Homeಮುಖಪುಟಪ್ರತಿಯೊಬ್ಬರ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಲು ಖಾಸಗಿ ಕಂಪನಿಗಳಿಗೆ ಟೆಂಡರ್ ಕರೆದ ಸರ್ಕಾರ!

ಪ್ರತಿಯೊಬ್ಬರ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಲು ಖಾಸಗಿ ಕಂಪನಿಗಳಿಗೆ ಟೆಂಡರ್ ಕರೆದ ಸರ್ಕಾರ!

ದೇಶದ ಪ್ರತಿಯೊಬ್ಬರ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಏನನ್ನು ಬರೆಯಲಾಗುತ್ತದೆ, ಯಾರ ಪರ ಮತ್ತು ವಿರುದ್ಧ ಬರೆಯಲಾಗುತ್ತದೆ, ಟ್ರೆಂಡ್ ಹೇಗಿರುತ್ತದೆ ಎಂಬುದನ್ನು ಮೇಲ್ವಿಚಾರಣೆ ನಡೆಸಲು ಐಟಿ ಕಂಪನಿಗಳಿಗೆ ಜವಾಬ್ದಾರಿ ನೀಡಲು ಸರ್ಕಾರ ಮುಂದಾಗಿದೆ.

- Advertisement -
- Advertisement -

ನಾವೆಲ್ಲರೂ ಸಾಮಾಜಿಕ ಜಾಲತಾಣಗಳಲ್ಲೊಂದಾದ ವಾಟ್ಸಾಪ್ ಬಳಕೆ ಸುರಕ್ಷಿತ ಎಂದುಕೊಳ್ಳುತ್ತಿರುವಾಗಲೇ ಕಳೆದ ವರ್ಷ ಪೆಗಾಸಸ್ ಸ್ಪೈವೇರ್ ಎಂಬ ಇಸ್ರೇಲ್ ಮೂಲದ ಸಾಫ್ಟ್‌ವೇರ್ ಬಳಸಿ ನಮ್ಮ ವಯಕ್ತಿಕ ವಾಟ್ಸಾಪ್‌ ಅನ್ನು ಕಣ್ಗಾವಲು ಮಾಡಬಹುದು, ಅಲ್ಲಿಯ ಮಾಹಿತಿಯನ್ನು ಕದಿಯಬಹುದು ಎಂಬ ಬೆಚ್ಚಿ ಬೀಳಿಸುವ ಅಂಶ ಬೆಳಕಿಗೆ ಬಂದಿತು. ಸ್ವತಃ ಇದನ್ನು ಸರ್ಕಾರವೇ ಬಳಸಿ ಹಲವು ಸಾಮಾಜಿಕ ಕಾರ್ಯಕರ್ತರ, ವಕೀಲರ, ಪತ್ರಕರ್ತರ ಮಾಹಿತಿ ಕದ್ದು ಟೀಕೆಗೊಳಗಾಗಿತ್ತು.

ಈಗ ಕೊರೊನಾ ಸಾಂಕ್ರಾಮಿಕದ ಕಾಲದಲ್ಲಿ ನಮ್ಮೆಲ್ಲರ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡುವ ಮತ್ತು ಕ್ರಮತೆಗೆದುಕೊಳ್ಳುವ ಹೊಸ ಅಧಿಕೃತ ವ್ಯವಸ್ಥೆಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಅಂದರೆ ದೇಶದ ಪ್ರತಿಯೊಬ್ಬರ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಏನನ್ನು ಬರೆಯಲಾಗುತ್ತದೆ, ಯಾರ ಪರ ಮತ್ತು ವಿರುದ್ಧ ಬರೆಯಲಾಗುತ್ತದೆ, ಟ್ರೆಂಡ್ ಹೇಗಿರುತ್ತದೆ ಎಂಬುದನ್ನು ಮೇಲ್ವಿಚಾರಣೆ ನಡೆಸಲು ಐಟಿ ಕಂಪನಿಗಳಿಗೆ ಜವಾಬ್ದಾರಿ ನೀಡಲು ಸರ್ಕಾರ ಮುಂದಾಗಿದೆ.

ಭಾರತದಂತಹ ವಿಶಾಲ ದೇಶದಲ್ಲಿ ಎಲ್ಲರ ಖಾತೆಗಳನ್ನು ಮಾನಿಟರ್ ಮಾಡಲು ಸಾಧ್ಯವಿಲ್ಲ ಎಂದು ಬಹುತೇಕರು ಭಾವಿಸಿದ್ದಾರೆ. ಅದಕ್ಕಾಗಿಯೇ ಬ್ರಾಡ್ ಕಾಸ್ಟ್ ಎಂಜಿನೀರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ಎಂಬ ಸರ್ಕಾರಿ ಸ್ವಾಮ್ಯದ (I and B ಸಚಿವಾಲಯ) ಸಂಸ್ಥೆಯ ಮೂಲಕ ಈ ಕೆಲಸ ನಿರ್ವಹಿಸಲು ಖಾಸಗಿ ಕಂಪನಿಗಳಿಗೆ ಟೆಂಡರ್ ಕರೆದಿದೆ.

ಅವರು ಮಾಡಬೇಕಾದ ಮಾನಿಟರಿಂಗ್ ಸೇವೆಗಳ ಕೆಲಸದ ವ್ಯಾಪ್ತಿ ಈ ಕೆಳಗಿನಂತಿರುತ್ತದೆ:

ಪತ್ತೆ ಹಚ್ಚುವಿಕೆ – ಸಾಮಾಜಿಕ ಮಾಧ್ಯಮದಲ್ಲಿ ನಡೆಯುತ್ತಿರುವ ವಿವಿಧ ಚಟುವಟಿಕೆಗಳನ್ನು ವಿಶ್ಲೇಷಿಸುವುದು.

ನಿರ್ಧಾರ- ಸಮಸ್ಯಾತ್ಮಕವಾಗಿವೆ ಎಂಬ ಪೋಸ್ಟ್‌ಗಳನ್ನು ವಿಂಗಡಣೆ ಮಾಡುವುದು.

ಪಾವತಿಸಿದ ಮತ್ತು ಖಾಸಗಿ ಮಾಧ್ಯಮ ಡೇಟಾವನ್ನು ಒಳಗೊಂಡಂತೆ ಸಂಪೂರ್ಣ ಸಾಮಾಜಿಕ ಮಾಧ್ಯಮವನ್ನು ಮೇಲ್ವಿಚಾರಣೆ ನಡೆಸುವ ಸಾಮರ್ಥ್ಯವನ್ನು ಅಭಿವೃದ್ದಿಪಡಿಸುವುದು.

ಸೋಷಿಯಲ್ ಮೀಡಿಯಾ ಟ್ರೆಂಡ್ಸ್ ಅನ್ನು ಮಾನಿಟರಿಂಗ್ ಮಾಡುವುದು.

ಸೋಷಿಯಲ್ ಮೀಡಿಯಾದ ಭಾವನೆಗಳನ್ನು ಮೇಲ್ವಿಚಾರಣೆ ಮಾಡುವುದು

ಸೋಶಿಯಲ್ ಮೀಡಿಯಾದ ಸೂಚಕಗಳ ಅನ್ವಯ ಮೇಲ್ವಿಚಾರಣೆ

ಸರ್ಕಾರಕ್ಕೆ ಸಂಬಂಧಿಸಿದ ಚಟುವಟಿಕೆಗಳಿಗೆ ಸಂಬಂಧಿಸಿದ ಟ್ರೆಂಡ್‌ಗಳ ಜಾಡು ಹಿಡಿಯುವುದು.

ಸಾಮಾಜಿಕ ಅಭಿಯಾನಗಳು / ಕಾರ್ಯಕ್ರಮಗಳ ಮೇಲ್ವಿಚಾರಣೆ

ಆಲಿಸುವ ಸಾಧನ ಅಭಿವೃದ್ದಿಪಡಿಸುವುದು.

ಕ್ರಿಯಾತ್ಮಕ ಡೇಟಾವನ್ನು ಗುರುತಿಸುವುದು, ಯಾರಿಂದ ಪ್ರಭಾವಿತರಾಗಿದ್ದಾರೆ ಎಂದು ತಿಳಿಯುವುದು ಇತ್ಯಾದಿ

ಆರಂಭಿಕ ಎಚ್ಚರಿಕೆ ನೀಡುವ ವ್ಯವಸ್ಥೆ

ವಿಶ್ಲೇಷಣಾತ್ಮಕ ವರದಿಗಳನ್ನು ರಚಿಸುವುದು

ಇಷ್ಟೆಲ್ಲಾ ಕೆಲಸಗಳನ್ನು ನಿರ್ವಹಿಸಲು, ಡಾಟಾ ಸಂಗ್ರಹಿಸಲು ಐಟಿ ಕಂಪನಿಗಳನ್ನು ಸರ್ಕಾರ ಆಹ್ವಾನಿಸಿದೆ. ಮೇಲಿನ ಇಷ್ಟು ಮಾಹಿತಿ ಸಿಕ್ಕ ನಂತರ ಯಾರು ಸರ್ಕಾರದ ಪರವಿದ್ದಾರೆ ಮತ್ತು ಯಾರು ವಿರುದ್ಧವಿದ್ದಾರೆ ಎಂದು ತಿಳಿದ ಸರ್ಕಾರ ಅವರ ಮೇಲೆ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬಹುದು ಊಹಿಸಿ.

ಈಗಾಗಲೇ ಸರ್ಕಾರಗಳು ಹಲವು ರೀತಿಯಲ್ಲಿ ನಮ್ಮನ್ನು ಮೇಲ್ವಿಚಾರಣೆ ನಡೆಸುತ್ತಿದೆ. ಪ್ರತಿಯೊಬ್ಬ ಪ್ರಜೆಯ ಎಲ್ಲಾ ಮಾಹಿತಿಗಳನ್ನು ಅದು ಪಡೆದುಕೊಂಡಿದೆ. ಈಗ ನಾವು ಮಾಡುವ ಚಟುವಟಿಕೆಗಳನ್ನು ಮಾನಿಟರ್ ಮಾಡುವ ಮೂಲಕ ಸರ್ವೈಲೆನ್ಸ್ ಸ್ಟೇಟ್ ಕಡೆಗೆ ದಾಪುಗಾಲಿಡುತ್ತಿದೆ ಎಂದು ಹಲವು ಚಿಂತಕರು ಆತಂಕ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗಿನ ನಿಯಂತ್ರಣದ ಸಂದರ್ಭದ ಕಣ್ಗಾವಲು ಮತ್ತು ಪ್ರಭುತ್ವದ ಬೇಹುಗಾರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...