Homeಮುಖಪುಟತಮಿಳುನಾಡು: ಕೃಷ್ಣಗಿರಿಯಲ್ಲಿ 29 ದಲಿತ ಕುಟುಂಬಗಳಿಗೆ ಬಹಿಷ್ಕಾರ!

ತಮಿಳುನಾಡು: ಕೃಷ್ಣಗಿರಿಯಲ್ಲಿ 29 ದಲಿತ ಕುಟುಂಬಗಳಿಗೆ ಬಹಿಷ್ಕಾರ!

ಗ್ರಾಮದ ದಲಿತ ಜನರಿಗೆ ದಿನಸಿ, ಹಾಲು ಮತ್ತು ನೀರು ನೀಡುವ ಜನರಿಂದ 5,000 ರೂ.ಗಳ ದಂಡವನ್ನು ವಸೂಲಿ ಮಾಡಬೇಕೆಂದು ಗ್ರಾಮದ ಜಾತಿ ಪಂಚಾಯತ್ ಆದೇಶಿಸಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

- Advertisement -
- Advertisement -

ದೌರ್ಜನ್ಯ ತಡೆ (ಎಸ್‌ಸಿ /ಎಸ್‌ಟಿ)  ಕಾಯ್ದೆಯಡಿ ಜಾತಿ ಹಿಂದೂಗಳ( ಅತಿ ಹಿಂದುಳಿದ ಸಮುದಾಯ) ವಿರುದ್ಧ ದಾಖಲಾದ ಪ್ರಕರಣವನ್ನು ಹಿಂತೆಗೆದುಕೊಳ್ಳದ ಕಾರಣ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಉಲಗಂ ಹಳ್ಳಿಯಲ್ಲಿ 29 ದಲಿತ ಕುಟುಂಬಗಳಿಗೆ ಬಹಿಷ್ಕಾರ ಹಾಕಲಾಗಿದೆ.

ದಲಿತ ಕಾಲೋನಿಗೆ ಬರುತ್ತಿದ್ದ ಹಾಲು, ನೀರು ನಿಲ್ಲಿಸಲಾಗಿದೆ. ದಿನಸಿ ಅಂಗಡಿಯವರು ದಿನಸಿ ನೀಡಲು ನಿರಾಕರಿಸುತ್ತಿದ್ದಾರೆ ಎಂದು ಅಲ್ಲಿನ ದಲಿತರು ಆರೋಪಿಸಿದ್ದಾರೆ.

“ಏನಾಗುತ್ತಿದೆ ಎಂಬುದೇ ನಮಗೆ ತಿಳಿಯುತ್ತಿಲ್ಲ. ಅಂಗಡಿಯವರು ಇದ್ದಕ್ಕಿದ್ದಂತೆ ನಮಗೆ ದಿನಸಿ ನೀಡಲು ನಿರಾಕರಿಸಿದ್ದಾರೆ. ಅಕ್ಟೋಬರ್ 2 ರಿಂದ ನಮ್ಮ ಮನೆಗಳಿಗೆ ಹಾಲು ನೀಡುತ್ತಿದ್ದವರು ಬಂದಿಲ್ಲ.  ಹಳ್ಳಿಯ ಕೊಳಾಯಿಗಳಿಂದ ನಮಗೆ ನೀರು ಬಂದಿಲ್ಲ’ ಎಂದು ಹೊಸೂರಿನ ಉಲಗಂ ಗ್ರಾಮದ ದಲಿತ ಕಾಲೋನಿ ಮಹಿಳೆ ಆತಂಕ ವ್ಯಕ್ತಪಡಿಸಿದ್ದಾರೆ.

ಎರಡು ವರ್ಷಗಳ ಹಿಂದೆ ಉಲಗಂ ಹಳ್ಳಿಯ 22 ವರ್ಷದ ದಲಿತ ಯುವಕ ಸೂರ್ಯಕುಮಾರ್, ಅತಿ ಹಿಂದುಳಿದ ಸಮುದಾಯಕ್ಕೆ (MBC) ಸೇರಿದ ಕುರುಂಬಾರ್ ಜಾತಿಗೆ ಸೇರಿದ ಹೊಸೂರಿನ ಮಣಿಯಂಗಲ್ ಗ್ರಾಮದ 17 ವರ್ಷದ ಅಪ್ರಾಪ್ತ ಬಾಲಕಿಯೊಂದಿಗೆ ಓಡಿಹೋಗಿದ್ದರು.

ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರದ ಈ ಅಂಕಿ-ಅಂಶಗಳನ್ನು ನೋಡಿ: ನೀವೇ ಪ್ರಶ್ನಿಸಿಕೊಳ್ಳಿ

ಘಟನೆ ನಡೆದ ಕೂಡಲೇ ಬಾಲಕಿಯ ಪೋಷಕರು ಅಪಹರಣದ ಆರೋಪ ಮತ್ತು ಪೊಕ್ಸೊ ಕಾಯ್ದೆಯಡಿ ಸೂರ್ಯ ಕುಮಾರ್ ವಿರುದ್ಧ ಪೊಲೀಸ್ ದೂರು ದಾಖಲಿಸಿದರೆ, ಇತ್ತ ಸೂರ್ಯಕುಮಾರ್ ಅವರ ಕುಟುಂಬ ವಾಸಿಸುವ ಉಲಗಂ ಗ್ರಾಮದಲ್ಲಿ ಕುರುಂಬಾರ್ ಸಮುದಾಯದ ಜನ ದಲಿತ ಕಾಲೋನಿ ಮತ್ತು ಅಲ್ಲಿನ ಜನರ ಮೇಲೆ ಹಲ್ಲೆ ನಡೆಸಿದ್ದರು. ಗ್ರಾಮದ ದಲಿತ ಜನರ ದೂರಿನ ಆಧಾರದ ಮೇಲೆ ಪೊಲೀಸರು 30 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಆರು ತಿಂಗಳ ನಂತರ ಕುರುಂಬಾರ್‌ ಸಮುದಾಯದ ಹುಡುಗಿಗೆ 18 ವರ್ಷ ಆದಾಗ, ಎರಡೂ ಕುಟುಂಬಗಳು ಸೇರಿ ಸೂರ್ಯಕುಮಾರ್ ಅವರೊಂದಿಗೆ ಆಕೆಯ ಮದುವೆ ಮಾಡಿದ್ದಾರೆ. ನಂತರ ಹುಡುಗಿಯ ಕುಟುಂಬ ಸೂರ್ಯಕುಮಾರ್ ವಿರುದ್ಧ ಸಲ್ಲಿಸಿದ್ದ ಪ್ರಕರಣವನ್ನು ಹಿಂತೆಗೆದುಕೊಂಡರು. ಆದರೆ ಗ್ರಾಮಸ್ಥರ ಮೇಲೆ ಹಲ್ಲೆ ಮಾಡಿದ್ದವರರ ಮೇಲೆ ದಲಿತರು  ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ದಾಖಲಿಸಿದ್ದ ದೂರನ್ನು ವಾಪಾಸ್ ಪಡೆದಿರಲ್ಲ. ಈ ಪ್ರಕರಣ ಅಕ್ಟೋಬರ್ 1 ರಂದು ವಿಚಾರಣೆಗೆ ಬಂದಿತ್ತು.

“ಅವರು ಪ್ರಕರಣವನ್ನು ಹಿಂಪಡೆಯಲು ನಮಗೆ ಅನೇಕ ಬಾರಿ ಹೇಳಿದರು. ಅವರ್‍ಯಾರು ಹುಡುಗಿಯ ಸಂಬಂಧಿಗಳಲ್ಲ ಅಥವಾ ಅವರು ಹುಡುಗಿಯ ಹಳ್ಳಿಗೆ ಸೇರಿದವರಲ್ಲದ ಕಾರಣ ನಾವು ಪ್ರಕರಣವನ್ನು ಹಿಂತೆಗೆದುಕೊಳ್ಳಲು ಇಷ್ಟಪಡಲಿಲ್ಲ” ಎಂದು ಉಲಗಂ ಗ್ರಾಮಸ್ಥ ಟಿ.ಸೇತು ಹೇಳುತ್ತಾರೆ.

ಇದನ್ನೂ ಓದಿ: ಹಿಂದೂಗಳ ಕಣ್ಣಿಗೆ ದಲಿತರು ಮನುಷ್ಯರಂತೆ ಕಾಣುವುದೆಂದು? – ಡಿ.ಉಮಾಪತಿ

ಅಕ್ಟೋಬರ್‌ 1ರಂದು ವಿಚಾರಣೆ ಎದುರಿಸಿ ಗ್ರಾಮಕ್ಕೆ ಹಿಂತಿರುಗಿದಾಗ, ಡಂಗೂರ ಬಾರಿಸುವ ಮೂಲಕ ನಮ್ಮನ್ನು ಬಹಿಷ್ಕರಿಸಲಾಗಿದೆ.  ಗ್ರಾಮದ ದಲಿತ ಜನರಿಗೆ ದಿನಸಿ, ಹಾಲು ಮತ್ತು ನೀರು ನೀಡುವ ಜನರಿಂದ 5,000 ರೂ.ಗಳ ದಂಡವನ್ನು ವಸೂಲಿ ಮಾಡಬೇಕೆಂದು ಗ್ರಾಮ ಜಾತಿ ಪಂಚಾಯತ್ ಆದೇಶಿಸಿದೆ ಎಂದು ಸೇತು ತಿಳಿಸಿದ್ದಾರೆ.

ಗ್ರಾಮದಲ್ಲಿ ನಮ್ಮ ಸಮುದಾಯದವರು 29 ಕುಟುಂಬಗಳಿವೆ. ಕುರುಂಬಾರ್‌ ಸಮುದಾಯದ 300 ಕುಟುಂಬಗಳಿವೆ. ಹಾಗಾಗಿ ಅವರು ನಮಗೆ ಕಿರುಕುಳ ನೀಡುತ್ತಿದ್ದಾರೆ. ಅಷ್ಟೇ ಅಲ್ಲದೆ ಈಗ ಬಹಿಷ್ಕಾರ ಹಾಕಿ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಕಂದಾಯ ಅಧಿಕಾರಿ ಗುಣಶೇಖರನ್ ಘಟನೆಯ ಬಗ್ಗೆ ತಿಳಿದಿಲ್ಲ ಮತ್ತು ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.


ಇದನ್ನೂ ಓದಿ: ’ಜಾತ್ಯಾತೀತರು’ ಎಂದ ದಲಿತ ಕುಟುಂಬಕ್ಕೆ ಜಾತಿ ಪ್ರಮಾಣಪತ್ರ ನಿರಾಕರಣೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...