Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಕೇಂದ್ರ ಸರ್ಕಾರವನ್ನು ತೀವ್ರವಾಗಿ ಟೀಕಿಸುತ್ತಿರುವ ಈ ಮಹಿಳೆ ವಾಜಪೇಯಿಯವರ ಸೊಸೆ ಅಲ್ಲ

ಫ್ಯಾಕ್ಟ್‌‌ಚೆಕ್: ಕೇಂದ್ರ ಸರ್ಕಾರವನ್ನು ತೀವ್ರವಾಗಿ ಟೀಕಿಸುತ್ತಿರುವ ಈ ಮಹಿಳೆ ವಾಜಪೇಯಿಯವರ ಸೊಸೆ ಅಲ್ಲ

ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿರುವ ವಾಜಪೇಯಿ ಅವರ ಸೋದರ ಸೊಸೆ ಕರುಣಾ ಶುಕ್ಲಾ 68 ವರ್ಷ ವಯಸ್ಸಿನವರಾಗಿದ್ದಾರೆ.

- Advertisement -
- Advertisement -

‘ನ್ಯೂಸ್ ಚಾನೆಲ್’ ಒಂದರಲ್ಲಿ ಮಹಿಳೆಯೊಬ್ಬರು ಕೇಂದ್ರ ಸರ್ಕಾರವನ್ನು ಟೀಕಿಸುವ ವಿಡಿಯೋವೊಂದು, ಆ ಮಹಿಳೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸೊಸೆ’ ಎಂದು ವೈರಲ್ ಆಗಿದೆ.

ಆದರೆ ವೀಡಿಯೊದಲ್ಲಿರುವ ಮಹಿಳೆಯು ವಾಸ್ತವವಾಗಿ ಸಮಾಜಿಕ ಕಾರ್ಯಕರ್ತೆ ಅತಿಯಾ ಅಲ್ವಿ ಎಂಬವರಾಗಿದ್ದು, ಅವರು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಜಂತರ್ ಮಂತರ್‌ನಲ್ಲಿ ‘ಎಚ್‌ಎನ್‌ಪಿ ನ್ಯೂಸ್’ ಚಾನೆಲ್‌ನಲ್ಲಿ ಮಾತನಾಡುತ್ತಿದ್ದರು.

ಇದನ್ನೂ ಓದಿ: ನರೇಂದ್ರ ಮೋದಿ ಗುಜರಾತ್‌ನಲ್ಲಿ ಕ್ರೂಸ್ ಹಡಗು ಸೇವೆಯನ್ನು ಪ್ರಾರಂಭಿಸಿದ್ದಾರೆಯೇ? ಇಲ್ಲಿದೆ ವಿವರ

ಕಾಂಗ್ರೆಸ್ ನಾಯಕಿ, ನಟಿ ನಗ್ಮಾ ”ಅಟಲ್‌‌ ಅವರ ಸೋದರ ಸೊಸೆ ಬಿಜೆಪಿಯ ಆಡಳಿತದ ಬಗ್ಗೆ ಮಾತನಾಡುತ್ತಿದ್ದಾರೆ, ಪುರುಷರು ನಿರುದ್ಯೋಗಿಗಳಾಗಿದ್ದಾರೆ ಮತ್ತು ಮಹಿಳೆಯರು ಅಸುರಕ್ಷಿತರಾಗಿದ್ದಾರೆ” ಎಂಬ ಶೀರ್ಷಿಕೆಯೊಂದಿಗೆ ವಿಡಿಯೋ ಕ್ಲಿಪ್‌ಅನ್ನು ಹಂಚಿಕೊಂಡಿದ್ದಾರೆ.

ಇದರ ಆರ್ಕೈವ್ ಇಲ್ಲಿದೆ

ಸಾಮಾಜಿಕ ಜಾಲತಾಣದ ಬಳಕೆದಾರರು 2020 ರ ಜನವರಿಯಿಂದಲೂ ಈ ವಿಡಿಯೋವನ್ನು, ’ವಾಜಪೇಯಿ ಅವರ ಸೋದರ ಸೊಸೆ ಅಂತಿಮವಾಗಿ ಮೌನವನ್ನು ಮುರಿದಿದ್ದಾರೆ’ ಎಂಬ ಶೀರ್ಷಿಕೆಯಲ್ಲಿ ಹಂಚುತ್ತಲೇ ಇದ್ದಾರೆ.

ಇದರ ಆರ್ಕೈವ್ ಇಲ್ಲಿದೆ
ಇದರ ಆರ್ಕೈವ್ ಇಲ್ಲಿದೆ
ಇದರ ಆರ್ಕೈವ್ ಇಲ್ಲಿದೆ

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಎಡಿಟೆಡ್‌ ವಿಡಿಯೋ ಹಂಚಿದ ಮಧ್ಯಪ್ರದೇಶ ಕಾಂಗ್ರೆಸ್‌!

ಫ್ಯಾಕ್ಟ್‌‌ಚೆಕ್

ವೀಡಿಯೊದಲ್ಲಿರುವ ಮಹಿಳೆಯು ಅತಿಯಾ ಅಲ್ವಿಯಾ ಎಂಬವರಾಗಿದ್ದು, ಇವರು ವಾಜಪೇಯಿ ಅವರ ಸೋದರ ಸೊಸೆ ಅಲ್ಲ.

‘ಎಚ್‌ಎನ್‌ಪಿ ನ್ಯೂಸ್’ ಎಂಬ ಕೀವರ್ಡ್ ಮೂಲಕ ಹುಡುಕಾಡಿದಾಗ ಜನವರಿ 3 ರಂದು ಅಪ್‌ಲೋಡ್ ಮಾಡಲಾದ ಯೂಟ್ಯೂಬ್ ವೀಡಿಯೊವನ್ನು ಕಂಡುಕೊಳ್ಳಬಹುದು. ಅಲ್ಲಿಂದ ಈ ವಿಡಿಯೋವನ್ನು ತೆಗೆದುಕೊಳ್ಳಲಾಗಿದೆ.

ಜಂತರ್ ಮಂತರ್‌ನಲ್ಲಿ ನಡೆದ ಸಿಎಎ/ಎನ್‌ಆರ್‌ಸಿ ವಿರುದ್ಧದ ಪ್ರತಿಭಟನೆಯಲ್ಲಿ ಇವರು ಭಾಗಿಯಾಗಿದ್ದರು. ತಾನು ವಾಜಪೇಯಿ ಅವರ ಸೋದರ ಸೊಸೆ ಅಲ್ಲ ಎಂದು ಎಂದು ಸ್ವತಃ ಅತಿಯಾ ಅಲ್ವೀ ಹೇಳಿದ್ದಾರೆಂದು ದಿ ಕ್ವಿಂಟ್ ವರದಿ ಮಾಡಿದೆ.

ವಾಜಪೇಯಿ ಅವರ ಸೋದರ ಸೊಸೆ ಕರುಣಾ ಶುಕ್ಲಾ ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿರುವುದು ನಿಜ. ಆದರೆ ಅವರು 68 ವರ್ಷದವರಾಗಿದ್ದು, ವೈರಲ್ ವೀಡಿಯೊದಲ್ಲಿರುವ ಮಹಿಳೆಯು ಕಡಿಮೆ ವಯಸ್ಸಿನವರಾಗಿದ್ದಾರೆ.

ಮಧ್ಯದಲ್ಲಿರುವ ಮಹಿಳೆ ಕರುಣಾ ಶುಕ್ಲಾ ಆಗಿದ್ದು ಇವರು ಮಾಜಿ ಪ್ರಧಾನಿ ವಾಜಪೇಯಿ ಅವರ ಸೋದರ ಸೊಸೆ.(PC:PTI)

ಸ್ಪಷ್ಟವಾಗಿ ಹೇಳಬೇಕೆಂದರೆ ಕೇಂದ್ರದ ಬಿಜೆಪಿ ಸರ್ಕಾರವನ್ನು ಟೀಕಿಸುವ ಮಹಿಳೆಯನ್ನು ಮಾಜಿ ಪ್ರಧಾನಿ ವಾಜಪೇಯಿ ಅವರ ಸೋದರ ಸೊಸೆ ಎಂದು ತಪ್ಪಾಗಿ ಹೇಳಲಾಗುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಕಂಗನಾ ರಾಣಾವತ್‌ ಚುನಾವಣೆಯಲ್ಲಿ ಬಲವಂತವಾಗಿ ಶಿವಸೇನೆಗೆ ಮತ ಚಲಾಯಿಸಿದರೆ?

ವಿಡಿಯೋನೋಡಿ: ಕುಮಾರಸ್ವಾಮಿಯಂಥ ಪೆದ್ದ ಯಾರೂ ಇಲ್ಲ: ವಿಪಕ್ಷ ನಾಯಕ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...