Homeಕರ್ನಾಟಕಸಂಕಷ್ಟದಲ್ಲೂ ಪರರ ಹಣ ಮುಟ್ಟದ ಪ್ರಾಮಾಣಿಕ ಆಟೋ ಚಾಲಕ ಹರೀಶ್!

ಸಂಕಷ್ಟದಲ್ಲೂ ಪರರ ಹಣ ಮುಟ್ಟದ ಪ್ರಾಮಾಣಿಕ ಆಟೋ ಚಾಲಕ ಹರೀಶ್!

ಕಣ್ತಪ್ಪಿನಿಂದ ಅಕೌಂಟಿಗೆ ಬಂದ 35,000 ಸಾವಿರ ರೂಪಾಯಿ ವಾಪಸ್ ತಲುಪಿಸಿದ ಆಟೋ ಚಾಲಕ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಉದ್ಯೋಗ ಕಳೆದುಕೊಂಡವರು ಅದೆಷ್ಟೋ ಮಂದಿ. ದುಡಿಯುವ ಮಾರ್ಗ ಗೊತ್ತಿದ್ದು ಏನೂ ಮಾಡಲಾಗದೆ ತಲೆ ಮೇಲೆ ಕೈಹೊತ್ತಿ ಕುಳಿತವರಿಗೇನು ಕಡಿಮೆಯಿಲ್ಲ. ಆಟೋ, ಟ್ಯಾಕ್ಸಿ ಚಾಲಕರು ಕೆಲಸವಿದ್ದರೂ ಮಾಡಲಾಗದ ಸ್ಥಿತಿಯಲ್ಲಿದ್ದರು. ಲಾಕ್‌ಡೌನ್ ಬಹುಸಂಖ್ಯಾತರ ಬದುಕನ್ನೆ ಬುಡಮೇಲು ಮಾಡಿತ್ತು.

ಇಂತಹ ಸಮಯದಲ್ಲಿ ಸಾವಿರಾರು ರೂಪಾಯಿ ಕೈ ಸೇರಿದರೇ ಸದ್ಯ ಎಂದು ತೆಗೆದುಕೊಂಡು ಮನೆಗೆ ಹೋಗುವ ಜನರೇ ಹೆಚ್ಚು. ಇಂತಹವರ ಮಧ್ಯೆ ಇಲ್ಲೊಬ್ಬ ಆಟೋ ಚಾಲಕ ತಾವು ಕಷ್ಟದಲ್ಲಿದ್ದರೂ ಇನ್ನೊಬ್ಬರ ಹಣವನ್ನು ಮುಟ್ಟದೇ ವಾಪಾಸ್ ನೀಡಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಹೌದು, ಕೆ.ಆರ್. ಪುರಂ, ಹೂಡಿ ಆಸುಪಾಸಿನಲ್ಲಿ ಸುಮಾರು 20 ವರ್ಷದಿಂದ ಆಟೋ ಓಡಿಸಿ ಜೀವನದ ಬಂಡಿ ದೂಡುತ್ತಿರುವ ಇವರ ಹೆಸರು ಹರೀಶ್. ಮೂಲತಃ ಕೊಲಾರ ಜಿಲ್ಲೆಯ ಮುಳಬಾಗಿಲಿನವರಾದ ಹರೀಶ್ ಸಧ್ಯಕ್ಕೆ ಬೆಂಗಳೂರಿನ ಐಯ್ಯಪ್ಪ ನಗರದಲ್ಲಿ ತಾಯಿ ಮತ್ತು ತಮ್ಮನೊಂದಿಗೆ ವಾಸವಾಗಿದ್ದಾರೆ.

ಮಂಗಳೂರು ಮೂಲದ ಅಬ್ದುಲ್ ಸತ್ತಾರ್‌ ಪರಪ್ಪು ಎಂಬ ಯುವಕ ಯಾರಿಗೋ ಕಳುಹಿಸಬೇಕೆಂದಿದ್ದ 35,000 ಸಾವಿರ ರೂಪಾಯಿಗಳಷ್ಟು ದುಡ್ಡನ್ನು ಕಣ್ತಪ್ಪಿನಿಂದ ಹರೀಶ್ ಅಕೌಂಟ್‌ಗೆ ಕಳುಹಿಸಿಬಿಟ್ಟಿದ್ದಾರೆ. ನಂತರ ಗೂಗಲ್ ಪೇ ಮೂಲಕ ಅವರ ನಂಬರ್ ಪಡೆದು ಕರೆ ಮಾಡಿ ಆದ ಘಟನೆಯನ್ನು ವಿವರಿಸಿದ್ದಾರೆ.

ಇದನ್ನೂ ಓದಿ: ರಿಯಾ ಜೊತೆ ಮಾಧ್ಯಮಗಳ ದುರ್ವತನೆ: ಕೊನೆಗೂ ಎಚ್ಚೆತ್ತ ಮುಂಬೈ ಪೊಲೀಸರು

ತೀರಾ ಆತಂಕದಲ್ಲಿದ್ದ ಸತ್ತಾರ್‌ ಪರಪ್ಪುಗೆ ಧೈರ್ಯ ನೀಡಿದ ಆಟೋ ಚಾಲಕ ಹರೀಶ್ ಹಣ ವಾಪಾಸ್ ಕಳುಹಿಸುವ ಭರವಸೆ ನೀಡಿ, ಕೆಲವೆ ಹೊತ್ತಿನಲ್ಲಿ ಹಣವನ್ನು ವಾಪಾಸು ನೀಡಿ ತಮ್ಮ ಪ್ರಾಮಾಣಿಕತೆಯನ್ನು ಮೆರೆದಿದ್ದಾರೆ.

ಈ ಬಗ್ಗೆ ನಾನುಗೌರಿ ಜೊತೆ ಮಾತನಾಡಿದ ರಿಕ್ಷಾ ಚಾಲಕ ಹರೀಶ್, ’ಕೊರೊನಾ ಸಮಯದಲ್ಲಿನ ಕಷ್ಟ ನಮಗೂ ಗೊತ್ತು. ನಮ್ಮ ದುಡ್ಡೇ ನಮ್ಮೊಂದಿಗೆ ಇರುವುದಿಲ್ಲ, ಒಂದು ರುಪಾಯಿ ದುಡಿಯಲು ಕಷ್ಟ ಇರುವ ಈ ಕಾಲದಲ್ಲಿ ಅಷ್ಟು ದುಡ್ಡಿನ ಹಿಂದಿರುವ ಶ್ರಮದ ಬಗ್ಗೆ ನನಗೆ ಗೊತ್ತಿದೆ’ ಎಂದು ಹೇಳಿದರು.

ಘಟನೆ ಬಗ್ಗೆ ನಾನುಗೌರಿ ಜೊತೆ ಮಾತನಾಡಿದ ಸತ್ತಾರ್‌ ವಿವರಿಸಿದ್ದು ಹೀಗೆ, ’ಮೂವತ್ತೈದು ರುಪಾಯಿ ಕೂಡ ಮುಖ್ಯವಾಗುವ ಈ ಸಮಯದಲ್ಲಿ,ಕಣ್ತಪ್ಪಿನಿಂದ ಕ್ಷಣ ಮಾತ್ರದಲ್ಲಿ ಮೂವತ್ತೈದು ಸಾವಿರ ರುಪಾಯಿ ಹರೀಶ್ ಅಕೌಂಟಿಗೆ ಹೋಗಿಯಾಗಿತ್ತು. ಒಂದು ಕ್ಷಣ ಆಕಾಶ ತಲೆ ಮೇಲೆ ಬಿದ್ದಂತೆ ಭಾಸವಾಗಿತ್ತು. ಆದರೆ ಕರೆ ಮಾಡಿದಾಗ ಹರೀಶ್ ಆಡಿದ ಮಾತುಗಳು ಮತ್ತೆ ಹಣ ಸಿಗುವ ಭರವಸೆ ಮೂಡಿಸಿದ್ದವು. ಒಮ್ಮೆಮ್ಮೆ ನಗರದಲ್ಲಿ ಗುರುತು ಪರಿಚಯ ಇಲ್ಲದ ವ್ಯಕ್ತಿಯ ಕೈಯಲ್ಲಿ ಹಣವಿದೆ ಅನ್ನುವಾಗ ಗೊಂದಲಗಳು ಮೂಡಿದ್ದರೂ ಸಹ ಅವೆಲ್ಲವನ್ನೂ ಸುಳ್ಳಾಗಿಸಿ ಹರೀಶ್‌ ಹಣವನ್ನು ಹಿಂತಿರುಗಿಸಿದ್ದಾರೆ’ ಎಂದು ಹರೀಶ್‌ಗೆ ಧನ್ಯವಾದ ತಿಳಿಸಿದ್ದಾರೆ.


ಇದನ್ನೂ ಓದಿ: ಮೋದಿಯ ₹8000 ಕೋಟಿ ವಿಮಾನದ ಬಗ್ಗೆ ಪ್ರಶ್ನೆ ಯಾಕಿಲ್ಲ?- ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...