Homeಮುಖಪುಟಪ್ರತಿಯೊಬ್ಬರ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಲು ಖಾಸಗಿ ಕಂಪನಿಗಳಿಗೆ ಟೆಂಡರ್ ಕರೆದ ಸರ್ಕಾರ!

ಪ್ರತಿಯೊಬ್ಬರ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಲು ಖಾಸಗಿ ಕಂಪನಿಗಳಿಗೆ ಟೆಂಡರ್ ಕರೆದ ಸರ್ಕಾರ!

ದೇಶದ ಪ್ರತಿಯೊಬ್ಬರ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಏನನ್ನು ಬರೆಯಲಾಗುತ್ತದೆ, ಯಾರ ಪರ ಮತ್ತು ವಿರುದ್ಧ ಬರೆಯಲಾಗುತ್ತದೆ, ಟ್ರೆಂಡ್ ಹೇಗಿರುತ್ತದೆ ಎಂಬುದನ್ನು ಮೇಲ್ವಿಚಾರಣೆ ನಡೆಸಲು ಐಟಿ ಕಂಪನಿಗಳಿಗೆ ಜವಾಬ್ದಾರಿ ನೀಡಲು ಸರ್ಕಾರ ಮುಂದಾಗಿದೆ.

- Advertisement -
- Advertisement -

ನಾವೆಲ್ಲರೂ ಸಾಮಾಜಿಕ ಜಾಲತಾಣಗಳಲ್ಲೊಂದಾದ ವಾಟ್ಸಾಪ್ ಬಳಕೆ ಸುರಕ್ಷಿತ ಎಂದುಕೊಳ್ಳುತ್ತಿರುವಾಗಲೇ ಕಳೆದ ವರ್ಷ ಪೆಗಾಸಸ್ ಸ್ಪೈವೇರ್ ಎಂಬ ಇಸ್ರೇಲ್ ಮೂಲದ ಸಾಫ್ಟ್‌ವೇರ್ ಬಳಸಿ ನಮ್ಮ ವಯಕ್ತಿಕ ವಾಟ್ಸಾಪ್‌ ಅನ್ನು ಕಣ್ಗಾವಲು ಮಾಡಬಹುದು, ಅಲ್ಲಿಯ ಮಾಹಿತಿಯನ್ನು ಕದಿಯಬಹುದು ಎಂಬ ಬೆಚ್ಚಿ ಬೀಳಿಸುವ ಅಂಶ ಬೆಳಕಿಗೆ ಬಂದಿತು. ಸ್ವತಃ ಇದನ್ನು ಸರ್ಕಾರವೇ ಬಳಸಿ ಹಲವು ಸಾಮಾಜಿಕ ಕಾರ್ಯಕರ್ತರ, ವಕೀಲರ, ಪತ್ರಕರ್ತರ ಮಾಹಿತಿ ಕದ್ದು ಟೀಕೆಗೊಳಗಾಗಿತ್ತು.

ಈಗ ಕೊರೊನಾ ಸಾಂಕ್ರಾಮಿಕದ ಕಾಲದಲ್ಲಿ ನಮ್ಮೆಲ್ಲರ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡುವ ಮತ್ತು ಕ್ರಮತೆಗೆದುಕೊಳ್ಳುವ ಹೊಸ ಅಧಿಕೃತ ವ್ಯವಸ್ಥೆಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಅಂದರೆ ದೇಶದ ಪ್ರತಿಯೊಬ್ಬರ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಏನನ್ನು ಬರೆಯಲಾಗುತ್ತದೆ, ಯಾರ ಪರ ಮತ್ತು ವಿರುದ್ಧ ಬರೆಯಲಾಗುತ್ತದೆ, ಟ್ರೆಂಡ್ ಹೇಗಿರುತ್ತದೆ ಎಂಬುದನ್ನು ಮೇಲ್ವಿಚಾರಣೆ ನಡೆಸಲು ಐಟಿ ಕಂಪನಿಗಳಿಗೆ ಜವಾಬ್ದಾರಿ ನೀಡಲು ಸರ್ಕಾರ ಮುಂದಾಗಿದೆ.

ಭಾರತದಂತಹ ವಿಶಾಲ ದೇಶದಲ್ಲಿ ಎಲ್ಲರ ಖಾತೆಗಳನ್ನು ಮಾನಿಟರ್ ಮಾಡಲು ಸಾಧ್ಯವಿಲ್ಲ ಎಂದು ಬಹುತೇಕರು ಭಾವಿಸಿದ್ದಾರೆ. ಅದಕ್ಕಾಗಿಯೇ ಬ್ರಾಡ್ ಕಾಸ್ಟ್ ಎಂಜಿನೀರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ಎಂಬ ಸರ್ಕಾರಿ ಸ್ವಾಮ್ಯದ (I and B ಸಚಿವಾಲಯ) ಸಂಸ್ಥೆಯ ಮೂಲಕ ಈ ಕೆಲಸ ನಿರ್ವಹಿಸಲು ಖಾಸಗಿ ಕಂಪನಿಗಳಿಗೆ ಟೆಂಡರ್ ಕರೆದಿದೆ.

ಅವರು ಮಾಡಬೇಕಾದ ಮಾನಿಟರಿಂಗ್ ಸೇವೆಗಳ ಕೆಲಸದ ವ್ಯಾಪ್ತಿ ಈ ಕೆಳಗಿನಂತಿರುತ್ತದೆ:

ಪತ್ತೆ ಹಚ್ಚುವಿಕೆ – ಸಾಮಾಜಿಕ ಮಾಧ್ಯಮದಲ್ಲಿ ನಡೆಯುತ್ತಿರುವ ವಿವಿಧ ಚಟುವಟಿಕೆಗಳನ್ನು ವಿಶ್ಲೇಷಿಸುವುದು.

ನಿರ್ಧಾರ- ಸಮಸ್ಯಾತ್ಮಕವಾಗಿವೆ ಎಂಬ ಪೋಸ್ಟ್‌ಗಳನ್ನು ವಿಂಗಡಣೆ ಮಾಡುವುದು.

ಪಾವತಿಸಿದ ಮತ್ತು ಖಾಸಗಿ ಮಾಧ್ಯಮ ಡೇಟಾವನ್ನು ಒಳಗೊಂಡಂತೆ ಸಂಪೂರ್ಣ ಸಾಮಾಜಿಕ ಮಾಧ್ಯಮವನ್ನು ಮೇಲ್ವಿಚಾರಣೆ ನಡೆಸುವ ಸಾಮರ್ಥ್ಯವನ್ನು ಅಭಿವೃದ್ದಿಪಡಿಸುವುದು.

ಸೋಷಿಯಲ್ ಮೀಡಿಯಾ ಟ್ರೆಂಡ್ಸ್ ಅನ್ನು ಮಾನಿಟರಿಂಗ್ ಮಾಡುವುದು.

ಸೋಷಿಯಲ್ ಮೀಡಿಯಾದ ಭಾವನೆಗಳನ್ನು ಮೇಲ್ವಿಚಾರಣೆ ಮಾಡುವುದು

ಸೋಶಿಯಲ್ ಮೀಡಿಯಾದ ಸೂಚಕಗಳ ಅನ್ವಯ ಮೇಲ್ವಿಚಾರಣೆ

ಸರ್ಕಾರಕ್ಕೆ ಸಂಬಂಧಿಸಿದ ಚಟುವಟಿಕೆಗಳಿಗೆ ಸಂಬಂಧಿಸಿದ ಟ್ರೆಂಡ್‌ಗಳ ಜಾಡು ಹಿಡಿಯುವುದು.

ಸಾಮಾಜಿಕ ಅಭಿಯಾನಗಳು / ಕಾರ್ಯಕ್ರಮಗಳ ಮೇಲ್ವಿಚಾರಣೆ

ಆಲಿಸುವ ಸಾಧನ ಅಭಿವೃದ್ದಿಪಡಿಸುವುದು.

ಕ್ರಿಯಾತ್ಮಕ ಡೇಟಾವನ್ನು ಗುರುತಿಸುವುದು, ಯಾರಿಂದ ಪ್ರಭಾವಿತರಾಗಿದ್ದಾರೆ ಎಂದು ತಿಳಿಯುವುದು ಇತ್ಯಾದಿ

ಆರಂಭಿಕ ಎಚ್ಚರಿಕೆ ನೀಡುವ ವ್ಯವಸ್ಥೆ

ವಿಶ್ಲೇಷಣಾತ್ಮಕ ವರದಿಗಳನ್ನು ರಚಿಸುವುದು

ಇಷ್ಟೆಲ್ಲಾ ಕೆಲಸಗಳನ್ನು ನಿರ್ವಹಿಸಲು, ಡಾಟಾ ಸಂಗ್ರಹಿಸಲು ಐಟಿ ಕಂಪನಿಗಳನ್ನು ಸರ್ಕಾರ ಆಹ್ವಾನಿಸಿದೆ. ಮೇಲಿನ ಇಷ್ಟು ಮಾಹಿತಿ ಸಿಕ್ಕ ನಂತರ ಯಾರು ಸರ್ಕಾರದ ಪರವಿದ್ದಾರೆ ಮತ್ತು ಯಾರು ವಿರುದ್ಧವಿದ್ದಾರೆ ಎಂದು ತಿಳಿದ ಸರ್ಕಾರ ಅವರ ಮೇಲೆ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬಹುದು ಊಹಿಸಿ.

ಈಗಾಗಲೇ ಸರ್ಕಾರಗಳು ಹಲವು ರೀತಿಯಲ್ಲಿ ನಮ್ಮನ್ನು ಮೇಲ್ವಿಚಾರಣೆ ನಡೆಸುತ್ತಿದೆ. ಪ್ರತಿಯೊಬ್ಬ ಪ್ರಜೆಯ ಎಲ್ಲಾ ಮಾಹಿತಿಗಳನ್ನು ಅದು ಪಡೆದುಕೊಂಡಿದೆ. ಈಗ ನಾವು ಮಾಡುವ ಚಟುವಟಿಕೆಗಳನ್ನು ಮಾನಿಟರ್ ಮಾಡುವ ಮೂಲಕ ಸರ್ವೈಲೆನ್ಸ್ ಸ್ಟೇಟ್ ಕಡೆಗೆ ದಾಪುಗಾಲಿಡುತ್ತಿದೆ ಎಂದು ಹಲವು ಚಿಂತಕರು ಆತಂಕ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗಿನ ನಿಯಂತ್ರಣದ ಸಂದರ್ಭದ ಕಣ್ಗಾವಲು ಮತ್ತು ಪ್ರಭುತ್ವದ ಬೇಹುಗಾರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....