟಿ, ವಕೀಲರನ್ನು ಅಥವಾ ಸಂದರ್ಶನ ಮಾಡಲು ಬಯಸುವ ಯಾವುದೇ ವ್ಯಕ್ತಿಯ ವಾಹನವನ್ನು ಬೆನ್ನಟ್ಟಿದರೆ ಮಾಧ್ಯಮಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

“ನೀವು ಯಾವುದೇ ಸೆಲೆಬ್ರಿಟಿ, ವಕೀಲ ಅಥವಾ ನೀವು ಸಂದರ್ಶನ ಮಾಡಲು ಬಯಸುವ ಯಾವುದೇ ವ್ಯಕ್ತಿಯ ವಾಹನವನ್ನು ಬೆನ್ನಟ್ಟಬಾರದು. ನಿಮ್ಮ ಜೀವ, ಆ ವ್ಯಕ್ತಿಯ ಜೀವ ಅಥವಾ ಪಾದಚಾರಿಗಳ ಜೀವವನ್ನು ಅಪಾಯಕ್ಕೆ ತಳ್ಳಬಾರದು. ಇದು ಅಪರಾಧವಾಗಿದ್ದು, ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಇಷ್ಟೇ ಅಲ್ಲದೆ ಚಾಲಕನ ವಿರುದ್ಧ ಮಾತ್ರವಲ್ಲ ಆತನನ್ನು ಬೆನ್ನಟ್ಟಲು ಪ್ರಚೋದಿಸುವ ವ್ಯಕ್ತಿಯ ವಿರುದ್ಧ ಕೂಡ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಮುಂಬೈ ಪೊಲೀಸ್ ಉಪ ಆಯುಕ್ತ ಸಂಗ್ರಾಮ್ ಸಿಂಗ್ ನಿಶಂದರ್ ತಿಳಿದ್ದಾರೆ.

ಮಾದಕವಸ್ತು ನಿಯಂತ್ರಣ ಬ್ಯೂರೋ (ಎನ್‌ಸಿಬಿ) ತನ್ನ ಡ್ರಗ್ಸ್ ತನಿಖೆಯನ್ನು ವಿಸ್ತರಿಸಿ ವಿಚಾರಣೆಗೆ ಕರೆದಿದ್ದರಿಂದ ನಟರಾದ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್ ಮತ್ತು ಸಾರಾ ಅಲಿ ಖಾನ್ ಅವರನ್ನು ಕೂಡ ಮಾಧ್ಯಮಗಳು ಬೆನ್ನಟ್ಟಿದ್ದ ಫೋಟೋಗಳು ಮತ್ತು ವೀಡಿಯೊಗಳು ವೈರಲ್ ಆಗಿದ್ದವು.

ಇಂತಹ ಘಟನೆಗಳ ನಂತರವಾದರೂ ಮಾಧ್ಯಮಗಳು ತಮ್ಮ ಮಿತಿಯನ್ನು ಅರಿತುಕೊಳ್ಳುತ್ತವೆಯೋ ಇಲ್ಲವೋ, ಆದರೆ ಸರ್ಕಾರ, ಪೊಲೀಸ್ ಇಲಾಖೆ ಇಂತಹ ಘಟನೆಗಳು ಜರುಗದಂತೆ ನಿಗಾ ವಹಿಸಬೇಕು ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದ್ದು ಮುಂಬೈ ಪೊಲೀಸರ ನಡೆಯನ್ನು ಶ್ಲಾಘಿಸಿದ್ದಾರೆ.


ಇದನ್ನೂ ಓದಿ: ಸುಶಾಂತ್ ಪ್ರಕರಣದಲ್ಲಿ ಮುಂಬೈ ಪೊಲೀಸರನ್ನು ಹಣಿಯಲು 80 ಸಾವಿರ ಫೇಕ್ ಅಕೌಂಟ್‌ಗಳ ಸೃಷ್ಠಿ : BJP ಕೈವಾಡದ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...