Homeಕರ್ನಾಟಕಸಂಕಷ್ಟದಲ್ಲೂ ಪರರ ಹಣ ಮುಟ್ಟದ ಪ್ರಾಮಾಣಿಕ ಆಟೋ ಚಾಲಕ ಹರೀಶ್!

ಸಂಕಷ್ಟದಲ್ಲೂ ಪರರ ಹಣ ಮುಟ್ಟದ ಪ್ರಾಮಾಣಿಕ ಆಟೋ ಚಾಲಕ ಹರೀಶ್!

ಕಣ್ತಪ್ಪಿನಿಂದ ಅಕೌಂಟಿಗೆ ಬಂದ 35,000 ಸಾವಿರ ರೂಪಾಯಿ ವಾಪಸ್ ತಲುಪಿಸಿದ ಆಟೋ ಚಾಲಕ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಉದ್ಯೋಗ ಕಳೆದುಕೊಂಡವರು ಅದೆಷ್ಟೋ ಮಂದಿ. ದುಡಿಯುವ ಮಾರ್ಗ ಗೊತ್ತಿದ್ದು ಏನೂ ಮಾಡಲಾಗದೆ ತಲೆ ಮೇಲೆ ಕೈಹೊತ್ತಿ ಕುಳಿತವರಿಗೇನು ಕಡಿಮೆಯಿಲ್ಲ. ಆಟೋ, ಟ್ಯಾಕ್ಸಿ ಚಾಲಕರು ಕೆಲಸವಿದ್ದರೂ ಮಾಡಲಾಗದ ಸ್ಥಿತಿಯಲ್ಲಿದ್ದರು. ಲಾಕ್‌ಡೌನ್ ಬಹುಸಂಖ್ಯಾತರ ಬದುಕನ್ನೆ ಬುಡಮೇಲು ಮಾಡಿತ್ತು.

ಇಂತಹ ಸಮಯದಲ್ಲಿ ಸಾವಿರಾರು ರೂಪಾಯಿ ಕೈ ಸೇರಿದರೇ ಸದ್ಯ ಎಂದು ತೆಗೆದುಕೊಂಡು ಮನೆಗೆ ಹೋಗುವ ಜನರೇ ಹೆಚ್ಚು. ಇಂತಹವರ ಮಧ್ಯೆ ಇಲ್ಲೊಬ್ಬ ಆಟೋ ಚಾಲಕ ತಾವು ಕಷ್ಟದಲ್ಲಿದ್ದರೂ ಇನ್ನೊಬ್ಬರ ಹಣವನ್ನು ಮುಟ್ಟದೇ ವಾಪಾಸ್ ನೀಡಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಹೌದು, ಕೆ.ಆರ್. ಪುರಂ, ಹೂಡಿ ಆಸುಪಾಸಿನಲ್ಲಿ ಸುಮಾರು 20 ವರ್ಷದಿಂದ ಆಟೋ ಓಡಿಸಿ ಜೀವನದ ಬಂಡಿ ದೂಡುತ್ತಿರುವ ಇವರ ಹೆಸರು ಹರೀಶ್. ಮೂಲತಃ ಕೊಲಾರ ಜಿಲ್ಲೆಯ ಮುಳಬಾಗಿಲಿನವರಾದ ಹರೀಶ್ ಸಧ್ಯಕ್ಕೆ ಬೆಂಗಳೂರಿನ ಐಯ್ಯಪ್ಪ ನಗರದಲ್ಲಿ ತಾಯಿ ಮತ್ತು ತಮ್ಮನೊಂದಿಗೆ ವಾಸವಾಗಿದ್ದಾರೆ.

ಮಂಗಳೂರು ಮೂಲದ ಅಬ್ದುಲ್ ಸತ್ತಾರ್‌ ಪರಪ್ಪು ಎಂಬ ಯುವಕ ಯಾರಿಗೋ ಕಳುಹಿಸಬೇಕೆಂದಿದ್ದ 35,000 ಸಾವಿರ ರೂಪಾಯಿಗಳಷ್ಟು ದುಡ್ಡನ್ನು ಕಣ್ತಪ್ಪಿನಿಂದ ಹರೀಶ್ ಅಕೌಂಟ್‌ಗೆ ಕಳುಹಿಸಿಬಿಟ್ಟಿದ್ದಾರೆ. ನಂತರ ಗೂಗಲ್ ಪೇ ಮೂಲಕ ಅವರ ನಂಬರ್ ಪಡೆದು ಕರೆ ಮಾಡಿ ಆದ ಘಟನೆಯನ್ನು ವಿವರಿಸಿದ್ದಾರೆ.

ಇದನ್ನೂ ಓದಿ: ರಿಯಾ ಜೊತೆ ಮಾಧ್ಯಮಗಳ ದುರ್ವತನೆ: ಕೊನೆಗೂ ಎಚ್ಚೆತ್ತ ಮುಂಬೈ ಪೊಲೀಸರು

ತೀರಾ ಆತಂಕದಲ್ಲಿದ್ದ ಸತ್ತಾರ್‌ ಪರಪ್ಪುಗೆ ಧೈರ್ಯ ನೀಡಿದ ಆಟೋ ಚಾಲಕ ಹರೀಶ್ ಹಣ ವಾಪಾಸ್ ಕಳುಹಿಸುವ ಭರವಸೆ ನೀಡಿ, ಕೆಲವೆ ಹೊತ್ತಿನಲ್ಲಿ ಹಣವನ್ನು ವಾಪಾಸು ನೀಡಿ ತಮ್ಮ ಪ್ರಾಮಾಣಿಕತೆಯನ್ನು ಮೆರೆದಿದ್ದಾರೆ.

ಈ ಬಗ್ಗೆ ನಾನುಗೌರಿ ಜೊತೆ ಮಾತನಾಡಿದ ರಿಕ್ಷಾ ಚಾಲಕ ಹರೀಶ್, ’ಕೊರೊನಾ ಸಮಯದಲ್ಲಿನ ಕಷ್ಟ ನಮಗೂ ಗೊತ್ತು. ನಮ್ಮ ದುಡ್ಡೇ ನಮ್ಮೊಂದಿಗೆ ಇರುವುದಿಲ್ಲ, ಒಂದು ರುಪಾಯಿ ದುಡಿಯಲು ಕಷ್ಟ ಇರುವ ಈ ಕಾಲದಲ್ಲಿ ಅಷ್ಟು ದುಡ್ಡಿನ ಹಿಂದಿರುವ ಶ್ರಮದ ಬಗ್ಗೆ ನನಗೆ ಗೊತ್ತಿದೆ’ ಎಂದು ಹೇಳಿದರು.

ಘಟನೆ ಬಗ್ಗೆ ನಾನುಗೌರಿ ಜೊತೆ ಮಾತನಾಡಿದ ಸತ್ತಾರ್‌ ವಿವರಿಸಿದ್ದು ಹೀಗೆ, ’ಮೂವತ್ತೈದು ರುಪಾಯಿ ಕೂಡ ಮುಖ್ಯವಾಗುವ ಈ ಸಮಯದಲ್ಲಿ,ಕಣ್ತಪ್ಪಿನಿಂದ ಕ್ಷಣ ಮಾತ್ರದಲ್ಲಿ ಮೂವತ್ತೈದು ಸಾವಿರ ರುಪಾಯಿ ಹರೀಶ್ ಅಕೌಂಟಿಗೆ ಹೋಗಿಯಾಗಿತ್ತು. ಒಂದು ಕ್ಷಣ ಆಕಾಶ ತಲೆ ಮೇಲೆ ಬಿದ್ದಂತೆ ಭಾಸವಾಗಿತ್ತು. ಆದರೆ ಕರೆ ಮಾಡಿದಾಗ ಹರೀಶ್ ಆಡಿದ ಮಾತುಗಳು ಮತ್ತೆ ಹಣ ಸಿಗುವ ಭರವಸೆ ಮೂಡಿಸಿದ್ದವು. ಒಮ್ಮೆಮ್ಮೆ ನಗರದಲ್ಲಿ ಗುರುತು ಪರಿಚಯ ಇಲ್ಲದ ವ್ಯಕ್ತಿಯ ಕೈಯಲ್ಲಿ ಹಣವಿದೆ ಅನ್ನುವಾಗ ಗೊಂದಲಗಳು ಮೂಡಿದ್ದರೂ ಸಹ ಅವೆಲ್ಲವನ್ನೂ ಸುಳ್ಳಾಗಿಸಿ ಹರೀಶ್‌ ಹಣವನ್ನು ಹಿಂತಿರುಗಿಸಿದ್ದಾರೆ’ ಎಂದು ಹರೀಶ್‌ಗೆ ಧನ್ಯವಾದ ತಿಳಿಸಿದ್ದಾರೆ.


ಇದನ್ನೂ ಓದಿ: ಮೋದಿಯ ₹8000 ಕೋಟಿ ವಿಮಾನದ ಬಗ್ಗೆ ಪ್ರಶ್ನೆ ಯಾಕಿಲ್ಲ?- ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...