Homeಮುಖಪುಟರಿಯಾ ಜೊತೆ ಮಾಧ್ಯಮಗಳ ದುರ್ವತನೆ: ಕೊನೆಗೂ ಎಚ್ಚೆತ್ತ ಮುಂಬೈ ಪೊಲೀಸರು

ರಿಯಾ ಜೊತೆ ಮಾಧ್ಯಮಗಳ ದುರ್ವತನೆ: ಕೊನೆಗೂ ಎಚ್ಚೆತ್ತ ಮುಂಬೈ ಪೊಲೀಸರು

ಪೊಲೀಸರು ಯಾವುದೇ ಸೆಲೆಬ್ರಿಟಿ, ವಕೀಲ ಅಥವಾ ಸಂದರ್ಶನ ಮಾಡಲು ಬಯಸುವ ಯಾವುದೇ ವ್ಯಕ್ತಿಯ ವಾಹನವನ್ನು ಬೆನ್ನಟ್ಟಿದರೆ ಮಾಧ್ಯಮಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದರು.

- Advertisement -
- Advertisement -

ಅಂದು ಸೆಪ್ಟೆಂಬರ್ 6, ರಿಯಾ ಚಕ್ರವರ್ತಿ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವಿನ ಪ್ರಕರಣದಲ್ಲಿ ಆರೋಪಿಯಾಗಿ, ಡ್ರಗ್ ಕೇಸ್‌ನಲ್ಲಿ ವಿಚಾರಣೆಗಾಗಿ ನಟಿ ರಿಯಾ ಚಕ್ರವರ್ತಿ ಎನ್‌ಸಿಬಿ ಕಚೇರಿಗೆ ಆಗಮಿಸಿದ್ದರು. ಆಕೆ ಬರುತ್ತಿದ್ದಂತೆ ಮಾಧ್ಯಮಗಳ ವರ್ತನೆ ನಿಜಕ್ಕೂ ವಾಕರಿಕೆ ಬರುವಂತಿತ್ತು.

ಸುದ್ದಿ ಸಂಸ್ಥೆಗಳ ನೂರಾರು ಜನ ಗಂಡಸರು ಒಮ್ಮೆಲೇ ಆಕೆಯ ಮೇಲೆ ಮುಗಿಬಿದ್ದಿದ್ದರು. ಆಕೆಯನ್ನು ಕಚೇರಿಯ ಒಳಗೆ ಹೋಗಲು ಸಹ ಅವಕಾಶ ನೀಡದೇ ಸುತ್ತುವರೆದಿದ್ದವು. ಯಾವುದೇ ವ್ಯಕ್ತಿಗೂ ತನ್ನದೇ ಆದ ವೈಯಕ್ತಿಕ ಗೌರವಗಳಿರುತ್ತವೆ. ಆದರೆ ರಿಯಾ ವಿಚಾರಣೆಗೆ ಆಗಮಿಸಿದಾಗ ಮಾಧ್ಯಮಗಳು ತಮ್ಮ ಎಲ್ಲಾ ಮಿತಿಗಳನ್ನು ಉಲ್ಲಂಘಿಸಿದ್ದವು.

ಅಂದು ನಟಿ ರಿಯಾಳ ಖಾಸಗಿ ಸಮಯ, ತನ್ನದೇ ದೇಹದ ಮೇಲಿನ ಹಕ್ಕುಗಳು ಕೂಡ ಆಕೆಯಿಂದ ಕಿತ್ತುಕೊಳ್ಳಲಾಯಿತು. ಕ್ಯಾಮೆರಾ, ಚಾನೆಲ್ ಲೋಗೋ ಅಷ್ಟೇ ಏಕೆ ವರದಿಗಾರರ ಕೈಗಳು ಆಕೆಯ ದೇಹವನ್ನು ಚುಚ್ಚುತ್ತಿದ್ದವು. ಇದ್ಯಾವುದು ಕೂಡಾ ದೌರ್ಜನ್ಯ ಎಂದು ಅಲ್ಲಿದ್ದವರಿಗೆ ಅನ್ನಿಸಲೇ ಇಲ್ಲ. ಅವರಿಗೆ ಬೇಕಾಗಿದ್ದು ಆಕೆ ಛಾಯಾಚಿತ್ರಗಳು, ದೃಶ್ಯಾವಳಿಗಳು ಮಾತ್ರ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕಾದ ಮಾಧ್ಯಮಗಳು ಹದ್ದುಗಳಂತೆ ಆಕೆಯ ಮೇಲೆ ದಾಳಿ ನಡೆಸಿದ್ದು, ತಾವು ಆಕೆಯ ಮೇಲೆ ದೌರ್ಜನ್ಯ ಮಾಡುತ್ತಿದ್ದೇವೆ ಅನ್ನಿಸಿರಲಿಲ್ಲ.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ಆದರೆ ಮರುದಿನ ಇದು ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಸುದ್ದಿಯಾಯಿತು. ಹಲವು ಮಂದಿ ಮಾಧ್ಯಮಗಳ ನಡೆಯನ್ನು ಖಂಡಿಸಿದರು. ಆಕೆಯ ಮೇಲಾದ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿದ್ದರು.

ರಾಷ್ಟ್ರೀಯ ಮಹಿಳಾ ಆಯೋಗದ ಮುಖ್ಯಸ್ಥೆ ರೇಖಾ ಶರ್ಮಾ, ನಟಿ ಸ್ವರಾ ಭಾಸ್ಕರ್, ತಾಪ್ಸಿ ಪನ್ನು ಸೇರಿದಂತೆ ಅನೇಕ ಮಂದಿ ಟ್ವೀಟ್ ಮಾಡಿ ಸರ್ಕಾರವನ್ನು ಟೀಕಿಸಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿ ಆಕೆಯ ಪರಿಸ್ಥಿತಿಯನ್ನು ವ್ಯಂಗ್ಯಚಿತ್ರಗಳ ಮೂಲಕ ತೋರಿಸಲಾಗಿತ್ತು.

Vultures': Mir Suhail's Scathing Cartoon on Rhea Media Trial Storms Internet | Clarion India

ಅಂದು ಮುಂಬೈ ಪೊಲೀಸರು ಆಕೆಯ ಸಹಾಯಕ್ಕೆ ಬಂದಿರಲಿಲ್ಲ. ಮಾಧ್ಯಮಗಳಿಗೆ ಎಚ್ಚರಿಕೆ ನೀಡುವ ಕೆಲಸ ಮಾಡಿದ್ದರೆ ಆಕೆಯ ಮೇಲೆ ಮಾಧ್ಯಮಗಳು ದೌರ್ಜನ್ಯ ನಡೆಸುತ್ತಿರಲಿಲ್ಲ.

ಇಂದು ರಿಯಾ ಕಳೆದ 28 ದಿನಗಳ ನಂತರ ಜಾಮೀನು ಪಡೆದು ಬೈಕುಲಾ ಜೈಲಿನಿಂದ ಹೊರಬಂದಿದ್ದಾರೆ. ಕಳೆದ ತಿಂಗಳು ತಾವು ನಿರ್ಲಕ್ಷ್ಯ ವಹಿಸಿದಕ್ಕೆ ನಡೆದ ಘಟನೆ ಕುರಿತು ಎಚ್ಚರ ವಹಿಸಿರುವ ಮುಂಬೈ ಪೊಲೀಸರು ಇಂದು ಮಾಧ್ಯಮಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ‘ಕೊಲೆ ಸಿದ್ದಾಂತ’ ಸಂಪೂರ್ಣ ಸುಳ್ಳು: ಏಮ್ಸ್ ಮೂಲಗಳು

ನಟ ರಿಯಾ ಚಕ್ರವರ್ತಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದ ಕೂಡಲೇ, ಎಚ್ಚೆತ್ತ ಮುಂಬೈ ಪೊಲೀಸರು ಪತ್ರಕರ್ತರಿಗೆ ಎಚ್ಚರಿಕೆ ನೀಡಿದ್ದು, ಯಾವುದೇ ಸೆಲೆಬ್ರಿಟಿ, ವಕೀಲರನ್ನು ಅಥವಾ ಸಂದರ್ಶನ ಮಾಡಲು ಬಯಸುವ ಯಾವುದೇ ವ್ಯಕ್ತಿಯ ವಾಹನವನ್ನು ಬೆನ್ನಟ್ಟಿದರೆ ಮಾಧ್ಯಮಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

“ನೀವು ಯಾವುದೇ ಸೆಲೆಬ್ರಿಟಿ, ವಕೀಲ ಅಥವಾ ನೀವು ಸಂದರ್ಶನ ಮಾಡಲು ಬಯಸುವ ಯಾವುದೇ ವ್ಯಕ್ತಿಯ ವಾಹನವನ್ನು ಬೆನ್ನಟ್ಟಬಾರದು. ನಿಮ್ಮ ಜೀವ, ಆ ವ್ಯಕ್ತಿಯ ಜೀವ ಅಥವಾ ಪಾದಚಾರಿಗಳ ಜೀವವನ್ನು ಅಪಾಯಕ್ಕೆ ತಳ್ಳಬಾರದು. ಇದು ಅಪರಾಧವಾಗಿದ್ದು, ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಇಷ್ಟೇ ಅಲ್ಲದೆ ಚಾಲಕನ ವಿರುದ್ಧ ಮಾತ್ರವಲ್ಲ ಆತನನ್ನು ಬೆನ್ನಟ್ಟಲು ಪ್ರಚೋದಿಸುವ ವ್ಯಕ್ತಿಯ ವಿರುದ್ಧ ಕೂಡ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಮುಂಬೈ ಪೊಲೀಸ್ ಉಪ ಆಯುಕ್ತ ಸಂಗ್ರಾಮ್ ಸಿಂಗ್ ನಿಶಂದರ್ ತಿಳಿದ್ದಾರೆ.

ಮಾದಕವಸ್ತು ನಿಯಂತ್ರಣ ಬ್ಯೂರೋ (ಎನ್‌ಸಿಬಿ) ತನ್ನ ಡ್ರಗ್ಸ್ ತನಿಖೆಯನ್ನು ವಿಸ್ತರಿಸಿ ವಿಚಾರಣೆಗೆ ಕರೆದಿದ್ದರಿಂದ ನಟರಾದ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್ ಮತ್ತು ಸಾರಾ ಅಲಿ ಖಾನ್ ಅವರನ್ನು ಕೂಡ ಮಾಧ್ಯಮಗಳು ಬೆನ್ನಟ್ಟಿದ್ದ ಫೋಟೋಗಳು ಮತ್ತು ವೀಡಿಯೊಗಳು ವೈರಲ್ ಆಗಿದ್ದವು.

ಇಂತಹ ಘಟನೆಗಳ ನಂತರವಾದರೂ ಮಾಧ್ಯಮಗಳು ತಮ್ಮ ಮಿತಿಯನ್ನು ಅರಿತುಕೊಳ್ಳುತ್ತವೆಯೋ ಇಲ್ಲವೋ, ಆದರೆ ಸರ್ಕಾರ, ಪೊಲೀಸ್ ಇಲಾಖೆ ಇಂತಹ ಘಟನೆಗಳು ಜರುಗದಂತೆ ನಿಗಾ ವಹಿಸಬೇಕು ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದ್ದು ಮುಂಬೈ ಪೊಲೀಸರ ನಡೆಯನ್ನು ಶ್ಲಾಘಿಸಿದ್ದಾರೆ.


ಇದನ್ನೂ ಓದಿ: ಸುಶಾಂತ್ ಪ್ರಕರಣದಲ್ಲಿ ಮುಂಬೈ ಪೊಲೀಸರನ್ನು ಹಣಿಯಲು 80 ಸಾವಿರ ಫೇಕ್ ಅಕೌಂಟ್‌ಗಳ ಸೃಷ್ಠಿ : BJP ಕೈವಾಡದ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...