Homeಕರ್ನಾಟಕಸಂಕಷ್ಟದಲ್ಲೂ ಪರರ ಹಣ ಮುಟ್ಟದ ಪ್ರಾಮಾಣಿಕ ಆಟೋ ಚಾಲಕ ಹರೀಶ್!

ಸಂಕಷ್ಟದಲ್ಲೂ ಪರರ ಹಣ ಮುಟ್ಟದ ಪ್ರಾಮಾಣಿಕ ಆಟೋ ಚಾಲಕ ಹರೀಶ್!

ಕಣ್ತಪ್ಪಿನಿಂದ ಅಕೌಂಟಿಗೆ ಬಂದ 35,000 ಸಾವಿರ ರೂಪಾಯಿ ವಾಪಸ್ ತಲುಪಿಸಿದ ಆಟೋ ಚಾಲಕ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಉದ್ಯೋಗ ಕಳೆದುಕೊಂಡವರು ಅದೆಷ್ಟೋ ಮಂದಿ. ದುಡಿಯುವ ಮಾರ್ಗ ಗೊತ್ತಿದ್ದು ಏನೂ ಮಾಡಲಾಗದೆ ತಲೆ ಮೇಲೆ ಕೈಹೊತ್ತಿ ಕುಳಿತವರಿಗೇನು ಕಡಿಮೆಯಿಲ್ಲ. ಆಟೋ, ಟ್ಯಾಕ್ಸಿ ಚಾಲಕರು ಕೆಲಸವಿದ್ದರೂ ಮಾಡಲಾಗದ ಸ್ಥಿತಿಯಲ್ಲಿದ್ದರು. ಲಾಕ್‌ಡೌನ್ ಬಹುಸಂಖ್ಯಾತರ ಬದುಕನ್ನೆ ಬುಡಮೇಲು ಮಾಡಿತ್ತು.

ಇಂತಹ ಸಮಯದಲ್ಲಿ ಸಾವಿರಾರು ರೂಪಾಯಿ ಕೈ ಸೇರಿದರೇ ಸದ್ಯ ಎಂದು ತೆಗೆದುಕೊಂಡು ಮನೆಗೆ ಹೋಗುವ ಜನರೇ ಹೆಚ್ಚು. ಇಂತಹವರ ಮಧ್ಯೆ ಇಲ್ಲೊಬ್ಬ ಆಟೋ ಚಾಲಕ ತಾವು ಕಷ್ಟದಲ್ಲಿದ್ದರೂ ಇನ್ನೊಬ್ಬರ ಹಣವನ್ನು ಮುಟ್ಟದೇ ವಾಪಾಸ್ ನೀಡಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಹೌದು, ಕೆ.ಆರ್. ಪುರಂ, ಹೂಡಿ ಆಸುಪಾಸಿನಲ್ಲಿ ಸುಮಾರು 20 ವರ್ಷದಿಂದ ಆಟೋ ಓಡಿಸಿ ಜೀವನದ ಬಂಡಿ ದೂಡುತ್ತಿರುವ ಇವರ ಹೆಸರು ಹರೀಶ್. ಮೂಲತಃ ಕೊಲಾರ ಜಿಲ್ಲೆಯ ಮುಳಬಾಗಿಲಿನವರಾದ ಹರೀಶ್ ಸಧ್ಯಕ್ಕೆ ಬೆಂಗಳೂರಿನ ಐಯ್ಯಪ್ಪ ನಗರದಲ್ಲಿ ತಾಯಿ ಮತ್ತು ತಮ್ಮನೊಂದಿಗೆ ವಾಸವಾಗಿದ್ದಾರೆ.

ಮಂಗಳೂರು ಮೂಲದ ಅಬ್ದುಲ್ ಸತ್ತಾರ್‌ ಪರಪ್ಪು ಎಂಬ ಯುವಕ ಯಾರಿಗೋ ಕಳುಹಿಸಬೇಕೆಂದಿದ್ದ 35,000 ಸಾವಿರ ರೂಪಾಯಿಗಳಷ್ಟು ದುಡ್ಡನ್ನು ಕಣ್ತಪ್ಪಿನಿಂದ ಹರೀಶ್ ಅಕೌಂಟ್‌ಗೆ ಕಳುಹಿಸಿಬಿಟ್ಟಿದ್ದಾರೆ. ನಂತರ ಗೂಗಲ್ ಪೇ ಮೂಲಕ ಅವರ ನಂಬರ್ ಪಡೆದು ಕರೆ ಮಾಡಿ ಆದ ಘಟನೆಯನ್ನು ವಿವರಿಸಿದ್ದಾರೆ.

ಇದನ್ನೂ ಓದಿ: ರಿಯಾ ಜೊತೆ ಮಾಧ್ಯಮಗಳ ದುರ್ವತನೆ: ಕೊನೆಗೂ ಎಚ್ಚೆತ್ತ ಮುಂಬೈ ಪೊಲೀಸರು

ತೀರಾ ಆತಂಕದಲ್ಲಿದ್ದ ಸತ್ತಾರ್‌ ಪರಪ್ಪುಗೆ ಧೈರ್ಯ ನೀಡಿದ ಆಟೋ ಚಾಲಕ ಹರೀಶ್ ಹಣ ವಾಪಾಸ್ ಕಳುಹಿಸುವ ಭರವಸೆ ನೀಡಿ, ಕೆಲವೆ ಹೊತ್ತಿನಲ್ಲಿ ಹಣವನ್ನು ವಾಪಾಸು ನೀಡಿ ತಮ್ಮ ಪ್ರಾಮಾಣಿಕತೆಯನ್ನು ಮೆರೆದಿದ್ದಾರೆ.

ಈ ಬಗ್ಗೆ ನಾನುಗೌರಿ ಜೊತೆ ಮಾತನಾಡಿದ ರಿಕ್ಷಾ ಚಾಲಕ ಹರೀಶ್, ’ಕೊರೊನಾ ಸಮಯದಲ್ಲಿನ ಕಷ್ಟ ನಮಗೂ ಗೊತ್ತು. ನಮ್ಮ ದುಡ್ಡೇ ನಮ್ಮೊಂದಿಗೆ ಇರುವುದಿಲ್ಲ, ಒಂದು ರುಪಾಯಿ ದುಡಿಯಲು ಕಷ್ಟ ಇರುವ ಈ ಕಾಲದಲ್ಲಿ ಅಷ್ಟು ದುಡ್ಡಿನ ಹಿಂದಿರುವ ಶ್ರಮದ ಬಗ್ಗೆ ನನಗೆ ಗೊತ್ತಿದೆ’ ಎಂದು ಹೇಳಿದರು.

ಘಟನೆ ಬಗ್ಗೆ ನಾನುಗೌರಿ ಜೊತೆ ಮಾತನಾಡಿದ ಸತ್ತಾರ್‌ ವಿವರಿಸಿದ್ದು ಹೀಗೆ, ’ಮೂವತ್ತೈದು ರುಪಾಯಿ ಕೂಡ ಮುಖ್ಯವಾಗುವ ಈ ಸಮಯದಲ್ಲಿ,ಕಣ್ತಪ್ಪಿನಿಂದ ಕ್ಷಣ ಮಾತ್ರದಲ್ಲಿ ಮೂವತ್ತೈದು ಸಾವಿರ ರುಪಾಯಿ ಹರೀಶ್ ಅಕೌಂಟಿಗೆ ಹೋಗಿಯಾಗಿತ್ತು. ಒಂದು ಕ್ಷಣ ಆಕಾಶ ತಲೆ ಮೇಲೆ ಬಿದ್ದಂತೆ ಭಾಸವಾಗಿತ್ತು. ಆದರೆ ಕರೆ ಮಾಡಿದಾಗ ಹರೀಶ್ ಆಡಿದ ಮಾತುಗಳು ಮತ್ತೆ ಹಣ ಸಿಗುವ ಭರವಸೆ ಮೂಡಿಸಿದ್ದವು. ಒಮ್ಮೆಮ್ಮೆ ನಗರದಲ್ಲಿ ಗುರುತು ಪರಿಚಯ ಇಲ್ಲದ ವ್ಯಕ್ತಿಯ ಕೈಯಲ್ಲಿ ಹಣವಿದೆ ಅನ್ನುವಾಗ ಗೊಂದಲಗಳು ಮೂಡಿದ್ದರೂ ಸಹ ಅವೆಲ್ಲವನ್ನೂ ಸುಳ್ಳಾಗಿಸಿ ಹರೀಶ್‌ ಹಣವನ್ನು ಹಿಂತಿರುಗಿಸಿದ್ದಾರೆ’ ಎಂದು ಹರೀಶ್‌ಗೆ ಧನ್ಯವಾದ ತಿಳಿಸಿದ್ದಾರೆ.


ಇದನ್ನೂ ಓದಿ: ಮೋದಿಯ ₹8000 ಕೋಟಿ ವಿಮಾನದ ಬಗ್ಗೆ ಪ್ರಶ್ನೆ ಯಾಕಿಲ್ಲ?- ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...