Homeಮುಖಪುಟಪ್ರತಿಯೊಬ್ಬರ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಲು ಖಾಸಗಿ ಕಂಪನಿಗಳಿಗೆ ಟೆಂಡರ್ ಕರೆದ ಸರ್ಕಾರ!

ಪ್ರತಿಯೊಬ್ಬರ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಲು ಖಾಸಗಿ ಕಂಪನಿಗಳಿಗೆ ಟೆಂಡರ್ ಕರೆದ ಸರ್ಕಾರ!

ದೇಶದ ಪ್ರತಿಯೊಬ್ಬರ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಏನನ್ನು ಬರೆಯಲಾಗುತ್ತದೆ, ಯಾರ ಪರ ಮತ್ತು ವಿರುದ್ಧ ಬರೆಯಲಾಗುತ್ತದೆ, ಟ್ರೆಂಡ್ ಹೇಗಿರುತ್ತದೆ ಎಂಬುದನ್ನು ಮೇಲ್ವಿಚಾರಣೆ ನಡೆಸಲು ಐಟಿ ಕಂಪನಿಗಳಿಗೆ ಜವಾಬ್ದಾರಿ ನೀಡಲು ಸರ್ಕಾರ ಮುಂದಾಗಿದೆ.

- Advertisement -
- Advertisement -

ನಾವೆಲ್ಲರೂ ಸಾಮಾಜಿಕ ಜಾಲತಾಣಗಳಲ್ಲೊಂದಾದ ವಾಟ್ಸಾಪ್ ಬಳಕೆ ಸುರಕ್ಷಿತ ಎಂದುಕೊಳ್ಳುತ್ತಿರುವಾಗಲೇ ಕಳೆದ ವರ್ಷ ಪೆಗಾಸಸ್ ಸ್ಪೈವೇರ್ ಎಂಬ ಇಸ್ರೇಲ್ ಮೂಲದ ಸಾಫ್ಟ್‌ವೇರ್ ಬಳಸಿ ನಮ್ಮ ವಯಕ್ತಿಕ ವಾಟ್ಸಾಪ್‌ ಅನ್ನು ಕಣ್ಗಾವಲು ಮಾಡಬಹುದು, ಅಲ್ಲಿಯ ಮಾಹಿತಿಯನ್ನು ಕದಿಯಬಹುದು ಎಂಬ ಬೆಚ್ಚಿ ಬೀಳಿಸುವ ಅಂಶ ಬೆಳಕಿಗೆ ಬಂದಿತು. ಸ್ವತಃ ಇದನ್ನು ಸರ್ಕಾರವೇ ಬಳಸಿ ಹಲವು ಸಾಮಾಜಿಕ ಕಾರ್ಯಕರ್ತರ, ವಕೀಲರ, ಪತ್ರಕರ್ತರ ಮಾಹಿತಿ ಕದ್ದು ಟೀಕೆಗೊಳಗಾಗಿತ್ತು.

ಈಗ ಕೊರೊನಾ ಸಾಂಕ್ರಾಮಿಕದ ಕಾಲದಲ್ಲಿ ನಮ್ಮೆಲ್ಲರ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡುವ ಮತ್ತು ಕ್ರಮತೆಗೆದುಕೊಳ್ಳುವ ಹೊಸ ಅಧಿಕೃತ ವ್ಯವಸ್ಥೆಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಅಂದರೆ ದೇಶದ ಪ್ರತಿಯೊಬ್ಬರ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಏನನ್ನು ಬರೆಯಲಾಗುತ್ತದೆ, ಯಾರ ಪರ ಮತ್ತು ವಿರುದ್ಧ ಬರೆಯಲಾಗುತ್ತದೆ, ಟ್ರೆಂಡ್ ಹೇಗಿರುತ್ತದೆ ಎಂಬುದನ್ನು ಮೇಲ್ವಿಚಾರಣೆ ನಡೆಸಲು ಐಟಿ ಕಂಪನಿಗಳಿಗೆ ಜವಾಬ್ದಾರಿ ನೀಡಲು ಸರ್ಕಾರ ಮುಂದಾಗಿದೆ.

ಭಾರತದಂತಹ ವಿಶಾಲ ದೇಶದಲ್ಲಿ ಎಲ್ಲರ ಖಾತೆಗಳನ್ನು ಮಾನಿಟರ್ ಮಾಡಲು ಸಾಧ್ಯವಿಲ್ಲ ಎಂದು ಬಹುತೇಕರು ಭಾವಿಸಿದ್ದಾರೆ. ಅದಕ್ಕಾಗಿಯೇ ಬ್ರಾಡ್ ಕಾಸ್ಟ್ ಎಂಜಿನೀರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ಎಂಬ ಸರ್ಕಾರಿ ಸ್ವಾಮ್ಯದ (I and B ಸಚಿವಾಲಯ) ಸಂಸ್ಥೆಯ ಮೂಲಕ ಈ ಕೆಲಸ ನಿರ್ವಹಿಸಲು ಖಾಸಗಿ ಕಂಪನಿಗಳಿಗೆ ಟೆಂಡರ್ ಕರೆದಿದೆ.

ಅವರು ಮಾಡಬೇಕಾದ ಮಾನಿಟರಿಂಗ್ ಸೇವೆಗಳ ಕೆಲಸದ ವ್ಯಾಪ್ತಿ ಈ ಕೆಳಗಿನಂತಿರುತ್ತದೆ:

ಪತ್ತೆ ಹಚ್ಚುವಿಕೆ – ಸಾಮಾಜಿಕ ಮಾಧ್ಯಮದಲ್ಲಿ ನಡೆಯುತ್ತಿರುವ ವಿವಿಧ ಚಟುವಟಿಕೆಗಳನ್ನು ವಿಶ್ಲೇಷಿಸುವುದು.

ನಿರ್ಧಾರ- ಸಮಸ್ಯಾತ್ಮಕವಾಗಿವೆ ಎಂಬ ಪೋಸ್ಟ್‌ಗಳನ್ನು ವಿಂಗಡಣೆ ಮಾಡುವುದು.

ಪಾವತಿಸಿದ ಮತ್ತು ಖಾಸಗಿ ಮಾಧ್ಯಮ ಡೇಟಾವನ್ನು ಒಳಗೊಂಡಂತೆ ಸಂಪೂರ್ಣ ಸಾಮಾಜಿಕ ಮಾಧ್ಯಮವನ್ನು ಮೇಲ್ವಿಚಾರಣೆ ನಡೆಸುವ ಸಾಮರ್ಥ್ಯವನ್ನು ಅಭಿವೃದ್ದಿಪಡಿಸುವುದು.

ಸೋಷಿಯಲ್ ಮೀಡಿಯಾ ಟ್ರೆಂಡ್ಸ್ ಅನ್ನು ಮಾನಿಟರಿಂಗ್ ಮಾಡುವುದು.

ಸೋಷಿಯಲ್ ಮೀಡಿಯಾದ ಭಾವನೆಗಳನ್ನು ಮೇಲ್ವಿಚಾರಣೆ ಮಾಡುವುದು

ಸೋಶಿಯಲ್ ಮೀಡಿಯಾದ ಸೂಚಕಗಳ ಅನ್ವಯ ಮೇಲ್ವಿಚಾರಣೆ

ಸರ್ಕಾರಕ್ಕೆ ಸಂಬಂಧಿಸಿದ ಚಟುವಟಿಕೆಗಳಿಗೆ ಸಂಬಂಧಿಸಿದ ಟ್ರೆಂಡ್‌ಗಳ ಜಾಡು ಹಿಡಿಯುವುದು.

ಸಾಮಾಜಿಕ ಅಭಿಯಾನಗಳು / ಕಾರ್ಯಕ್ರಮಗಳ ಮೇಲ್ವಿಚಾರಣೆ

ಆಲಿಸುವ ಸಾಧನ ಅಭಿವೃದ್ದಿಪಡಿಸುವುದು.

ಕ್ರಿಯಾತ್ಮಕ ಡೇಟಾವನ್ನು ಗುರುತಿಸುವುದು, ಯಾರಿಂದ ಪ್ರಭಾವಿತರಾಗಿದ್ದಾರೆ ಎಂದು ತಿಳಿಯುವುದು ಇತ್ಯಾದಿ

ಆರಂಭಿಕ ಎಚ್ಚರಿಕೆ ನೀಡುವ ವ್ಯವಸ್ಥೆ

ವಿಶ್ಲೇಷಣಾತ್ಮಕ ವರದಿಗಳನ್ನು ರಚಿಸುವುದು

ಇಷ್ಟೆಲ್ಲಾ ಕೆಲಸಗಳನ್ನು ನಿರ್ವಹಿಸಲು, ಡಾಟಾ ಸಂಗ್ರಹಿಸಲು ಐಟಿ ಕಂಪನಿಗಳನ್ನು ಸರ್ಕಾರ ಆಹ್ವಾನಿಸಿದೆ. ಮೇಲಿನ ಇಷ್ಟು ಮಾಹಿತಿ ಸಿಕ್ಕ ನಂತರ ಯಾರು ಸರ್ಕಾರದ ಪರವಿದ್ದಾರೆ ಮತ್ತು ಯಾರು ವಿರುದ್ಧವಿದ್ದಾರೆ ಎಂದು ತಿಳಿದ ಸರ್ಕಾರ ಅವರ ಮೇಲೆ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬಹುದು ಊಹಿಸಿ.

ಈಗಾಗಲೇ ಸರ್ಕಾರಗಳು ಹಲವು ರೀತಿಯಲ್ಲಿ ನಮ್ಮನ್ನು ಮೇಲ್ವಿಚಾರಣೆ ನಡೆಸುತ್ತಿದೆ. ಪ್ರತಿಯೊಬ್ಬ ಪ್ರಜೆಯ ಎಲ್ಲಾ ಮಾಹಿತಿಗಳನ್ನು ಅದು ಪಡೆದುಕೊಂಡಿದೆ. ಈಗ ನಾವು ಮಾಡುವ ಚಟುವಟಿಕೆಗಳನ್ನು ಮಾನಿಟರ್ ಮಾಡುವ ಮೂಲಕ ಸರ್ವೈಲೆನ್ಸ್ ಸ್ಟೇಟ್ ಕಡೆಗೆ ದಾಪುಗಾಲಿಡುತ್ತಿದೆ ಎಂದು ಹಲವು ಚಿಂತಕರು ಆತಂಕ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗಿನ ನಿಯಂತ್ರಣದ ಸಂದರ್ಭದ ಕಣ್ಗಾವಲು ಮತ್ತು ಪ್ರಭುತ್ವದ ಬೇಹುಗಾರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...